Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:10 - ಪರಿಶುದ್ದ ಬೈಬಲ್‌

10 ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತವನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದುಹೋಗರು, ದನದ ಸದ್ದು ಕಿವಿಗೆ ಬೀಳದು, ಮೃಗಪಕ್ಷಿಗಳು ತೊಲಗಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ, ಮರುಭೂಮಿಯ ಸ್ಥಳಗಳಿಗೋಸ್ಕರ ಗೋಳಾಟವನ್ನೂ ಎತ್ತುವೆನು. ಅವುಗಳ ಮೂಲಕ ಹಾದುಹೋಗದಂತೆ ಅವು ಸುಟ್ಟುಹೋಗಿದೆ. ದನಗಳ ಕೂಗು ಕಿವಿಗೆ ಬೀಳುವುದಿಲ್ಲ. ಆಕಾಶದ ಪಕ್ಷಿಗಳೂ, ಮೃಗಗಳೂ ಸಹ ಓಡಿ ಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:10
30 ತಿಳಿವುಗಳ ಹೋಲಿಕೆ  

ಎಷ್ಟು ಕಾಲದವರೆಗೆ ಭೂಮಿಯು ಒಣಗಿರಬೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಬೇಕು? ದೇಶದಲ್ಲಿ ಪಶುಪಕ್ಷಿಗಳು ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ಆ ದುಷ್ಟರು, “ನಮಗೆ ಏನಾಗುವದೆಂದು ನೋಡಲು ಯೆರೆಮೀಯನು ಬಹಳ ದಿವಸ ಬದುಕಿರಲಾರ” ಎಂದು ಹೇಳುತ್ತಿದ್ದಾರೆ.


ಹೀಗೆ ದೇಶವು ಸತ್ತವರಿಗಾಗಿ ಗೋಳಾಡುವ ಮನುಷ್ಯನಂತಿರುವದು. ಆದ್ದರಿಂದ ಅದರ ಜನರೆಲ್ಲಾ ಬಲಹೀನರಾಗತ್ತಾರೆ. ಅಡವಿಯಲ್ಲಿರುವ ಪ್ರಾಣಿಗಳೂ ಆಕಾಶದ ಪಕ್ಷಿಗಳೂ ಸಮುದ್ರದಲ್ಲಿರುವ ಮೀನುಗಳೂ ಸಾಯುತ್ತಿವೆ.


ನಾನು ಈ ದೇಶವನ್ನು ಬರಿದಾಗಿಯೂ ಬಂಜರು ಭೂಮಿಯನ್ನಾಗಿಯೂ ಮಾಡುವೆನು. ಈ ದೇಶವು ಹೆಮ್ಮೆಪಟ್ಟುಕೊಳ್ಳುತ್ತಿದ್ದ ವಿಷಯಗಳನ್ನೆಲ್ಲಾ ಅವರು ಕಳೆದುಕೊಳ್ಳುವರು. ಇಸ್ರೇಲಿನ ಪರ್ವತಗಳು ಬೋಳುಗುಡ್ಡಗಳಾಗುವವು. ಯಾರೂ ಅದನ್ನು ದಾಟಿ ಹೋಗಲಾರರು.


ಯಾವನೂ, ಯಾವ ಪ್ರಾಣಿಯೂ ಈಜಿಪ್ಟ್ ದೇಶವನ್ನು ದಾಟುವುದಿಲ್ಲ. ನಲವತ್ತು ವರ್ಷದ ತನಕ ಯಾರೂ ಅಲ್ಲಿ ನೆಲೆಸುವದಿಲ್ಲ.


ದೇವರು ಹೇಳಿದ್ದೇನೆಂದರೆ: “ಒಂದುವೇಳೆ, ನಾನು ಕ್ರೂರಪ್ರಾಣಿಗಳನ್ನು ದೇಶದೊಳಗೆ ಕಳುಹಿಸಿ ಜನರನ್ನು ಕೊಂದರೆ, ಅವುಗಳ ದೆಸೆಯಿಂದ ಯಾವನೂ ದೇಶದಲ್ಲಿ ಪ್ರಯಾಣಮಾಡಲಾಗುತ್ತಿರಲಿಲ್ಲ.


ಅನೇಕ ಕುರುಬರು ದ್ರಾಕ್ಷಿತೋಟವನ್ನು ಹಾಳುಮಾಡಿದ್ದಾರೆ. ಆ ಕುರುಬರು ನನ್ನ ತೋಟದ ಸಸಿಗಳನ್ನು ತುಳಿದುಬಿಟ್ಟಿದ್ದಾರೆ: ನನ್ನ ಸುಂದರವಾದ ತೋಟವನ್ನು ಮರಳುಗಾಡನ್ನಾಗಿ ಮಾಡಿದ್ದಾರೆ.


“ಯೆರೆಮೀಯನೇ, ನಿನ್ನ ಕೂದಲನ್ನು ಕತ್ತರಿಸಿ ಎಸೆದುಬಿಡು. ಬೋಳುಶಿಖರಕ್ಕೆ ಹೋಗಿ ರೋಧಿಸು. ಏಕೆಂದರೆ ಯೆಹೋವನು ಈ ತಲೆಮಾರಿನ ಜನರನ್ನು ತಿರಸ್ಕರಿಸಿದ್ದಾನೆ; ಆತನು ಇವರಿಗೆ ವಿಮುಖನಾಗಿದ್ದಾನೆ. ಆತನು ಕೋಪದಿಂದ ಅವರನ್ನು ದಂಡಿಸುವನು.


ಕಂಬನಿ ಸುರಿದು ನನ್ನ ಕಣ್ಣುಗಳು ಇಂಗಿಹೋಗಿವೆ. ನನ್ನ ಕರುಳು ತಳಮಳಗೊಂಡಿದೆ. ನನ್ನ ಹೃದಯವನ್ನು ನೆಲಕ್ಕೆ ಚೆಲ್ಲಲಾಗಿದೆ ಎಂದೆನಿಸುತ್ತಿದೆ. ನನ್ನ ಜನರ ವಿನಾಶದಿಂದ ನನಗೆ ಹೀಗಾಗಿದೆ. ಮಕ್ಕಳು ಮತ್ತು ಶಿಶುಗಳು ಮೂರ್ಛೆ ಹೋಗುತ್ತಿದ್ದಾರೆ. ಅವರು ನಗರದ ಕೇಂದ್ರ ಸ್ಥಳಗಳಲ್ಲಿ (ಚೌಕಗಳಲ್ಲಿ) ಮೂರ್ಛೆಹೋಗುತ್ತಿದ್ದಾರೆ.


“ನಾನು ಈ ಎಲ್ಲ ವಿಪತ್ತುಗಳಿಗಾಗಿ ಅಳುತ್ತೇನೆ. ನನ್ನ ಕಣ್ಣುಗಳಿಂದ ಧಾರಾಕಾರವಾಗಿ ನೀರು ಸುರಿಯುತ್ತಿದೆ. ನನ್ನನ್ನು ಸಂತೈಸುವವರು ಯಾರೂ ಸಮೀಪದಲ್ಲಿ ಇಲ್ಲ; ನನ್ನನ್ನು ಪ್ರೋತ್ಸಾಹಿಸುವವರು ಯಾರೂ ಇಲ್ಲ. ನನ್ನ ಮಕ್ಕಳು ಹಾಳುಬಿದ್ದ ಭೂಮಿಯಂತಿದ್ದಾರೆ. ಶತ್ರುವು ಜಯಶಾಲಿಯಾದ ಕಾರಣ ಅವರು ಹಾಗಾಗಿದ್ದಾರೆ.”


ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ. ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. ಯೆಹೋವನು ನಾಡನ್ನು ಶಪಿಸಿದ್ದರಿಂದ ಅದು ಬರಡು ಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತುಹೋಗುತ್ತಲಿವೆ. ಹೊಲಗಳು ಮರುಭೂಮಿಯಂತಾಗಿವೆ. ಪ್ರವಾದಿಗಳು ಸೆರೆ ಒಯ್ಯಲ್ಪಟ್ಟಿದ್ದಾರೆ. ಆ ಪ್ರವಾದಿಗಳು ತಮ್ಮ ಪ್ರಭಾವವನ್ನೂ ಶಕ್ತಿಯನ್ನೂ ತಪ್ಪಾಗಿ ಬಳಸಿಕೊಳ್ಳುತ್ತಿದ್ದಾರೆ.


ಕಾಡುಕತ್ತೆಗಳು ಬೋಳುಬೆಟ್ಟಗಳ ಮೇಲೆ ನಿಂತು ನರಿಗಳಂತೆ ಗಾಳಿಯನ್ನು ಮೂಸುತ್ತವೆ. ಆದರೆ ಅವುಗಳಿಗೆ ಆಹಾರ ಕಾಣಿಸುವದಿಲ್ಲ. ಏಕೆಂದರೆ ತಿನ್ನಬಹುದಾದ ಸಸಿಗಳು ಬೆಳೆದಿಲ್ಲ.”


ದೇವರೇ, ನಾನು ದುಃಖಿತನಾಗಿದ್ದೇನೆ, ಭಯಭೀತನಾಗಿದ್ದೇನೆ.


‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.


“ಈಗ ನೀನು ಸೋತವಳೂ ನಾಶವಾದವಳೂ ಆಗಿರುವಿ. ನಿನ್ನ ಭೂಮಿಯು ನಿಷ್ಪ್ರಯೋಜಕವಾಗಿದೆ. ಆದರೆ ಸ್ವಲ್ಪ ಸಮಯದ ನಂತರ ನಿನ್ನ ದೇಶವು ಜನರಿಂದ ತುಂಬುವದು. ನಿನ್ನನ್ನು ನಾಶಮಾಡಿದವರು ಬಹುದೂರ ಹೋಗುವರು.


ಇಗೋ, ನಾನು ನಿನ್ನನ್ನು ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ. ಅದಕ್ಕೆ ಅನೇಕ ಹರಿತವಾದ ಹಲ್ಲುಗಳಿವೆ. ಬೇಸಾಯಗಾರರು ಧಾನ್ಯವನ್ನು ಹುಲ್ಲಿನಿಂದ ಪ್ರತ್ಯೇಕಿಸುವದಕ್ಕಾಗಿ ಅದನ್ನು ಉಪಯೋಗಿಸುವರು. ನೀವು ಬೆಟ್ಟದ ಶಿಖರಗಳಲ್ಲಿ ತುಳಿದಾಡಿ ಅದನ್ನು ಪುಡಿ ಮಾಡುವಿರಿ. ಆ ಬೆಟ್ಟಗಳನ್ನು ನೀವು ಕುಂಟೆಯಂತೆ ಮಾಡುವಿರಿ.


ಉತ್ತರದ ಒಂದು ಜನಾಂಗವು ಬಾಬಿಲೋನಿನ ಮೇಲೆ ಧಾಳಿ ಮಾಡುವುದು. ಆ ಜನಾಂಗವು ಬಾಬಿಲೋನನ್ನು ಒಂದು ಬರಿದಾದ ಮರುಭೂಮಿಯನ್ನಾಗಿ ಮಾಡುವದು. ಅಲ್ಲಿ ಯಾರೂ ವಾಸಮಾಡಲಾರರು. ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.”


“ನರಪುತ್ರನೇ, ತೂರಿನ ವಿಷಯವಾದ ಶೋಕಗೀತೆಯನ್ನು ಹಾಡು.


ಯಾಜಕರೇ, ನೀವು ನಿಮ್ಮ ಶೋಕವಸ್ತ್ರವನ್ನು ಧರಿಸಿ ಗಟ್ಟಿಯಾಗಿ ರೋಧಿಸಿರಿ. ವೇದಿಕೆಯಲ್ಲಿ ಸೇವೆಮಾಡುವವರೇ, ಗಟ್ಟಿಯಾಗಿ ರೋಧಿಸಿರಿ. ನನ್ನ ದೇವರ ಸೇವಕರೇ, ನೀವು ನಿಮ್ಮ ಶೋಕವಸ್ತ್ರಗಳಲ್ಲಿಯೇ ನಿದ್ರೆಮಾಡಿರಿ. ಯಾಕೆಂದರೆ ಇನ್ನು ದೇವಾಲಯದಲ್ಲಿ ಧಾನ್ಯ ಮತ್ತು ಪಾನಸಮರ್ಪಣೆ ಇಲ್ಲ.


ಯೆಹೋವನೇ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುತ್ತಿದ್ದೇನೆ. ನಮ್ಮ ಹಸಿರು ಹೊಲಗದ್ದೆಗಳು ಬೆಂಕಿಯಿಂದ ಮರುಭೂಮಿಯಾದವು. ಹೊಲದಲ್ಲಿದ್ದ ಮರಗಳನ್ನೆಲ್ಲಾ ಬೆಂಕಿಯು ದಹಿಸಿತು.


ಇಸ್ರೇಲಿನ ಜನರೇ, ಈ ಹಾಡನ್ನು ಕೇಳಿರಿ. ಇದು ನಿಮ್ಮ ಮರಣದ ಗೀತೆ.


ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಸಾರ್ವಜನಿಕ ಸ್ಥಳಗಳಲ್ಲಿ ಜನರು ಗೋಳಾಡುವರು. ರಸ್ತೆ ಬದಿಗಳಲ್ಲಿ ಜನರು ಗೋಳಾಡುವರು. ಪಟ್ಟಣದ ನಿವಾಸಿಗಳು ತಮ್ಮೊಂದಿಗೆ ಗೋಳಾಡಲು ರೈತರನ್ನು ಆಹ್ವಾನಿಸುವರು. ಅಳುವವರನ್ನು ಬಾಡಿಗೆಗೆ ಕರೆದುಕೊಂಡು ಬರುವರು.


ಆಗ ಜನರು ನಿಮ್ಮ ಬಗ್ಗೆ ಹಾಡನ್ನು ಹಾಡುವರು. ಜನರು ಶೋಕಗೀತೆಯನ್ನು ಹಾಡುವರು. ‘ನಾವು ನಾಶವಾದೆವು! ಯೆಹೋವನು ನಮ್ಮ ದೇಶವನ್ನು ನಮ್ಮಿಂದ ತೆಗೆದುಕೊಂಡು ಇತರ ಜನರಿಗೆ ಕೊಟ್ಟನು. ಹೌದು, ಆತನು ನಮ್ಮ ಭೂಮಿಯನ್ನು ನಮ್ಮಿಂದ ತೆಗೆದುಕೊಂಡುಬಿಟ್ಟನು, ನಮ್ಮ ಗದ್ದೆಗಳನ್ನು ಯೆಹೋವನು ನಮ್ಮ ವೈರಿಗಳಿಗೆ ಪಾಲು ಮಾಡಿಕೊಟ್ಟನು.


ಪ್ರಾಯದಸಿಂಹಗಳು (ವೈರಿಗಳು) ಇಸ್ರೇಲ್ ಜನಾಂಗದ ಮೇಲೆ ಗರ್ಜಿಸುತ್ತಿವೆ. ಆ ಸಿಂಹಗಳು ಆರ್ಭಟಿಸುತ್ತಿವೆ; ಇಸ್ರೇಲರ ನಾಡನ್ನು ನಾಶಮಾಡಿವೆ. ಇಸ್ರೇಲ್‌ನ ನಗರಗಳು ಸುಡಲ್ಪಟ್ಟಿವೆ; ಅವುಗಳು ನಿರ್ಜನವಾಗಿವೆ.


ಹೌದು, ಮರಳುಭೂಮಿಯನ್ನಾಗಿ ಮಾಡಿದ್ದಾರೆ. ಅದು ಒಣಗಿಹೋಗಿ ನಿಸ್ಸತ್ವವಾಗಿದೆ. ಅಲ್ಲಿ ಯಾರೂ ವಾಸಿಸುವದಿಲ್ಲ. ಇಡೀ ದೇಶವೇ ಬರಿದಾದ ಮರಳುಗಾಡಾಗಿದೆ. ಆ ತೋಟವನ್ನು ನೋಡಿಕೊಳ್ಳುವದಕ್ಕೆ ಯಾರೂ ಉಳಿದಿಲ್ಲ.


ಚೀಯೋನ್ ಪರ್ವತವು ನಿರ್ಜನ ಪ್ರದೇಶವಾಗಿದೆ. ಚೀಯೋನ್ ಪರ್ವತದ ಸುತ್ತಮುತ್ತಲೆಲ್ಲ ನರಿಗಳು ಓಡಾಡುತ್ತವೆ.


ನಿಮ್ಮ ಜನರು ವಾಸಮಾಡುವಲ್ಲೆಲ್ಲಾ ಕೆಟ್ಟಸಂಗತಿಗಳು ನಡೆಯುವವು; ಪಟ್ಟಣಗಳು ಕಲ್ಲಿನ ರಾಶಿಗಳಾಗುವವು; ಪೂಜಾಸ್ಥಳಗಳು ನಾಶಮಾಡಲ್ಪಡುವವು. ನಿಮ್ಮ ಯಜ್ಞವೇದಿಕೆಗಳು ಕೆಡವಲ್ಪಟ್ಟು ಹಾಳಾಗಿಹೋಗುವವು; ನಿಮ್ಮ ವಿಗ್ರಹಗಳು ಮುರಿಯಲ್ಪಟ್ಟು ನಾಶವಾಗುವವು. ಜನರು ಅವುಗಳನ್ನು ಇನ್ನು ಎಂದಿಗೂ ಪೂಜಿಸರು. ನಿಮ್ಮ ಧೂಪವೇದಿಕೆಗಳು ಕತ್ತರಿಸಲ್ಪಡುವವು. ನೀವು ಮಾಡಿಕೊಂಡ ವಿಗ್ರಹಗಳು ಅಳಿದುಹೋಗುವವು.


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು