Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:29 - ಪರಿಶುದ್ದ ಬೈಬಲ್‌

29 ಸೈನಿಕರು ಮಾಬರ ಎಂಬ ಸ್ಥಳದಲ್ಲಿ ಕಣಿವೆಯನ್ನು ದಾಟುತ್ತಾರೆ. ಗೆಬ ಎಂಬಲ್ಲಿ ಮಲಗುವರು. ಆಗ ರಾಮಾವು ಭಯಪಡುವದು. ಸೌಲನ ಗಿಬೆಯದ ಜನರು ಪಲಾಯನ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ. ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಕಣಿವೆಯನ್ನು ದಾಟಿದೆ; ‘ಗೆಬಾದಲ್ಲಿ ದಂಡಿಳಿಸೋಣ’ ಎಂದು ಹೇಳುತ್ತಿದೆ. ರಾಮಾ ಜನತೆ ನಡುಗುತ್ತಿದೆ, ಸೌಲನ ಗಿಬೆಯದ ಜನ ಪಲಾಯನ ಗೈದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ [ಅನ್ನುತ್ತಾರೆ], ರಾಮಾ ನಡುಗುತ್ತದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರು ಕಣಿವೆಯನ್ನು ದಾಟಿದ್ದಾರೆ; ಗಿಬೆಯದಲ್ಲಿ ಇಳುಕೊಂಡಿದ್ದಾರೆ. ರಾಮಾ ಜನತೆ ಹೆದರುತ್ತಿದೆ; ಸೌಲನ ಗಿಬೆಯದ ಜನತೆ ಓಡಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:29
18 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರ ಸೈನ್ಯದ ಒಂದು ಗುಂಪು ಮಿಕ್ಮಾಷಿನ ಕಣಿವೆಗೆ ಕಾವಲಾಗಿತ್ತು.


ಆದರೆ ಸಮುವೇಲನ ಮನೆಯು ರಾಮದಲ್ಲಿತ್ತು. ಆದ್ದರಿಂದ ಸಮುವೇಲನು ಯಾವಾಗಲೂ ರಾಮಕ್ಕೆ ಹಿಂತಿರುಗುತ್ತಿದ್ದನು. ಸಮುವೇಲನು ರಾಮದಿಂದ ಇಸ್ರೇಲರಿಗೆ ನ್ಯಾಯತೀರ್ಪು ನೀಡುತ್ತಾ ಆಳಿದನು; ರಾಮದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು.


ಸೌಲನು ವಾಸವಾಗಿದ್ದ ಗಿಬೆಯಕ್ಕೆ ಸಂದೇಶಕರು ಬಂದು ಜನರಿಗೆ ಸುದ್ದಿಯನ್ನು ತಿಳಿಸಿದರು. ಜನರು ಗಟ್ಟಿಯಾಗಿ ಅತ್ತರು.


ಬೆನ್ಯಾಮೀನ್ ಕುಲದವರಿಗೆ ಸೇರಿದ ನಗರಗಳನ್ನು ಸಹ ಆರೋನನ ಸಂತತಿಯವರಿಗೆ ಕೊಡಲಾಯಿತು. ಅವು ಯಾವುವೆಂದರೆ: ಗಿಬ್ಯೋನ್, ಗೆಬ,


“ಇಸ್ರೇಲೇ, ನೀನು ಗಿಬ್ಯದವರ ಕಾಲದಿಂದಲೂ ಪಾಪ ಮಾಡುತ್ತಲೇ ಬಂದಿರುವೆ. (ಆ ಜನರು ಅಲ್ಲಿ ಪಾಪವನ್ನು ಮಾಡುತ್ತಲೇ ಇದ್ದಾರೆ.) ಗಿಬ್ಯದ ಆ ದುಷ್ಟ ಜನರನ್ನು ಯುದ್ಧವು ಹಿಡಿದುಕೊಳ್ಳುವುದು.


ಗಿಬ್ಯದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು.


“ಗಿಬ್ಯದಲ್ಲಿ ಕೊಂಬನ್ನೂದು, ರಾಮದಲ್ಲಿ ತುತ್ತೂರಿಯನ್ನೂದು. ಬೇತಾವೆನಿನಲ್ಲಿ ಎಚ್ಚರಿಕೆಯನ್ನು ನೀಡು. ಬೆನ್ಯಾಮೀನನೇ, ವೈರಿಯು ನಿನ್ನ ಹಿಂದೆಯೇ ಇದ್ದಾನೆ.


ಯೆಹೋವನು ಹೀಗೆನ್ನುತ್ತಾನೆ: “ರಾಮದಲ್ಲಿ ಅತಿ ದುಃಖದಿಂದ ಗೋಳಾಡುವ ಒಂದು ಧ್ವನಿಯು ಕೇಳಿಬರುತ್ತದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುವಳು. ಅವಳ ಮಕ್ಕಳು ಸತ್ತುಹೋದುದರಿಂದ ರಾಹೇಲಳು ಸಮಾಧಾನ ಹೊಂದುವದಕ್ಕೆ ಒಪ್ಪಲಾರಳು.”


ಆಸನು ಮಾಡಿದ ಮಹಾಕಾರ್ಯಗಳನ್ನೂ ಅವನು ಕಟ್ಟಿಸಿದ ನಗರಗಳನ್ನೂ ಮತ್ತು ಅವನನ್ನು ಕುರಿತ ಇತರ ಸಂಗತಿಗಳನ್ನೂ “ಯೆಹೂದದ ರಾಜರುಗಳ ಚರಿತ್ರೆ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ. ಆಸನಿಗೆ ವಯಸ್ಸಾದಾಗ, ಅವನ ಕಾಲುಗಳಿಗೆ ರೋಗವಾಗಿತ್ತು.


ನಂತರ ಸಮುವೇಲನು ಅಲ್ಲಿಂದ ಹೊರಟು ರಾಮಕ್ಕೆ ಹೋದನು. ಸೌಲನು ಗಿಬೆಯದ ತನ್ನ ಮನೆಗೆ ಹೋದನು.


ಆ ಮಾರ್ಗದ ಎರಡು ಕಡೆಗಳಲ್ಲೂ ದೊಡ್ಡದೊಡ್ಡ ಬಂಡೆಗಲ್ಲುಗಳಿದ್ದವು. ಯೋನಾತಾನನು ಫಿಲಿಷ್ಟಿಯರ ಪಾಳೆಯಕ್ಕೆ ಆ ಮಾರ್ಗದಲ್ಲಿ ಹೋಗಲು ಉಪಾಯ ಮಾಡಿದನು. ಆ ಮಾರ್ಗದ ಒಂದು ಕಡೆಗಿದ್ದ ಬಂಡೆಗಲ್ಲಿಗೆ ಬೋಚೇಚ್ ಎಂದು ಹೆಸರು; ಇನ್ನೊಂದು ಕಡೆಗಿದ್ದ ಬಂಡೆಗಲ್ಲಿಗೆ ಸೆನೆ ಎಂದು ಹೆಸರು.


ಸೌಲನು ಮತ್ತು ಅವನ ಮಗನಾದ ಯೋನಾತಾನನು ಮತ್ತು ಸೈನಿಕರು ಬೆನ್ಯಾಮೀನ್ ಪ್ರಾಂತ್ಯದ ಗಿಬೆಯಕ್ಕೆ ಹೋದರು. ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು.


ಅವನು ಮೂರು ಸಾವಿರ ಇಸ್ರೇಲ್ ಗಂಡಸರನ್ನು ಆರಿಸಿಕೊಂಡನು. ಅವರಲ್ಲಿ ಎರಡು ಸಾವಿರ ಗಂಡಸರು ಗುಡ್ಡಗಾಡು ಪ್ರದೇಶವಾದ ಬೇತೇಲಿನಲ್ಲಿಯೂ ಮಿಕ್ಮಾಷಿನಲ್ಲಿಯೂ ಅವನೊಂದಿಗೆ ಇದ್ದರು. ಉಳಿದ ಒಂದು ಸಾವಿರ ಗಂಡಸರು ಬೆನ್ಯಾಮೀನನ ಗಿಬೆಯದಲ್ಲಿ ಯೋನಾತಾನನೊಂದಿಗೆ ಇದ್ದರು. ಸೌಲನು ಸೈನ್ಯದಲ್ಲಿದ್ದ ಇತರರನ್ನು ಅವರವರ ಮನೆಗಳಿಗೆ ಮರಳಿ ಕಳುಹಿಸಿದನು.


ಸೌಲನು ಸಹ ಗಿಬೆಯದ ತನ್ನ ಮನೆಗೆ ಹೋದನು. ಕೆಲವು ಶೂರರು ದೈವಪ್ರೇರಣೆಯಿಂದ ಸೌಲನನ್ನು ಹಿಂಬಾಲಿಸಿದರು.


ಸೌಲನು ಮಿಗ್ರೋನಿನ ಬೆಟ್ಟದ ತುದಿಯಲ್ಲಿರುವ ಒಂದು ದಾಳಿಂಬೆ ಮರದ ಅಡಿಯಲ್ಲಿ ಕುಳಿತಿದ್ದನು. ಅದು ಆ ಸ್ಥಳದ ಕಣಕ್ಕೆ ಸಮೀಪವಾಗಿತ್ತು. ಸೌಲನ ಜೊತೆಯಲ್ಲಿ ಆರುನೂರು ಜನರಿದ್ದರು.


ಒಂದು ಬಂಡೆಗಲ್ಲು ಉತ್ತರದಿಕ್ಕಿನ ಮಿಕ್ಮಾಷಿನ ಕಡೆಗೂ ಇನ್ನೊಂದು ಬಂಡೆಗಲ್ಲು ದಕ್ಷಿಣದಿಕ್ಕಿನ ಗೆಬದ ಕಡೆಗೂ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು