Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:2 - ಪರಿಶುದ್ದ ಬೈಬಲ್‌

2 ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಕಾಶಮಂಡಲವೇ, ಆಲಿಸು! ಭೂಮಂಡಲವೇ, ಕೇಳು! ಯೆಹೋವನು ಮಾತಾಡುತ್ತಿದ್ದಾನೆ; ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:2
37 ತಿಳಿವುಗಳ ಹೋಲಿಕೆ  

“ಆಕಾಶವೇ, ನಾನು ಹೇಳುವುದನ್ನು ಕೇಳು. ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಆಲಿಸು.


“ಈ ದಿನ ಎರಡು ಮಾರ್ಗಗಳಲ್ಲಿ ಯಾವುದನ್ನು ಬೇಕಾದರೂ ಆರಿಸಿಕೊಳ್ಳಲು ನಾನು ನಿಮಗೆ ಅವಕಾಶ ಕೊಟ್ಟಿದ್ದೇನೆ. ಪರಲೋಕವೂ ಭೂಮಿಯೂ ಅದಕ್ಕೆ ಸಾಕ್ಷಿ. ನೀವು ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಬಹುದು. ಜೀವವನ್ನಾರಿಸಿಕೊಂಡರೆ, ಆಶೀರ್ವಾದವು ಸಿಗುವುದು. ಮರಣವು ನಿಮಗೆ ಶಾಪವನ್ನು ತರುವುದು. ಆದ್ದರಿಂದ ಜೀವವನ್ನು ಆರಿಸಿಕೊಳ್ಳಿರಿ, ನೀವೂ ನಿಮ್ಮ ಮಕ್ಕಳೂ ಬಾಳುವಿರಿ.


ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು.


ಆದ್ದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ.


ಯೆಹೋವನು ತನ್ನ ಜನರಿಗೆ ನ್ಯಾಯವಿಚಾರಣೆಗಾಗಿ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆಯುವನು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.


ಯೆಹೋವನ ಆತ್ಮನು ನನ್ನಲ್ಲಿ ಅಧಿಕಾರವನ್ನೂ, ಒಳ್ಳೆಯತನವನ್ನೂ ಶಕ್ತಿಯನ್ನೂ ತುಂಬಿದ್ದಾನೆ. ಯಾಕೆಂದರೆ ಯಾಕೋಬನ ಅಪರಾಧಗಳನ್ನು ಅವನಿಗೆ ತಿಳಿಸುವುದಕ್ಕಾಗಿಯಷ್ಟೇ, ಇಸ್ರೇಲಿನ ಪಾಪಗಳನ್ನು ಅವನಿಗೆ ಹೇಳುವುದಕ್ಕಾಗಿಯಷ್ಟೇ.


ಇಸ್ರೇಲಿನ ಜನರೇ, ಈ ಸಂದೇಶಕ್ಕೆ ಕಿವಿಗೊಡಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್‌ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ.


ಆದ್ದರಿಂದ ಇಸ್ರೇಲಿನ ಪರ್ವತಗಳೇ, ನನ್ನ ಒಡೆಯನಾದ ಯೆಹೋವನ ಮಾತುಗಳಿಗೆ ಕಿವಿಗೊಡಿರಿ! ನನ್ನ ಒಡೆಯನಾದ ಯೆಹೋವನು ಬೆಟ್ಟಗುಡ್ಡಗಳಿಗೂ ತೊರೆಗಳಿಗೂ ಕಣಿವೆಗಳಿಗೂ ಪಾಳುಬಿದ್ದ ಸ್ಥಳಗಳಿಗೂ ಮತ್ತು ಅನ್ಯಜನರಿಂದ ಕೊಳ್ಳೆಹೊಡೆಯಲ್ಪಟ್ಟು ಅಪಹ್ಯಾಸಕ್ಕೆ ಒಳಗಾಗಿ ನಿರ್ಜನವಾಗಿರುವ ಪಟ್ಟಣಗಳಿಗೂ ಹೀಗೆನ್ನುತ್ತಾನೆ:


ದೇಶವೇ, ದೇಶವೇ, ಯೆಹೂದದ ದೇಶವೇ, ಯೆಹೋವನ ಸಂದೇಶವನ್ನು ಕೇಳು.


ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.”


“ನನಗೆ ವಿರುದ್ಧವಾಗಿ ಎದ್ದವರನ್ನು ಸ್ವೀಕರಿಸಲು ನಾನು ದಿನವೆಲ್ಲಾ ಸಿದ್ಧನಾಗಿ ನಿಂತೆನು. ಅವರು ನನ್ನ ಬಳಿಗೆ ಬರುತ್ತಾರೆಂದು ಕಾಯುತ್ತಾ ನಿಂತುಕೊಂಡೆನು. ಆದರೆ ಅವರು ಕೆಟ್ಟಜೀವಿತದಲ್ಲಿಯೇ ಮುಂದುವರಿದರು. ಅವರು ತಮಗೆ ಇಷ್ಟಬಂದ ಹಾಗೆ ನಡೆದರು.


ಈ ಜನರು ಹೆತ್ತವರಿಗೆ ವಿಧೇಯರಾಗದ ಮಕ್ಕಳಂತಿದ್ದಾರೆ. ಅವರು ಸುಳ್ಳಾಡಿಕೊಂಡು ಯೆಹೋವನ ಬೋಧನೆಯನ್ನು ನಿರಾಕರಿಸುತ್ತಾರೆ.


ಯೆಹೋವನು ಹೀಗೆನ್ನುತ್ತಾನೆ: “ಈ ಮಕ್ಕಳನ್ನು ನೋಡಿರಿ, ಅವರು ನನಗೆ ವಿಧೇಯರಾಗುತ್ತಿಲ್ಲ. ಅವರು ಯೋಜನೆಗಳನ್ನು ತಯಾರಿಸುತ್ತಾರೆ, ಆದರೆ ನನ್ನಿಂದ ಸಹಾಯವನ್ನು ಕೇಳುತ್ತಿಲ್ಲ. ಅವರು ಬೇರೆ ರಾಜ್ಯಗಳೊಂದಿಗೆ ಒಪ್ಪಂದ ಮಾಡುತ್ತಾರೆ; ಆದರೆ ನನ್ನ ಆತ್ಮವು ಅದಕ್ಕೆ ಒಪ್ಪುತ್ತಿಲ್ಲ. ಈ ಜನರು ತಮ್ಮ ಪಾಪಗಳಿಗೆ ಇನ್ನೂ ಹೆಚ್ಚು ಪಾಪವನ್ನು ಕೂಡಿಸಿಟ್ಟುಕೊಳ್ಳುತ್ತಾರೆ.


ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಬರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನ್ನ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು.


ಕೇಳಿರಿ, ಗಮನ ಕೊಡಿರಿ; ದೇವರು ನಿಮಗೆ ಹೇಳಿದ್ದಾನೆ. ಗರ್ವಪಡಬೇಡಿರಿ.


ಅಡವಿಗಳಲ್ಲಿಯೂ ಮರುಭೂಮಿಗಳಲ್ಲಿಯೂ ಮನುಷ್ಯನು ತನ್ನ ಮಗುವನ್ನು ಹೊತ್ತುಕೊಂಡು ತರುವಂತೆ ದೇವರಾದ ಯೆಹೋವನು ನಿಮ್ಮನ್ನು ಹೊತ್ತುಕೊಂಡು ತಂದಿದ್ದಾನೆ. ಈ ಸ್ಥಳಕ್ಕೆ ಸುರಕ್ಷಿತವಾಗಿ ನಿಮ್ಮನ್ನು ತಂದು ಮುಟ್ಟಿಸಿದ್ದಾನೆ’ ಎಂದು ಹೇಳಿದೆನು.


ನಾವಂತೂ ಸುಮ್ಮನಿರಲಾರೆವು. ನಾವು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಜನರಿಗೆ ಹೇಳಲೇಬೇಕು” ಎಂದು ಉತ್ತರಕೊಟ್ಟರು.


ಸರ್ವಜನಾಂಗಗಳೇ, ಕೇಳಿರಿ, ಭೂನಿವಾಸಿಗಳೆಲ್ಲರೇ, ಆಲಿಸಿರಿ.


ದೇವರಿಗೆ ವಿರುದ್ಧವಾಗಿರುವ ಇಸ್ರೇಲಿನ ಮಕ್ಕಳೇ, ನೀವು ದೇವರ ಬಳಿಗೆ ಹಿಂತಿರುಗಿ ಬನ್ನಿರಿ.


ಎಲ್ಲಾ ಜನಾಂಗಗಳೇ, ಹತ್ತಿರ ಬಂದು ಕೇಳಿರಿ; ಜನಗಳೇ ಸ್ಪಷ್ಟವಾಗಿ ಕೇಳಿಸಿಕೊಳ್ಳಿರಿ. ಭೂಮಿಯೂ ಭೂಮಿಯ ಮೇಲಿರುವ ಸಮಸ್ತವೂ ಅವುಗಳಿಗೆ ಕಿವಿಗೊಡಬೇಕು. ಲೋಕವೂ ಅದರಲ್ಲಿರುವ ಸಮಸ್ತವೂ ಆಲಿಸಲಿ.


ನೀನು ನಮ್ಮ ತಂದೆಯಾಗಿರುವೆ. ಅಬ್ರಹಾಮನಿಗೆ ನಮ್ಮ ಪರಿಚಯವಿಲ್ಲ. ಇಸ್ರೇಲನು ನಮ್ಮನ್ನು ಗುರುತಿಸುವುದಿಲ್ಲ. ಯೆಹೋವನೇ, ನೀನೇ ನಮ್ಮ ತಂದೆ. ನೀನೇ ನಮ್ಮನ್ನು ಯಾವಾಗಲೂ ರಕ್ಷಿಸಿದಾತನು.


ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ. ನನಗೆ ವಿಶ್ವಾಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಬನ್ನಿ” ಎಂದು ಹೇಳುತ್ತಾನೆ. “ಅದಕ್ಕೆ ಜನರು, ‘ಆಗಲಿ ನಿನ್ನಲ್ಲಿಗೆ ಬರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು.


ಈ ವಿಷಯವನ್ನು ವಿಧೇಯರಾಗದ ಆ ಸಂತಾನಕ್ಕೆ ತಿಳಿಸು. ಅವರಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “‘ಹಂಡೆಯನ್ನು ಬೆಂಕಿಯ ಮೇಲಿಟ್ಟು ಅದರಲ್ಲಿ ನೀರು ಹೊಯ್ಯಿ.


ಆಮೋನನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ತ್ಯಜಿಸಿದನು ಮತ್ತು ಯೆಹೋವನಿಗೆ ಮೆಚ್ಚಿಗೆಯಾದ ಮಾರ್ಗದಲ್ಲಿ ಜೀವಿಸಲಿಲ್ಲ.


ಯೆಹೋವನ ಮಾತುಗಳು ಮೀಕನಿಗೆ ಬಂದವು. ಅರಸರಾದ ಯೋಥಾಮ, ಅಹಾಜ ಮತ್ತು ಹಿಜ್ಕೀಯರ ಆಳ್ವಿಕೆಯ ಸಮಯದಲ್ಲಿ ಇದು ನಡೆಯಿತು. ಇವರು ಯೆಹೂದ ರಾಜ್ಯದ ಅರಸರು. ಮೀಕನು ಮೋರೆಷೆತ್‌ನವನು. ಇವನು ಸಮಾರ್ಯ ಮತ್ತು ಜೆರುಸಲೇಮಿನ ವಿಷಯವಾಗಿ ದೇವದರ್ಶನವನ್ನು ಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು