24 ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಹೇಳುವುದೇನೆಂದರೆ: “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಅಶ್ಶೂರಕ್ಕೆ ನೀವು ಭಯಪಡಬೇಡಿ. ಹಿಂದಿನ ಕಾಲದಲ್ಲಿ ಈಜಿಪ್ಟ್ ನಿಮ್ಮನ್ನು ಬಾಧಿಸಿದಂತೆ ಇವನೂ ನಿಮ್ಮನ್ನು ಬಾಧಿಸುವನು. ಅವನ ಬಾಧೆಯು ನಿಮ್ಮ ಬೆನ್ನಿನ ಮೇಲೆ ಬೆತ್ತದಿಂದ ಹೊಡೆದಂತೆ ಇರುವದು.
24 ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
24 ಹೀಗಿರಲು ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಹೇಳುವುದೇನೆಂದರೆ: “ಸಿಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರು ನಿಮಗೆ ಮಾಡಿದಂತೆ ಅಸ್ಸೀರಿಯದವರು ನಿಮ್ಮನ್ನು ಬಡಿಗೆಯಿಂದ ಹೊಡೆದು, ನಿಮಗೆ ವಿರುದ್ಧ ದೊಣ್ಣೆಯನ್ನು ಎತ್ತುವಾಗ ಅವರಿಗೆ ಹೆದರಬೇಡಿ;
24 ಇಂತಿರಲು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ - ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತ್ಯರು ನಿಮಗೆ ಮಾಡಿದಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನೆತ್ತುವ ಅಶ್ಶೂರ್ಯರಿಗೆ ಭಯಪಡಬೇಡಿರಿ.
24 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರಂತೆ ನಿಮ್ಮನ್ನು ಕೋಲಿನಿಂದ ಹೊಡೆದು, ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಸ್ಸೀರಿಯದವರಿಗೆ ಭಯಪಡಬೇಡಿರಿ.
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”
“ಸನ್ಹೇರೀಬನ ಕುರಿತು ಯೆಹೋವನ ಸಂದೇಶವಿದು: ‘ಅಶ್ಶೂರದ ಅರಸನೇ, ಚೀಯೋನಿನ ಕುಮಾರಿಯು ನಿನ್ನನ್ನು ಪ್ರಾಮುಖ್ಯವಾದವನೆಂದು ಎಣಿಸುವದಿಲ್ಲ. ಆಕೆ ನಿನ್ನನ್ನು ನೋಡಿ ಪರಿಹಾಸ್ಯ ಮಾಡುವಳು. ಜೆರುಸಲೇಮಿನ ಕುಮಾರಿಯು ನಿನ್ನ ಹಿಂದೆ ತಲೆಯಾಡಿಸುತ್ತಾ ನಿನ್ನನ್ನು ಹಾಸ್ಯ ಮಾಡುವಳು.
ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ.
ಚೀಯೋನ್ ಪರ್ವತದಲ್ಲಿರುವ ಜೆರುಸಲೇಮಿನಲ್ಲಿ ಯೆಹೋವನ ಜನರು ವಾಸಿಸುವರು. ನೀವು ಇನ್ನು ಮೇಲೆ ಅಳುವದಿಲ್ಲ. ಯೆಹೋವನು ನಿಮ್ಮ ಅಳುವಿಕೆಯನ್ನು ನೋಡಿ ನಿಮ್ಮನ್ನು ಆದರಿಸುವನು. ಆತನು ನಿಮ್ಮ ಮೊರೆಯನ್ನು ಕೇಳಿ ನಿಮಗೆ ಸಹಾಯಿಸುವನು.
ಯೆಹೋವನು ತನ್ನ ಜನರನ್ನು ಹೇಗೆ ಶಿಕ್ಷಿಸುವನು? ಹಿಂದಿನ ಕಾಲದಲ್ಲಿ ಶತ್ರುಗಳು ಜನರನ್ನು ಗಾಯಪಡಿಸಿದರು. ಯೆಹೋವನೂ ಹಾಗೆ ಮಾಡುವನೇ? ಹಿಂದಿನ ಕಾಲದಲ್ಲಿ ಅನೇಕ ಮಂದಿ ಕೊಲ್ಲಲ್ಪಟ್ಟರು. ಹಾಗೆಯೇ ಯೆಹೋವನು ಜನರನ್ನು ಕೊಲ್ಲುವನೇ?
ಫಿಲಿಷ್ಟಿಯ ದೇಶವೇ, ನಿನ್ನನ್ನು ಹೊಡೆದ ಅರಸನು ಸತ್ತದ್ದಕ್ಕಾಗಿ ನೀನು ಸಂತೋಷಗೊಂಡಿರುವೆ. ಆದರೆ ನೀನು ಸಂತೋಷಗೊಳ್ಳಬಾರದು. ಅವನ ರಾಜ್ಯಭಾರವು ಅಂತ್ಯವಾಯಿತು ಎಂಬುದು ಸತ್ಯ. ಆದರೆ ಅರಸನ ಮಗನು ರಾಜ್ಯವಾಳುವನು. ಒಂದು ಹಾವು ಇನ್ನೊಂದು ಭಯಂಕರ ಹಾವನ್ನು ಹೆರುವಂತೆ ಅದು ಇರುವದು. ಈ ಹೊಸ ಅರಸನು ನಿಮಗೆ ವೇಗವಾದ ಮತ್ತು ಅಪಾಯಕರವಾದ ಹಾವಾಗುವನು.
ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದುಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು.
ಈಜಿಪ್ಟಿನ ಸೈನ್ಯದಲ್ಲಿ ಅನೇಕ ರಾಹುತರು ಇದ್ದರು; ರಥಗಳೂ ಇದ್ದವು. ಅವರು ಇಸ್ರೇಲರನ್ನು ಬೆನ್ನಟ್ಟಿದರು. ಇಸ್ರೇಲರು ಪೀಹಹೀರೋತಿನ ಹತ್ತಿರವಿರುವ ಬಾಳ್ಚೆಫೋನಿನ ಎದುರಾಗಿ ಸಮುದ್ರತೀರದಲ್ಲಿ ಇಳಿದುಕೊಳ್ಳುವಾಗಲೇ ಈಜಿಪ್ಟಿನ ಸೈನ್ಯದವರು ಅವರ ಹತ್ತಿರಕ್ಕೆ ಬಂದರು.
ಈಜಿಪ್ಟಿನ ಈ ಅಧಿಕಾರಿಗಳು ಇಬ್ರಿಯ ಮೇಸ್ತ್ರಿಗಳನ್ನು ಆರಿಸಿ ಜನರು ಮಾಡಿದ ಕೆಲಸಕ್ಕೆ ಅವರನ್ನು ಜವಾಬ್ದಾರರನ್ನಾಗಿ ಮಾಡಿದರು. ಈಜಿಪ್ಟಿನ ಅಧಿಕಾರಿಗಳು ಇಬ್ರಿಯ ಮೇಸ್ತ್ರಿಗಳನ್ನು ಹೊಡೆದು, “ನೀವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಯಾಕೆ ಮಾಡುತ್ತಿಲ್ಲ? ಹಿಂದೆ ನೀವು ಮಾಡಲು ಸಾಧ್ಯವಾಗಿದ್ದರೆ, ಈಗಲೂ ನೀವು ಮಾಡಬಹುದು” ಎಂದು ಹೇಳಿದರು.
“ಆಹಾಜನಿಗೆ ಹೀಗೆ ಹೇಳು: ‘ಶಾಂತನಾಗಿದ್ದು ಜಾಗ್ರತೆಯಿಂದಿರು. ಭಯಪಡಬೇಡ. ರೆಚೀನ್ ಮತ್ತು ರೆಮಲ್ಯನ ಮಗ ಇವರಿಬ್ಬರೂ ಸೇರಿ ನಿನ್ನನ್ನು ಬೆದರಿಸದಂತೆ ನೋಡಿಕೋ. ಅವರಿಬ್ಬರೂ ಸುಟ್ಟುಹೋದ ಕೋಲಿನಂತಿದ್ದಾರೆ. ಹಿಂದೆ ಅವರು ಬೆಂಕಿಯಿಂದ ಉರಿಯುತ್ತಿದ್ದರು. ಆದರೆ ಈಗ ಅವರು ಕೇವಲ ಹೊಗೆಯಾಡುತ್ತಿದ್ದಾರೆ. ರೆಚೀನ್, ಅರಾಮ್ ಮತ್ತು ರೆಮಲ್ಯನ ಮಗ ಕೋಪಗೊಂಡಿದ್ದಾರೆ.
ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”
ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.
ಆಗ ಶಾಂತಿ ನೆಲೆಸುವದು. ಹೌದು, ಅಶ್ಶೂರದ ಸೈನ್ಯವು ನಮ್ಮ ದೇಶಕ್ಕೆ ಬಂದು ನಮ್ಮ ಮಹಾ ಕಟ್ಟಡಗಳನ್ನು ತುಳಿದುಹಾಕುವರು. ಆದರೆ ಇಸ್ರೇಲನ್ನು ಆಳುವಾತನು ಏಳು ಕುರುಬರನ್ನೂ ಎಂಟು ನಾಯಕರನ್ನೂ ಆರಿಸುವನು.
ಯೆಶಾಯನು ಅವರಿಗೆ, “ನಿಮ್ಮ ಒಡೆಯನಾದ ಹಿಜ್ಕೀಯನಿಗೆ ಈ ಸಂದೇಶವನ್ನು ತಿಳಿಸಿ: ‘ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನ ಅಧಿಕಾರಿಗಳು ನನ್ನನ್ನು ಅಪಹಾಸ್ಯಮಾಡಲೆಂದು ಹೇಳಿದ ಸಂಗತಿಗಳಿಂದ ನೀವು ಹೆದರಬೇಡಿ.