Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:8 - ಪರಿಶುದ್ದ ಬೈಬಲ್‌

8 “‘ನೀವು ಸುಳ್ಳುಗಳನ್ನು ನಂಬುತ್ತಿದ್ದೀರಿ, ಆ ಸುಳ್ಳುಗಳು ಹುರುಳಿಲ್ಲದವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಹಾ, ನೀವು ನಿಷ್ಪ್ರಯೋಜಕವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿಷ್ಪ್ರಯೋಜಕವಾದ ಹಾಗೂ ಮೋಸದ ಮಾತುಗಳಲ್ಲಿ ನೀವು ಭರವಸೆ ಇಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಹಾ, ನೀವು ನಿಷ್ಪ್ರಯೋಜನವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ಪ್ರಯೋಜನವಿಲ್ಲದ ಮೋಸಕರ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:8
14 ತಿಳಿವುಗಳ ಹೋಲಿಕೆ  

ನೀವು, “ನಾವು ಮರಣದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ನಾವು ಪಾತಾಳದೊಂದಿಗೆ ಒಪ್ಪಂದ ಮಾಡಿದ್ದೇವೆ. ಆದ್ದರಿಂದ ನಾವು ಶಿಕ್ಷಿಸಲ್ಪಡುವದಿಲ್ಲ. ಶಿಕ್ಷೆಯು ಹಾದುಹೋಗುವಾಗ ಅದು ನಮಗೇನೂ ಹಾನಿ ಮಾಡುವದಿಲ್ಲ. ನಾವು ನಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತೇವೆ” ಎಂದು ಹೇಳುತ್ತೀರಿ.


ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.


ಎಷ್ಟು ದಿನ ಹೀಗೆ ನಡೆಯುವುದು? ಆ ಪ್ರವಾದಿಗಳು ಸುಳ್ಳುಗಳನ್ನೇ ಯೋಚಿಸುತ್ತಾರೆ. ಆಮೇಲೆ ಆ ಸುಳ್ಳುಗಳನ್ನೇ ಜನರಿಗೆ ಬೋಧಿಸುತ್ತಾರೆ.


ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.


ಕೆಲವರು ಹೇಳುವ ಸುಳ್ಳುಗಳನ್ನು ನಂಬಬೇಡಿರಿ. ಅವರು “ಇದು ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ” ಎಂದು ಹೇಳುತ್ತಾರೆ.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ಆಗ ಯೆರೆಮೀಯನೆಂಬ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಅಂದೆನು.


ಅವರು ಪ್ರವಾದಿಗಳಿಗೆ, “ನಾವು ಮಾಡಬೇಕಿರುವ ಕಾರ್ಯಗಳ ಬಗ್ಗೆ ದೈವೋಕ್ತಿ ನುಡಿಯಬೇಡಿ, ನಮಗೆ ಸತ್ಯವನ್ನು ತಿಳಿಸಬೇಡಿ. ನಮಗೊಪ್ಪುವ ಮನರಂಜನೆಯ ಮಾತುಗಳನ್ನಾಡಿ. ನಮಗೋಸ್ಕರ ಒಳ್ಳೆಯ ಸಂಗತಿಗಳನ್ನೇ ನಿಮ್ಮ ದರ್ಶನಗಳಲ್ಲಿ ನೋಡಿರಿ.


ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.


ತರುವಾಯ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಹೇಳಿದನು: “ಹನನ್ಯನೇ, ಕೇಳು. ಯೆಹೋವನು ನಿನ್ನನ್ನು ಕಳುಹಿಸಲಿಲ್ಲ. ಆದರೆ ಯೆಹೂದದ ಜನರಿಗೆ ಸುಳ್ಳನ್ನು ನಂಬುವಂತೆ ನೀನು ಮಾಡಿರುವೆ.


ನಿಮ್ಮ ಗತಿ ಹೀಗಾಗುವುದು. ನನ್ನ ಯೋಜನೆಗಳಲ್ಲಿ ಇದು ನಿಮ್ಮ ಪಾತ್ರ.” ಇದು ಯೆಹೋವನ ನುಡಿ. “ಏಕೆ ಹೀಗಾಗುವದು? ಏಕೆಂದರೆ ನೀವು ನನ್ನನ್ನು ಮರೆತುಬಿಟ್ಟಿರಿ. ಸುಳ್ಳುದೇವರುಗಳನ್ನು ನಂಬಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು