Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:1 - ಪರಿಶುದ್ದ ಬೈಬಲ್‌

1 ಆಮೋಚನ ಮಗನಾದ ಯೆಶಾಯನಿಗೆ ಬಾಬಿಲೋನಿನ ಬಗ್ಗೆ ದೊರೆತ ದೈವಸಂದೇಶ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಾಬಿಲೋನಿನ ವಿಷಯವಾಗಿ ಆಮೋಚನ ಮಗ ಯೆಶಾಯನಿಗೆ ಕೇಳಿಬಂದ ದೇವವಾಣಿ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಮೋಚನ ಮಗ ಯೆಶಾಯನಿಗೆ ಬಾಬಿಲೋನಿನ ವಿಷಯವಾಗಿ ಬಂದ ಪ್ರವಾದನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:1
34 ತಿಳಿವುಗಳ ಹೋಲಿಕೆ  

ಬಾಬಿಲೋನ್ ಮತ್ತು ಬಾಬಿಲೋನಿನ ಜನರ ಬಗ್ಗೆ ಯೆಹೋವನ ಸಂದೇಶವಿದು. ಈ ಸಂದೇಶವನ್ನು ಯೆಹೋವನು ಯೆರೆಮೀಯನ ಮುಖಾಂತರ ಕೊಟ್ಟನು.


ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ. ಯೆಹೂದ ಮತ್ತು ಜೆರುಸಲೇಮಿನಲ್ಲಿ ನಡೆಯಲಿದ್ದ ಘಟನೆಗಳ ಬಗ್ಗೆ ದೇವರು ಯೆಶಾಯನಿಗೆ ಈ ದರ್ಶನ ನೀಡಿದನು; ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ ಮತ್ತು ಹಿಜ್ಕೀಯರ ಕಾಲದಲ್ಲಿ ಯೆಶಾಯನಿಗೆ ಈ ದರ್ಶನವಾಯಿತು.


ಉಪರ್ಸಿನ್ ಎಂದರೆ: ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು.


ರಾಜನಾದ ಬೇಲ್ಶಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ.


ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು.


ಅರಸನಾದ ಆಹಾಜನು ಸತ್ತ ವರ್ಷದಲ್ಲಿ ಈ ದುಃಖದ ಸಂದೇಶವು ಕೊಡಲ್ಪಟ್ಟಿತು:


ಬಾಬಿಲೋನು ಸೊದೋಮ್ ಗೊಮೋರಗಳಂತೆ ನಾಶವಾಗುವದು. ದೇವರೇ ಇದನ್ನು ಮಾಡುವನು. ಆಗ ಅಲ್ಲಿ ಏನೂ ಉಳಿಯದು. “ಎಲ್ಲಾ ರಾಜ್ಯಗಳಿಗಿಂತ ಬಾಬಿಲೋನ್ ಬಹಳ ಸುಂದರವಾಗಿದೆ. ಬಾಬಿಲೋನಿಯರು ತಮ್ಮ ನಗರದ ಬಗ್ಗೆ ತುಂಬಾ ಹೆಚ್ಚಳಪಡುತ್ತಾರೆ.


ದೇವರಿಂದ ಬಂದ ಸಂದೇಶ. ಯೆಹೋವ ದೇವರು ಮಲಾಕಿಯ ಮೂಲಕ ಇಸ್ರೇಲರಿಗೆ ಕೊಟ್ಟ ಸಂದೇಶ.


ಯೆಹೋವನಿಂದ ಬಂದ ಸಂದೇಶ: ಹದ್ರಾಕ್ ದೇಶದ ಮತ್ತು ಅದರ ರಾಜಧಾನಿಯಾದ ದಮಸ್ಕ ನಗರದ ವಿರುದ್ಧವಾಗಿ ಯೆಹೋವನ ಸಂದೇಶ: “ಇಸ್ರೇಲ್ ಕುಲದವರು ಮಾತ್ರವೇ ದೇವರನ್ನು ತಿಳಿದವರಲ್ಲ. ಪ್ರತಿಯೊಬ್ಬರೂ ಸಹಾಯಕ್ಕಾಗಿ ಆತನಿಗೆ ಮೊರೆಯಿಡುವರು.


ಪ್ರವಾದಿಯಾದ ಹಬಕ್ಕೂಕನಿಗೆ ಕೊಡಲ್ಪಟ್ಟ ಸಂದೇಶ.


ಎಲ್ಕೋಷ್ ಎಂಬ ಊರಿನವನಾದ ನಹೂಮನಿಗೆ ಆದ ದೇವದರ್ಶನದ ಪುಸ್ತಕ. ನಿನೆವೆ ಪಟ್ಟಣದ ವಿಷಯವಾಗಿ ದುಃಖಕರವಾದ ಸಂದೇಶ.


ಅವರ ಒಡೆಯನಾದ ಯೆಹೋವನು ಇದನ್ನೆಲ್ಲಾ ಹೇಳಿದನು ಎಂದು ಅವರಿಗೆ ತಿಳಿಸು. ಈ ಸಂದೇಶವು ಜೆರುಸಲೇಮಿನ ನಾಯಕರ ಮತ್ತು ಅಲ್ಲಿ ವಾಸಿಸುವ ಇಸ್ರೇಲ್ ಜನರೆಲ್ಲರ ಕುರಿತಾಗಿದೆ.


ಇಸ್ರೇಲರ ಪರಿಶುದ್ಧನೇ, ನಿಮ್ಮನ್ನು ರಕ್ಷಿಸುವಾತನು. ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೋಸ್ಕರ ಬಾಬಿಲೋನಿಗೆ ಸೈನ್ಯವನ್ನು ಕಳುಹಿಸುವೆನು. ಎಷ್ಟೋ ಮಂದಿ ಸೆರೆಹಿಡಿಯಲ್ಪಡುವರು. ಕಲ್ದೀಯ ಜನರು ಅವರ ಹಡಗುಗಳಿಂದಲೇ ಒಯ್ಯಲ್ಪಡುವರು. (ಅವರು ಆ ಹಡಗುಗಳ ಬಗ್ಗೆ ಬಹು ಹೆಮ್ಮೆಯಿಂದಿದ್ದಾರೆ.)


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಹಲಗೆಗೆ ಬಲವಾಗಿ ಹೊಡೆಯಲ್ಪಟ್ಟ ಆ ಮೊಳೆಯು (ಶೆಬ್ನ) ಬಲಹೀನವಾಗಿ ತುಂಡಾಗುವದು. ಆ ಮೊಳೆಯು ನೆಲಕ್ಕೆ ಬಿದ್ದು ನಾಶವಾಗುವದು. ಆಗ ಆ ಮೊಳೆಗೆ ತೂಗುಹಾಕಿದ್ದೆಲ್ಲವೂ ಅದರೊಂದಿಗೆ ನೆಲಕ್ಕೆ ಬೀಳುವದು. ಆಗ ನಾನು ಈ ಸಂದೇಶದಲ್ಲಿ ಹೇಳಿದ್ದೆಲ್ಲವೂ ಸಂಭವಿಸುವದು. ಅವುಗಳು ನೆರವೇರುತ್ತವೆ ಯಾಕೆಂದರೆ ಅವುಗಳನ್ನು ಹೇಳಿದಾತನು ಯೆಹೋವನೇ.”


ದಿವ್ಯದರ್ಶನದ ಕಣಿವೆಯ ವಿಷಯವಾಗಿ ದುಃಖದ ಸಂದೇಶ: ಜನಗಳೇ, ನಿಮಗೆ ಏನಾಯಿತು? ನಿಮ್ಮ ಮನೆ ಮಾಳಿಗೆಯ ಮೇಲೆ ಯಾಕೆ ಅಡಗಿರುತ್ತೀರಿ?


ಅರೇಬಿಯದ ಬಗ್ಗೆ ದುಃಖಕರವಾದ ಸಂದೇಶ: ದೇದಾನಿನಿಂದ ಬಂದ ಪ್ರಯಾಣಿಕರು ಅರೇಬಿಯ ಮರುಭೂಮಿಯಲ್ಲಿನ ಪೊದೆಗಳಲ್ಲಿ ರಾತ್ರಿ ತಂಗಿದರು.


ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.


ದಮಸ್ಕಕ್ಕೆ ಇದು ದುಃಖಕರವಾದ ಸಂದೇಶ. ಯೆಹೋವನು ಹೇಳುವುದೇನೆಂದರೆ, “ದಮಸ್ಕವು ಈಗ ಒಂದು ದೊಡ್ಡ ನಗರವಾಗಿದೆ. ಆದರೆ ಅದು ನಾಶವಾಗುವದು. ಕೆಡವಲ್ಪಟ್ಟ ಕಟ್ಟಡಗಳು ಮಾತ್ರವೇ ದಮಸ್ಕದಲ್ಲಿರುವವು.


ಇಸ್ರೇಲಿನ ಬಗ್ಗೆ ಯೆಹೋವನ ದುಃಖದ ಸಂದೇಶ. ಯೆಹೋವನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುತ್ತಾನೆ. ಮಾನವನಲ್ಲಿ ತನ್ನ ಆತ್ಮವನ್ನಿಟ್ಟನು. ಆ ಬಳಿಕ ಆತನು ಹೇಳಿದ್ದೇನೆಂದರೆ,


ಯೋಷೀಯನು ಯೆಕೊನ್ಯ ಮತ್ತು ಅವನ ಸಹೋದರರ ತಂದೆ. (ಈ ಸಮಯದಲ್ಲಿಯೇ ಯೆಹೂದ್ಯ ಜನರನ್ನು ಗುಲಾಮಗಿರಿಗಾಗಿ ಬಾಬಿಲೋನಿಗೆ ಕೊಂಡೊಯ್ದದ್ದು.)


ನಂತರ ಎರಡನೆಯ ದೇವದೂತನು ಮೊದಲನೆಯ ದೇವದೂತನನ್ನು ಹಿಂಬಾಲಿಸುತ್ತಾ, “ಅವಳು ನಾಶವಾದಳು! ಬಾಬಿಲೋನ್ ಎಂಬ ನಗರಿಯು ನಾಶವಾದಳು! ಆಕೆಯು ಸಕಲ ಜನಾಂಗಗಳಿಗೆ ತನ್ನ ಜಾರತ್ವವೆಂಬ ಮತ್ತು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.


ಯೇಹು ತನ್ನ ರಥದ ಸಾರಥಿಯಾದ ಬಿದ್ಕರನಿಗೆ, “ಯೋರಾಮನ ದೇಹವನ್ನು ಎತ್ತಿ ಇಜ್ರೇಲಿಯನಾದ ನಾಬೋತನ ಹೊಲದಲ್ಲಿ ಎಸೆದುಬಿಡು. ನಾನು ಮತ್ತು ನೀನು ಯೋರಾಮನ ತಂದೆಯಾದ ಅಹಾಬನ ಸಂಗಡ ಹೋಗುತ್ತಿರುವಾಗ


ಆ ಸಮಯದಲ್ಲಿ ಆಮೋಚನ ಮಗನಾದ ಯೆಶಾಯನೊಂದಿಗೆ ಯೆಹೋವನು ಮಾತನಾಡಿದನು. “ನಿನ್ನ ಶೋಕವಸ್ತ್ರಗಳನ್ನು ತೆಗೆದುಹಾಕು. ನಿನ್ನ ಕಾಲುಗಳಿಂದ ಪಾದರಕ್ಷೆಗಳನ್ನು ತೆಗೆದುಬಿಡು” ಎಂದು ಯೆಹೋವನು ಹೇಳಿದಾಗ ಯೆಶಾಯನು ಆತನಿಗೆ ವಿಧೇಯನಾದನು. ಯೆಶಾಯನು ಪಾದರಕ್ಷೆಗಳಿಲ್ಲದೆ, ಬಟ್ಟೆಗಳಿಲ್ಲದೆ ಅಡ್ಡಾಡಿದನು.


ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)


ಹನನ್ಯನೇ, ನಾನು ಮತ್ತು ನೀನು ಪ್ರವಾದಿಗಳಾಗುವದಕ್ಕಿಂತ ಬಹಳ ಮುಂಚೆ ಪ್ರವಾದಿಗಳು ಇದ್ದರು. ಯುದ್ಧ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳು ಅನೇಕ ದೇಶಗಳಿಗೆ ಮತ್ತು ದೊಡ್ಡದೊಡ್ಡ ರಾಜ್ಯಗಳಿಗೆ ಬರುತ್ತವೆ ಎಂದು ಅವರು ಪ್ರವಾದಿಸಿದ್ದಾರೆ.


“ಯೆಹೂದದ ಜನರಾದ ನಾವು ನಾಚಿಕೆಪಟ್ಟೆವು. ಜನರು ನಮ್ಮನ್ನು ಅಪಮಾನಗೊಳಿಸಿದ್ದರಿಂದ ನಾವು ನಾಚಿಕೆಪಟ್ಟಿದ್ದೇವೆ. ಏಕೆಂದರೆ ಯೆಹೋವನ ಆಲಯದ ಪವಿತ್ರ ಸ್ಥಳಗಳಲ್ಲಿ ಅಪರಿಚಿತರು ಪ್ರವೇಶಗೈದಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು