ಯೆರೆಮೀಯ 7:26 - ಪರಿಶುದ್ದ ಬೈಬಲ್26 ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿ ಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಕೃತ್ಯಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪಿತೃಗಳಿಗಿಂತಲೂ ಕೆಟ್ಟವರಾಗಿ ನಡೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೂ ಅವರು ನನ್ನ ಮಾತಿಗೆ ಕಿವಿಗೊಡದೆ, ತಮ್ಮನ್ನು ಕಠಿಣ ಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.’ ಅಧ್ಯಾಯವನ್ನು ನೋಡಿ |
ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನ ಕೊಡಲಿಲ್ಲ.
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
ದೇವರು ಹೇಳಿದ್ದೇನೆಂದರೆ, “ಇಸ್ರೇಲ್ ಜನರು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ನೀನು ಹೋಗಿ ಅವರಿಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಪೂರ್ವಿಕರು ಮಾಡಿದಂತೆಯೇ ನೀವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುತ್ತಿದ್ದೀರಿ. ನೀವು ಸೂಳೆಯರ ಹಾಗೆ ವರ್ತಿಸಿರುತ್ತೀರಿ. ನಿಮ್ಮ ಪೂರ್ವಿಕರು ಪೂಜಿಸಿದ ಆ ಭಯಂಕರವಾದ ವಿಗ್ರಹಗಳೊಂದಿಗೆ ಇರುವದಕ್ಕಾಗಿ ನನ್ನನ್ನು ನೀವು ತೊರೆದುಬಿಟ್ಟಿರಿ.
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.