Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:27 - ಪರಿಶುದ್ದ ಬೈಬಲ್‌

27 ದೇವರು ಒಳ್ಳೆಯವನು; ನ್ಯಾಯವನ್ನೇ ಮಾಡುವವನು; ಆತನು ಚೀಯೋನನ್ನೂ ತನ್ನ ಬಳಿಗೆ ಬರುವ ಜನರನ್ನೂ ರಕ್ಷಿಸಿ ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸಿಯೋನಿನ ಉದ್ಧಾರ ನ್ಯಾಯನೀತಿಯಿಂದ; ಅದಕ್ಕೆ ಹಿಂದಿರುಗುವವರ ಉದ್ಧಾರ ಸತ್ಸಂಬಂಧದಿಂದ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಚೀಯೋನ್ ಪಟ್ಟಣಕ್ಕೆ [ನನ್ನ] ನ್ಯಾಯದ ಮೂಲಕವೂ ದೇಶಾಂತರದಿಂದ ಬಿಡುಗಡೆಯಾಗಿ ಬರುವ ಅದರ ಪ್ರಜೆಗಳಿಗೆ [ನನ್ನ] ಧರ್ಮದ ಮೂಲಕವೂ ವಿಮೋಚನೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಚೀಯೋನ್ ಪಟ್ಟಣವು ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ಚಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:27
18 ತಿಳಿವುಗಳ ಹೋಲಿಕೆ  

ಜನರನ್ನು ಶಿಕ್ಷಿಸಲು ನಾನೊಂದು ಸಮಯವನ್ನು ನಿಗದಿ ಮಾಡಿರುತ್ತೇನೆ. ಈಗ ನನ್ನ ಜನರನ್ನು ರಕ್ಷಿಸಿ ಕಾಪಾಡುವ ಸಮಯ ಬಂದಿದೆ.


ಆತನ ಜನರು “ಪವಿತ್ರಜನ”ರೆಂದೂ, “ಯೆಹೋವನಿಂದ ರಕ್ಷಿಸಲ್ಪಟ್ಟವ”ರೆಂದೂ ಕರೆಯಲ್ಪಡುವರು. ಜೆರುಸಲೇಮ್, “ದೇವರಿಗೆ ಬೇಕಾದ ಪಟ್ಟಣ”ವೆಂದೂ, “ದೇವರಿರುವ ಪಟ್ಟಣ”ವೆಂದೂ ಕರೆಯಲ್ಪಡುವದು.


ಸರ್ವಶಕ್ತನಾದ ಯೆಹೋವನು ನೀತಿಯಿಂದ ನ್ಯಾಯತೀರಿಸುವನು. ಯೆಹೋವನು ಉನ್ನತೋನ್ನತನೆಂದು ಜನರೆಲ್ಲರೂ ಅರಿತುಕೊಳ್ಳುವರು. ಪರಿಶುದ್ಧನಾದ ದೇವರು ನ್ಯಾಯವಾದದ್ದನ್ನೇ ಮಾಡುವನು. ಜನರು ಆತನನ್ನು ಗೌರವಿಸುವರು.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ಆ ಮಾರ್ಗದಲ್ಲಿ ಅಪಾಯವಿರುವದಿಲ್ಲ. ಜನರಿಗೆ ಹಾನಿಮಾಡಲು ಸಿಂಹಗಳಾಗಲಿ ಕ್ರೂರಜಂತುಗಳಾಗಲಿ ಆ ಮಾರ್ಗದಲ್ಲಿರುವದಿಲ್ಲ. ದೇವರು ರಕ್ಷಿಸುವ ಜನರಿಗೆ ಮಾತ್ರವೇ ಆ ಮಾರ್ಗವಿರುವುದು.


ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.


“ನನ್ನ ಜನರೇ, ನನ್ನ ಮಾತನ್ನು ಕೇಳಿರಿ. ನನ್ನ ಕಟ್ಟಳೆ ಮತ್ತು ನ್ಯಾಯ ಬೆಳಕಿನಂತಿದ್ದು ಹೇಗೆ ಜೀವಿಸಬೇಕೆಂಬುದನ್ನು ಜನರಿಗೆ ತೋರಿಸುತ್ತವೆ.


ಯೆಹೋವನು ಹೇಳುವುದೇನೆಂದರೆ: “ನಾನು ನಿನ್ನನ್ನು ಮಾರಿದ್ದು ಹಣಕ್ಕಾಗಿಯಲ್ಲ; ಆದ್ದರಿಂದ ನಾನು ನಿನ್ನನ್ನು ಹಣ ಕೊಡದೆ ಬಿಡುಗಡೆ ಮಾಡುವೆನು.”


ನೀನು ಒಳ್ಳೆಯತನದಿಂದ ಕಟ್ಟಲ್ಪಡುವೆ. ಆದ್ದರಿಂದ ಎಲ್ಲಾ ದುಷ್ಟತ್ವಗಳಿಂದ ನೀನು ಸುರಕ್ಷಿತಳಾಗಿರುವೆ. ನೀನು ಯಾವುದಕ್ಕೂ ಹೆದರುವ ಅವಶ್ಯವಿಲ್ಲ. ಯಾವುದೂ ನಿನಗೆ ಹಾನಿಮಾಡದು.


ಆಗ ನಾನು (ಯೆಹೋವನು) ನಿನ್ನನ್ನು ಒಳ್ಳೆಯತನದಿಂದಲೂ ನ್ಯಾಯದಿಂದಲೂ ಪ್ರೀತಿಯಿಂದಲೂ ಕರುಣೆಯಿಂದಲೂ ಕೂಡಿರುವ ನಿರಂತರವಾದ ವಧುವನ್ನಾಗಿ ಮಾಡುವೆನು.


ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು