Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:20 - ಪರಿಶುದ್ದ ಬೈಬಲ್‌

20 ಆಗ ಯಾಕೋಬನ ಮನೆತನದವರು, ಇಸ್ರೇಲರಲ್ಲಿ ಅಳಿದುಳಿದವರು, ತಮ್ಮನ್ನು ಹೊಡೆಯುವವರನ್ನು ಆಧಾರಮಾಡಿಕೊಳ್ಳದೆ ಇಸ್ರೇಲಿನ ಅತೀ ಪರಿಶುದ್ಧನಾದ ಯೆಹೋವನನ್ನೇ ಆಧಾರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ದಿನದಂದು ಅಳಿದುಳಿದ ಇಸ್ರಯೇಲರು, ತಪ್ಪಿಸಿಕೊಂಡ ಯಕೋಬ ಮನೆತನದವರು ತಮ್ಮನ್ನು ಬಾಧಿಸಿದವರನ್ನು ನೆಮ್ಮುವುದಿಲ್ಲ. ಬದಲಿಗೆ ಇಸ್ರಯೇಲರ ಪರಮಪಾವನ ಸ್ವಾಮಿಯಾದ ಸರ್ವೇಶ್ವರನನ್ನೇ ನಿಶ್ಚಯವಾಗಿ ಆಶ್ರಯಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ದಿನದಲ್ಲಿ ಇಸ್ರಾಯೇಲ್ಯರೊಳಗೆ ಉಳಿದವರು, ಯಾಕೋಬನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಯಥಾರ್ಥವಾಗಿ ಆಧಾರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ದಿನದಲ್ಲಿ ಇಸ್ರಾಯೇಲರಲ್ಲಿ ಉಳಿದವರೂ, ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು, ಇಸ್ರಾಯೇಲಿನ ಪರಿಶುದ್ಧರಾದ ಯೆಹೋವ ದೇವರ ಸತ್ಯವಾಗಿ ಆಧಾರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:20
25 ತಿಳಿವುಗಳ ಹೋಲಿಕೆ  

ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.


ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.


ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಆಹಾಜನಿಗೆ ಸಹಾಯ ಕೊಡುವ ಬದಲು ಅವನಿಗೇ ಕಷ್ಟಕೊಡಲು ಯೆಹೂದಕ್ಕೆ ಬಂದನು.


ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಆ ಸಂದೇಶವೇನೆಂದರೆ: “ನಾನು ನಿನ್ನ ಸೇವಕ. ನಾನು ನಿನಗೆ ಮಗನಂತಿದ್ದೇನೆ. ನೀನು ಬಂದು, ಅರಾಮ್ಯರ ರಾಜನಿಂದ ಮತ್ತು ಇಸ್ರೇಲಿನ ರಾಜನಿಂದ ನನ್ನನ್ನು ರಕ್ಷಿಸು. ಅವರು ನನ್ನ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆ.”


ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”


ಎಫ್ರಾಯೀಮು ತನ್ನ ವ್ಯಾಧಿಯನ್ನು ನೋಡಿದನು. ಯೆಹೂದವು ತನ್ನ ಗಾಯಗಳನ್ನು ನೋಡಿದನು. ಆಮೇಲೆ ಸಹಾಯಕ್ಕಾಗಿ ಅಶ್ಶೂರ್ಯರ ಬಳಿಗೆ ಹೋದರು. ಆ ಮಹಾ ಅರಸನ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಆದರೆ ಆ ಅರಸನು ನಿಮ್ಮನ್ನು ಗುಣಮಾಡನು. ನಿಮ್ಮ ಗಾಯಗಳನ್ನು ಗುಣಮಾಡಲು ಸಾಧ್ಯವಿಲ್ಲ.


ಅಶ್ಶೂರದ ಅರಸನು ತನ್ನ ಸೇನಾದಂಡನಾಯಕನು ನಮ್ಮ ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟಮಾತುಗಳನ್ನು ಹೇಳಲು ಕಳುಹಿಸಿರುತ್ತಾನೆ. ನಿನ್ನ ದೇವರಾದ ಯೆಹೋವನು ಇದನ್ನೆಲ್ಲಾ ಕೇಳಿರುವನು. ವೈರಿಗಳು ನುಡಿದ ಆ ಮಾತುಗಳು ಸತ್ಯವಾದವುಗಳಲ್ಲ ಎಂಬುದನ್ನು ಆತನು ತೋರಿಸುವನು. ಆದ್ದರಿಂದ ಇನ್ನೂ ಜೀವದಿಂದ ಉಳಿದಿರುವವರಿಗಾಗಿ ಪ್ರಾರ್ಥಿಸು” ಎಂದು ಹಿಜ್ಕೀಯನು ಹೇಳಿದ್ದಾನೆ ಅಂದರು.


ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ಆದರೆ ದೇಶದಲ್ಲಿ ಹತ್ತನೆ ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಆ ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವದು. ಈ ಕಾಂಡದ ಬುಡವು ಬಹು ವಿಶೇಷವಾದ ಬೀಜವಾಗಿರುವದು ಮತ್ತು ಅದು ಪುನಃ ಬೆಳೆಯುವುದು.


ನಿನ್ನ ಆಜ್ಞೆಗಳಿಗೆ ಅವಿಧೇಯರಾಗಬಾರದೆಂದು ಈಗ ನಮಗೆ ತಿಳಿಯುತ್ತದೆ. ಅನ್ಯಜನರನ್ನು ಮದುವೆ ಮಾಡಿಕೊಳ್ಳಬಾರದು. ಅವರು ಘೋರ ಪಾಪಿಗಳು. ನಾವು ಹೀಗೆಯೇ ಅವರೊಂದಿಗೆ ಮದುವೆಯಾದರೆ ನೀನು ನಮ್ಮನ್ನು ನಾಶಮಾಡುವೆ ಎಂದು ನಾವು ತಿಳಿದಿದ್ದೇವೆ. ಹೀಗಿರುವಲ್ಲಿ ಇಸ್ರೇಲ್ ಜನಾಂಗದಲ್ಲಿ ಯಾರೂ ಉಳಿಯಲಾರರು.


ಜೆರುಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು; ಚಿಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿ ಹೊಂದುವರು; ಯೆಹೋವನ ಸ್ವಾಭಿಮಾನವೇ ಇದನ್ನು ನೆರವೇರಿಸುವುದು.


ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.


ಅಳಿದುಳಿದ ದೇವಜನರು ಅಶ್ಶೂರ ದೇಶವನ್ನು ಬಿಡಲು ಒಂದು ಮಾರ್ಗವಿರುವದು. ಅದು ದೇವರು ತನ್ನ ಜನರನ್ನು ಈಜಿಪ್ಟಿನಿಂದ ಬಿಡಿಸಿದ ಕಾಲದಂತಿರುವುದು.


“ಯಾಕೋಬನ ವಂಶದವರೇ, ನನ್ನ ಮಾತನ್ನು ಕೇಳಿರಿ. ಇಸ್ರೇಲರಲ್ಲಿ ಉಳಿದಿರುವವರೇ, ನನ್ನ ಮಾತುಗಳನ್ನು ಕೇಳಿರಿ. ನಾನು ನಿಮ್ಮನ್ನು ಹೊರುತ್ತಿದ್ದೇನೆ. ನೀವು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿಮ್ಮನ್ನು ಹೊರುತ್ತಿದ್ದೇನೆ.


ಈಜಿಪ್ಟಿಗೆ ವಲಸೆ ಹೋದ ಕೆಲವೇ ಯೆಹೂದದ ಜನರು ಅಳಿದುಳಿದವರಾಗಿದ್ದಾರೆ. ಒಬ್ಬನೂ ಕೂಡ ನನ್ನ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾರನು. ಅವರಲ್ಲಿ ಒಬ್ಬನೂ ಜೀವಂತವಾಗಿ ಯೆಹೂದಕ್ಕೆ ಹಿಂತಿರುಗಿ ಬರಲಾರನು. ಆ ಜನರು ಯೆಹೂದಕ್ಕೆ ಹಿಂತಿರುಗಿ ಬಂದು ಅಲ್ಲಿ ವಾಸಮಾಡಬಯಸುವರು, ಆದರೆ ತಪ್ಪಿಸಿಕೊಂಡ ಸ್ವಲ್ಪ ಜನರನ್ನು ಬಿಟ್ಟು ಮಿಕ್ಕವರಾರೂ ಯೆಹೂದಕ್ಕೆ ಹಿಂತಿರುಗುವದಿಲ್ಲ.”


ಸ್ತ್ರೀಯು ತನ್ನ ಮಗನನ್ನು ಹೆರುವ ತನಕ ಯೆಹೋವನು ತನ್ನ ಜನರನ್ನು ತೊರೆದುಬಿಡುವನು. ಅನಂತರ ಉಳಿದ ಅವನ ಸಹೋದರರು ಇಸ್ರೇಲ್ ಜನರ ಬಳಿಗೆ ತಿರುಗಿ ಬರುವರು.


ಇಸ್ರೇಲಿನಲ್ಲಿ ಉಳಿದವರು ದುಷ್ಕೃತ್ಯಗಳನ್ನು ಮಾಡುವುದಿಲ್ಲ. ಸುಳ್ಳು ಹೇಳುವದಿಲ್ಲ. ಜನರನ್ನು ಮೋಸಗೊಳಿಸುವದಿಲ್ಲ. ಅವರು ಕುರಿಗಳಂತೆ ಮೇದು ವಿಶ್ರಾಂತಿ ತೆಗೆದುಕೊಳ್ಳುವರು. ಯಾರೂ ಅವರ ಗೊಡವೆಗೆ ಹೋಗುವುದಿಲ್ಲ.”


ಅದೇ ಸಮಯದಲ್ಲಿ ಎದೋಮ್ಯರು ಬಂದು ಯೆಹೂದ ಜನರ ಮೇಲೆ ಧಾಳಿಮಾಡಿ ಅವರನ್ನು ಸೋಲಿಸಿದರು. ಯೆಹೂದ ಜನರನ್ನು ಸೆರೆಹಿಡಿದು ತಮ್ಮ ದೇಶಕ್ಕೊಯ್ದರು. ಆಗ ಅರಸನಾದ ಆಹಾಜನು ಅಶ್ಶೂರದ ಅರಸನ ಸಹಾಯ ಕೇಳಿದನು.


ಬೆಟ್ಟದ ಮೇಲೆ ವಿಗ್ರಹಗಳ ಪೂಜೆ ಮಾಡಿದ್ದು ನಮ್ಮ ಮೂರ್ಖತನವಾಯಿತು. ಬೆಟ್ಟಗಳ ಮೇಲಿನ ಎಲ್ಲಾ ಉತ್ಸವಗಳು ಕೇವಲ ಸುಳ್ಳು. ಇಸ್ರೇಲಿನ ರಕ್ಷಣೆ ಖಚಿತವಾಗಿಯೂ ನಮ್ಮ ದೇವರಾದ ಯೆಹೋವನಿಂದ ಮಾತ್ರ ಸಾಧ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು