Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:4 - ಪರಿಶುದ್ದ ಬೈಬಲ್‌

4 ಕೆಲವರು ಹೇಳುವ ಸುಳ್ಳುಗಳನ್ನು ನಂಬಬೇಡಿರಿ. ಅವರು “ಇದು ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ‘ಇದು ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, (ಆದುದರಿಂದ ಎಲ್ಲ ಸುಭದ್ರ)’ ಎಂಬ ಮೋಸಕರ ಮಾತುಗಳಲ್ಲಿ ಭರವಸೆ ಇಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ ಎಂಬುವ ಸುಳ್ಳುಮಾತುಗಳ ಮೇಲೆ ಭರವಸವಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಇವುಗಳೇ ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ,” ಎಂದು ಹೇಳುವ ಮೋಸಕರ ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:4
16 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


“ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.


ಜನರೆದುರಿನಲ್ಲಿ ನನಗೆ ನೀವು ಮಹತ್ವವನ್ನು ಕೊಡುವದಿಲ್ಲ. ಸ್ವಲ್ಪ ಬಾರ್ಲಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನ್ನ ಜನರಿಗೆ ನೀವು ಸುಳ್ಳನ್ನು ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಬಹಳ ಪ್ರೀತಿ. ನೀವು ಸಾಯತಕ್ಕಲ್ಲದವರನ್ನು ಸಾವಿಗೀಡು ಮಾಡುತ್ತೀರಿ. ಬದುಕತಕ್ಕಲ್ಲದವರನ್ನು ಜೀವಂತವಾಗಿಡುತ್ತೀರಿ.


“ಯೆರೆಮೀಯನೇ, ಬಾಬಿಲೋನಿನಲ್ಲಿರುವ ಎಲ್ಲಾ ಬಂಧಿಗಳಿಗೆ ಈ ಸಂದೇಶವನ್ನು ಕಳುಹಿಸು, ‘ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಹೀಗೆನ್ನುವನು: ಶೆಮಾಯನು ನಿಮಗೆ ಪ್ರವಾದನೆ ಮಾಡಿದ್ದಾನೆ. ಆದರೆ ನಾನು ಅವನನ್ನು ಕಳುಹಿಸಲಿಲ್ಲ. ನೀವು ಸುಳ್ಳನ್ನು ನಂಬುವಂತೆ ಅವನು ಮಾಡಿದ್ದಾನೆ.


ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿರುವುದಾದರೆ ಅದನ್ನು ನಿಮ್ಮ ತಕ್ಕಕಾರ್ಯಗಳಿಂದ ತೋರಿಸಿರಿ. ‘ಅಬ್ರಹಾಮನು ನಮ್ಮ ತಂದೆ’ ಎಂದು ಜಂಬ ಕೊಚ್ಚಿಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಇಲ್ಲಿರುವ ಕಲ್ಲುಗಳಿಂದ ಮಕ್ಕಳನ್ನು ಕೊಡಬಲ್ಲನೆಂದು ನಾನು ನಿಮಗೆ ಹೇಳುತ್ತೇನೆ.


ತರುವಾಯ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಹೇಳಿದನು: “ಹನನ್ಯನೇ, ಕೇಳು. ಯೆಹೋವನು ನಿನ್ನನ್ನು ಕಳುಹಿಸಲಿಲ್ಲ. ಆದರೆ ಯೆಹೂದದ ಜನರಿಗೆ ಸುಳ್ಳನ್ನು ನಂಬುವಂತೆ ನೀನು ಮಾಡಿರುವೆ.


ಪ್ರವಾದಿಗಳು ಮತ್ತು ಯಾಜಕರು ನನ್ನ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಬಂತೆ ಚಿಕಿತ್ಸೆ ಮಾಡುತ್ತಾರೆ. ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನ್ನುತ್ತಾರೆ.


ಆ ಪ್ರವಾದಿಗಳಿಬ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನ್ನು ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನ್ನು ಹೇಳಿದರು. ಆ ಸುಳ್ಳುಗಳನ್ನು ಯೆಹೋವನಾದ ನನ್ನ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಬುದನ್ನು ನಾನು ಬಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.


“ಹೌದು, ಅವರು ಪರಿಶುದ್ಧ ಪಟ್ಟಣದ ನಿವಾಸಿಗಳಾಗಿದ್ದಾರೆ. ಅವರು ಇಸ್ರೇಲಿನ ದೇವರನ್ನು ಅವಲಂಬಿಸಿಕೊಂಡಿದ್ದಾರೆ. ಸರ್ವಶಕ್ತನಾದ ಯೆಹೋವನು ಎಂಬುದೇ ಆತನ ಹೆಸರು.


ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.


ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!


ಆದ್ದರಿಂದ ನನ್ನ ಹೆಸರನ್ನು ಹೊಂದಿರುವ ಆಲಯವನ್ನೂ ನೀವು ನಂಬಿರುವ ಆಲಯವನ್ನೂ ನಿಮ್ಮ ಪೂರ್ವಿಕರಿಗೆ ನಾನು ಕೊಟ್ಟಿರುವ ಸ್ಥಳವನ್ನೂ ನಾನು ಶೀಲೋವಿಗೆ ಮಾಡಿದಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು