Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:7 - ಪರಿಶುದ್ದ ಬೈಬಲ್‌

7 ನಿಮ್ಮ ದೇಶವು ಹಾಳಾಗಿದೆ; ನಿಮ್ಮ ನಗರಗಳು ಬೆಂಕಿಯಿಂದ ಸುಡಲ್ಪಟ್ಟಿವೆ. ನಿಮ್ಮ ಶತ್ರುಗಳು ನಿಮ್ಮ ದೇಶವನ್ನು ವಶಪಡಿಸಿಕೊಂಡಿದ್ದಾರೆ; ಅನ್ಯದೇಶವು ಶತ್ರುಸೈನ್ಯದಿಂದ ಹಾಳಾಗುವಂತೆಯೇ, ನಿಮ್ಮ ದೇಶವೂ ಹಾಳಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಸುಟ್ಟು ಹೋಗಿವೆ; ನಿಮ್ಮ ಭೂವಿುಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ; ಅನ್ಯದೇಶಗಳು ನಾಶನವಾದಂತೆಯೇ ನಿಮ್ಮ ಭೂವಿುಯೂ ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:7
37 ತಿಳಿವುಗಳ ಹೋಲಿಕೆ  

ನಮ್ಮ ದೇಶವು ಬೇರೆ ಜನಾಂಗಗಳವರ ಪಾಲಾಗಿದೆ. ನಮ್ಮ ಮನೆಗಳು ಪರದೇಶಿಗಳಿಗೆ ಕೊಡಲ್ಪಟ್ಟಿವೆ.


ನಿಮ್ಮ ಮಧ್ಯದಲ್ಲಿ ವಾಸಿಸುವ ಅನ್ಯರು ಬಲಿಷ್ಠರಾಗುವರು. ನೀವಾದರೋ ಬಲಹೀನರಾಗುವಿರಿ.


“ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.


ಅನ್ಯರು ಎಫ್ರಾಯೀಮನ ಶಕ್ತಿಯನ್ನು ಮುರಿಯುವರು. ಆದರೆ ಅವನಿಗೆ ಅದು ತಿಳಿದಿರುವದಿಲ್ಲ. ಎಫ್ರಾಯೀಮನ ತಲೆಯಲ್ಲಿ ನರೆಕೂದಲು ಬಂದಾಗ್ಯೂ ಅದಕ್ಕೆ ತಿಳಿವಳಿಕೆ ಬಂದಿರುವುದಿಲ್ಲ.


ನೈಲ್ ನದಿಯನ್ನು ನಾನು ಒಣನೆಲವನ್ನಾಗಿ ಮಾಡುವೆನು. ಆ ಒಣನೆಲವನ್ನು ನಾನು ಕೆಟ್ಟ ಜನರಿಗೆ ಮಾರುವೆನು. ಆ ದೇಶವನ್ನು ಬಂಜರು ಭೂಮಿಯನ್ನಾಗಿ ಮಾಡಲು ನಾನು ಪರದೇಶಸ್ಥರನ್ನು ಉಪಯೋಗಿಸುವೆನು. ನನ್ನ ಒಡೆಯನಾದ ಯೆಹೋವನು ಮಾತನಾಡಿದ್ದಾನೆ.”


ಆಹಾಜನು ಪಾಪಮಾಡಿದ್ದರಿಂದ ದೇವರು ಅರಾಮ್ಯರನ್ನು ಅವನ ವಿರುದ್ಧವಾಗಿ ಕಳುಹಿಸಿ ಅವನು ಸೋತು ಹೋಗುವಂತೆ ಮಾಡಿದನು. ಅವರಲ್ಲಿ ಬಹುಮಂದಿ ಸೆರೆಹಿಡಿಯಲ್ಪಟ್ಟರು. ಅರಾಮ್ಯರ ಅರಸನು ಅವರನ್ನೆಲ್ಲಾ ದಮಸ್ಕಕ್ಕೆ ಒಯ್ದನು. ಇಸ್ರೇಲರ ಅರಸನಾದ ಪೆಕಹನು ಬಂದು ಆಹಾಜನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಪೆಕಹನ ತಂದೆಯ ಹೆಸರು ರೆಮಲ್ಯ. ಪೆಕಹನೂ ಅವನ ಸೈನ್ಯವೂ ಯೆಹೂದ ಸೈನಿಕರಲ್ಲಿ ಒಂದೇ ದಿವಸದಲ್ಲಿ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಧೈರ್ಯಶಾಲಿ ಸೈನಿಕರನ್ನು ಕೊಂದರು. ಯೆಹೂದದ ಜನರನ್ನು ಪೆಕಹನು ಸೋಲಿಸಿದನು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿಧೇಯರಾಗಲು ನಿರಾಕರಿಸಿದರು.


ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.


ಜೆರುಸಲೇಮ್ ನಗರವೇ, ಈ ಎಚ್ಚರಿಕೆಯ ನುಡಿಗಳನ್ನು ಕೇಳು. ನೀನು ಕೇಳದಿದ್ದರೆ ನಾನು ನಿನಗೆ ವಿಮುಖನಾಗುವೆ. ನಾನು ನಿನ್ನ ಪ್ರದೇಶವನ್ನು ಒಂದು ಮರಳುಗಾಡಾಗಿ ಮಾಡುತ್ತೇನೆ. ಅಲ್ಲಿ ಯಾರೂ ವಾಸಮಾಡಲು ಸಾಧ್ಯವಾಗದು.”


ಪ್ರಾಯದಸಿಂಹಗಳು (ವೈರಿಗಳು) ಇಸ್ರೇಲ್ ಜನಾಂಗದ ಮೇಲೆ ಗರ್ಜಿಸುತ್ತಿವೆ. ಆ ಸಿಂಹಗಳು ಆರ್ಭಟಿಸುತ್ತಿವೆ; ಇಸ್ರೇಲರ ನಾಡನ್ನು ನಾಶಮಾಡಿವೆ. ಇಸ್ರೇಲ್‌ನ ನಗರಗಳು ಸುಡಲ್ಪಟ್ಟಿವೆ; ಅವುಗಳು ನಿರ್ಜನವಾಗಿವೆ.


ಎದೋಮಿನ ನದಿಗಳು ಕರಗಿರುವ ರಾಳದಂತಿರುವದು. ಅದರ ನೆಲವು ಸುಡುವ ಗಂಧಕದಂತಿರುವದು.


ರಣರಂಗದಲ್ಲಿ ನಡೆಯುವ ಪ್ರತಿಯೊಂದು ಪಾದರಕ್ಷೆಯನ್ನೂ ನಾಶಮಾಡಲಾಗುವುದು; ರಕ್ತದ ಕಲೆಯಿರುವ ಪ್ರತಿಯೊಂದು ಸಮವಸ್ತ್ರವನ್ನೂ ನಾಶಮಾಡಲಾಗುವದು. ಅವುಗಳೆಲ್ಲವನ್ನು ಬೆಂಕಿಯಲ್ಲಿ ಹಾಕಲಾಗುವದು.


ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು. ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು.


ಆತನು ಇಸ್ರೇಲ್ ದೇಶದ ಜನರನ್ನು ದೇಶಭ್ರಷ್ಟರನ್ನಾಗಿ ಮಾಡುವನು. ಆಗ ದೇಶವು ಬರಿದಾಗುವುದು. ಕುರಿಗಳು ತಮ್ಮ ಮನಸ್ಸು ಬಂದೆಡೆಗೆ ಹೋಗುವವು. ಐಶ್ವರ್ಯವಂತರಿಗೆ ಸೇರಿದ್ದ ಜಮೀನಿನ ಮೇಲೆ ಕುರಿಮರಿಗಳು ನಡೆದಾಡುವವು.


ಸರ್ವಶಕ್ತನಾದ ಯೆಹೋವನ ನುಡಿಗಳಿವು. ನಾನು ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ಈಗ ಅನೇಕ ಮನೆಗಳಿವೆ, ಆದರೆ ನಾನು ಖಂಡಿತವಾಗಿ ಹೇಳುವುದೇನೆಂದರೆ ಎಲ್ಲಾ ಮನೆಗಳು ಕೆಡವಲ್ಪಡುವವು. ಈಗ ಭವ್ಯವಾದ ಬಂಗಲೆಗಳಿವೆ, ಆದರೆ ಅವುಗಳೆಲ್ಲಾ ಬರಿದಾಗುವವು.


ವಿಪತ್ತುಗಳಿಂದಲೂ ತೊಂದರೆಗಳಿಂದಲೂ ಅವರ ಕುಟುಂಬಗಳು ಚಿಕ್ಕದಾಗಿದ್ದವು; ಬಲಹೀನವಾಗಿದ್ದವು.


ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.


“ನೀವು ನಿಮ್ಮ ವೈರಿಗಳ ದೇಶಕ್ಕೆ ಒಯ್ಯಲ್ಪಟ್ಟಾಗ, ನಿಮ್ಮ ದೇಶ ಬರಿದಾಗುವುದಲ್ಲದೆ ಭೂಮಿಯು ಹಾಳುಬಿದ್ದು ವಿಶ್ರಾಂತಿಯನ್ನು ಅನುಭವಿಸುವುದು.


ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.


ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.


ಅವನಿಗೆ ಸಾಲಕೊಟ್ಟವರು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ. ಅವನು ದುಡಿದು ಸಂಪಾದಿಸಿದ್ದೆಲ್ಲವನ್ನು ಪರರು ಸುಲಿದುಕೊಳ್ಳಲಿ.


ಚೀಯೋನ್ ನಗರಿಯು ದ್ರಾಕ್ಷಿತೋಟದಲ್ಲಿರುವ ಜನಶೂನ್ಯವಾದ ಡೇರೆಯಂತಿದೆ; ಸೌತೆಯ ಹೊಲದಲ್ಲಿ ಪಾಳುಬಿದ್ದಿರುವ ಮನೆಯಂತಿದೆ; ಶತ್ರುಗಳಿಗೆ ಸೋತುಹೋದ ನಗರದಂತಿದೆ.


ಜೆರುಸಲೇಮ್ ಮುಗ್ಗರಿಸಿಬಿದ್ದು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಹೀಗಾಗುವದು. ಯೆಹೂದವು ಪಾಪದಲ್ಲಿ ಬಿದ್ದು ದೇವರನ್ನು ಹಿಂಬಾಲಿಸುವುದನ್ನು ನಿಲ್ಲಿಸಿಯದೆ. ಅವರಾಡುವ ಮಾತುಗಳು, ಮಾಡುವ ಕ್ರಿಯೆಗಳು ಯೆಹೋವನಿಗೆ ವಿರುದ್ಧವಾಗಿವೆ. ಯೆಹೋವನ ಮಹಿಮಾಶಕ್ತಿಯಿಂದ ಕೂಡಿದ ಕಣ್ಣುಗಳು ಇವೆಲ್ಲವನ್ನು ನೋಡುವವು.


ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟ ಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು.


“ಈಗ ನೀನು ಸೋತವಳೂ ನಾಶವಾದವಳೂ ಆಗಿರುವಿ. ನಿನ್ನ ಭೂಮಿಯು ನಿಷ್ಪ್ರಯೋಜಕವಾಗಿದೆ. ಆದರೆ ಸ್ವಲ್ಪ ಸಮಯದ ನಂತರ ನಿನ್ನ ದೇಶವು ಜನರಿಂದ ತುಂಬುವದು. ನಿನ್ನನ್ನು ನಾಶಮಾಡಿದವರು ಬಹುದೂರ ಹೋಗುವರು.


“ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.


ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.


ನಿನ್ನ ಪವಿತ್ರ ಪಟ್ಟಣಗಳು ಜನಶೂನ್ಯವಾಗಿವೆ. ಆ ಪಟ್ಟಣಗಳು ಈಗ ಮರುಭೂಮಿಯಂತಿವೆ. ಚೀಯೋನು ಈಗ ಮರುಭೂಮಿಯಾಗಿದೆ. ಜೆರುಸಲೇಮ್ ನಿರ್ಜನವಾಗಿದೆ.


ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.


ಜೆರುಸಲೇಮಿನ ಬೀದಿಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಸಂತೋಷ ಮತ್ತು ಸಂಭ್ರಮದ ಧ್ವನಿಯನ್ನೂ ವಧುವರರ ಸ್ವರವನ್ನೂ ಬರದಂತೆ ಮಾಡುತ್ತೇನೆ. ಈ ಪ್ರದೇಶವು ಬರಿದಾದ ಮರಳುಗಾಡಾಗುವದು.”


ಆದ್ದರಿಂದ ಆ ಜನರ ಮೇಲೆ ನಾನು ನನ್ನ ಕೋಪವನ್ನು ವ್ಯಕ್ತಪಡಿಸಿದೆ. ನಾನು ಯೆಹೂದದ ಪಟ್ಟಣಗಳನ್ನು ಮತ್ತು ಜೆರುಸಲೇಮಿನ ಬೀದಿಗಳನ್ನು ದಂಡಿಸಿದೆ. ನನ್ನ ಕೋಪವು ಜೆರುಸಲೇಮ್ ನಗರವನ್ನು ಮತ್ತು ಯೆಹೂದದ ಪಟ್ಟಣಗಳನ್ನು ಈಗಿದ್ದ ಕಲ್ಲಿನ ದಿಬ್ಬಗಳನ್ನಾಗಿ ಮಾಡಿತು.


ಅದಕ್ಕಾಗಿ ನಾನು ನಿಮ್ಮನ್ನು ಪೂರ್ವದ ಜನರಿಗೆ ಬಿಟ್ಟುಕೊಡುವೆನು. ಅವರು ಬಂದು ನಿಮ್ಮ ದೇಶವನ್ನು ಕಿತ್ತುಕೊಳ್ಳುವರು. ಅವರ ಸೈನ್ಯವು ಬಂದು ನಿಮ್ಮ ದೇಶದೊಳಗೆ ಪಾಳೆಯ ಮಾಡುವದು. ಅವರು ನಿಮ್ಮ ಮಧ್ಯದಲ್ಲಿ ವಾಸಿಸಿ ನಿಮ್ಮ ಹಣ್ಣುಗಳನ್ನು ತಿಂದು ನಿಮ್ಮ ಹಾಲನ್ನು ಕುಡಿಯುವರು.


ನಿನ್ನ ದೇಶದಲ್ಲಿರುವ ಪಟ್ಟಣಗಳನ್ನು ಹಾಳುಮಾಡುವೆನು. ನಿನ್ನ ಕೋಟೆಗಳನ್ನೆಲ್ಲಾ ನಾಶಮಾಡುವೆನು.


ಆದ್ದರಿಂದ ನಾನು ನಿಮ್ಮನ್ನು ಶಿಕ್ಷಿಸಲು ಪ್ರಾರಂಭಿಸಿದೆನು. ನಿಮ್ಮ ಪಾಪಗಳ ದೆಸೆಯಿಂದ ನಿಮ್ಮನ್ನು ನಾಶಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು