ಯೆರೆಮೀಯ 6:23 - ಪರಿಶುದ್ದ ಬೈಬಲ್23 ಆ ಸೈನಿಕರು ಬಿಲ್ಲುಗಳನ್ನು ಮತ್ತು ಈಟಿಗಳನ್ನು ಹಿಡಿದುಕೊಂಡಿದ್ದಾರೆ. ಅವರು ಕ್ರೂರಿಗಳಾಗಿದ್ದಾರೆ. ಅವರು ನಿಷ್ಕರುಣಿಗಳಾಗಿದ್ದಾರೆ. ಅವರು ಬಲಶಾಲಿಗಳಾಗಿದ್ದಾರೆ. ಅವರು ತಮ್ಮ ಕುದುರೆ ಹತ್ತಿ ಬರುವಾಗ ಸಮುದ್ರದ ಗರ್ಜನೆಯಂತೆ ಶಬ್ದ ಕೇಳಿಬರುತ್ತದೆ. ಚೀಯೋನ್ ಕುಮಾರಿಯೇ, ಆ ಸೈನ್ಯವು ಯುದ್ಧಕ್ಕಾಗಿ ಬರುತ್ತಿದೆ. ಆ ಸೈನ್ಯವು ನಿನ್ನ ಮೇಲೆ ಧಾಳಿಮಾಡಲು ಬರುತ್ತಿದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ. ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರು ಬಿಲ್ಲನ್ನೂ ಈಟಿಯನ್ನೂ ಹಿಡಿದಿದ್ದಾರೆ. ಅವರು ಕ್ರೂರಿಗಳು, ನಿಷ್ಕರುಣಿಗಳು. ಅವರ ಧ್ವನಿ ಸಮುದ್ರದಂತೆ ಭೋರ್ಗರೆಯುತ್ತಿದೆ. ಕುದುರೆಗಳನ್ನು ಏರಿದ್ದಾರೆ. ಎಲೌ ಸಿಯೋನ್ ನಗರಿಯೇ, ಆ ಶತ್ರುಸೈನ್ಯ ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಬಿಲ್ಲನ್ನೂ ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ; ಅವರು ಕ್ರೂರರು; ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಓ ಚೀಯೋನಿನ ಪುತ್ರಿಯೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.” ಅಧ್ಯಾಯವನ್ನು ನೋಡಿ |
ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.