Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:4 - ಪರಿಶುದ್ದ ಬೈಬಲ್‌

4 ಇಸ್ರೇಲ್ ದೇಶವು ಪಾಪದಿಂದ ತುಂಬಿಹೋಗಿದೆ; ಅವರ ಪಾಪವೇ ಅವರಿಗೆ ಭಾರವಾದ ಹೊರೆಯಾಗಿದೆ; ಅವರು ದುಷ್ಟಕುಟುಂಬಗಳ ಕೆಟ್ಟಮಕ್ಕಳಂತಿದ್ದಾರೆ. ಅವರು ಯೆಹೋವನನ್ನು ತ್ಯಜಿಸಿದ್ದಾರೆ; ಇಸ್ರೇಲಿನ ಪರಿಶುದ್ಧ ದೇವರನ್ನು ಅವಮಾನಪಡಿಸಿದ್ದಾರೆ; ಅವರು ಆತನನ್ನು ತೊರೆದು ಅಪರಿಚಿತನೋ ಎಂಬಂತೆ ಪರಿಗಣಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪಾಪಿಷ್ಠಜನವೇ, ಅಧರ್ಮಭಾರ ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನನ್ನು ತೊರೆದಿದ್ದಾರೆ, ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಧಿಕ್ಕರಿಸಿದ್ದಾರೆ, ಆತನಿಗೆ ಬೆನ್ನುಮಾಡಿ ಬೇರೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಯ್ಯೋ ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ! ದುಷ್ಟ ಸಂತತಿಯೇ, ಭ್ರಷ್ಟರಾದ ಮಕ್ಕಳೇ! ಯೆಹೋವ ದೇವರನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧರನ್ನು ತಿರಸ್ಕರಿಸಿದ್ದಾರೆ ಅವರಿಂದ ದೂರವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:4
69 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.


ತೊಂದರೆಯು ನಿನ್ನ ತಪ್ಪಿನ ಫಲ. ನಿನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನಿಗೆ ನೀನು ವಿಮುಖನಾದೆ.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.


ಏಕೆಂದರೆ ಒಬ್ಬನ ಆಲೋಚನೆಯು ಅವನ ಪಾಪಾಧೀನಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ, ಅವನು ದೇವರಿಗೆ ವಿರೋಧವಾಗಿದ್ದಾನೆ. ಅವನು ದೇವರ ನಿಯಮಕ್ಕೆ ವಿಧೇಯನಾಗುವುದೂ ಇಲ್ಲ್ಲ, ವಿಧೇಯನಾಗಲು ಸಾಧ್ಯವಿರುವುದೂ ಇಲ್ಲ.


ಅನೇಕ ಫರಿಸಾಯರು ಮತ್ತು ಸದ್ದುಕಾಯರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರನ್ನು ನೋಡಿ, “ನೀವೆಲ್ಲರು ಸರ್ಪಗಳು! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳಲು ನಿಮಗೆ ಎಚ್ಚರಿಸಿದವರು ಯಾರು?


ನಿಜವಾಗಿ ಹೇಳುವುದಾದರೆ, ಯೆಹೂದದ ಜನರು ನನಗೆ ಕೇಡುಮಾಡುತ್ತಿಲ್ಲ, ಅವರು ತಮಗೇ ಕೇಡುಮಾಡಿಕೊಳ್ಳುತ್ತಿದ್ದಾರೆ. ಅವರು ತಮಗೆ ನಾಚಿಕೆಯಾಗುವಂತೆ ಮಾಡುತ್ತಿದ್ದಾರೆ” ಎಂದು ಯೆಹೋವನು ಹೇಳಿದನು.


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ಅವರು, “ದೇವರು ತಾನು ಮಾಡಲಿಕ್ಕಿರುವುದನ್ನು ಬೇಗನೇ ಮಾಡಿಮುಗಿಸಲಿ. ಆಗ ಏನಾಗುವದೋ ನೋಡೋಣ. ಆತನ ಯೋಜನೆ ಬೇಗನೆ ಕಾರ್ಯರೂಪಕ್ಕೆ ಬರಲಿ. ಆಗ ಆತನ ಯೋಜನೆ ಏನೆಂಬುದು ನಮಗೆ ತಿಳಿಯುವುದು” ಎಂದು ಹೇಳುತ್ತಿದ್ದಾರೆ.


ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.


ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!


“ನೀವು ಸರ್ಪಗಳು! ನೀವು ವಿಷಕರವಾದ ಹಾವುಗಳ ಕುಟುಂಬದವರು! ನೀವು ದೇವರಿಂದ ತಪ್ಪಿಸಿಕೊಳ್ಳಲಾರಿರಿ. ನೀವೆಲ್ಲರು ಅಪರಾಧಿಗಳೆಂಬ ತೀರ್ಪುಹೊಂದಿ ನರಕಕ್ಕೆ ಹೋಗುವಿರಿ!


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.


ವೇಶ್ಯೆಯರು ತಮ್ಮೊಡನೆ ಕೂಡುವದಕ್ಕಾಗಿ ಪುರುಷರಿಂದ ಹಣ ವಸೂಲಿ ಮಾಡುವರು. ಆದರೆ ನಿನ್ನ ಪ್ರಿಯತಮರಿಗೆ ನೀನೇ ಹಣವನ್ನು ಕೊಟ್ಟಿರುವೆ. ನಿನ್ನೊಂದಿಗೆ ಸಂಭೋಗ ಮಾಡಲು ನೀನೇ ಅವರಿಗೆ ಹಣವನ್ನು ಕೊಟ್ಟಿರುವೆ.


ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ಮತ್ತು ಯೆಹೂದವನ್ನು ವಿಧವೆಯಾಗಿ ಮಾಡಿಲ್ಲ. ಆತನು ಅವರ ಕೈಬಿಟ್ಟಿಲ್ಲ. ಅವರು ಇಸ್ರೇಲಿನ ಪರಿಶುದ್ಧನನ್ನು ತೊರೆದು ಅಪರಾಧ ಮಾಡಿದರು. ಅವರು ಆತನನ್ನು ತ್ಯಜಿಸಿದರು. ಆದರೆ ಆತನು ಅವರನ್ನು ತ್ಯಜಿಸಲಿಲ್ಲ.


“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.


ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿ ಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಕೃತ್ಯಗಳನ್ನು ಮಾಡಿದರು.


“ಯೆಹೂದವೇ, ಪ್ರಿಯತಮನ ಬೆನ್ನುಹತ್ತಿ ಹೋಗುವದು ನಿನಗೆ ಗೊತ್ತು. ಆದಕಾರಣ ದುರಾಭ್ಯಾಸವನ್ನು ನೀನು ಕಲಿತುಕೊಂಡಿರುವೆ.


ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?


ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮ ಪೂರ್ವಿಕರಿಗೆ ಅನ್ಯಾಯ ಮಾಡಿದೆನೇ? ಅದಕ್ಕಾಗಿ ಅವರು ನನ್ನನ್ನು ತಿರಸ್ಕರಿಸಿದರೇ? ನಿಮ್ಮ ಪೂರ್ವಿಕರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿ ತಾವು ಸಹ ನಿಷ್ಪ್ರಯೋಜಕರಾದರು.


ಅವರು ನನ್ನ ಮುಂದೆ ಯಾವಾಗಲೂ ಇದ್ದು ನನ್ನನ್ನು ರೋಷಗೊಳಿಸಿದರು. ಅವರು ತಮ್ಮ ವಿಶೇಷವಾದ ತೋಟಗಳಲ್ಲಿ ಧೂಪಹಾಕಿ ಬಲಿಯರ್ಪಿಸಿದರು.


ಜನರು ಇವುಗಳನ್ನು ನೋಡಿ, ಇವು ಯೆಹೋವನ ಶಕ್ತಿಯಿಂದ ಆದವು ಎಂದು ತಿಳಿದುಕೊಳ್ಳುವರು. ಜನರು ಈ ಸಂಗತಿಗಳನ್ನು ನೋಡಿ ಇಸ್ರೇಲರ ಪರಿಶುದ್ಧನಾದ ಯೆಹೋವನೇ ಇವುಗಳನ್ನು ಮಾಡಿದನೆಂದು ತಿಳಿದುಕೊಳ್ಳುವರು.”


ನೀವು ಅವುಗಳನ್ನು ಗಾಳಿಗೆ ತೂರಿಬಿಡುವಿರಿ. ಗಾಳಿಯು ಅವುಗಳನ್ನು ಹಾರಿಸಿ ಚದರಿಸಿಬಿಡುವುದು. ಆಗ ನೀವು ಯೆಹೋವನಲ್ಲಿ ಸಂತಸಪಡುವಿರಿ. ಇಸ್ರೇಲರ ಪರಿಶುದ್ಧನಲ್ಲಿ ಹೆಚ್ಚಳಪಡುವಿರಿ.


ನನಗೆ ಅಮೂಲ್ಯವಾದ ಯಾಕೋಬೇ, ಭಯಪಡಬೇಡ. ನನ್ನ ಪ್ರಿಯ ಇಸ್ರೇಲೇ, ಹೆದರಬೇಡ. ನಾನು ನಿಜವಾಗಿಯೂ ನಿನಗೆ ಸಹಾಯ ಮಾಡುತ್ತೇನೆ.” ಇದು ಯೆಹೋವನ ನುಡಿ. “ಇಸ್ರೇಲರ ಪರಿಶುದ್ಧನೂ ನಿನ್ನನ್ನು ರಕ್ಷಿಸುವಾತನೂ ಈ ಮಾತುಗಳನ್ನು ಹೇಳಿದ್ದಾನೆ:


ನೀನು ಅವಮಾನಪಡಿಸಿ ಪರಿಹಾಸ್ಯ ಮಾಡಿ ವಿರೋಧವಾಗಿ ಮಾತಾಡಿದ್ದು ಯಾರಿಗೆ? ನೀನು ಇಸ್ರೇಲಿನ ಪರಿಶುದ್ಧನಿಗೆ ವಿರುದ್ಧವಾಗಿರುವೆ. ಆತನಿಗಿಂತ ನೀನೇ ಉತ್ತಮನೆಂಬ ರೀತಿಯಲ್ಲಿ ನೀನು ವರ್ತಿಸಿರುವೆ.


ನನ್ನ ಒಡೆಯನೂ ದೇವರೂ ಇಸ್ರೇಲಿನ ಪರಿಶುದ್ಧನೂ ಹೇಳುವುದೇನೆಂದರೆ, “ನೀವು ನನ್ನ ಕಡೆಗೆ ತಿರುಗಿಕೊಳ್ಳುವುದಾದರೆ ನೀವು ರಕ್ಷಿಸಲ್ಪಡುವಿರಿ. ನೀವು ತಾಳ್ಮೆಯಿಂದ ನನ್ನ ಮೇಲೆ ಭರವಸೆಯಿಟ್ಟರೆ, ನೀವು ಬಲವನ್ನು ಹೊಂದುವಿರಿ.” ಆದರೆ ಹಾಗೆ ಮಾಡಲು ನಿಮಗೆ ಇಷ್ಟವಿಲ್ಲ.


ಈ ಜನರು ಹೆತ್ತವರಿಗೆ ವಿಧೇಯರಾಗದ ಮಕ್ಕಳಂತಿದ್ದಾರೆ. ಅವರು ಸುಳ್ಳಾಡಿಕೊಂಡು ಯೆಹೋವನ ಬೋಧನೆಯನ್ನು ನಿರಾಕರಿಸುತ್ತಾರೆ.


ದೀನರನ್ನು ಯೆಹೋವನು ಸಂತೋಷಿಸುವಂತೆ ಮಾಡುವನು. ಬಡವರು ಇಸ್ರೇಲರ ಪರಿಶುದ್ಧನಲ್ಲಿ ಉಲ್ಲಾಸಿಸುವರು.


ಬೇರೆ ಅನೇಕ ಅರಸರು ಸತ್ತುಹೋದರು. ಅವರೆಲ್ಲರಿಗೂ ಸ್ವಂತ ಸಮಾಧಿ ಇದೆ. ಆದರೆ ನೀನು ಅವರೊಂದಿಗೆ ಸೇರಲಾರೆ. ಯಾಕೆಂದರೆ ನಿನ್ನ ರಾಜ್ಯವನ್ನು ನೀನೇ ನಾಶಮಾಡಿರುವೆ. ನೀನು ನಿನ್ನ ಜನರನ್ನೇ ಸಾಯಿಸಿರುವೆ. ಆದರೆ ನೀನು ನಾಶಮಾಡಿದಂತೆ ನಾಶಮಾಡಲು ನಿನ್ನ ಮಕ್ಕಳಿಗೆ ಅವಕಾಶಕೊಡಲಾಗದು.


ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.


ಜೆರುಸಲೇಮ್ ಮುಗ್ಗರಿಸಿಬಿದ್ದು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಹೀಗಾಗುವದು. ಯೆಹೂದವು ಪಾಪದಲ್ಲಿ ಬಿದ್ದು ದೇವರನ್ನು ಹಿಂಬಾಲಿಸುವುದನ್ನು ನಿಲ್ಲಿಸಿಯದೆ. ಅವರಾಡುವ ಮಾತುಗಳು, ಮಾಡುವ ಕ್ರಿಯೆಗಳು ಯೆಹೋವನಿಗೆ ವಿರುದ್ಧವಾಗಿವೆ. ಯೆಹೋವನ ಮಹಿಮಾಶಕ್ತಿಯಿಂದ ಕೂಡಿದ ಕಣ್ಣುಗಳು ಇವೆಲ್ಲವನ್ನು ನೋಡುವವು.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ಯೆಹೋವನೇ, ನೀನೇ ನಮ್ಮ ಸಂರಕ್ಷಕನು. ಇಸ್ರೇಲಿನ ಪರಿಶುದ್ಧನೇ ನಮ್ಮ ರಾಜನು.


ಅಯ್ಯೋ, ಅವರು ಅರಣ್ಯದಲ್ಲಿ ಆತನಿಗೆ ವಿರುದ್ಧವಾಗಿ ಅನೇಕ ಸಲ ದಂಗೆ ಎದ್ದರು. ಆತನನ್ನು ಬಹಳವಾಗಿ ನೋಯಿಸಿದರು.


ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.


ಆ ದುಷ್ಟರು ಹುಟ್ಟಿದಾಕ್ಷಣದಿಂದ ತಪ್ಪನ್ನು ಮಾಡತೊಡಗಿದರು. ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿದ್ದಾರೆ.


ಆಗ ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರು, “ನಾವು ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದೇವೆ. ನಾವು ನಮ್ಮ ದೇವರನ್ನು ಬಿಟ್ಟು ಸುಳ್ಳುದೇವರಾದ ಬಾಳನನ್ನು ಪೂಜಿಸಿದ್ದೇವೆ” ಎಂದು ಮರುಗಿದರು.


“ಯೆಹೋವನು ಇದನ್ನು ನೋಡಿ ಕೋಪಗೊಂಡನು. ಆತನ ಮಕ್ಕಳೇ ಆತನನ್ನು ಸಿಟ್ಟಿಗೆಬ್ಬಿಸಿದರು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ಯಾಕೆಂದರೆ ‘ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಬಿಟ್ಟು ತೊಲಗಿದರು. ಅವರನ್ನು ಈಜಿಪ್ಟಿನಿಂದ ಹೊರತರುವಾಗ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಅನುಸರಿಸಲಿಲ್ಲ.


ದುಷ್ಟ ಸಂತತಿಯವರೇ, ಈಗ ನೀವು ಯೆಹೋವನ ಭಯಂಕರವಾದ ಕೋಪವನ್ನು ಇನ್ನೂ ಹೆಚ್ಚಾಗಿ ಮಾಡಲು ನಿಮ್ಮ ಪೂರ್ವಿಕರ ಸ್ಥಾನವನ್ನು ತೆಗೆದುಕೊಂಡಿದ್ದೀರಿ.


ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪಮಾಡುತ್ತಿದ್ದರು.


ಆ ನಗರಿಯ ಪಾಪಗಳು ಪರಲೋಕವನ್ನು ಮುಟ್ಟುವಂತೆ ಬೆಳೆದುನಿಂತಿವೆ. ಅವಳು ಮಾಡಿದ ಕೆಟ್ಟಕಾರ್ಯಗಳನ್ನು ದೇವರು ಮರೆತಿಲ್ಲ.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ಇಸ್ರೇಲರಾದ ನಾವು ನಿನಗೆ ಕೆಟ್ಟವರಾಗಿ ಜೀವಿಸಿದೆವು; ನೀನು ನಿನ್ನ ಸೇವಕನಾದ ಮೋಶೆಗೆ ಕೊಟ್ಟ ವಿಧಿನಿಯಮಗಳಿಗೆ ನಾವು ವಿಧೇಯರಾಗಲಿಲ್ಲ.


ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. ನನ್ನ ದೇವರೇ, ನಿನ್ನ ನಂಬಿಕೆಗಸ್ತಿಕೆಯನ್ನು ಕೊಂಡಾಡುವೆನು. ಇಸ್ರೇಲಿನ ಪರಿಶುದ್ಧನೇ, ಲೈರ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.


ಆದರೆ ಎಲ್ಲಾ ಕೊಲೆಗಾರರೂ ದುಷ್ಟರೂ ನಾಶಮಾಡಲ್ಪಡುವರು. ಅವರು ಯೆಹೋವನನ್ನು ಹಿಂಬಾಲಿಸುವವರಲ್ಲ.


ಜನರೆಲ್ಲರೂ ದುಷ್ಟರಾಗಿದ್ದಾರೆ. ಆದ್ದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆ ತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. ಆದ್ದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು.


ಆದರೆ ಯೆಹೋವನು ಜ್ಞಾನವಂತನಾಗಿದ್ದಾನೆ. ಆತನೇ ಅವರಿಗೆ ವಿರುದ್ಧವಾಗಿ ಸಂಕಟಗಳನ್ನು ಬರಮಾಡುವನು. ದೇವರ ಆಜ್ಞೆಯನ್ನು ಜನರು ಬದಲಾಯಿಸಲಾಗುವದಿಲ್ಲ. ಯೆಹೋವನು ಎದ್ದು ದುಷ್ಟಜನರ (ಯೆಹೂದ) ವಿರುದ್ಧ ಯುದ್ಧ ಮಾಡುವನು. ಅವರಿಗೆ ಸಹಾಯ ಕೊಡುವವರ (ಈಜಿಪ್ಟ್) ವಿರುದ್ಧವಾಗಿಯೂ ಯುದ್ಧ ಮಾಡುವನು.


ಈ ಜನರು ದುಷ್ಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು. ಆದ್ದರಿಂದ ನಾನು ಇಸ್ರೇಲನ್ನು ಶಿಕ್ಷಿಸಿದೆನು. ನಾನು ಕೋಪಗೊಂಡು ಅವರಿಗೆ ವಿಮುಖನಾದೆನು. ಇಸ್ರೇಲ್ ನನ್ನನ್ನು ತೊರೆದು ತನಗಿಷ್ಟವಾದ ಸ್ಥಳಕ್ಕೆ ಹೋದನು.


ಆಗ ಅವರು ದಿನನಿತ್ಯ ನನ್ನನ್ನು ಆರಾಧಿಸಲು ಬರುವರು. ಜನರು ನನ್ನ ವಿಧಿಗಳನ್ನು ಕಲಿತುಕೊಳ್ಳಲು ಇಷ್ಟಪಡುವರು. ಆಗ ಅವರು ಸರಿಯಾಗಿ ಜೀವಿಸುವ ಜನಾಂಗವಾಗುವರು. ಅವರು ದೇವರ ಒಳ್ಳೆಯ ಆಜ್ಞೆಗಳನ್ನು ಬಿಡದೆ ಅನುಸರಿಸುವರು. ಅವರು ಪಕ್ಷಪಾತವಿಲ್ಲದೆ ನ್ಯಾಯತೀರಿಸಲು ನನ್ನನ್ನು ಕೇಳುವರು. ದೇವರ ನಿರ್ಧಾರವನ್ನು ಕೇಳಲು ಆತನ ಬಳಿಗೆ ಹೋಗಲು ಇಚ್ಛಿಸುವರು.


“ಆದರೆ ನೀವು ಯೆಹೋವನನ್ನು ತೊರೆದಿರುವದರಿಂದ ಶಿಕ್ಷಿಸಲ್ಪಡುವಿರಿ. ನೀವು ನನ್ನ ಪವಿತ್ರ ಪರ್ವತವನ್ನು ಮರೆತುಬಿಟ್ಟಿದ್ದೀರಿ. ನೀವು ‘ಅದೃಷ್ಟ’ ಎಂಬ ಸುಳ್ಳುದೇವರನ್ನು ಪೂಜಿಸಲಾರಂಭಿಸಿದ್ದೀರಿ. ನೀವು ‘ಗತಿ’ ಎಂಬ ಸುಳ್ಳುದೇವರನ್ನು ಅವಲಂಭಿಸಿಕೊಂಡಿದ್ದೀರಿ.


ಜೆರುಸಲೇಮೇ, ನೀನು ನನ್ನನ್ನು ತ್ಯಜಿಸಿದೆ” ಇದು ಯೆಹೋವನ ನುಡಿ. “ಮತ್ತೆಮತ್ತೆ ನೀನು ನನ್ನನ್ನು ತ್ಯಜಿಸಿದೆ. ಆದ್ದರಿಂದ ನಾನು ನಿನ್ನನ್ನು ದಂಡಿಸುತ್ತೇನೆ ಮತ್ತು ನಾಶಮಾಡುತ್ತೇನೆ. ನಿನಗೆ ಸಲ್ಲಬೇಕಾದ ಶಿಕ್ಷೆಯನ್ನು ಪುನಃ ತಡೆಹಿಡಿದು ನಾನು ದಣಿದಿದ್ದೇನೆ.


ಇಸ್ರೇಲಿನ ಮತ್ತು ಯೆಹೂದದ ಜನರು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಜೆರುಸಲೇಮ್ ನಗರವನ್ನು ನಾಶಮಾಡುತ್ತೇನೆ. ಜನರು, ರಾಜರು, ಮುಂದಾಳುಗಳು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು ಇವರೆಲ್ಲರೂ ನನಗೆ ಕೋಪ ಬರುವಂತೆ ಮಾಡಿದ್ದಾರೆ.


ಯಾಕೆಂದರೆ ನಾನು ಅವರ ಹೃದಯಗಳನ್ನು ಪರಿವರ್ತಿಸಬೇಕು. ಅವರು ನನ್ನನ್ನು ತೊರೆದು ಹೊಲಸು ವಿಗ್ರಹಗಳನ್ನು ಪೂಜಿಸಿದರೂ ನಾನು ಅವರನ್ನು ಪ್ರೀತಿಸುತ್ತೇನೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು.’ ಇದೇ ನನ್ನ ಉದ್ದೇಶ


ನೀನು ನಿನ್ನ ತಾಯಿಯ ಮಗಳು. ನೀನು ನಿನ್ನ ಗಂಡನನ್ನು ಮತ್ತು ಮಕ್ಕಳನ್ನು ತಿರಸ್ಕರಿಸಿರುವೆ. ನೀನು ನಿನ್ನ ಸಹೋದರಿಯಂತಿರುವೆ. ನೀವು ನಿಮ್ಮ ಗಂಡಂದಿರನ್ನೂ ಮಕ್ಕಳನ್ನೂ ತಿರಸ್ಕರಿಸಿದಿರಿ. ನೀವು ನಿಮ್ಮನ್ನು ಹೆತ್ತವರ ತರಹ ಇದ್ದೀರಿ. ನಿಮ್ಮ ತಾಯಿ ಹಿತ್ತಿಯಳಾಗಿದ್ದಳು. ನಿಮ್ಮ ತಂದೆಯು ಅಮೋರಿಯದವನಾಗಿದ್ದನು.


ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.


ಕೆಲವರು ಯೆಹೋವನಾದ ನನ್ನಿಂದ ತೊಲಗಿಹೋದರು. ನನ್ನನ್ನು ಹಿಂಬಾಲಿಸುವುದನ್ನು ನಿಲ್ಲಿಸಿಬಿಟ್ಟರು. ಅವರು ಯೆಹೋವನನ್ನು ಸಹಾಯಕ್ಕಾಗಿ ಬೇಡುವಂತದ್ದನ್ನು ನಿಲ್ಲಿಸಿದರು. ಅವರನ್ನು ನಾನು ಅವರ ಸ್ಥಳಗಳಿಂದ ತೆಗೆದುಹಾಕುವೆನು.”


ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ.


ನೀವು ದ್ರೋಹಿಗಳೇ, ನೀವು ಆತನ ಮಕ್ಕಳಲ್ಲ. ನಿಮ್ಮ ಪಾಪಗಳು ಆತನನ್ನು ಮಲಿನ ಮಾಡುವವು. ನೀವು ಡೊಂಕಾದ ಸುಳ್ಳುಗಾರರು.


ಆಮೋನನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ತ್ಯಜಿಸಿದನು ಮತ್ತು ಯೆಹೋವನಿಗೆ ಮೆಚ್ಚಿಗೆಯಾದ ಮಾರ್ಗದಲ್ಲಿ ಜೀವಿಸಲಿಲ್ಲ.


ರೆಹಬ್ಬಾಮನು ಬಲಾಢ್ಯನಾದ ರಾಜನಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ ನಂತರ ಅವನೂ ಯೆಹೂದದ ಜನರೂ ದೇವರಾದ ಯೆಹೋವನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದರು.


ಯೋತಾಮನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಉಜ್ಜೀಯನಂತೆ ಅವನೂ ದೇವರಿಗೆ ವಿಧೇಯನಾಗಿ ನಡೆದುಕೊಂಡನು. ಆದರೆ ತನ್ನ ತಂದೆಯು ದೇವಾಲಯವನ್ನು ಪ್ರವೇಶಿಸಿ ಧೂಪಹಾಕಿದಂತೆ ಇವನು ಮಾಡಲಿಲ್ಲ. ಜನರು ಮಾತ್ರ ಕೆಟ್ಟಕಾರ್ಯಗಳಲ್ಲಿಯೇ ಮುಂದುವರೆದರು.


ಪದೇಪದೇ ಅವರು ಆತನ ತಾಳ್ಮೆಯನ್ನು ಪರೀಕ್ಷಿಸಿದರು. ಅವರು ಇಸ್ರೇಲರ ಪರಿಶುದ್ಧನನ್ನು ಬಹಳವಾಗಿ ನೋಯಿಸಿದರು.


ಇಸ್ರೇಲರು ಆತನಿಗೆ ವಿಮುಖರಾದರು; ತಮ್ಮ ಪೂರ್ವಿಕರಂತೆಯೇ ಆತನಿಗೆ ವಿರೋಧವಾಗಿ ತಿರುಗಿದರು. ತಿರುಗುಬಾಣದಂತೆ ತಮ್ಮ ದಿಕ್ಕನ್ನು ಬದಲಾಯಿಸಿಕೊಂಡರು.


ಯೆಹೋವನು ಹೀಗೆನ್ನುತ್ತಾನೆ: “ಈ ಮಕ್ಕಳನ್ನು ನೋಡಿರಿ, ಅವರು ನನಗೆ ವಿಧೇಯರಾಗುತ್ತಿಲ್ಲ. ಅವರು ಯೋಜನೆಗಳನ್ನು ತಯಾರಿಸುತ್ತಾರೆ, ಆದರೆ ನನ್ನಿಂದ ಸಹಾಯವನ್ನು ಕೇಳುತ್ತಿಲ್ಲ. ಅವರು ಬೇರೆ ರಾಜ್ಯಗಳೊಂದಿಗೆ ಒಪ್ಪಂದ ಮಾಡುತ್ತಾರೆ; ಆದರೆ ನನ್ನ ಆತ್ಮವು ಅದಕ್ಕೆ ಒಪ್ಪುತ್ತಿಲ್ಲ. ಈ ಜನರು ತಮ್ಮ ಪಾಪಗಳಿಗೆ ಇನ್ನೂ ಹೆಚ್ಚು ಪಾಪವನ್ನು ಕೂಡಿಸಿಟ್ಟುಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು