Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:13 - ಪರಿಶುದ್ದ ಬೈಬಲ್‌

13 ಆ ಸಮಯದಲ್ಲಿ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದಕ್ಕೆ ವೈರಿಗಳಿರುವದಿಲ್ಲ ಮತ್ತು ಎಫ್ರಾಯೀಮನಿಗೆ ಯೆಹೂದವು ತೊಂದರೆಯನ್ನು ಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತೊಲಗುವುದು ಎಫ್ರಯಿಮಿನ ಹೊಟ್ಟೆಕಿಚ್ಚು, ನಿರ್ಮೂಲವಾಗುವುದು ಜುದೇಯದ ವೈರಿಗಳ ಒಳಸಂಚು. ಎಫ್ರಯಿಮ್, ಜುದೇಯವನ್ನು ಮತ್ಸರಿಸದು; ಜುದೇಯ, ಎಫ್ರಯಿಮನ್ನು ವಿರೋಧಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಎಫ್ರಾಯೀವಿುನ ಹೊಟ್ಟೇಕಿಚ್ಚು ತೊಲಗುವದು, ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು; ಎಫ್ರಾಯೀಮು ಯೆಹೂದವನ್ನು ಮತ್ಸರಿಸದು, ಯೆಹೂದವು ಎಫ್ರಾಯೀಮನ್ನು ವಿರೋಧಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗಿ, ಯೆಹೂದದ ವಿರೋಧಿಗಳು ಇಲ್ಲದಂತಾಗುವರು. ಹೀಗೆ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚು ಪಡುವುದಿಲ್ಲ; ಯೆಹೂದವು ಎಫ್ರಾಯೀಮಿಗೆ ವಿರೋಧವಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:13
8 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಯೆಹೂದದ ಜನರು ಇಸ್ರೇಲ್ ಜನರನ್ನು ಕೂಡಿಕೊಳ್ಳುವರು. ಅವೆರಡೂ ಕೂಡಿ ಉತ್ತರದಿಕ್ಕಿನ ಪ್ರದೇಶದಿಂದ ಬರುವರು. ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶಕ್ಕೆ ಅವರು ಬರುವರು.”


“ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.”


ಇದರರ್ಥವೇನೆಂದರೆ ಮನಸ್ಸೆಯು ಎಫ್ರಾಯೀಮನೊಡನೆ ಯುದ್ಧ ಮಾಡುವನು ಮತ್ತು ಎಫ್ರಾಯೀಮನು ಮನಸ್ಸೆಯೊಂದಿಗೆ ಯುದ್ಧಮಾಡುವನು. ಆಮೇಲೆ ಅವರಿಬ್ಬರೂ ಸೇರಿ ಯೆಹೂದದೊಂದಿಗೆ ಯುದ್ಧ ಮಾಡುವರು. ಯೆಹೋವನು ಇಸ್ರೇಲರ ಮೇಲೆ ಇನ್ನೂ ಕೋಪದಿಂದಿದ್ದಾನೆ; ತನ್ನ ಜನರನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


“ಯೆರೆಮೀಯನೇ, ಜನರು ಏನು ಹೇಳಿದರೆಂಬುದನ್ನು ಕೇಳಲಿಲ್ಲವೇ? ‘ಯೆಹೋವನು ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಎರಡು ಕುಟುಂಬಗಳನ್ನು ಆರಿಸಿಕೊಂಡನು; ಆದರೆ ಈಗ ಅವರನ್ನು ತಿರಸ್ಕರಿಸಿದ್ದಾನೆ.’ ಎಂದು ಅವರು ಹೇಳುತ್ತಿದ್ದಾರೆ. ಅನ್ಯಜನರು ನನ್ನ ಜನರನ್ನು ಎಷ್ಟು ದ್ವೇಷಿಸುತ್ತಾರೆಂದರೆ, ಅವರು ಒಂದು ಜನಾಂಗವಾಗಿ ಮುಂದುವರಿಯುವುದು ಅವರಿಗೆ ಇಷ್ಟವೇ ಇಲ್ಲ.”


ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಇಸ್ರೇಲಿನ ಮತ್ತು ಯೆಹೂದದ ಜನರು ಒಟ್ಟಿಗೆ ಸೇರುವರು. ಅವರು ಒಟ್ಟುಗೂಡಿ ಬಹಳವಾಗಿ ಗೋಳಾಡುವರು; ತಮ್ಮ ದೇವರಾದ ಯೆಹೋವನನ್ನು ಹುಡುಕಲು ಹೋಗುವರು.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: “ಬೇರೆ ದೇಶಗಳಿಗೆ ನಾನು ಇಸ್ರೇಲರನ್ನು ಚದರಿಸಿದೆನು. ಆದರೆ ತಿರುಗಿ ಇಸ್ರೇಲರನ್ನೆಲ್ಲಾ ಒಟ್ಟುಗೂಡಿಸುವೆನು. ಆಗ ಆ ದೇಶದವರು ನಾನು ಪವಿತ್ರವಾದ ದೇವರೆಂದು ತಿಳಿದು ಆ ರೀತಿಯಾಗಿ ನನ್ನನ್ನು ನೋಡುವರು. ಆಗ ಇಸ್ರೇಲರು ತಮ್ಮ ದೇಶದಲ್ಲಿ ವಾಸಮಾಡುವರು. ಆ ದೇಶವನ್ನು ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು