Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:2 - ಪರಿಶುದ್ದ ಬೈಬಲ್‌

2 “ಯೆರೆಮೀಯನೇ, ಯೆಹೋವನ ಆಲಯದ ಹೆಬ್ಬಾಗಿಲಿನ ಹತ್ತಿರ ನಿಂತುಕೊಂಡು ಈ ಸಂದೇಶವನ್ನು ಸಾರು: “‘ಇದು ಯೆಹೋವನ ಸಂದೇಶ. ಯೆಹೂದದ ಜನರೆಲ್ಲರೇ, ಯೆಹೋವನನ್ನು ಆರಾಧಿಸಲು ಈ ದ್ವಾರದಿಂದ ಪ್ರವೇಶ ಮಾಡುವ ಜನರೇ, ಈ ಸಂದೇಶವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ನನ್ನ ಆಲಯದ ಬಾಗಿಲಲ್ಲಿ ನಿಂತು ಈ ವಾಕ್ಯವನ್ನು ಸಾರು - ‘ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳಲು ಈ ದ್ವಾರಗಳನ್ನು ಪ್ರವೇಶಿಸುವ ಎಲ್ಲ ಯೆಹೂದ್ಯರೇ, ಸರ್ವೇಶ್ವರನ ನುಡಿಯನ್ನು ಕೇಳಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು - ಯೆಹೋವನಿಗೆ ಅಡ್ಡಬೀಳುವದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೋವ ದೇವರ ಆಲಯದ ಬಾಗಿಲಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು: “ ‘ಯೆಹೂದ್ಯರೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:2
38 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆಂದನು, “ಯೆರೆಮೀಯನೇ, ಯೆಹೋವನ ಆಲಯದ ಅಂಗಳದಲ್ಲಿ ನಿಲ್ಲು, ಯೆಹೋವನ ಆಲಯದಲ್ಲಿ ಆರಾಧನೆಗೆಂದು ಬರುವ ಯೆಹೂದದ ಎಲ್ಲಾ ಜನರಿಗೆ ಈ ಸಂದೇಶವನ್ನು ತಿಳಿಸು. ನಾನು ನಿನಗೆ ತಿಳಿಸೆಂದು ಹೇಳುವ ಎಲ್ಲವನ್ನೂ ಅವರಿಗೆ ಹೇಳು. ನನ್ನ ಸಂದೇಶದ ಯಾವ ಭಾಗವನ್ನೂ ಬಿಡಬೇಡ.


ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.”


ಆದ್ದರಿಂದ ಯೆಹೋವನ ಸಂದೇಶಕ್ಕೆ ಕಿವಿಗೊಡು. ಆದರೆ ನೀನು, ‘ಇಸ್ರೇಲರಿಗೆ ವಿರುದ್ಧವಾಗಿ ಪ್ರವಾದಿಸಬೇಡ. ಇಸಾಕನ ಕುಟುಂಬದ ವಿರುದ್ಧ ಪ್ರಸಂಗಿಸಬೇಡ’ ಎಂದು ಹೇಳುತ್ತಿ.


ಸೊದೋಮಿನ ಅಧಿಪತಿಗಳೇ, ಯೆಹೋವನ ಸಂದೇಶವನ್ನು ಕೇಳಿರಿ. ಗೊಮೋರದ ಜನರೇ, ಆತನ ಉಪದೇಶವನ್ನು ಕೇಳಿರಿ.


ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು.


“ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.


ಆಮೇಲೆ ಯೆರೆಮೀಯನು ಆ ಎಲ್ಲಾ ಸ್ತ್ರೀಪುರುಷರೊಂದಿಗೆ ಮಾತನಾಡಿದನು. ಯೆರೆಮೀಯನು ಹೀಗೆ ಹೇಳಿದನು: “ಈಗ ಈಜಿಪ್ಟಿನಲ್ಲಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ:


ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.


ಆದ್ದರಿಂದ ನೀನು ಯೆಹೋವನ ಆಲಯಕ್ಕೆ ಉಪವಾಸದ ದಿನ ಹೋಗು ಮತ್ತು ಸುರುಳಿಯಲ್ಲಿ ಬರೆದದ್ದನ್ನು ಜನರ ಮುಂದೆ ಓದು. ನಾನು ಹೇಳುತ್ತಿದ್ದಂತೆಯೇ ನೀನು ಸುರುಳಿಯ ಮೇಲೆ ಬರೆದುಕೊಂಡ ಯೆಹೋವನ ಸಂದೇಶಗಳನ್ನು ಆ ಜನರ ಮುಂದೆ ಓದು. ತಾವು ವಾಸಮಾಡುವ ಸ್ಥಳಗಳಿಂದ ಜೆರುಸಲೇಮಿಗೆ ಬಂದಿರುವ ಎಲ್ಲಾ ಯೆಹೂದ್ಯರ ಮುಂದೆ ಆ ಸಂದೇಶಗಳನ್ನು ಓದು.


ಯೆಹೂದದ ರಾಜನಾದ ಚಿದ್ಕೀಯನೇ, ಯೆಹೋವನ ವಾಗ್ದಾನವನ್ನು ಕೇಳು. ಯೆಹೋವನು ನಿನ್ನ ಬಗ್ಗೆ ಹೀಗೆ ಹೇಳುತ್ತಾನೆ. ನಿನ್ನನ್ನು ಖಡ್ಗದಿಂದ ಕೊಲ್ಲಲಾಗುವುದಿಲ್ಲ.


ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಪವಿತ್ರಾಲಯದ ಪ್ರಾಕಾರದಲ್ಲಿ ನಿಂತುಕೊಂಡು, ಎಲ್ಲಾ ಜನರನ್ನುದ್ದೇಶಿಸಿ ಹೀಗೆ ಹೇಳಿದನು:


ಇಸ್ರೇಲ್ ವಂಶದವರೇ, ಯೆಹೋವನ ಮಾತುಗಳನ್ನು ಕೇಳಿರಿ.


ಯಾಕೋಬನ ಮನೆತನದವರೇ, ಯೆಹೋವನ ಸಂದೇಶವನ್ನು ಕೇಳಿರಿ. ಇಸ್ರೇಲಿನ ಎಲ್ಲಾ ಕುಲದವರೇ, ಯೆಹೋವನ ಸಂದೇಶವನ್ನು ಕೇಳಿರಿ.


ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಈ ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು.


ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.


ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.


ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.


ಅವರು ಜನರಿಗೆ ಉಪದೇಶಿಸುವುದನ್ನು ನಿಲ್ಲಿಸಲಿಲ್ಲ. ಯೇಸುವೇ ಕ್ರಿಸ್ತನೆಂಬ ಶುಭವಾರ್ತೆಯನ್ನು ಜನರಿಗೆ ಹೇಳುವುದನ್ನು ಮುಂದುವರಿಸಿದರು. ಅವರು ಪ್ರತಿದಿನ ದೇವಾಲಯದಲ್ಲಿಯೂ ಜನರ ಮನೆಗಳಲ್ಲಿಯೂ ಉಪದೇಶಿಸುತ್ತಿದ್ದರು.


“ಹೋಗಿ ದೇವಾಲಯದಲ್ಲಿ ನಿಂತುಕೊಳ್ಳಿರಿ. ಯೇಸುವಿನಲ್ಲಿರುವ ಈ ಹೊಸ ಜೀವಿತದ ಬಗ್ಗೆ ಪ್ರತಿಯೊಂದನ್ನೂ ಜನರಿಗೆ ಹೇಳಿರಿ” ಎಂದನು.


ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಜನರೊಂದಿಗೆ ಮಾತಾಡಿದ್ದೇನೆ; ಯಾವಾಗಲೂ ಸಭಾಮಂದಿರಗಳಲ್ಲಿ ಮತ್ತು ದೇವಾಲಯದಲ್ಲಿ ಬೋಧಿಸಿದ್ದೇನೆ. ಯೆಹೂದ್ಯರೆಲ್ಲರೂ ಅಲ್ಲಿಗೆ ಒಟ್ಟಾಗಿ ಸೇರಿಬರುತ್ತಿದ್ದರು. ನಾನು ಯಾವುದನ್ನೂ ರಹಸ್ಯವಾಗಿ ಎಂದೂ ಹೇಳಿಲ್ಲ.


ನನಗೆ ಕಿವಿಗೊಡುವ ಜನರೇ, ಲಾಲಿಸಿರಿ!”


ಯಾಕೋಬಿನ ನಾಯಕರೇ, ಇಸ್ರೇಲಿನ ಪ್ರಧಾನರೇ, ನನಗೆ ಕಿವಿಗೊಡಿರಿ! ಸರಿಯಾದ ಜೀವಿತವನ್ನು ನೀವು ದ್ವೇಷಿಸುತ್ತೀರಿ. ನೆಟ್ಟಗಿರುವದನ್ನು ಡೊಂಕಾಗಿ ನೀವು ಮಾಡುವಿರಿ.


ಆಗ ನಾನು ಹೇಳಿದ್ದೇನೆಂದರೆ, “ಯಾಕೋಬಿನ ನಾಯಕರೇ, ಇಸ್ರೇಲಿನ ಅಧಿಪತಿಗಳೇ, ನನ್ನ ಮಾತನ್ನು ಕೇಳಿರಿ. ನ್ಯಾಯ ಏನು ಎಂದು ನಿಮಗೆ ತಿಳಿದಿರಬೇಕು.


ನಾವು ಜೆರುಸಲೇಮಿನ ಬಾಗಿಲುಗಳ ಬಳಿಯಲ್ಲಿ ನಿಂತಿದ್ದೇವೆ.


“ಯೆರೆಮೀಯನೇ, ಹೋಗಿ ಜೆರುಸಲೇಮಿನ ಜನರೊಂದಿಗೆ ಮಾತನಾಡು, ಅವರಿಗೆ ಹೀಗೆ ಹೇಳು: “ಯೆಹೋವನು ಹೀಗೆನ್ನುತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; ಯುವತಿಯಾದ ಮದುಮಗಳಂತೆ ನನ್ನನ್ನು ಹಿಂಬಾಲಿಸಿದಿರಿ. ಎಂದೂ ಬೇಸಾಯಕ್ಕೆ ಬಳಸದ ಭೂಮಿಯಲ್ಲಿಯೂ ಮರಳುಗಾಡಿನಲ್ಲಿಯೂ ನನ್ನನ್ನು ಹಿಂಬಾಲಿಸಿದಿರಿ.


ಯೆರೆಮೀಯನಿಗೆ ಯೆಹೋವನ ಸಂದೇಶ ಹೀಗಿತ್ತು:


ಯೆಹೋವನು ನನಗೆ, “ಯೆರೆಮೀಯನೇ, ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಈ ಸಂದೇಶವನ್ನು ಸಾರು. ಈ ಒಡಂಬಡಿಕೆಯಲ್ಲಿನ ಮಾತುಗಳನ್ನು ಕೇಳಿ ಅನುಸರಿಸಿರಿ.


ಯೆಹೋವನ ಶಕ್ತಿಯು ನನ್ನ ಮೇಲೆ ಬಂದಿತು. ಯೆಹೋವನ ಆತ್ಮವು ನನ್ನನ್ನು ನಗರದೊಳಗಿಂದ ಎತ್ತಿಕೊಂಡು ತಗ್ಗಿನ ಮಧ್ಯಕ್ಕೆ ಕೊಂಡೊಯ್ದನು. ಆ ಬಯಲಿನ ತುಂಬಾ ಒಣಗಿದ ಎಲುಬುಗಳು ತುಂಬಿದ್ದವು.


ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಉತ್ತರ ಕೊಟ್ಟನು. ಅವರು ಯೆಹೋವನ ಆಲಯದಲ್ಲಿ ನಿಂತಿದ್ದರು. ಯಾಜಕರೂ ಮತ್ತು ಅಲ್ಲಿಯ ಸಮಸ್ತ ಜನರು ಯೆರೆಮೀಯನ ಉತ್ತರವನ್ನು ಕೇಳಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು