Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:4 - ಪರಿಶುದ್ದ ಬೈಬಲ್‌

4 “ಯೆರೆಮೀಯನೇ, ಯೆಹೂದದ ಜನರಿಗೆ ಹೀಗೆ ಹೇಳು: ‘ಯೆಹೋವನು ಈ ಮಾತನ್ನು ಹೇಳುತ್ತಾನೆ. “‘ಒಬ್ಬ ಮನುಷ್ಯನು ಕೆಳಗೆ ಬಿದ್ದರೆ ಪುನಃ ಅವನು ಮೇಲಕ್ಕೆ ಏಳುತ್ತಾನೆ; ಒಬ್ಬ ಮನುಷ್ಯನು ತಪ್ಪುದಾರಿ ಹಿಡಿದರೆ ಅವನು ಹಿಂತಿರುಗಿ ಬರುತ್ತಾನೆಂಬುದು ನಿಮಗೆ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಅವರಿಗೆ ಹೀಗೆ ಹೇಳಬೇಕು, “ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀನು ಅವರಿಗೆ ಹೀಗೆ ಹೇಳಬೇಕು : “ಸರ್ವೇಶ್ವರ ಇಂತೆನ್ನುತ್ತಾರೆ : ಬಿದ್ದವರು ಮತ್ತೆ ಏಳುತ್ತಾರಲ್ಲವೆ? ಬಿಟ್ಟುಹೋದವನು ತಿರುಗಿಬರುತ್ತಾನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತು ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನು ಇಂತೆನ್ನುತ್ತಾನೆ - ಬಿದ್ದವರು ಏಳದಿರುವರೋ? ಬಿಟ್ಟು ಹೋದವನು ತಿರಿಗಿ ಬರುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಅವರು ಬಿದ್ದು ಮತ್ತೆ ಏಳರೋ? ಹಿಂದಿರುಗಿದವನು ಮತ್ತೆ ಬರುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:4
15 ತಿಳಿವುಗಳ ಹೋಲಿಕೆ  

ಒಳ್ಳೆಯವನು ಏಳುಸಲ ಬಿದ್ದರೂ ಅವನು ಮತ್ತೆ ಎದ್ದುನಿಲ್ಲುವನು. ಆದರೆ ಕೆಡುಕರು ಒಂದೇ ಆಪತ್ತಿನಿಂದ ಶಾಶ್ವತವಾಗಿ ಸೋತುಹೋಗುವರು.


ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ! ನಾನು ತಿರುಗಿ ಏಳುತ್ತೇನೆ; ನಾನೀಗ ಅಂಧಕಾರದಲ್ಲಿ ಕುಳಿತುಕೊಳ್ಳುತ್ತೇನೆ. ಆದರೆ ಯೆಹೋವನು ನನ್ನ ಬೆಳಕಾಗಿರುತ್ತಾನೆ.


“ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.


ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


ಇಸ್ರೇಲ್ ಕುಮಾರಿಯು ಬಿದ್ದಳು. ಇನ್ನೆಂದಿಗೂ ಆಕೆ ಏಳುವದಿಲ್ಲ. ಆಕೆ ಒಬ್ಬಂಟಿಗಳಾಗಿ ಧೂಳಿನ ಮೇಲೆ ಬಿದ್ದಿದ್ದಾಳೆ. ಆಕೆಯನ್ನು ಎಬ್ಬಿಸಲು ಯಾರೂ ಇಲ್ಲ.


ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ.


ಎಫ್ರಾಯೀಮನ ಹೆಮ್ಮೆಯು ಅವನಿಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತದೆ. ಜನರಿಗೆ ನಾನಾ ತರದ ಸಂಕಟಗಳು ಬಂದಾಗ್ಯೂ ಅವರು ತಮ್ಮ ದೇವರಾದ ಯೆಹೋವನ ಬಳಿಗೆ ಹೋಗಲಿಲ್ಲ. ಜನರು ತಮ್ಮ ಸಹಾಯಕ್ಕಾಗಿ ಆತನಿಗೆ ಮೊರೆಯಿಡಲಿಲ್ಲ.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನಗೆ ಪಾಪಿಗಳು ಸಾಯುವದರಲ್ಲಿ ಇಷ್ಟವಿಲ್ಲ. ಅವರು ತಮ್ಮ ಜೀವಿತವನ್ನು ಬದಲಾಯಿಸಿ ಜೀವವನ್ನು ಹೊಂದಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.


ನಿನ್ನ ಪಾಪಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಗಾಳಿಯಲ್ಲಿ ಹಾರಿಹೋದ ಮೋಡದಂತೆ ಹಾರಿಸಿಬಿಟ್ಟಿದ್ದೇನೆ. ನಾನು ನಿನ್ನನ್ನು ರಕ್ಷಿಸಿದೆನು. ಆದ್ದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.”


ಈ ಕಾರ್ಯಗಳಲ್ಲಿ ಯಾವುದಾದರೊಂದು ಸಂಭವಿಸಿದಾಗ, ಒಬ್ಬ ಮನುಷ್ಯನು ಮಾತ್ರ ತನ್ನ ಪಾಪಕ್ಕಾಗಿ ಕ್ಷಮೆಯನ್ನು ಯಾಚಿಸಿ ಈ ಆಲಯದ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದರೆ,


ನಾನು ಮಾಡಬೇಕೆಂದು ಯೋಚಿಸಿರುವುದನ್ನು ಯೆಹೂದ ಕುಲದವರು ಕೇಳಿಸಿಕೊಳ್ಳಬಹುದು. ಅವರು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಅವರು ಹಾಗೆ ಮಾಡಿದರೆ ಅವರು ಮಾಡಿದ ಪಾಪಗಳನ್ನು ನಾನು ಕ್ಷಮಿಸುವೆನು.”


ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”


ಇದು ಯೆಹೋವನ ಸಂದೇಶ: “ಇಸ್ರೇಲೇ, ನೀನು ಹಿಂತಿರುಗಿ ಬರಲು ಇಚ್ಛಿಸಿದರೆ ನನ್ನಲ್ಲಿಗೆ ಹಿಂತಿರುಗಿ ಬಾ. ನಿನ್ನ ವಿಗ್ರಹಗಳನ್ನು ಎಸೆದುಬಿಡು. ನನ್ನಿಂದ ದೂರಸರಿದು ಅಲೆದಾಡಬೇಡ.


ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ. ನನಗೆ ವಿಶ್ವಾಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಬನ್ನಿ” ಎಂದು ಹೇಳುತ್ತಾನೆ. “ಅದಕ್ಕೆ ಜನರು, ‘ಆಗಲಿ ನಿನ್ನಲ್ಲಿಗೆ ಬರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು