Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:10 - ಪರಿಶುದ್ದ ಬೈಬಲ್‌

10 ನೀವು ಈ ಪಾಪಗಳನ್ನು ಮಾಡುತ್ತಿದ್ದರೂ ನನ್ನ ಹೆಸರಿನಿಂದ ಕರೆಯಲ್ಪಡುವ ಈ ಆಲಯದಲ್ಲಿ ನನ್ನ ಎದುರಿಗೆ ನಿಲ್ಲಬಹುದೆಂದು ಭಾವಿಸಿರುವಿರಾ? ನೀವು ನನ್ನ ಸಮ್ಮುಖದಲ್ಲಿ ನಿಂತುಕೊಂಡು, “ನಾವು ಸುರಕ್ಷಿತರಾಗಿದ್ದೇವೆ” ಎಂದು ಹೇಳಿಕೊಂಡು ನಿಮ್ಮ ದುಷ್ಕೃತ್ಯಗಳನ್ನು ಮುಂದುವರಿಸಬಹುದೆಂದು ಭಾವಿಸಿರುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, ‘ನಮಗೆ ಪರಿಹಾರವಾಯಿತು’ ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಹೆಸರು ಪಡೆದಿರುವ ಈ ದೇವಾಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು - ‘ನಾವು ಸುರಕ್ಷಿತರು’ ಎನ್ನುತ್ತೀರಿ. ಈ ಎಲ್ಲ ಅಸಹ್ಯಕಾರ್ಯಗಳನ್ನು ನಡೆಸುವುದಕ್ಕೋ ಈ ಸುರಕ್ಷತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು - ನಮಗೆ ಪರಿಹಾರವಾಯಿತು ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡಿಸುವದಕ್ಕೆ ಅವಕಾಶ ಮಾಡಿಕೊಳ್ಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಮೇಲೆ ಬಂದು ನನ್ನ ಹೆಸರನ್ನು ಹೊಂದಿರುವ ಈ ಆಲಯದಲ್ಲಿ ನನ್ನ ಮುಂದೆ ನಿಂತುಕೊಂಡು, “ನಾವು ಸುರಕ್ಷಿತರು” ಎಂದು ಹೇಳಿ ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲಾಗಿದ್ದೇವೆಂದು ಹೇಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:10
31 ತಿಳಿವುಗಳ ಹೋಲಿಕೆ  

ಆ ಜನರು ತಮಗಾಗಿ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ಆ ವಿಗ್ರಹಗಳನ್ನಿಟ್ಟು ನನ್ನ ಆಲಯವನ್ನು ‘ಹೊಲಸು’ ಮಾಡಿದ್ದಾರೆ.


ಅವರ ವಿಗ್ರಹಗಳಿಗೋಸ್ಕರ ತಮ್ಮ ಮಕ್ಕಳನ್ನು ಕೊಂದರು. ಅನಂತರ ಅದೇ ದಿನದಲ್ಲೇ ನನ್ನ ಪವಿತ್ರ ಆಲಯದೊಳಕ್ಕೆ ಹೋಗಿ ಅದನ್ನು ಹೊಲೆ ಮಾಡಿದರು. ನನ್ನ ಆಲಯದೊಳಗೆ ಅವರು ಹಾಗೆ ಮಾಡಿದರು.


ಅವರು ವ್ಯಭಿಚಾರ ಮಾಡಿದ್ದಾರೆ. ಅವರು ಕೊಲೆ ಮಾಡಿರುತ್ತಾರೆ. ಅವರು ಸೂಳೆಯಂತೆ ವರ್ತಿಸಿದ್ದಾರೆ. ಅವರು ತಮ್ಮ ಹೊಲಸು ವಿಗ್ರಹಗಳೊಂದಿಗೆ ಇರಲು ನನ್ನನ್ನು ತೊರೆದುಬಿಟ್ಟಿದ್ದಾರೆ. ಅವರಲ್ಲಿ ನನ್ನ ಮಕ್ಕಳು ಇದ್ದಾರೆ. ಆದರೆ ಅವರನ್ನು ಬಲವಂತದಿಂದ ಬೆಂಕಿಯ ಮೇಲೆ ದಾಟಿಸಿದರು. ತಮ್ಮ ಹೊಲಸು ವಿಗ್ರಹಗಳಿಗೆ ಆಹಾರ ಕೊಡುವಂತೆ ಅವರು ಹಾಗೆ ಮಾಡಿದರು.


ಸ್ವಲ್ಪಕಾಲದ ಹಿಂದೆ ನೀವು ನೀತಿಯುತವಾದದ್ದನ್ನು ಮಾಡಬೇಕೆಂದು ನಿಮ್ಮ ಮನಸ್ಸನ್ನು ಬದಲಾಯಿಸಿದಿರಿ. ನಿಮ್ಮಲ್ಲಿ ಪ್ರತಿಯೊಬ್ಬರು ನಿಮ್ಮಲ್ಲಿದ್ದ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಿದಿರಿ. ನೀವು ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಂದು ಒಡಂಬಡಿಕೆಯನ್ನು ಸಹ ಮಾಡಿಕೊಂಡಿರಿ.


ನೀನು ಹಾಗೆ ಮಾಡಲೇಬೇಕು ಯಾಕೆಂದರೆ, ಯೆಹೂದದ ಜನರು ಮಾಡುವ ದುಷ್ಕೃತ್ಯಗಳನ್ನು ನಾನು ನೋಡಿದ್ದೇನೆ.” ಯೆಹೋವನು ಹೀಗೆನ್ನುತ್ತಾನೆ: “ಅವರು ತಮ್ಮ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಪಡೆದ ಆಲಯದಲ್ಲಿ ಅವರು ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ಅವರು ನನ್ನ ಆಲಯವನ್ನು ‘ಮಲಿನ’ಗೊಳಿಸಿದ್ದಾರೆ.


ಆದ್ದರಿಂದ ನನ್ನ ಹೆಸರನ್ನು ಹೊಂದಿರುವ ಆಲಯವನ್ನೂ ನೀವು ನಂಬಿರುವ ಆಲಯವನ್ನೂ ನಿಮ್ಮ ಪೂರ್ವಿಕರಿಗೆ ನಾನು ಕೊಟ್ಟಿರುವ ಸ್ಥಳವನ್ನೂ ನಾನು ಶೀಲೋವಿಗೆ ಮಾಡಿದಂತೆ ಮಾಡುವೆನು.


ಈ ಪವಿತ್ರ ಆಲಯವನ್ನು ನನ್ನ ಹೆಸರಿನಿಂದ ಕರೆಯಲಾಗಿದೆ. ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕೇವಲ ಕಳ್ಳರು ಅಡಗುವ ಸ್ಥಳವಾಯಿತೇ? ನಾನು ನಿಮ್ಮ ವ್ಯವಹಾರವನ್ನೆಲ್ಲಾ ನೋಡುತ್ತಿದ್ದೇನೆ’” ಎಂಬುದು ಯೆಹೋವನಾದ ನನ್ನ ನುಡಿ.


ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.


“ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ಆಗ ಅವರು ನಿನ್ನನ್ನು ಎಷ್ಟು ದ್ವೇಷಿಸುವರೆಂದು ನಿನಗೆ ತೋರಿಸುವರು. ನೀನು ದುಡಿದವುಗಳನ್ನೆಲ್ಲ ಅವರು ಕಿತ್ತುಕೊಳ್ಳುವರು. ನಿನ್ನನ್ನು ಬೆತ್ತಲೆಮಾಡಿ ಬಿಟ್ಟುಬಿಡುವರು. ಜನರು ನಿನ್ನ ಪಾಪಗಳನ್ನು ಪರಿಪೂರ್ಣವಾಗಿ ನೋಡುವರು. ನೀನು ಸೂಳೆಯಂತೆ ವರ್ತಿಸಿದ್ದನ್ನು ಅವರು ನೋಡುವರು. ನಿನ್ನ ನೀಚತನವೂ ನಿನ್ನ ಸೂಳೆತನವೂ


ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


“ಹೌದು, ಅವರು ಪರಿಶುದ್ಧ ಪಟ್ಟಣದ ನಿವಾಸಿಗಳಾಗಿದ್ದಾರೆ. ಅವರು ಇಸ್ರೇಲಿನ ದೇವರನ್ನು ಅವಲಂಬಿಸಿಕೊಂಡಿದ್ದಾರೆ. ಸರ್ವಶಕ್ತನಾದ ಯೆಹೋವನು ಎಂಬುದೇ ಆತನ ಹೆಸರು.


ಮನಸ್ಸೆಯು ಒಂದು ವಿಗ್ರಹವನ್ನು ಯೆಹೋವನ ಮಂದಿರದೊಳಗೆ ಪ್ರತಿಷ್ಠಾಪಿಸಿದನು. ಆ ಮಂದಿರದ ಬಗ್ಗೆ ಯೆಹೋವನು ದಾವೀದನೊಂದಿಗೂ ಸೊಲೊಮೋನನೊಂದಿಗೂ ಮಾತನಾಡಿ, “ನನ್ನ ಹೆಸರನ್ನು ಈ ಆಲಯದಲ್ಲಿಯೂ ಜೆರುಸಲೇಮಿನಲ್ಲಿಯೂ ಸ್ಥಾಪಿಸುವೆನು. ಈ ಪಟ್ಟಣವನ್ನು ಎಲ್ಲಾ ಕುಲಗಳ ಎಲ್ಲಾ ಪಟ್ಟಣಗಳಿಂದ ಆರಿಸಿಕೊಂಡಿರುತ್ತೇನೆ. ಇಲ್ಲಿ ನನ್ನ ನಾಮಸ್ಮರಣೆಯು ಸದಾಕಾಲ ನಡಿಯುವುದು.


ದೇವಾಲಯದೊಳಗೆ ಮನಸ್ಸೆಯು ವಿಗ್ರಹಗಳಿಗೆ ವೇದಿಕೆಯನ್ನು ಕಟ್ಟಿಸಿದನು. ಯೆಹೋವನು ದೇವಾಲಯದ ವಿಷಯವಾಗಿ, “ನನ್ನ ಹೆಸರು ಜೆರುಸಲೇಮಿನಲ್ಲಿ ನಿರಂತರಕ್ಕೂ ಸ್ಥಾಪಿತವಾಗುವದು” ಎಂದು ಹೇಳಿದ್ದನು.


ಮನಸ್ಸೆಯು ಸುಳ್ಳುದೇವತೆಗಳನ್ನು ಗೌರವಿಸಲು ದೇವಾಲಯದಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು. (“ನಾನು ನನ್ನ ಹೆಸರನ್ನು ಜೆರುಸಲೇಮಿನಲ್ಲಿ ಸ್ಥಾಪಿಸುತ್ತೇನೆ” ಎಂದು ಯೆಹೋವನು ಮಾತನಾಡುವಾಗ ಹೇಳುತ್ತಿದ್ದ ಸ್ಥಳವು ಇದೇ ಆಗಿತ್ತು.)


ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ನಿಮ್ಮ ಪೂರ್ವಿಕರು ಮಾಡಿದ್ದ ದುಷ್ಟತನವನ್ನು ನೀವು ಮರೆತುಬಿಟ್ಟಿರಾ? ಯೆಹೂದದ ರಾಜರು ಮತ್ತು ರಾಣಿಯರು ಮಾಡಿದ್ದ ದುಷ್ಟತನವನ್ನು ನೀವು ಮರೆತುಬಿಟ್ಟಿರುವಿರಾ? ನೀವು ಮತ್ತು ನಿಮ್ಮ ಪತ್ನಿಯರು ಯೆಹೂದದಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದ ದುಷ್ಟತನವನ್ನು ಮರೆತುಬಿಟ್ಟಿರಾ?


“ನೀನು ಅವರಿಗೆ ಹೀಗೆ ಹೇಳಬೇಕು. ನಿಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ರಕ್ತವಿರುವ ಮಾಂಸವನ್ನು ತಿನ್ನುತ್ತೀರಿ. ನಿಮ್ಮ ಸಹಾಯಕ್ಕಾಗಿ ನೀವು ವಿಗ್ರಹಗಳಿಗೆ ಮೊರೆಯಿಡುತ್ತೀರಿ. ನೀವು ನರಹತ್ಯೆ ಮಾಡುತ್ತೀರಿ. ಹೀಗೆ ಇರುವದರಿಂದ ನಾನು ಈ ದೇಶವನ್ನು ನಿಮಗೆ ಹೇಗೆ ಕೊಡಲಿ?


ನನ್ನ ದೇವರೆ, ನನ್ನ ಪ್ರಾರ್ಥನೆಯನ್ನು ಕೇಳು. ನಿನ್ನ ಕಣ್ಣುಗಳನ್ನು ತೆರೆದು ನಮಗಾದ ಎಲ್ಲ ಕೇಡನ್ನು ನೋಡು. ನಿನ್ನ ಹೆಸರುಳ್ಳ ಪಟ್ಟಣದ ಗತಿ ಏನಾಗಿದೆ ನೋಡು. ನಾವು ಒಳ್ಳೆಯ ಜನರೆಂದು ನಾನು ಹೇಳುತ್ತಿಲ್ಲ. ನಾವು ಒಳ್ಳೆಯ ಜನರೆಂದು ಇದೆಲ್ಲವನ್ನು ಕೇಳುತ್ತಿಲ್ಲ. ನೀನು ಕರುಣಾಮಯನಾಗಿರುವುದರಿಂದಲೇ ಇದನ್ನೆಲ್ಲ ಕೇಳುತ್ತಿದ್ದೇನೆ.


ಕಳ್ಳರು ದಾರಿಯಲ್ಲಿ ಹೊಂಚುಹಾಕುತ್ತಾ ಜನರನ್ನು ಸೂರೆಮಾಡಲು ಕಾಯುತ್ತಿರುತ್ತಾರೆ. ಅದೇ ರೀತಿಯಲ್ಲಿ ಶೆಕೆಮಿಗೆ ಹೋಗುವ ದಾರಿಯಲ್ಲಿ ಯಾಜಕರು ಕಾಯುತ್ತಾ ಹಾದುಹೋಗುತ್ತಿರುವ ಜನರ ಮೇಲೆ ಬೀಳುವರು. ಅವರು ದುಷ್ಕೃತ್ಯಗಳನ್ನು ಮಾಡಿರುತ್ತಾರೆ.


ಹುಳಿಹಾಕಿದ ರೊಟ್ಟಿಗಳನ್ನು ಕೃತಜ್ಞತಾ ಹೋಮಮಾಡಿರಿ. ಸ್ವೇಚ್ಚೆಯಿಂದ ಕೊಡುವ ಕಾಣಿಕೆ ಬಗ್ಗೆ ಎಲ್ಲರಿಗೂ ತಿಳಿಸಿರಿ. ಇಸ್ರೇಲರೇ ಅಂಥಾ ಕಾರ್ಯಗಳನ್ನು ಮಾಡಲು ನಿಮಗೆ ಇಷ್ಟ. ಆದ್ದರಿಂದ ಹೋಗಿ ಅದನ್ನು ಮಾಡಿರಿ.” ಇದು ಯೆಹೋವನ ನುಡಿ.


ತಮ್ಮ ಮಾಳಿಗೆಯ ಮೇಲೆ ಹತ್ತಿ ನಕ್ಷತ್ರಗಳನ್ನು ಆರಾಧಿಸುತ್ತಾರೋ ನಾನು ಅವರನ್ನು ನಿರ್ಮೂಲ ಮಾಡುತ್ತೇನೆ. ಜನರು ತಮ್ಮ ಸುಳ್ಳು ಪುರೋಹಿತರನ್ನು ಮರೆತುಬಿಡುವರು. ಕೆಲವರು ತಮ್ಮನ್ನು ನನ್ನ ಆರಾಧಕರೆಂದು ಹೇಳಿಕೊಳ್ಳುವರು. ಆದರೆ ಈಗ ಅವರು ಸುಳ್ಳು ದೇವರಾದ ಮಲ್ಕಾಮನನ್ನು ಆರಾಧಿಸುತ್ತಾರೆ. ಅಂಥವರನ್ನು ಅವರ ಸ್ಥಳಗಳಿಂದ ತೆಗೆದುಹಾಕುವೆನು.


ಗರ್ವಿಷ್ಟರು ಸಂತೋಷವಾಗಿದ್ದಾರೆ ಎಂದು ನಾವು ತಿಳಿಯುತ್ತೇವೆ. ದುಷ್ಟಜನರು ಸಫಲತೆ ಹೊಂದುತ್ತಿದ್ದಾರೆ, ದೇವರ ತಾಳ್ಮೆಯನ್ನು ಪರೀಕ್ಷಿಸಲು ದುಷ್ಕೃತ್ಯಗಳನ್ನು ಮಾಡುತ್ತಿದ್ದಾರೆ. ಆದರೆ ದೇವರು ಅವರನ್ನು ಶಿಕ್ಷಿಸಲಿಲ್ಲ” ಎಂದು ಹೇಳಿದಿರಿ.


ಯೆಹೋವನು ಅವನಿಗೆ ಹೀಗೆ ಹೇಳಿದನು: “ನಿನ್ನ ಪ್ರಾರ್ಥನೆಯು ನನಗೆ ಕೇಳಿಸಿತು. ನಿನ್ನ ಬಿನ್ನಹಗಳನ್ನು ಆಲಿಸಿದೆನು. ಈ ಆಲಯವನ್ನು ನೀನು ಕಟ್ಟಿಸಿದೆ. ನಾನು ಅದನ್ನು ಪವಿತ್ರಸ್ಥಳವನ್ನಾಗಿ ಮಾಡಿದೆ. ಆದ್ದರಿಂದ ನಾನಿಲ್ಲಿ ಸದಾಕಾಲ ಸನ್ಮಾನಿಸಲ್ಪಡುವೆನು. ನನ್ನ ದೃಷ್ಟಿಯೂ ಮನಸ್ಸೂ ಸದಾ ಅದರ ಮೇಲಿರುತ್ತದೆ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮೇ, ನನ್ನ ಜೀವದಾಣೆ! ನಾನು ನಿನ್ನನ್ನು ಶಿಕ್ಷಿಸುವೆನು. ಯಾಕೆಂದರೆ ನೀನು ನನ್ನ ಪವಿತ್ರ ಸ್ಥಳಕ್ಕೆ ಮಹತ್ವವನ್ನು ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಬರಿಗೊಳಿಸುವ ನಿನ್ನ ಎಲ್ಲಾ ಕಾರ್ಯಗಳಿಂದ ನೀನು ಅದನ್ನು ಅಶುದ್ಧಗೊಳಿಸಿರುವೆ. ನಾನು ನಿನಗೆ ಕನಿಕರತೋರಿಸದೆ ಶಿಕ್ಷಿಸುವೆನು. ನಿನ್ನ ಮೇಲೆ ನನಗೆ ದಯೆಯಿರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು