Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:28 - ಪರಿಶುದ್ದ ಬೈಬಲ್‌

28 ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ; ಅವರು ಬಹಳ ಹಟಮಾರಿಗಳಾಗಿದ್ದಾರೆ. ಅವರು ಜನರ ಬಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. ಅವರು ಬಣ್ಣಗುಂದಿದ, ತುಕ್ಕುಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರೆಲ್ಲರು ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ತಾಮ್ರ, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿಹೇಳುತ್ತಾ ತಿರುಗಾಡುವವರು; ಅವರು [ಬೆಳ್ಳಿಯಲ್ಲಾ,] ತಾಮ್ರ, ಕಬ್ಬಿಣ; ಎಲ್ಲರೂ ಕೇಡಿಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರೆಲ್ಲರು ಕಠಿಣ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಕಂಚು, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:28
19 ತಿಳಿವುಗಳ ಹೋಲಿಕೆ  

“ನಿಮ್ಮ ನೆರೆಮನೆಯವರ ಬಗ್ಗೆ ಎಚ್ಚರವಹಿಸಿರಿ; ನಿಮ್ಮ ಸ್ವಂತ ಸಹೋದರನನ್ನೂ ನಂಬಬೇಡಿ. ಏಕೆಂದರೆ ಪ್ರತಿಯೊಬ್ಬ ಸಹೋದರನೂ ಮೋಸಗಾರನಾಗಿದ್ದಾನೆ. ಪ್ರತಿಯೊಬ್ಬ ನೆರೆಯವನೂ ನಿಮ್ಮ ಮರೆಯಲ್ಲಿ ನಿಮ್ಮನ್ನು ನಿಂದಿಸುತ್ತಾನೆ.


ಯೆಹೂದದ ಜನರು ಹಟಮಾರಿಗಳಾಗಿದ್ದಾರೆ. ಅವರು ನನ್ನ ವಿರುದ್ಧ ಹೋಗುವದಕ್ಕೆ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಅವರು ನನ್ನಿಂದ ತಿರುಗಿ ಬಹಳ ದೂರ ಹೋಗಿಬಿಟ್ಟಿದ್ದಾರೆ.


ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”


ಆತನ ತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ನಮ್ಮ ದೇವರು ವೇಶ್ಯೆಯನ್ನು ದಂಡಿಸಿದನು. ಅವಳ ಲೈಂಗಿಕ ಪಾಪದಿಂದಲೇ ಲೋಕವು ಕೆಟ್ಟುಹೋಯಿತು. ಆತನು ತನ್ನ ಸೇವಕರ ರಕ್ತಕ್ಕೆ ಪ್ರತಿಯಾಗಿ ಆ ವೇಶ್ಯೆಯನ್ನು ದಂಡಿಸಿದನು.”


ಲೋಕದ ಜನರು ಕೋಪಗೊಂಡಿದ್ದರು. ಆದರೆ ಇದು ನಿನ್ನ ಕೋಪದ ಸಮಯ. ಸತ್ತವರಿಗೆ ತೀರ್ಪು ನೀಡುವ ಸಮಯವಿದು. ನಿನ್ನ ಸೇವಕರಾದ ಪ್ರವಾದಿಗಳಿಗೂ ನಿನ್ನ ಪರಿಶುದ್ಧ ಜನರಿಗೂ ನಿನ್ನನ್ನು ಗೌರವಿಸುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲ ನೀಡುವ ಸಮಯವಿದು. ಲೋಕನಾಶಕರನ್ನು ನಾಶಪಡಿಸುವ ಸಮಯವಿದು.”


ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.


ನನ್ನ ಜನರನ್ನು ‘ತಿರಸ್ಕರಿಸಲಾದ ಬೆಳ್ಳಿ’ ಎಂದು ಕರೆಯಲಾಗುವದು. ಏಕೆಂದರೆ ಯೆಹೋವನು ಅವರನ್ನು ಸ್ವಿಕರಿಸಲಿಲ್ಲ.”


ದೇವರಿಗೆ ವಿರುದ್ಧವಾಗಿರುವ ಇಸ್ರೇಲಿನ ಮಕ್ಕಳೇ, ನೀವು ದೇವರ ಬಳಿಗೆ ಹಿಂತಿರುಗಿ ಬನ್ನಿರಿ.


ಬೇರೆಯವರ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಕೆಟ್ಟದ್ದನ್ನು ಹೇಳುತ್ತಲೇ ಇರುತ್ತೀರಿ.


ಬೇರೆ ಜನರ ವಿರುದ್ಧ ಚಾಡಿ ಹೇಳಬಾರದು. ನಿಮ್ಮ ನೆರೆಯವನ ಪ್ರಾಣವನ್ನು ಅಪಾಯಕ್ಕೆ ಈಡುಮಾಡುವ ಯಾವ ಕಾರ್ಯವನ್ನೂ ನೀವು ಮಾಡಬಾರದು. ನಾನೇ ಯೆಹೋವನು!


“‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.


“ಒಂದುವೇಳೆ ಒಬ್ಬನು ಹಳೆಯ ಕಲ್ಲುಗಳನ್ನು ಮತ್ತು ಮಣ್ಣನ್ನು ತೆಗೆಸಿ ಹೊಸ ಕಲ್ಲುಗಳನ್ನು, ಮಣ್ಣನ್ನು ಮತ್ತು ಹೊಸ ಮಡ್ಡಿಯನ್ನು ಹಾಕಿಸಿದ್ದರೂ ಬೂಷ್ಟು ಮತ್ತೆ ಆ ಮನೆಯಲ್ಲಿ ಕಾಣಿಸಿಕೊಂಡರೆ,


ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.


ದ್ವೇಷವನ್ನು ಮರೆಮಾಡಲು ಒಬ್ಬನು ಸುಳ್ಳು ಹೇಳಬೇಕಾಗಬಹುದು. ಆದರೆ ಹರಟೆಗಾರನು ನಿಜವಾಗಿಯೂ ಮೂಢನಾಗಿದ್ದಾನೆ.


ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.


ಅವರು ಕೇಳಲಿ, ಕೇಳದಿರಲಿ, ನಾನು ಹೇಳುವದನ್ನು ಅವರಿಗೆ ತಿಳಿಸು; ಯಾಕೆಂದರೆ ಅವರು ದಂಗೆಕೋರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು