Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:16 - ಪರಿಶುದ್ದ ಬೈಬಲ್‌

16 “ನಿಮ್ಮನ್ನು ಶುದ್ಧಿಮಾಡಿಕೊಳ್ಳಿರಿ; ಶುಚಿಪಡಿಸಿಕೊಳ್ಳಿರಿ. ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ; ಅವುಗಳನ್ನು ನೋಡಲು ನನಗೆ ಮನಸ್ಸಿಲ್ಲ. ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕೃತ್ಯಗಳು ನೀಗಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮ್ಮನ್ನು ತೊಳೆದುಕೊಳ್ಳಿರಿ, ಶುದ್ಧಿಮಾಡಿಕೊಳ್ಳಿರಿ, ನನ್ನ ಕಣ್ಣೆದುರಿನ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ. ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟಕೃತ್ಯಗಳನ್ನು ತೆಗೆದುಹಾಕಿರಿ. ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:16
31 ತಿಳಿವುಗಳ ಹೋಲಿಕೆ  

ಅವನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಲಿ. ಅವನು ಶಾಂತಿಯನ್ನು ಎದುರುನೋಡುತ್ತಾ ಅದನ್ನು ಪಡೆಯಲು ಪ್ರಯತ್ನಿಸಲಿ.


ಆದ್ದರಿಂದ ಇತರ ಜನರಿಗೆ ಕೇಡುಮಾಡಬೇಡಿ, ಸುಳ್ಳಾಡದಿರಿ, ಜನರನ್ನು ಮೋಸಗೊಳಿಸಬೇಡಿ, ಹೊಟ್ಟೆಕಿಚ್ಚುಪಡದಿರಿ, ಜನರ ಬಗ್ಗೆ ಕೆಟ್ಟಮಾತುಗಳನ್ನು ಆಡದಿರಿ. ಇವುಗಳನ್ನೆಲ್ಲಾ ನಿಮ್ಮ ಜೀವಿತದಿಂದ ಹೊರಕ್ಕೆ ಹಾಕಿರಿ.


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.


ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದನ್ನು ನೀವು ತಕ್ಕ ಕಾರ್ಯಗಳ ಮೂಲಕ ತೋರಿಸಿ.


ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.


ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ ಸುತ್ತಲೂ ನಡೆಯಲು ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ.


ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.


ಈಗ ನೀನು ತಡಮಾಡುವುದೇಕೆ? ಎದ್ದೇಳು! ಆತನಲ್ಲಿ ನಂಬಿಕೆಯಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೊ’ ಎಂದು ಹೇಳಿದನು.


ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು.


ಆ ಪ್ರವಾದಿಗಳು, “ನಿಮ್ಮ ಜೀವನಕ್ರಮವನ್ನು ಬದಲಾಯಿಸಿಕೊಳ್ಳಿರಿ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿಬಿಡಿ. ನೀವು ಬದಲಾದರೆ, ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಬಹಳ ಹಿಂದೆ ಕೊಟ್ಟ ಭೂಮಿಯಲ್ಲಿ ನೀವು ನೆಲೆಸಬಹುದು. ನೀವು ಶಾಶ್ವತವಾಗಿ ವಾಸಿಸಬೇಕೆಂದು ಆತನು ಈ ಭೂಮಿಯನ್ನು ಕೊಟ್ಟಿದ್ದಾನೆ.


ನೀನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿದರೆ ಸದಾಕಾಲ ಬದುಕುವೆ.


ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.


ನನ್ನ ದೋಷವನ್ನು ತೊಳೆದುಬಿಡು. ನನ್ನ ಪಾಪವನ್ನು ಪರಿಹರಿಸಿ ನನ್ನನ್ನು ಮತ್ತೆ ಶುದ್ಧೀಕರಿಸು!


ಒಳ್ಳೆಯ ಮಾರ್ಗವನ್ನು ಬಿಟ್ಟು ಹೋಗಬೇಡ; ಆದರೆ ಕೆಡುಕಿಗೆ ಯಾವಾಗಲೂ ದೂರವಾಗಿರು.


ಸರಿಯಾದ ಮತ್ತು ನ್ಯಾಯವಾದ ಕಾರ್ಯಗಳನ್ನು ಮಾಡು. ಯೆಹೋವನು ಅವುಗಳನ್ನು ಯಜ್ಞಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು.


“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.


ಅವರು ನನ್ನ ಸಂದೇಶವನ್ನು ಕೇಳಿ ಅದರಂತೆ ನಡೆಯಬಹುದು; ತಮ್ಮ ಕೆಟ್ಟ ಜೀವನವನ್ನು ತ್ಯಜಿಸಿ ಸನ್ಮಾರ್ಗವನ್ನು ಹಿಡಿಯಬಹುದು. ಅವರು ಪರಿವರ್ತನೆ ಹೊಂದಿದರೆ ನಾನು ಅವರನ್ನು ಶಿಕ್ಷಿಸಬೇಕೆಂದು ಮಾಡಿದ ಯೋಚನೆಗಳನ್ನು ಬದಲಾಯಿಸುವೆನು. ಅವರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದರಿಂದ ಅವರನ್ನು ಶಿಕ್ಷಿಸಬೇಕೆಂದು ನಾನು ಯೋಚಿಸುತ್ತಿದ್ದೇನೆ.


ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.


ಪ್ರತಿ ಮನುಷ್ಯನೂ ಪ್ರಾಣಿಯೂ ಶೋಕವಸ್ತ್ರವನ್ನು ಧರಿಸಬೇಕು. ಜನರು ದೇವರಿಗೆ ಗಟ್ಟಿಯಾಗಿ ಮೊರೆಯಿಡಬೇಕು. ಪ್ರತಿಯೊಬ್ಬನು ತನ್ನ ದುಷ್ಟಜೀವಿತವನ್ನು ಬದಲಾಯಿಸಿ ದುಷ್ಟತನ ಮಾಡುವದನ್ನು ನಿಲ್ಲಿಸಬೇಕು.


ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”


ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.


ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು