Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:1 - ಪರಿಶುದ್ದ ಬೈಬಲ್‌

1 ಯೆಹೋವನು ಹೀಗೆನ್ನುತ್ತಾನೆ: “ಆಗ ಜನರು ಯೆಹೂದದ ರಾಜರ ಮತ್ತು ಪ್ರಮುಖ ಅಧಿಪತಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಯಾಜಕರ ಮತ್ತು ಪ್ರವಾದಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಜೆರುಸಲೇಮಿನ ಎಲ್ಲಾ ಜನರ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಆ ಕಾಲ ಬಂದಾಗ ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಹಾಗು ಜೆರುಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಗೋರಿಯಿಂದ ಅಗೆದು ತೆಗೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಹೀಗನ್ನುತ್ತಾನೆ - ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇವಿುನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಗೋರಿಗಳೊಳಗಿಂದ ತೆಗೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ ‘ಯೆಹೋವ ದೇವರು ಹೇಳುವುದೇನೆಂದರೆ, ಆ ಕಾಲದಲ್ಲಿ ಅವರು ಯೆಹೂದದ ಅರಸರ ಎಲುಬುಗಳನ್ನೂ, ಅದರ ಪ್ರಧಾನರ ಎಲುಬುಗಳನ್ನೂ, ಯಾಜಕರ ಎಲುಬುಗಳನ್ನೂ, ಪ್ರವಾದಿಗಳ ಎಲುಬುಗಳನ್ನೂ, ಯೆರೂಸಲೇಮಿನ ನಿವಾಸಿಗಳ ಎಲುಬುಗಳನ್ನೂ ಅವರ ಸಮಾಧಿಗಳೊಳಗಿಂದ ಹೊರಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:1
12 ತಿಳಿವುಗಳ ಹೋಲಿಕೆ  

ಇಸ್ರೇಲ್ ಜನರ ಸತ್ತ ಹೆಣಗಳನ್ನು ಅವರ ಹೊಲಸು ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಎಲುಬುಗಳನ್ನು ನಿಮ್ಮ ಯಜ್ಞವೇದಿಗಳ ಸುತ್ತಲೂ ಹರಡುವೆನು.


ಯೆಹೋವನು ಹೇಳುವುದೇನೆಂದರೆ, “ಮೋವಾಬ್ಯರು ಅನೇಕ ಅಪರಾಧಗಳನ್ನು ಮಾಡಿದ್ದರಿಂದ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಎದೋಮ್ಯರ ಅರಸನ ಎಲುಬುಗಳನ್ನು ಮೋವಾಬ್ಯರು ಸುಟ್ಟು ಸುಣ್ಣವಾಗಿ ಮಾಡಿದರು.


ಯೆಹೋವನ ಶಕ್ತಿಯು ನನ್ನ ಮೇಲೆ ಬಂದಿತು. ಯೆಹೋವನ ಆತ್ಮವು ನನ್ನನ್ನು ನಗರದೊಳಗಿಂದ ಎತ್ತಿಕೊಂಡು ತಗ್ಗಿನ ಮಧ್ಯಕ್ಕೆ ಕೊಂಡೊಯ್ದನು. ಆ ಬಯಲಿನ ತುಂಬಾ ಒಣಗಿದ ಎಲುಬುಗಳು ತುಂಬಿದ್ದವು.


ಯೋಷೀಯನು ಸಮಾರ್ಯದ ಉನ್ನತಸ್ಥಳಗಳಲ್ಲಿದ್ದ ಯಾಜಕರನ್ನೆಲ್ಲ ಕೊಂದುಹಾಕಿದನು. ಅವನು ಯಾಜಕರನ್ನು ಯಜ್ಞವೇದಿಕೆಗಳ ಮೇಲೆಯೇ ಕೊಂದುಹಾಕಿದನು. ಅವನು ಜನರ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿ ಅವನು ಪೂಜೆಯ ಸ್ಥಳಗಳನ್ನು ನಾಶಗೊಳಿಸಿದನು. ನಂತರ ಅವನು ಜೆರುಸಲೇಮಿಗೆ ಹಿಂದಿರುಗಿದನು.


ಯೋಷೀಯನು ಸುತ್ತಲೂ ನೋಡಿದಾಗ ಬೆಟ್ಟದ ಮೇಲಿದ್ದ ಸ್ಮಶಾನಗಳನ್ನು ಕಂಡನು. ಅವನು ಜನರನ್ನು ಕಳುಹಿಸಿ ಆ ಸ್ಮಶಾನಗಳಿಂದ ಎಲುಬುಗಳನ್ನು ತರಿಸಿ ಆ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿಯಲ್ಲಿ, ಯೋಷೀಯನು ಯಜ್ಞವೇದಿಕೆಯನ್ನು ಹೊಲಸು ಮಾಡಿದನು. ಇದು ಪ್ರವಾದಿಯು ಘೋಷಿಸಿದ್ದ ಯೆಹೋವನ ಸಂದೇಶದಂತೆ ಸಂಭವಿಸಿತು. ಯಾರೊಬ್ಬಾಮನು ಯಜ್ಞವೇದಿಕೆಯ ಪಕ್ಕದಲ್ಲಿ ನಿಂತಿದ್ದಾಗ ಪ್ರವಾದಿಯು ಈ ಸಂಗತಿಗಳನ್ನು ಪ್ರಕಟಿಸಿದ್ದನು. ನಂತರ ಯೋಷೀಯನು ಸುತ್ತಲೂ ನೋಡಿದಾಗ, ದೇವಮನುಷ್ಯನ ಸಮಾಧಿಯನ್ನು ಕಂಡನು.


ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”


ಇಜ್ರೇಲ್ ಪ್ರದೇಶದ ಹೊಲದಲ್ಲಿ ಈಜೆಬೆಲಳ ದೇಹವು ಸಗಣಿಯಂತಿರುತ್ತದೆ. ಈಜೆಬೆಲಳ ದೇಹವನ್ನು ಜನರು ಗುರುತಿಸಲಾಗುವುದಿಲ್ಲ!” ಎಂದು ಹೇಳಿದ್ದನು.


ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು.


ಯಾರಿಗೆ ಪ್ರವಾದಿಗಳು ಬೋಧನೆ ಮಾಡಿದ್ದರೋ ಅವರನ್ನು ಬೀದಿಗಳಲ್ಲಿ ಎಸೆಯಲಾಗುವದು. ಆ ಜನರು ಹಸಿವಿನಿಂದ ಮತ್ತು ಶತ್ರುಗಳ ಖಡ್ಗಗಳಿಂದ ಮಡಿಯುವರು. ಆ ಜನರನ್ನೂ ಅವರ ಹೆಂಡತಿಯರನ್ನೂ ಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ.


ನಿಮ್ಮ ಯಜ್ಞವೇದಿಕೆಗಳು ನಾಶವಾಗುವವು. ನಿಮ್ಮ ಧೂಪವೇದಿಕೆಗಳು ಕೆಡವಲ್ಪಡುವವು. ನಿಮ್ಮ ಹೆಣಗಳನ್ನು ನಿಮ್ಮ ಹೊಲಸು ವಿಗ್ರಹಗಳ ಮುಂದೆ ಬಿಸಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು