Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:1 - ಪರಿಶುದ್ದ ಬೈಬಲ್‌

1 ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೆನ್ಯಾಮೀನ್ ಕುಲದವರೇ, ಯೆರೂಸಲೇವಿುನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್‍ಹಕ್ಕೆರೆವಿುನಲ್ಲಿ ಧ್ವಜವನ್ನೆತ್ತಿರಿ; ಏಕಂದರೆ ಅತಿನಾಶಕವಾದ ವಿಪತ್ತು ಬಡಗಲಿಂದ ತಲೆದೋರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಓ ಬೆನ್ಯಾಮೀನನ ಮಕ್ಕಳೇ! ನಿಮ್ಮ ಸುರಕ್ಷತೆಗಾಗಿ ಯೆರೂಸಲೇಮಿನಿಂದ ಓಡಿಹೋಗಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಕೇಡೂ ದೊಡ್ಡ ನಾಶವೂ ಉತ್ತರದ ಕಡೆಯಿಂದ ತೋರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:1
19 ತಿಳಿವುಗಳ ಹೋಲಿಕೆ  

ರೇಕಾಬನ ಮಗನಾದ ಮಲ್ಕೀಯನು ತಿಪ್ಪೆಬಾಗಿಲನ್ನು ರಿಪೇರಿಮಾಡಿಸಿದನು. ಇವನು ಬೇತ್ ಹಕ್ಕೆರಿಮಿನ ರಾಜ್ಯಪಾಲನಾಗಿದ್ದನು. ಅವನು ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು.


ಯೆಹೋವನು ಹೇಳುವುದೇನೆಂದರೆ: “ಉತ್ತರ ದಿಕ್ಕಿನಿಂದ ಒಂದು ಸೈನ್ಯವು ಬರಲಿದೆ. ಭೂಮಿಯ ಬಹುದೂರದ ಸ್ಥಳಗಳಿಂದ ಒಂದು ಮಹಾಜನಾಂಗವು ಬರಲಿದೆ.


ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.


ಬೆನ್ಯಾಮೀನನ ಕುಲದವರಿಗೆ ಯೆಬೂಸಿಯರನ್ನು ಜೆರುಸಲೇಮಿನಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿನವರೆಗೂ ಅವರು ಬೆನ್ಯಾಮೀನರೊಡನೆ ಜೆರುಸಲೇಮಿನಲ್ಲಿಯೇ ವಾಸವಾಗಿದ್ದಾರೆ.


ಇದು ಆಮೋಸನ ಸಂದೇಶ. ಇವನು ತೆಕೋವ ಎಂಬ ಪಟ್ಟಣದ ಕುರುಬರಲ್ಲೊಬ್ಬನು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಸಮಯದಲ್ಲಿ ಮತ್ತು ಅದೇ ಸಮಯದಲ್ಲಿ ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿರುವಾಗ ಆಮೋಸನಿಗೆ ದೈವದರ್ಶನಗಳುಂಟಾದವು. ಭೂಕಂಪವಾಗುವುದಕ್ಕಿಂತ ಎರಡು ವರ್ಷಗಳಿಗೆ ಮೊದಲು ಈ ದರ್ಶನಗಳಾದವು.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಕೇಳಿರಿ, ಉತ್ತರ ದಿಕ್ಕಿನಿಂದ ಬರುತ್ತಿರುವ ಮಹಾಧ್ವನಿಯನ್ನು! ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು.


ಯೆಹೂದದ ಜನರು ಕುದುರೆಗಳ, ಸವಾರರ, ಬಿಲ್ಲುಗಾರರ ಶಬ್ಧಗಳನ್ನು ಕೇಳಿ ಓಡಿಹೋಗುವರು. ಕೆಲವು ಜನರು ಗುಹೆಯಲ್ಲಿ ಅಡಗಿಕೊಳ್ಳುವರು. ಕೆಲವರು ಪೊದೆಗಳಲ್ಲಿ ಅವಿತುಕೊಳ್ಳುವರು. ಕೆಲವರು ಬೆಟ್ಟಗಳನ್ನು ಹತ್ತಿಹೋಗುವರು. ಯೆಹೂದದ ಎಲ್ಲಾ ನಗರಗಳು ಬರಿದಾಗುವವು. ಅಲ್ಲಿ ಒಬ್ಬರೂ ಇರುವದಿಲ್ಲ.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಹಾಕಲು ಯೆಹೂದ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯೆಬೂಸಿಯರು ಇಂದಿನವರೆಗೂ ಜೆರುಸಲೇಮಿನಲ್ಲಿ ಯೆಹೂದ ಕುಲದವರೊಡನೆ ವಾಸವಾಗಿದ್ದಾರೆ.


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ಕಪ್ಪು ಕುದುರೆಗಳು ಉತ್ತರದಿಕ್ಕಿಗೆ ಹೋಗುವವು. ಕೆಂಪು ಕುದುರೆಗಳು ಪೂರ್ವದಿಕ್ಕಿಗೆ ಹೋಗುವವು. ಬಿಳಿ ಕುದುರೆಗಳು ಪಶ್ಚಿಮಕ್ಕೂ ಮಚ್ಚೆಯಿರುವ ಕುದುರೆಗಳು ದಕ್ಷಿಣ ದಿಕ್ಕಿಗೂ ಹೋಗುವವು.”


ತೆಕೋವದವರು ಅಲ್ಲಿಂದಾಚೆಗೆ ಗೋಡೆ ಕಟ್ಟಿದರು. ಆದರೆ ಅವರ ನಾಯಕರು ತಮ್ಮ ರಾಜ್ಯಪಾಲನಾದ ನೆಹೆಮೀಯನಿಗಾಗಿ ಕೆಲಸಮಾಡಲು ಒಪ್ಪಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು