Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:11 - ಪರಿಶುದ್ದ ಬೈಬಲ್‌

11 ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:11
69 ತಿಳಿವುಗಳ ಹೋಲಿಕೆ  

ನಿನ್ನ ಜನರು ದೇಶಕ್ಕೆ ಹಿಂತಿರುಗುವರು. ಅವರು ಅಶ್ಶೂರದಿಂದಲೂ ಈಜಿಪ್ಟ್ ನಗರಗಳಿಂದಲೂ ಹಿಂದೆ ಬರುವರು. ನಿನ್ನ ಜನರು ಈಜಿಪ್ಟಿನಿಂದಲೂ ಯೂಫ್ರೇಟೀಸ್ ನದಿಯ ಆಚೆಕಡೆಯಿಂದಲೂ ಬರುವರು. ಪಶ್ಟಿಮದ ಸಮುದ್ರದ ಕಡೆಯಿಂದ ಬರುವರು. ಪೂರ್ವದ ಪರ್ವತಗಳ ಕಡೆಯಿಂದ ಬರುವರು.


ಹೀಗೆ ಎಲ್ಲಾ ಇಸ್ರೇಲರು ರಕ್ಷಣೆ ಹೊಂದುವರು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಸಿಯೋನಿನಿಂದ ರಕ್ಷಕನು ಬರುವನು: ಆತನು ಯಾಕೋಬನ ಕುಟುಂಬದಿಂದ ಎಲ್ಲಾ ದುಷ್ಟತನವನ್ನು ನಿವಾರಣೆ ಮಾಡುವನು.


ಆಗ ಯಾಕೋಬನ ಮನೆತನದವರು, ಇಸ್ರೇಲರಲ್ಲಿ ಅಳಿದುಳಿದವರು, ತಮ್ಮನ್ನು ಹೊಡೆಯುವವರನ್ನು ಆಧಾರಮಾಡಿಕೊಳ್ಳದೆ ಇಸ್ರೇಲಿನ ಅತೀ ಪರಿಶುದ್ಧನಾದ ಯೆಹೋವನನ್ನೇ ಆಧಾರಮಾಡಿಕೊಳ್ಳುವರು.


ಈಜಿಪ್ಟಿನಿಂದ ಅವರು ಪಕ್ಷಿಗಳಂತೆ ನಡುಗುತ್ತಾ ಬರುವರು. ಅಶ್ಶೂರದಿಂದ ನಡುಗುವ ಪಾರಿವಾಳಗಳ ರೀತಿಯಲ್ಲಿ ಬರುವರು. ಆಗ ನಾನು ಅವರನ್ನು ಮನೆಗೆ ಕರೆದುಕೊಂಡು ಹೋಗುವೆನು. ಇದು ಯೆಹೋವನ ನುಡಿ.


ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.”


ಆ ಜನರು, “ಪೂರ್ವದಲ್ಲಿರುವ ಜನರೇ, ದೇವರಿಗೆ ಸ್ತೋತ್ರಮಾಡಿರಿ! ದೂರ ದೇಶಗಳಲ್ಲಿರುವ ಜನರೇ, ಇಸ್ರೇಲರ ದೇವರಾದ ಯೆಹೋವನ ಹೆಸರನ್ನು ಕೊಂಡಾಡಿರಿ” ಎಂದು ಹೇಳುವರು.


ಕಲ್ನೋ ನಗರವು ಕರ್ಕೆಮೀಷ್ ಹಾಗೆ ಇರುವದು. ಹಮಾತ್ ನಗರವು ಅರ್ಪದ್ ನಗರದಂತಿರುವದು. ಸಮಾರ್ಯಪಟ್ಟಣವು ದಮಸ್ಕದಂತಿರುವದು.


ಜನರು ಪೂರ್ವದಿಕ್ಕಿನಿಂದ ಪ್ರಯಾಣಮಾಡಿ ಶಿನಾರ್ ಪ್ರದೇಶದಲ್ಲಿ ಬಯಲು ಸೀಮೆಯನ್ನು ಕಂಡು ಅಲ್ಲೇ ಉಳಿದುಕೊಂಡರು.


ಶೇಮನ ಗಂಡುಮಕ್ಕಳು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್.


ನಿಮ್ರೋದನ ರಾಜ್ಯವು ಶಿನಾರ್ ದೇಶದಲ್ಲಿರುವ ಬಾಬಿಲೋನಿನಲ್ಲಿ, ಯೆರೆಕ್‌ನಲ್ಲಿ ಮತ್ತು ಅಕ್ಕದ್ ಮತ್ತು ಕಲ್ನೇ ಎಂಬ ಪಟ್ಟಣಗಳಲ್ಲಿ ಪ್ರಾರಂಭವಾಯಿತು.


ಆದರೆ ಒಬ್ಬ ವ್ಯಕ್ತಿಯು ಮಾರ್ಪಾಟಾಗಿ ಪ್ರಭುವನ್ನು ಅನುಸರಿಸುವಾಗ ಆ ಮುಸುಕು ತೆಗೆಯಲ್ಪಡುವುದು.


ಇಸ್ರೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾದಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವ ಪಡೆದುಕೊಂಡಂತಾಗುವುದಿಲ್ಲವೇ?


ಈ ಸಂದೇಶವು ಹಮಾತನಿಗೆ ವಿರುದ್ಧವಾದದ್ದು. ಅವನ ಮೊರೆಯು ಹದ್ರಾಕ್ ದೇಶಕ್ಕೆ ತಾಗಿ ಇದೆ. ಈ ಸಂದೇಶವು ತೂರ್ ಚೀದೋನಿನ ಜನರ ವಿರುದ್ಧವಾಗಿಯೂ ಇದೆ. ಆ ಜನರು ಜ್ಞಾನಿಗಳೂ ಕುಶಲಕರ್ಮಿಗಳೂ ಆಗಿರಬಹುದು.


“ಅವರು ಶಿನಾರಿನಲ್ಲಿ ಅದಕ್ಕೊಂದು ಮನೆ ಕಟ್ಟುವದಕ್ಕಿದ್ದಾರೆ. ಮನೆಕಟ್ಟಿದ ಬಳಿಕ ಆ ಬುಟ್ಟಿಯನ್ನು ಅವರು ಅದರೊಳಗಿಡುವರು” ಎಂದು ಹೇಳಿದನು.


ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.


“ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.”


“ಆಮೇಲೆ ಉತ್ತರದ ರಾಜನು ಭೂಮಧ್ಯ ಸಾಗರದ ಕರಾವಳಿಯ ದೇಶಗಳ ಕಡೆಗೆ ಗಮನಹರಿಸುವನು. ಅವನು ಅನೇಕ ನಗರಗಳನ್ನು ಗೆಲ್ಲುವನು. ಆದರೆ ಆಗ ಒಬ್ಬ ಸೇನಾಧಿಪತಿಯು ಉತ್ತರದ ರಾಜನ ಅಹಂಕಾರವನ್ನೂ ಸೊಕ್ಕನ್ನೂ ಮುರಿದುಬಿಡುವನು; ಅವನಿಗೆ ಅವಮಾನ ಮಾಡುವನು.


ಈ ದರ್ಶನದಲ್ಲಿ ನಾನು ಶೂಷನ್ ನಗರದಲ್ಲಿದ್ದೆನು. ಶೂಷನ್ ನಗರವು ಏಲಾಮ್ ಸಂಸ್ಥಾನದ ರಾಜಧಾನಿಯಾಗಿತ್ತು. ನಾನು ಊಲಾ ನದಿಯ ದಡದ ಮೇಲೆ ನಿಂತುಕೊಂಡಿದ್ದೆನು.


ಪತ್ರೋಸನ್ನು ನಾನು ಬರಿದಾಗಿ ಮಾಡುವೆನು. ಸೋನಿನಲ್ಲಿ ಬೆಂಕಿಯನ್ನು ಬರಮಾಡುವೆನು. ತೆಬೆಸವನ್ನು ನಾನು ಶಿಕ್ಷಿಸುವೆನು.


ಬಾಷಾನಿನ ಅಲ್ಲೋನ್ ಮರಗಳಿಂದ ಹುಟ್ಟುಗಳನ್ನು ತಯಾರಿಸಿದರು. ನಿನ್ನ ಮೇಲ್ಮಾಳಿಗೆಯನ್ನು ಕಿತ್ತೀಮ್ ದ್ವೀಪದ ತಿಲಕದ ಮರಗಳಿಂದ ಮಾಡಿದರು. ಅದನ್ನು ದಂತಗಳಿಂದ ಶೃಂಗರಿಸಿದರು.


ಈ ಸಂದೇಶವು ದಮಸ್ಕ ನಗರದ ಕುರಿತಾಗಿದೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಹೆದರಿಕೊಂಡಿವೆ. ಅವು ಕೆಟ್ಟ ಸಮಾಚಾರವನ್ನು ಕೇಳಿದ್ದರಿಂದ ಹೆದರಿಕೊಂಡಿವೆ. ಅವುಗಳು ನಿರಾಶೆಗೊಂಡಿವೆ. ಅವು ಆತಂಕಪಡುತ್ತಿವೆ ಮತ್ತು ಭಯಪಡುತ್ತಿವೆ.


ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಈ ಸಂದೇಶವನ್ನು ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಈ ಸಂದೇಶವು ಮಿಗ್ದೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಆ ಸಂದೇಶವೇನೆಂದರೆ:


“ಜನಾಂಗಗಳೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಈ ಸಂದೇಶವನ್ನು ಸಮುದ್ರದಡದ ದೂರದೂರದ ಪ್ರದೇಶಗಳಲ್ಲಿ ತಿಳಿಸಿರಿ. ‘ಇಸ್ರೇಲರನ್ನು ಚದರಿಸಿದಾತನು ಅವರನ್ನು ಮತ್ತೆ ಒಟ್ಟುಗೂಡಿಸುವನು. ಆತನು ತನ್ನ ಹಿಂಡನ್ನು ಕುರುಬನಂತೆ ನೋಡಿಕೊಳ್ಳುವನು’ ಎಂದು ಹೇಳಿರಿ.


ನಾನು ಜಿಮ್ರಿಯ ಎಲ್ಲಾ ರಾಜರು, ಏಲಾಮಿನ ಎಲ್ಲಾ ರಾಜರು, ಮೇದ್ಯರ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆನು.


ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.


ಯೆಹೋವನನ್ನು ಘನಪಡಿಸಿರಿ. ದೂರದೇಶಗಳ ಜನರೆಲ್ಲರೇ, ಆತನನ್ನು ಸ್ತುತಿಸಿರಿ.


ದೂರದೇಶಗಳಲ್ಲಿರುವ ಜನರೇ, ಯೆಹೋವನಿಗೆ ಹೊಸ ಗೀತೆಯನ್ನು ಹಾಡಿರಿ. ಸಾಗರಗಳಲ್ಲಿ ಪ್ರಯಾಣಿಸುವ ಜನರೆಲ್ಲರೂ ಸಮುದ್ರಜೀವಿಗಳೆಲ್ಲವೂ ದೂರದೇಶಗಳವರೆಲ್ಲರೂ ದೇವರಿಗೆ ಸ್ತೋತ್ರಮಾಡಲಿ.


ಅಳಿದುಳಿದ ದೇವಜನರು ಅಶ್ಶೂರ ದೇಶವನ್ನು ಬಿಡಲು ಒಂದು ಮಾರ್ಗವಿರುವದು. ಅದು ದೇವರು ತನ್ನ ಜನರನ್ನು ಈಜಿಪ್ಟಿನಿಂದ ಬಿಡಿಸಿದ ಕಾಲದಂತಿರುವುದು.


ನನ್ನ ಯೆಹೋವನು ಹೀಗೆಂದನು: “ನಾನು ಪೂರ್ವ ದಿಕ್ಕಿನಲ್ಲಿರುವ ಬಾಷಾನಿನಿಂದಲೂ ಪಶ್ಚಿಮ ದಿಕ್ಕಿನಿಂದಲೂ ಶತ್ರುಗಳನ್ನು ಹಿಡಿದು ತರುವೆನು.


ಆ ದಿನಗಳಲ್ಲಿ ಅಮ್ರಾಫೆಲನು ಶಿನಾರಿನ ರಾಜನಾಗಿದ್ದನು; ಅರಿಯೋಕನು ಎಲ್ಲಸಾರಿನ ರಾಜನಾಗಿದ್ದನು; ಕೆದೊರ್ಲಗೋಮರನು ಏಲಾಮಿನ ರಾಜನಾಗಿದ್ದನು; ತಿದ್ಗಾಲನು ಗೋಯಿಮದ ರಾಜನಾಗಿದ್ದನು.


ಅಹಷ್ವೇರೋಷ್ ರಾಜನು ತನ್ನ ಪ್ರಜೆಗಳಿಂದ ತೆರಿಗೆಯನ್ನು ಎತ್ತಿದನು. ಅವನ ಸಾಮ್ರಾಜ್ಯದ ಪ್ರಜೆಗಳೆಲ್ಲರೂ ಹಾಗೂ ದೂರದ ಕರಾವಳಿಯ ನಗರವಾಸಿಗಳೂ, ತೆರಿಗೆಯನ್ನು ಕಟ್ಟಬೇಕಾಯಿತು.


ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.


ಆ ಸಮಯದಲ್ಲಿ ಈಜಿಪ್ಟಿನ ಜನರು ಯೆಹೋವನನ್ನು ನಿಜವಾಗಿಯೂ ಅರಿತುಕೊಳ್ಳುವರು. ಅವರು ದೇವರನ್ನು ಪ್ರೀತಿಸುವರು. ಅವರು ಯೆಹೋವನನ್ನು ಸೇವಿಸಿ ಅನೇಕ ಯಜ್ಞಗಳನ್ನು ಸಮರ್ಪಿಸುವರು. ಯೆಹೋವನಿಗೆ ಹರಕೆ ಹೊತ್ತು ಸಲ್ಲಿಸುವರು.


ಯೆಹೋವನು ಈಜಿಪ್ಟಿನ ಜನರನ್ನು ಶಿಕ್ಷಿಸುವನು. ಆಮೇಲೆ ಆತನು ಅವರನ್ನು ಕ್ಷಮಿಸುವನು. ಆಗ ಅವರು ಆತನ ಬಳಿಗೆ ಹಿಂದಿರುಗಿ ಬರುವರು. ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಅವರನ್ನು ಕ್ಷಮಿಸುವನು.


“ಯೆಹೂದ ಕುಲದವರಲ್ಲಿ ತಪ್ಪಿಸಿಕೊಂಡು ಜೀವಂತವಾಗಿ ಉಳಿದವರು ಮತ್ತೆ ಅಭಿವೃದ್ಧಿಯಾಗುವರು. ತಮ್ಮ ಬೇರುಗಳನ್ನು ಆಳವಾಗಿ ಇಳಿಯಬಿಟ್ಟು ಹಣ್ಣುಗಳನ್ನು ಬಿಡುವ ಗಿಡಗಳಂತೆ ಅವರಿರುವರು.


ಸೆರೆಹಿಡಿಯಲ್ಪಟ್ಟ ಈಜಿಪ್ಟರನ್ನು ಪತ್ರೋಸ್ ದೇಶಕ್ಕೆ ಬರಮಾಡುವೆನು. ಅವರ ಜನ್ಮಸ್ಥಳಕ್ಕೆ ಅವರನ್ನು ತಿರುಗಿ ಬರಮಾಡುವೆನು. ಆದರೆ ಅವರ ರಾಜ್ಯಕ್ಕೆ ಮಹತ್ವವಿರುವುದಿಲ್ಲ.


“ಏಲಾಮು ಕೂಡಾ ಅಲ್ಲಿದೆ. ಆಕೆಯ ಸೈನ್ಯವೆಲ್ಲಾ ಆಕೆಯ ಸಮಾಧಿಯ ಸುತ್ತಲಿದೆ. ಅವರೆಲ್ಲಾ ಯುದ್ಧದಲ್ಲಿ ಮಡಿದರು. ಆ ಪರದೇಶದವರು ಪಾತಾಳವನ್ನು ಸೇರಿದರು. ಅವರು ಜೀವಿಸಿದ್ದಾಗ ಜನರನ್ನು ಭಯಗೊಳಿಸಿದರು. ಆದರೆ ಈಗ ನಾಚಿಕೆಯೊಂದಿಗೆ ಅವರು ಪಾತಾಳವನ್ನು ಸೇರಿದರು.


ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.


ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಅವನು ಆಲಯದ ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಆ ಸಾಮಾಗ್ರಿಗಳನ್ನು ಅವನು ತನ್ನ ವಿಗ್ರಹಾಲಯದಲ್ಲಿಟ್ಟನು.


ಎರಡನೆ ನದಿಯ ಹೆಸರು ಗೀಹೋನ್. ಇಥಿಯೋಪಿಯ ದೇಶದಲ್ಲೆಲ್ಲಾ ಹರಿಯುತ್ತಿದ್ದ ನದಿ ಇದೇ.


ಆದರೆ ಅವರು ನಿನ್ನ ಜನರಾಗಿದ್ದಾರೆ. ಅವರು ನಿನಗೆ ಸಂಬಂಧಪಟ್ಟವರಾಗಿದ್ದಾರೆ; ನಿನ್ನ ಬಲಪರಾಕ್ರಮದಿಂದ ಅವರನ್ನು ದಾಸತ್ವದಿಂದ ಬಿಡುಗಡೆ ಮಾಡಿರುವೆ.’


ಇಸ್ರೇಲರನ್ನು ಸಮಾರ್ಯದಿಂದ ಅಶ್ಶೂರದ ರಾಜನು ಒಯ್ದನು. ನಂತರ ಅಶ್ಶೂರದ ರಾಜನು ಬಾಬಿಲೋನ್, ಕೂತಾ, ಅವ್ವಾ, ಹಮಾತ್ ಮತ್ತು ಸೆಫರ್ವಯಿಮ್‌ಗಳಿಂದ ಜನರನ್ನು ಕರೆತಂದು ಇಸ್ರೇಲರ ಬದಲಾಗಿ ಅವರನ್ನು ಸಮಾರ್ಯದಲ್ಲಿ ನೆಲೆಗೊಳಿಸಿದನು. ಅವರು ಸಮಾರ್ಯವನ್ನು ಹೊಂದಿಕೊಂಡು ಅವರ ಸುತ್ತಲಿನ ನಗರಗಳಲ್ಲಿ ವಾಸಿಸಿದರು.


ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.


ಏಲಾಮಿನ ಅಶ್ವಸೈನಿಕರು ತಮ್ಮ ಬತ್ತಳಿಕೆಯನ್ನು ತೆಗೆದುಕೊಂಡು ರಣರಂಗಕ್ಕೆ ಹೊರಡುವರು. ಕೀರ್ ಸ್ಥಳದ ಜನರು ತಮ್ಮ ಗುರಾಣಿಗಳಿಂದ ಶಬ್ದಮಾಡುವರು.


“ಇಗೋ, ದೂರದೇಶಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಉತ್ತರ, ಪಶ್ಚಿಮ ದಿಕ್ಕುಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಈಜಿಪ್ಟಿನ ಅಸ್ವಾನಿನಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ.”


ನಾನು ಸಿಂಹದಂತೆ ಗರ್ಜಿಸುವೆನು. ನಾನು ಗರ್ಜಿಸುವಾಗ ನನ್ನ ಮಕ್ಕಳು ಬರುವರು ಮತ್ತು ನನ್ನನ್ನು ಹಿಂಬಾಲಿಸುವರು. ಪಶ್ಚಿಮದಿಂದ ನನ್ನ ಮಕ್ಕಳು ಹೆದರಿ ನಡುಗುತ್ತಾ ಬರುವರು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಾನೂ ಪೂರ್ವ ಪಶ್ಚಿಮದಲ್ಲಿರುವ ದೇಶಗಳೊಳಗಿಂದ ನನ್ನ ಜನರನ್ನು ರಕ್ಷಿಸುವುದನ್ನು ನೋಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು