17 ಸರ್ವಶಕ್ತ ಸರ್ವೇಶ್ವರ ಸ್ವಾಮಿಯ ಮಾತು : “ನಡೆಯುತ್ತಿರುವ ಕಾರ್ಯಗಳನ್ನು ಆಲೋಚಿಸಿ ನೋಡಿ ರೋದನಾ ಗಾಯಕಿಯರನ್ನು ಕರೆಯಿಸಿರಿ ಅವರಲ್ಲಿ ಜಾಣೆಯರನ್ನು ಕರೆಯ ಕಳಿಸಿರಿ ಅವರೂ ಬಂದು ಸೇರಲಿ.”
ನೀನು ಎತ್ತರವಾದ ಸ್ಥಳಗಳ ಬಗ್ಗೆ ಭಯದಿಂದಿರುವೆ; ನಿನ್ನ ಹಾದಿಯಲ್ಲಿರುವ ಪ್ರತಿಯೊಂದು ಚಿಕ್ಕ ವಸ್ತುವಿಗೂ ಹೆದರಿಕೊಂಡು ನಡೆದಾಡುವೆ. ನಿನ್ನ ಕೂದಲು ಬಾದಾಮಿ ಮರದ ಹೂವುಗಳಂತೆ ಬಿಳುಪಾಗುವುದು. ನೀನು ನಡೆಯುವಾಗ ಮಿಡತೆಯಂತೆ ನಿನ್ನನ್ನು ಎಳೆದಾಡಿಕೊಂಡು ನಡೆಯುವೆ; ಮಗುವನ್ನು ಪಡೆಯಲಾರದಷ್ಟು ವಯಸ್ಸಾಗುವುದು. ಆಮೇಲೆ ನೀನು ನಿನ್ನ ಹೊಸ ಮನೆಗೆ (ಸಮಾಧಿಗೆ) ಹೋಗುವೆ. ನಿನ್ನ ಶವಸಂಸ್ಕಾರಕ್ಕೆ ಹೋಗಲು ಜನರು ಬೀದಿಗಳಲ್ಲಿ ತುಂಬಿರುವರು.
ಯೆರೆಮೀಯನು ಅವನ ಬಗ್ಗೆ ಶೋಕಗೀತೆಗಳನ್ನು ರಚಿಸಿ ಹಾಡಿದನು. ಆ ಗೀತೆಗಳನ್ನು ಗಂಡಸರು ಹೆಂಗಸರು ಈಗಲೂ ಹಾಡುತ್ತಾರೆ. ಯೋಷೀಯನ ಕುರಿತು ದುಃಖದ ಹಾಡನ್ನು ಹಾಡುವದು ಅವರಿಗೆ ರೂಢಿಯಾಗಿದೆ. ಆ ಗೀತೆಗಳನ್ನು ಮರಣದ ಹಾಡಿನ ಪುಸ್ತಕದಲ್ಲಿ ಬರೆಯಲಾಗಿದೆ.
“ಯೆರೆಮೀಯನೇ, ನಿನ್ನ ಕೂದಲನ್ನು ಕತ್ತರಿಸಿ ಎಸೆದುಬಿಡು. ಬೋಳುಶಿಖರಕ್ಕೆ ಹೋಗಿ ರೋಧಿಸು. ಏಕೆಂದರೆ ಯೆಹೋವನು ಈ ತಲೆಮಾರಿನ ಜನರನ್ನು ತಿರಸ್ಕರಿಸಿದ್ದಾನೆ; ಆತನು ಇವರಿಗೆ ವಿಮುಖನಾಗಿದ್ದಾನೆ. ಆತನು ಕೋಪದಿಂದ ಅವರನ್ನು ದಂಡಿಸುವನು.
ಆತನು ಒಬ್ಬ ಶತ್ರುವಿನಂತಾಗಿದ್ದಾನೆ. ಆತನು ಇಸ್ರೇಲನ್ನು ನಾಶಮಾಡಿದನು. ಆತನು ಅವಳ ಎಲ್ಲ ಅರಮನೆಗಳನ್ನು ನುಂಗಿಬಿಟ್ಟನು. ಆತನು ಅವಳ ಎಲ್ಲ ಕೋಟೆಗಳನ್ನು ನುಂಗಿಬಿಟ್ಟನು. ಯೆಹೂದ ಜನಾಂಗದಲ್ಲಿ ಆತನು ಹೆಚ್ಚಿನ ದುಃಖವನ್ನು ಉಂಟುಮಾಡಿ ಶೋಕವನ್ನು ಹರಡಿದ್ದಾನೆ.
“ಜನರು ಈಜಿಪ್ಟಿನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು. ಬೇರೆ ದೇಶಗಳಲ್ಲಿರುವ ಹೆಣ್ಣುಮಕ್ಕಳು ಈ ಶೋಕಗೀತೆಯನ್ನು ಹಾಡುವರು. ಅವರು ಈಜಿಪ್ಟ್ ಮತ್ತು ಅದರ ಎಲ್ಲಾ ಜನರ ಕುರಿತು ಈ ಶೋಕಗೀತೆಯನ್ನು ಹಾಡುವರು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.
ಆಗ ಜನರು ನಿಮ್ಮ ಬಗ್ಗೆ ಹಾಡನ್ನು ಹಾಡುವರು. ಜನರು ಶೋಕಗೀತೆಯನ್ನು ಹಾಡುವರು. ‘ನಾವು ನಾಶವಾದೆವು! ಯೆಹೋವನು ನಮ್ಮ ದೇಶವನ್ನು ನಮ್ಮಿಂದ ತೆಗೆದುಕೊಂಡು ಇತರ ಜನರಿಗೆ ಕೊಟ್ಟನು. ಹೌದು, ಆತನು ನಮ್ಮ ಭೂಮಿಯನ್ನು ನಮ್ಮಿಂದ ತೆಗೆದುಕೊಂಡುಬಿಟ್ಟನು, ನಮ್ಮ ಗದ್ದೆಗಳನ್ನು ಯೆಹೋವನು ನಮ್ಮ ವೈರಿಗಳಿಗೆ ಪಾಲು ಮಾಡಿಕೊಟ್ಟನು.