Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:3 - ಪರಿಶುದ್ದ ಬೈಬಲ್‌

3 ಆತನು ಯೆಹೋವನನ್ನು ಸನ್ಮಾನಿಸುತ್ತಾ ಸಂತೋಷಿಸುವನು. ಆತನು ಜನರಿಗೆ ನ್ಯಾಯತೀರಿಸುವುದು ಹೊರತೋರಿಕೆಯ ಆಧಾರದ ಮೇಲಲ್ಲ; ಕೇಳಿಕೊಂಡದ್ದರ ಆಧಾರದ ಮೇಲೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಯೆಹೋವನ ಭಯದಲ್ಲಿ ಆನಂದಿಸುವನು. ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನ ಭಯಭಕ್ತಿ ಅವಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆ ನಿರ್ಣಯಿಸನಾತ ಕಿವಿಗೆ ಬಿದ್ದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನ ಭಯವು ಅವನಿಗೆ ಪರಿಮಳಿಸುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡುವದಿಲ್ಲ, ಕಿವಿಗೆ ಬಿದ್ದಂತೆ ನಿರ್ಣಯಿಸುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಯೆಹೋವ ದೇವರ ಭಯದಲ್ಲಿ ಆನಂದಿಸುವರು. ಅವರು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ, ತಮ್ಮ ಕಿವಿಗಳ ಕೇಳ್ವಿಕೆಯ ಪ್ರಕಾರವೂ ತೀರ್ಪು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:3
20 ತಿಳಿವುಗಳ ಹೋಲಿಕೆ  

ಹೊರತೋರಿಕೆಯ ಆಧಾರದ ಮೇಲೆ ತೀರ್ಪುಮಾಡದೆ ನ್ಯಾಯಾನುಸಾರವಾಗಿ ತೀರ್ಪುಮಾಡಿರಿ” ಎಂದು ಹೇಳಿದನು.


ಯೇಸುವು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು. ದೇವರಿಗೂ ಜನರಿಗೂ ಅಚ್ಚುಮೆಚ್ಚಾದನು.


ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.


ಆಗ ನೀನು ಯೆಹೋವನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವೆ; ದೈವಜ್ಞಾನವನ್ನು ಹೊಂದಿಕೊಳ್ಳುವೆ.


ಆದರೆ ಗಟ್ಟಿಯಾದ ಆಹಾರವು ಜ್ಞಾನದಲ್ಲಿ ಬೆಳವಣಿಗೆ ಹೊಂದಿರುವವರಿಗೇ ಹೊರತು ಮಕ್ಕಳಿಗಲ್ಲ. ಇವರು ಅನುಭವದಿಂದ ತಮ್ಮ ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರುವುದರಿಂದ ಒಳಿತು ಕೆಡುಕುಗಳಿಗಿರುವ ಭೇದವನ್ನು ತಿಳಿದುಕೊಳ್ಳಬಲ್ಲವರಾಗಿದ್ದಾರೆ.


ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು.


ಆಗ ನೀನು ಒಳ್ಳೆಯದನ್ನೂ ನ್ಯಾಯನೀತಿಗಳನ್ನೂ ಸನ್ಮಾರ್ಗಗಳನ್ನೂ ಅರ್ಥಮಾಡಿಕೊಳ್ಳುವೆ.


ಆದ್ದರಿಂದ ನಿನ್ನ ಜನರನ್ನು ಒಳ್ಳೆಯ ರೀತಿಯಲ್ಲಿ ಆಳಲು ಮತ್ತು ಅವರಿಗೆ ಸರಿಯಾದ ತೀರ್ಪುಗಳನ್ನು ನೀಡಲು ನನಗೆ ವಿವೇಕವನ್ನು ಕರುಣಿಸು. ಇದು ನನಗೆ ಸರಿ ಮತ್ತು ತಪ್ಪುಗಳ ನಡುವಿರುವ ಭೇದವನ್ನು ತಿಳಿಸಿಕೊಡುತ್ತದೆ. ನನಗೆ ಉತ್ತಮವಾದ ವಿವೇಕವಿಲ್ಲದಿದ್ದರೆ, ನಾನು ಈ ಮಹಾಜನಾಂಗವನ್ನು ಆಳುವುದು ಸಾಧ್ಯವಾಗುವುದಿಲ್ಲ” ಎಂದು ಉತ್ತರಿಸಿದನು.


ರಾಜನಾದ ನನ್ನ ಒಡೆಯನ ಮಾತುಗಳು ನನಗೆ ವಿಶ್ರಾಂತಿಯನ್ನು ಕೊಡುತ್ತವೆ ಎಂದು ನನಗೆ ತಿಳಿದಿರುವುದರಿಂದ ನಿನ್ನ ಬಳಿಗೆ ಬಂದಿರುವೆನು. ಏಕೆಂದರೆ ನೀನು ದೇವದೂತನಂತಿರುವೆ. ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂಬುದು ನಿನಗೆ ತಿಳಿದಿದೆ. ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿರುವನು” ಎಂದು ಹೇಳಿದಳು.


ಜನರ ಬಗ್ಗೆ ಆತನಿಗೆ ಯಾರೂ ತಿಳಿಸುವ ಅಗತ್ಯವಿರಲಿಲ್ಲ. ಮನುಷ್ಯನ ಮನಸ್ಸಿನಲ್ಲಿ ಏನಿದೆ ಎಂಬುದು ಯೇಸುವಿಗೆ ಗೊತ್ತಿತ್ತು.


ಕಿವಿಯು ಮಾತುಗಳನ್ನು ವಿವೇಚಿಸುತ್ತದೆ; ನಾಲಿಗೆಯು ಆಹಾರವನ್ನು ರುಚಿನೋಡುತ್ತದೆ.


ಆದರೆ ನಾಲಿಗೆಯು ಊಟದ ರುಚಿಯನ್ನು ಆನಂದಿಸುವಂತೆ ಕಿವಿಗಳು ಮಾತುಗಳನ್ನು ವಿವೇಚಿಸುವುದಿಲ್ಲವೇ?


ಜೆರುಸಲೇಮೇ, ನೀನು ಐಶ್ವರ್ಯವಂತಳಾಗಿರುವೆ. ನೀನು ದೇವರ ವಿಷಯವಾದ ಜ್ಞಾನ, ತಿಳುವಳಿಕೆ ಮತ್ತು ರಕ್ಷಣೆಗಳಿಂದ ಐಶ್ವರ್ಯವಂತಳಾಗಿರುವೆ. ಯೆಹೋವನ ಮೇಲೆ ನಿನಗಿರುವ ಗೌರವವೇ ನಿನ್ನ ಭಂಡಾರವಾಗಿದೆ. ನೀನು ಹೀಗೆಯೇ ಮುಂದುವರಿಯುವೆ.


ಭೂಪ್ರದೇಶದ ಈ ಭಾಗವು ಅಧಿಪತಿಗೆ ಸೇರಿದೆ. ಹೀಗೆ, ಹಿಂದಿನ ಕಾಲದ ಅಧಿಪತಿಗಳು ಮಾಡಿದಂತೆ ಈ ಅಧಿಪತಿಯು ಜನರನ್ನು ಹಿಂಸಿಸಿ ಅವರ ಭೂಮಿಯನ್ನು ಕಸಿದುಕೊಳ್ಳುವುದಿಲ್ಲ. ಉಳಿದ ಭೂಭಾಗವು ಇಸ್ರೇಲಿನ ಇತರ ಕುಲಗಳವರಿಗೆ ಯಾವಾಗಲೂ ಸೇರಿರುತ್ತದೆ.”


ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.


ಆಗ ರಾಜನು ಆ ಸ್ತ್ರೀಗೆ, “ಮನೆಗೆ ಹಿಂದಿರುಗು. ನಾನು ನಿನ್ನ ವಿಷಯದಲ್ಲಿ ಆಜ್ಞೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು