Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:7 - ಪರಿಶುದ್ದ ಬೈಬಲ್‌

7 ಬಾವಿಯಲ್ಲಿ ಹೊಸ ನೀರು ಬರುವಂತೆ ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. ಈ ಪಟ್ಟಣದಲ್ಲಿ ಬಲಾತ್ಕಾರ ಮತ್ತು ವಿನಾಶಗಳೇ ಕೇಳಿಬರುತ್ತವೆ. ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತೊಟ್ಟಿ ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ನಗರ ತನ್ನಲ್ಲಿನ ನೀಚತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಇಲ್ಲಿಂದ ಕೇಳಿಬರುವುದೆಲ್ಲ ಹಿಂಸಾಚಾರದ ಹಾಗೂ ಕೊಳ್ಳೆಯ ಸುದ್ದಿಯೆ. ರೋಗ ರುಜಿನಗಳೂ ಗಾಯಹುಣ್ಣುಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ; ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಬರುತ್ತದೆ; ರೋಗಗಳೂ ವ್ರಣಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬುಗ್ಗೆಯು ನೀರನ್ನು ಹರಿಯ ಮಾಡುವಂತೆ, ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ. ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳ ಬರುತ್ತದೆ. ದುಃಖವೂ ಗಾಯಗಳೂ ಯಾವಾಗಲೂ ನನ್ನ ಮುಂದೆ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:7
24 ತಿಳಿವುಗಳ ಹೋಲಿಕೆ  

“ಸೆರೆಯವರಿಗಾಗಿ ಸರಪಣಿಗಳನ್ನು ಮಾಡು. ದೇಶವು ಕೊಲೆಯ ಅಪರಾಧಗಳಿಂದ ತುಂಬಿದೆ. ಪಟ್ಟಣದಲ್ಲಿ ಹಿಂಸೆಯು ತುಂಬಿದೆ.


ದುಷ್ಟತನವನ್ನು ದಂಡಿಸಲು ಹಿಂಸೆಯು ಬೆಳೆದು ಕೋಲಾಗಿದೆ. ಜನರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿ ಒಬ್ಬರೂ ಉಳಿಯುವುದಿಲ್ಲ. ಅವರ ಐಶ್ವರ್ಯದಲ್ಲಿ ಏನೂ ಉಳಿಯುವದಿಲ್ಲ; ಪ್ರಮುಖರಾದವರಲ್ಲಿ ಯಾರೂ ಉಳಿಯುವುದಿಲ್ಲ.


ನಾನು ಮಾತನಾಡಿದಾಗಲೆಲ್ಲ ಕೂಗಿಕೂಗಿ ಹೇಳುತ್ತೇನೆ. ನಾನು ಯಾವಾಗಲೂ ಹಿಂಸೆ ಮತ್ತು ವಿನಾಶದ ಬಗ್ಗೆ ಕೂಗಿಕೊಳ್ಳುತ್ತೇನೆ. ಯೆಹೋವನಿಂದ ಬಂದ ಸಂದೇಶದ ಬಗ್ಗೆ ಜನರಿಗೆ ಹೇಳುತ್ತೇನೆ. ಆದರೆ ಜನರು ಯಾವಾಗಲೂ ನನಗೆ ಅವಮಾನ ಮಾಡುತ್ತಾರೆ. ನನ್ನನ್ನು ಗೇಲಿ ಮಾಡುತ್ತಾರೆ.


ದುಷ್ಟಜನರು ರೊಚ್ಚಿಗೆದ್ದ ಸಾಗರದಂತೆ, ಸಮಾಧಾನವಾಗಿಯೂ ಮೌನವಾಗಿಯೂ ಇರಲಾರರು. ಅವರು ಸಿಟ್ಟುಗೊಂಡು ಸಾಗರದಂತೆ ಕೆಸರನ್ನು ಕದಡಿಸುವರು.


ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಯಾಕೆಂದರೆ ಆಕೆ ಸುರಿಸಿದ ರಕ್ತದ ಕಲೆಗಳು ಇನ್ನೂ ಇವೆ. ಆಕೆಯು ಆ ರಕ್ತವನ್ನು ನೆಲದ ಮೇಲೆ ಸುರಿಯದೆ ಬಂಡೆಯ ಮೇಲೆ ಸುರಿದು ಅದಕ್ಕೆ ಮಣ್ಣನ್ನೂ ಮುಚ್ಚಲಿಲ್ಲ.


ನಿನ್ನ ಆಲೋಚನೆಗಳ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಿನ್ನ ನಡತೆಯು ನಿನ್ನ ಆಲೋಚನೆಗಳ ಮೇಲೆ ಆಧಾರಗೊಂಡಿದೆ.


ಜೇಡರ ಬಲೆಗಳ ನೂಲಿನಿಂದ ಬಟ್ಟೆ ನೇಯಲಾಗದು. ಆ ಬಲೆಯಿಂದ ನಿಮ್ಮ ಶರೀರವನ್ನು ಮುಚ್ಚಲಾಗುವದಿಲ್ಲ. ಕೆಲವರು ತಮ್ಮ ಕೈಗಳಿಂದ ಇತರರಿಗೆ ಕೇಡುಮಾಡುವರು.


ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರಾದ ನಿಮಗೆ ಗುಣವಾಗದ ಗಾಯವಾಗಿದೆ. ನಿಮಗೆ ವಾಸಿಯಾಗದ ನೋವಾಗಿದೆ.


ನಿಮ್ಮನ್ನು ನೋಡಿಕೊಳ್ಳಲು ಯಾರೂ ಇಲ್ಲ. ಆದ್ದರಿಂದ ನಿಮ್ಮ ಗಾಯಗಳು ವಾಸಿಯಾಗುವದಿಲ್ಲ.


“ಜೆರುಸಲೇಮ್ ನಗರವು ನಿರ್ಮಾಣಗೊಂಡಂದಿನಿಂದ ಇಂದಿನವರೆಗೂ ಈ ನಗರದ ಜನರು ನನಗೆ ಕೋಪ ಬರುವಂತೆ ಮಾಡಿದ್ದಾರೆ. ಈ ನಗರವು ನನಗೆ ಅತಿಕೋಪ ಬರುವಂತೆ ಮಾಡಿದೆ. ಆದ್ದರಿಂದ ಕಣ್ಣಿಗೆ ಕಾಣದಂತೆ ಅದನ್ನು ಅಳಿಸಿಬಿಡುವೆನು.


ಇದು ನನ್ನ ಒಡೆಯನಾದ ಯೆಹೋವನ ನುಡಿಗಳು: “ಇಸ್ರೇಲ್ ಜನರನ್ನು ಆಳುವವರೇ, ಅವರನ್ನು ಕಠಿಣವಾಗಿ ಆಳುವದನ್ನು ನಿಲ್ಲಿಸಿರಿ. ಅವರನ್ನು ಸುಲುಕೊಳ್ಳುವದನ್ನು ನಿಲ್ಲಿಸಿರಿ. ನ್ಯಾಯದಿಂದಿದ್ದು ಒಳ್ಳೆಯದನ್ನೆ ಮಾಡಿರಿ. ಅವರನ್ನು ಅವರ ಮನೆಗಳಿಂದ ಹೊರಡಿಸುವದನ್ನು ನಿಲ್ಲಿಸಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಿಮ್ಮ ಅಂಗಾಲಿನಿಂದ ಹಿಡಿದು ನಡುನೆತ್ತಿಯವರೆಗೂ ನಿಮ್ಮ ದೇಹದಲ್ಲೆಲ್ಲಾ ಗಾಯಗಳೂ ಬಾಸುಂಡೆಗಳೂ ಹುಣ್ಣುಗಳೂ ತುಂಬಿಕೊಂಡಿವೆ. ಆದರೆ ಆ ಹುಣ್ಣುಗಳಿಗೆ ನೀವು ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ; ಅವುಗಳನ್ನು ಒರೆಸಲಿಲ್ಲ, ಕಟ್ಟಲಿಲ್ಲ.


ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಬ್ಬ ವೈದ್ಯನಿದ್ದಾನೆ. ಆದರೆ ನನ್ನ ಜನರ ಗಾಯಗಳು ಗುಣವಾಗಲಿಲ್ಲವೇಕೆ?


ಇಸ್ರೇಲೇ, ಯೆಹೂದವೇ, ನೀವು ನಿಮ್ಮ ಗಾಯಗಳಿಗಾಗಿ ಏಕೆ ಅರಚುವಿರಿ? ನಿಮ್ಮ ಗಾಯಗಳು ಆಳವಾಗಿವೆ ಮತ್ತು ಅದಕ್ಕೆ ಔಷಧಿಯಿಲ್ಲ. ಯೆಹೋವನಾದ ನಾನು ನಿಮ್ಮ ಮಹಾಪರಾಧಕ್ಕಾಗಿ ಹೀಗೆಲ್ಲ ಮಾಡಿದೆ. ನಾನು ನಿಮ್ಮ ಅನೇಕ ಪಾಪಗಳಿಗಾಗಿ ಹೀಗೆಲ್ಲ ಮಾಡಿದೆ.


“‘ಓ ಖಡ್ಗವೇ, ನಿನ್ನ ಕುರಿತು ಅವರು ಸುಳ್ಳುದರ್ಶನಗಳನ್ನು ಕಾಣುವರು. ನಿನ್ನ ಕುರಿತು ಅವರು ಹೇಳುವ ಕಣಿಯು ದಾರಿ ತಪ್ಪಿಸುತ್ತದೆ. ಅದು ಕೇವಲ ಸುಳ್ಳುಗಳ ಕಂತೆ. ಓ ಖಡ್ಗವೇ, ನಿನ್ನನ್ನು ದುಷ್ಟರ ಕುತ್ತಿಗೆಗಳ ಮೇಲೆ ಇರಿಸಲಾಗುವುದು. ಬೇಗನೇ ಅವರು ಹೆಣಗಳಾಗಿ ಬೀಳುವರು. ಅವರ ಸಮಯವು ಬಂದಿದೆ. ಇದು ಅವರ ಅಂತ್ಯದಂಡನೆಯ ಸಮಯವಾಗಿದೆ.


ಜೆರುಸಲೇಮೇ, ನಿನ್ನ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಇತರರನ್ನು ಹಿಂಸಿಸಿದರು ಮತ್ತು ಪಾಪದಿಂದ ಮಲಿನರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು