Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:17 - ಪರಿಶುದ್ದ ಬೈಬಲ್‌

17 ನಾನು ನಿಮ್ಮನ್ನು ನೋಡಿಕೊಳ್ಳುವುದಕ್ಕೆ ಕಾವಲುಗಾರರನ್ನು ನೇಮಿಸಿದೆ. ನಾನು ಅವರಿಗೆ ‘ಯುದ್ಧದ ತುತ್ತೂರಿಯ ನಾದವನ್ನು ಕೇಳಿರಿ’ ಎಂದು ಹೇಳಿದೆ. ಆದರೆ ಅವರು ‘ನಾವು ಕೇಳುವುದಿಲ್ಲ’ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರ ಸ್ವಾಮಿ ಕಾವಲುಗಾರರನ್ನು ನೇಮಿಸಿ, “ಕಹಳೆಯ ಕೂಗನ್ನು ಕೇಳಿ” ಎಂದರು. ಅವರು “ಇಲ್ಲ, ಕೇಳುವುದಿಲ್ಲ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತುತೂರಿಯ ಶಬ್ದವನ್ನು ಕೇಳಿರಿ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇವಿುಸಲು ನಾವು ಕೇಳಲೊಲ್ಲೆವು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ, ತುತೂರಿಯ ಶಬ್ದವನ್ನು ಆಲೈಸಿರಿ, ಎಂದೆನು. ಆದರೆ ಅವರು, ‘ನಾವು ಆಲೈಸುವುದಿಲ್ಲ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:17
19 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದ್ದಾನೆ. ಆದರೆ ನೀವು ಅವರ ಮಾತುಗಳನ್ನು ಕಿವಿಗೆ ಹಾಕಿಕೊಂಡಿಲ್ಲ. ನೀವು ಅವರ ಕಡೆಗೆ ಸ್ವಲ್ಪವೂ ಗಮನಕೊಟ್ಟಿಲ್ಲ.


ಎಷ್ಟು ಗಟ್ಟಿಯಾಗಿ ಆರ್ಭಟಿಸಬಹುದೋ ಅಷ್ಟು ಆರ್ಭಟಿಸಿರಿ, ನಿಲ್ಲಿಸಬೇಡಿರಿ. ತುತ್ತೂರಿಯಂತೆ ಗಟ್ಟಿಯಾಗಿ ಕಿರುಚಿರಿ. ಜನರು ಮಾಡಿದ ಪಾಪಗಳನ್ನು ಅವರಿಗೆ ತಿಳಿಸಿರಿ. ಯಾಕೋಬನ ವಂಶದವರಿಗೆ ಅವರ ಪಾಪಗಳನ್ನು ತಿಳಿಸಿರಿ.


ಆದರೆ ಆ ಜನರು ಈ ಮಾತುಗಳನ್ನು ಕೇಳಲಿಲ್ಲ. ಆತನು ಹೇಳಿದ ಹಾಗೆ ನಡೆಯಲಿಲ್ಲ. ದೇವರು ಹೇಳುವುದು ತಮಗೆ ಕೇಳದಂತೆ ತಮ್ಮ ಕಿವಿಗಳನ್ನು ಮುಚ್ಚಿಕೊಂಡರು.


ದೂಮದ ಕುರಿತು ದುಃಖದ ದೈವೋಕ್ತಿ: ಸೇಯಿರ್‌ನಿಂದ ಎದೋಮನ್ನು ಯಾರೋ ಒಬ್ಬನು, “ಕಾವಲುಗಾರನೇ, ರಾತ್ರಿ ಮುಗಿಯಲು ಎಷ್ಟು ಸಮಯ ಉಂಟು? ರಾತ್ರಿಗೆ ಇನ್ನು ಎಷ್ಟು ಕಾಲ ಉಂಟು?” ಎಂದು ಕೇಳಿದನು.


“ನಾನು ಕಾವಲುಗಾರನಂತೆ ನಿಂತುಕೊಂಡು ಗಮನಿಸುವೆನು. ಯೆಹೋವನು ನನಗೆ ಏನನ್ನುವನೋ ಎಂದು ನಾನು ನಿರೀಕ್ಷಿಸುತ್ತಿರುವೆನು. ಆತನು ನನ್ನ ಪ್ರಶ್ನೆಗಳಿಗೆ ಹೇಗೆ ಉತ್ತರಿಸುವನೆಂಬುದನ್ನು ತಾಳ್ಮೆಯಿಂದ ಗಮನಿಸುವೆನು.”


ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವುದೆಂದರೆ ತುಂಬಾ ಪ್ರೀತಿ.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.


“ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ನಿನ್ನ ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.


ಜೆರುಸಲೇಮೇ, ನಿನ್ನ ಗೋಡೆಯ ಮೇಲೆ ನಾನು ಕಾವಲುಗಾರರನ್ನು ಇಟ್ಟಿರುತ್ತೇನೆ. ಆ ಕಾವಲುಗಾರರು ಮೌನವಾಗಿರುವದಿಲ್ಲ. ಅವರು ಹಗಲಿರುಳು ಪ್ರಾರ್ಥಿಸುತ್ತಾ ಇರುವರು. ಕಾವಲುಗಾರರೇ, ನೀವು ಯೆಹೋವನಿಗೆ ಪ್ರಾರ್ಥಿಸುತ್ತಾ ಇರಬೇಕು. ಆತನ ವಾಗ್ದಾನಗಳನ್ನು ನೀವು ಆತನ ನೆನಪಿಗೆ ತರಬೇಕು. ಪ್ರಾರ್ಥಿಸುವುದನ್ನು ಎಂದಿಗೂ ನಿಲ್ಲಿಸಬೇಡಿ.


ಆದಕಾರಣ ಸರ್ವಜನಾಂಗಗಳೇ ಕೇಳಿರಿ, ಜನಸಮೂಹಗಳೇ ಗಮನಿಸಿರಿ. ಯೆಹೂದದ ಜನರಿಗೆ ನಾನು ಮಾಡುವುದನ್ನು ಕೇಳಿರಿ.


ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.


ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ.


ಯೆಹೂದದ ಜನರು ತಪ್ಪುದಾರಿಯನ್ನು ಹಿಡಿದಿದ್ದಾರೆ. ಆದರೆ ಜೆರುಸಲೇಮಿನ ಜನರು ಆ ತಪ್ಪು ದಾರಿಯ ಮೇಲೆ ನಡೆಯುವದನ್ನು ಏಕೆ ಮುಂದುವರಿಸಿದ್ದಾರೆ? ತಮ್ಮ ಸುಳ್ಳುಗಳನ್ನೇ ಅವರು ನಂಬಿದ್ದಾರೆ, ಅವರು ಹಿಂತಿರುಗಿ ಬರಲು ಸಿದ್ಧರಿಲ್ಲ.


ಆದರೆ ಯೆಹೂದದ ಜನರು, ‘ಪ್ರಯತ್ನ ಮಾಡುವದರಿಂದ ಏನೂ ಪ್ರಯೋಜನವಿಲ್ಲ. ನಮ್ಮ ಮನಸ್ಸಿಗೆ ಬಂದಂತೆ ನಾವು ಮಾಡುತ್ತಿದ್ದೇವೆ. ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ದುಷ್ಟ ಮತ್ತು ಮೊಂಡುಮನಸ್ಸು ಹೇಳಿದಂತೆ ನಡೆಯುವೆವು’ ಎಂಬುದಾಗಿ ಉತ್ತರಿಸುವರು” ಎಂದನು.


ಆದರೆ ನಾನು ಇಸ್ರೇಲ್ ವಂಶದವರ ಬಳಿಗೆ ನಿನ್ನನ್ನು ಕಳುಹಿಸುತ್ತಿದ್ದೇನೆ. ಇವರಿಗೆ ಮೊಂಡತನವಿರುವದು. ನಿನ್ನ ಮಾತನ್ನು ಕೇಳಲು ನಿರಾಕರಿಸುವರು. ಅವರಿಗೆ ನನ್ನ ಮಾತುಗಳನ್ನು ಕೇಳಲು ಇಷ್ಟವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು