Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:11 - ಪರಿಶುದ್ದ ಬೈಬಲ್‌

11 “ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಯೆರೂಸಲೇಮನ್ನು ಹಾಳುದಿಬ್ಬಗಳನ್ನಾಗಿಯೂ ನರಿಗಳ ಹಕ್ಕೆಯನ್ನಾಗಿಯೂ ಗೈದು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು [ಎಂದು ಯೆಹೋವನು ಹೇಳಿದ್ದಾನಲ್ಲಾ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:11
32 ತಿಳಿವುಗಳ ಹೋಲಿಕೆ  

ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟದ್ದಾಗಿತ್ತು. ಆದರೆ ಈಗ ಅದು ಕೇವಲ ಕಲ್ಲುಗಳ ರಾಶಿ. ಅರಮನೆಯು ಕೆಡವಲ್ಪಟ್ಟಿದೆ. ಅದನ್ನು ತಿರುಗಿ ಕಟ್ಟಲು ಸಾಧ್ಯವೇ ಇಲ್ಲ.


ಬಾಬಿಲೋನು ನಾಶವಾದ ಕಟ್ಟಡಗಳ ಗುಡ್ಡೆಯಾಗುವುದು. ಬಾಬಿಲೋನು ಕಾಡುನಾಯಿಗಳ ನಿವಾಸವಾಗುವುದು. ಜನರು ಕಲ್ಲುಬಂಡೆಗಳ ಗುಡ್ಡೆಯನ್ನು ನೋಡಿ ಆಶ್ಚರ್ಯಪಡುವರು. ಬಾಬಿಲೋನಿನ ಬಗ್ಗೆ ಜನರು ತಲೆಯಾಡಿಸುವರು. ಬಾಬಿಲೋನು ನಿರ್ಜನ ಪ್ರದೇಶವಾಗುವುದು.


ಕೇಳಿರಿ, ಉತ್ತರ ದಿಕ್ಕಿನಿಂದ ಬರುತ್ತಿರುವ ಮಹಾಧ್ವನಿಯನ್ನು! ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು.


ಮುಳ್ಳುಗಿಡಗಳು ಅಲ್ಲಿಯ ಸುಂದರವಾದ ಬಂಗಲೆಗಳಲ್ಲಿ ಬೆಳೆಯುವವು. ಕಾಡುನಾಯಿಗಳೂ ಗೂಬೆಗಳೂ ಆ ಮನೆಗಳಲ್ಲಿ ವಾಸಿಸುವವು. ಕಾಡುಪ್ರಾಣಿಗಳು ಅದನ್ನು ತಮ್ಮ ಮನೆಯನ್ನಾಗಿ ಮಾಡಿಕೊಳ್ಳುವವು. ಅಲ್ಲಿ ಬೆಳೆಯುವ ಎತ್ತರವಾದ ಹುಲ್ಲುಗಳಲ್ಲಿ ಉಷ್ಟ್ರಪಕ್ಷಿಗಳು ವಾಸಮಾಡುವವು.


ಕಾಡುನಾಯಿ ಮತ್ತು ತೋಳಗಳು ಬಾಬಿಲೋನಿನ ಭವ್ಯಭವನಗಳೊಳಗಿಂದ ಅರಚುವವು. ಬಾಬಿಲೋನ್ ಕೊನೆಗೊಳ್ಳುವುದು. ಅದರ ಅಂತ್ಯವು ಸಮೀಪದಲ್ಲಿಯೇ ಇದೆ. ಅದರ ಪೂರ್ಣ ನಾಶನಕ್ಕಾಗಿ ನಾನು ಇನ್ನು ಹೆಚ್ಚು ಹೊತ್ತು ಕಾಯುವದಿಲ್ಲ.”


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ನಾವು ಭಯಗೊಂಡಿದ್ದೇವೆ. ನಾವು ಗುಂಡಿಯೊಳಗೆ ಬಿದ್ದಿದ್ದೇವೆ. ನಮಗೆ ಬಹಳವಾಗಿ ನೋವಾಗಿದೆ! ನಾವು ಮುರಿದುಹೋದವರಾಗಿದ್ದೇವೆ!”


ಯೆಹೋವನು ಯಾಕೋಬನ ಮನೆಗಳನ್ನು ನಾಶಪಡಿಸಿದನು. ಆತನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು. ತನ್ನ ಕೋಪದಲ್ಲಿ ಆತನು ಯೆಹೂದದ ಮಗಳ ಕೋಟೆಗಳನ್ನು ನಾಶಪಡಿಸಿದನು. ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅಪ್ಪಳಿಸಿದನು. ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ.


ಬಾಬಿಲೋನಿನ ಸೈನ್ಯವು ಜೆರುಸಲೇಮಿಗೆ ಬರಬೇಕೆಂದು ನಾನು ಆಜ್ಞಾಪಿಸುತ್ತೇನೆ.’ ಇದು ಯೆಹೋವನ ನುಡಿ. ‘ಆ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುವುದು. ಅವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ಅದಕ್ಕೆ ಬೆಂಕಿಯಿಟ್ಟು ಸುಟ್ಟುಬಿಡುವರು. ನಾನು ಯೆಹೂದ ಪ್ರದೇಶದ ನಗರಗಳನ್ನು ನಾಶಮಾಡುವೆನು. ಆ ನಗರಗಳು ಬರಿದಾದ ಮರುಭೂಮಿಗಳಾಗುವವು. ಅಲ್ಲಿ ಯಾರೂ ವಾಸಮಾಡಲಾರರು.’”


ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’


ಆ ಇಡೀ ಪ್ರದೇಶವು ಒಂದು ಮರುಭೂಮಿಯಾಗುವುದು. ಆ ಜನಾಂಗಗಳೆಲ್ಲ ಎಪ್ಪತ್ತು ವರ್ಷಗಳವರೆಗೆ ಬಾಬಿಲೋನಿನ ರಾಜನ ಗುಲಾಮರಾಗುವರು.


ದೇವರೇ, ಅನ್ಯ ಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲಸು ಮಾಡಿದರು; ಜೆರುಸಲೇಮನ್ನು ನಾಶ ಮಾಡಿದರು.


ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”


ಆದ್ದರಿಂದ ನಾನು ಸಮಾರ್ಯವನ್ನು ಕಲ್ಲಿನ ರಾಶಿಯನ್ನಾಗಿ ಮಾಡುವೆನು. ಅದು ದ್ರಾಕ್ಷಿಬಳ್ಳಿ ನೆಡಲು ಸಿದ್ಧವಾಗುವುದು. ಸಮಾರ್ಯದ ಕಲ್ಲುಗಳನ್ನೆಲ್ಲಾ ತಗ್ಗಿಗೆ ನೂಕಿಬಿಡುವೆನು; ಆಗ ಅಲ್ಲಿ ಕೇವಲ ಅಸ್ತಿವಾರಗಳು ಕಾಣುವವು.


ಯೆಹೋವನ ಹೆಸರಿನಲ್ಲಿ ಹಾಗೆ ಪ್ರವಾದಿಸಲು ನಿನಗೆ ಹೇಗೆ ಧೈರ್ಯ ಬಂದಿತು? ಶಿಲೋವಿನಂತೆ ಯೆಹೋವನ ಈ ಆಲಯವು ಹಾಳಾಗುವದೆಂದು ಹೇಳಲು ನಿನಗೆ ಹೇಗೆ ಧೈರ್ಯ ಬಂದಿತು? ಜೆರುಸಲೇಮು ಜನರಿಲ್ಲದ ಒಂದು ಮರುಭೂಮಿಯಾಗುವುದೆಂದು ಹೇಳಲು ನಿನಗೆ ಹೇಗೆ ಧೈರ್ಯ ಬಂದಿತು?” ಎಂದು ಕೇಳಿದರು. ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನನ್ನು ಮುತ್ತಿದರು.


ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.


ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.


ಸಮಾರ್ಯದಲ್ಲಿರುವ ಅವನ ಸ್ನೇಹಿತರೊಡನೆ ಮತ್ತು ಸಮಾರ್ಯದ ಸೈನ್ಯದವರೊಡನೆ ಮಾತನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೇಯೇ ಬಿಟ್ಟುಬಿಡುತ್ತೇವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಬಹುದು. ಆ ತಿಪ್ಪೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡೆಗಳಾಗಿವೆ!” ಎಂದು ಹೇಳಿದನು.


ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು: “ಅವಳು ನಾಶವಾದಳು! ಬಾಬಿಲೋನೆಂಬ ಮಹಾನಗರಿಯು ನಾಶವಾದಳು! ಅವಳು (ಬಾಬಿಲೋನ್) ದೆವ್ವಗಳಿಗೆ ವಾಸಸ್ಥಾನವಾದಳು, ಸಕಲ ಅಶುದ್ಧಾತ್ಮಗಳಿಗೆ ನೆಲೆಯಾದಳು, ಅಶುದ್ಧವಾದ ಮತ್ತು ಅಸಹ್ಯವಾದ ಸಕಲ ಹಕ್ಕಿಗಳಿಗೆ ಆಶ್ರಯವಾದಳು.”


ನಿಮ್ಮ ಭೂಮಿಯನ್ನು ಬರಿದುಮಾಡುವೆ. ಅದರಲ್ಲಿ ವಾಸಿಸಲು ಬರುವ ನಿಮ್ಮ ವೈರಿಗಳೂ ಅದನ್ನು ನೋಡಿ ಆಶ್ಚರ್ಯಪಡುವರು.


ಆದರೆ ನರಿಗಳು ವಾಸಿಸುವ ಈ ಸ್ಥಳದಲ್ಲಿ ನೀನು ನಮ್ಮನ್ನು ಜಜ್ಜಿಹಾಕಿರುವೆ. ಮರಣದಂತೆ ಕತ್ತಲಾಗಿರುವ ಈ ಸ್ಥಳದಲ್ಲಿ ನೀನು ನಮ್ಮನ್ನು ತೊರೆದುಬಿಟ್ಟಿರುವೆ.


ಸ್ವಲ್ಪ ಸಮಯದಲ್ಲಿಯೇ ನಾನು ಉತ್ತರ ರಾಜ್ಯಗಳ ಎಲ್ಲಾ ಜನರನ್ನು ಕರೆಯುತ್ತೇನೆ” ಎಂದನು. ಮತ್ತೆ ಯೆಹೋವನು ಹೀಗೆ ಹೇಳಿದನು: “ಆ ದೇಶಗಳ ರಾಜರು ಬರುವರು. ಅವರು ಜೆರುಸಲೇಮಿನ ಹೆಬ್ಬಾಗಿಲಿನ ಹತ್ತಿರ ತಮ್ಮ ಆಸನಗಳನ್ನು ಹಾಕುವರು. ಅವರು ಜೆರುಸಲೇಮಿನ ಎಲ್ಲಾ ಕೋಟೆಗೋಡೆಗಳಿಗೆ ಮುತ್ತಿಗೆಹಾಕುವರು. ಅವರು ಯೆಹೂದ ಪ್ರದೇಶದ ಎಲ್ಲಾ ನಗರಗಳ ಮೇಲೆ ಧಾಳಿ ಮಾಡುವರು.


ಯೆಹೋವನು ಹೀಗೆ ಹೇಳುತ್ತಾನೆ: “ಇಡೀ ದೇಶವು ಹಾಳಾಗುವುದು. ಆದರೆ ನಾನು ಭೂಮಿಯನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುತ್ತಾನೆ, “ನಾನು ಜೆರುಸಲೇಮ್ ನಗರಕ್ಕೂ ಮತ್ತು ಯೆಹೂದದ ಎಲ್ಲಾ ಪಟ್ಟಣಗಳಿಗೂ ತಂದ ಭಯಂಕರವಾದ ಕೇಡನ್ನು ನೀವು ನೋಡಿದ್ದೀರಿ. ಆ ಪಟ್ಟಣಗಳು ಇಂದು ಕೇವಲ ಕಲ್ಲಿನ ಗುಡ್ಡೆಗಳಾಗಿವೆ.


“ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.”


ಉತ್ತರದ ಒಂದು ಜನಾಂಗವು ಬಾಬಿಲೋನಿನ ಮೇಲೆ ಧಾಳಿ ಮಾಡುವುದು. ಆ ಜನಾಂಗವು ಬಾಬಿಲೋನನ್ನು ಒಂದು ಬರಿದಾದ ಮರುಭೂಮಿಯನ್ನಾಗಿ ಮಾಡುವದು. ಅಲ್ಲಿ ಯಾರೂ ವಾಸಮಾಡಲಾರರು. ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.”


ಚೀಯೋನಿಗೆ ಹೋಗುವ ದಾರಿಗಳು ದುಃಖಿಸುತ್ತಿವೆ. ಅವುಗಳು ದುಃಖಿಸುತ್ತಿವೆ; ಏಕೆಂದರೆ ಯಾರೂ ಈಗ ಉತ್ಸವಗಳಿಗಾಗಿ ಚೀಯೋನಿಗೆ ಬರುವದಿಲ್ಲ. ಚೀಯೋನಿನ ಎಲ್ಲ ಹೆಬ್ಬಾಗಿಲುಗಳು ನಿರ್ಜನವಾಗಿವೆ. ಚೀಯೋನಿನ ಎಲ್ಲ ಯಾಜಕರು ನರಳಾಡುತ್ತಿದ್ದಾರೆ. ಚೀಯೋನಿನ ತರುಣಿಯರನ್ನು ತೆಗೆದುಕೊಂಡು ಹೋಗಲಾಗಿದೆ. ಇದೆಲ್ಲ ಚೀಯೋನಿಗೆ ಅತಿ ದುಃಖವನ್ನುಂಟುಮಾಡಿದೆ.


ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.


ಜ್ಞಾನಿಯು ಇವುಗಳನ್ನು ನೆನಪು ಮಾಡಿಕೊಂಡು ದೇವರ ನಿಜಪ್ರೀತಿಯನ್ನು ಅರ್ಥಮಾಡಿಕೊಳ್ಳುವನು.


ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಬ್ಬ ವೈದ್ಯನಿದ್ದಾನೆ. ಆದರೆ ನನ್ನ ಜನರ ಗಾಯಗಳು ಗುಣವಾಗಲಿಲ್ಲವೇಕೆ?


“ಯೆರೆಮೀಯನೇ, ನೀನು ಈ ವಿಷಯವನ್ನು ಯೆಹೂದದ ಜನರಿಗೆ ಹೇಳಿದಾಗ ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ನಿರ್ಣಯಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಅವರು ಕೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು