Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:18 - ಪರಿಶುದ್ದ ಬೈಬಲ್‌

18 ಭೂಲೋಕದ ಪ್ರತಿಯೊಬ್ಬ ಅರಸನು ವೈಭವದೊಂದಿಗೆ ಕಾಲವಾದನು. ಪ್ರತಿಯೊಬ್ಬ ಅರಸನಿಗೆ ಸ್ವಂತ ಸಮಾಧಿ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂ ತಮ್ಮ ತಮ್ಮ ವೈಭವದೊಡನೆ ಸಮಾಧಿಗಳಲ್ಲಿ ದೀರ್ಘ ನಿದ್ರೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಂಭ್ರಮದಿ ಸ್ವಂತ ಸಮಾಧಿಗಳಲಿ ನಿರಂತರ ನಿದ್ರಿಸುತಿಹರು ಸಕಲ ರಾಷ್ಟ್ರಗಳ ಅರಸರು, ಸಮಸ್ತ ರಾಜರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ರಾಜರೂ ತಮ್ಮ ತಮ್ಮ ಮನೆಗಳಲ್ಲಿ ವೈಭವದೊಡನೆ ದೀರ್ಘನಿದ್ರೆಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಜನಾಂಗಗಳ ಅರಸರೆಲ್ಲಾ ವೈಭವದಿಂದ ತಮ್ಮ ತಮ್ಮ ಸಮಾಧಿಗಳಲ್ಲಿ ಮಲಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:18
11 ತಿಳಿವುಗಳ ಹೋಲಿಕೆ  

ಆ ಸೇವಕನನ್ನು ‘ನೀನಿಲ್ಲಿ ಏನು ಮಾಡುತ್ತಿರುವೆ? ನಿನ್ನ ಕುಟುಂಬದವರಲ್ಲಿ ಯಾರನ್ನಾದರೂ ಇಲ್ಲಿ ಸಮಾಧಿ ಮಾಡಿರುವಿಯಾ? ಇಲ್ಲಿ ಸಮಾಧಿಯನ್ನು ಯಾಕೆ ನಿರ್ಮಿಸಿರುವೆ? ಎಂದು ಕೇಳು.’” ಅದಕ್ಕೆ ಯೆಶಾಯನು, “ಈ ಮನುಷ್ಯನನ್ನು ನೋಡು. ಅವನು ತನ್ನ ಸಮಾಧಿಯನ್ನು ಎತ್ತರವಾದ ಸ್ಥಳದಲ್ಲಿ ಸಿದ್ಧಪಡಿಸುತ್ತಿದ್ದಾನೆ. ಅವನು ಸಮಾಧಿ ಸಿದ್ಧಪಡಿಸಲು ಬಂಡೆಯನ್ನು ಕೊರೆಯುತ್ತಿದ್ದಾನೆ.


ನೀನು ನನ್ನನ್ನು ಮರಣಕ್ಕೀಡು ಮಾಡಿರುವುದು ನನಗೆ ಗೊತ್ತಿದೆ. ಜೀವಿಸಿರುವ ಪ್ರತಿಯೊಬ್ಬನೂ ಸಾಯಲೇಬೇಕು.


ಅರಾಮ್ಯರು ಯೆಹೋವಾಷನನ್ನು ಬಿಟ್ಟುಹೋಗುವಾಗ ಅವನು ರೋಗದಿಂದ ಬಹಳ ಅಸ್ವಸ್ಥನಾಗಿದ್ದನು. ಅವನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಸಂಚು ಮಾಡಿದರು. ಯಾಕೆಂದರೆ ಅವನು ಯೆಹೋಯಾದನ ಮಗನಾದ ಜೆಕರ್ಯನನ್ನು ಕೊಂದದ್ದರಿಂದ ಸೇವಕರು ಯೆಹೋವಾಷನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದರು. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ಅರಸರುಗಳ ಸಮಾಧಿಯಲ್ಲಿ ಹೂಳಿಡಲಿಲ್ಲ.


ಅವನ ದೇಹವನ್ನು ದಾವೀದ ನಗರದಲ್ಲಿ ಅರಸುಗಳ ಸಮಾಧಿಯ ಬಳಿಯಲ್ಲಿ ಸಮಾಧಿ ಮಾಡಿದರು. ಯಾಕೆಂದರೆ ಅವನು ಜೀವಂತನಾಗಿದ್ದಾಗ ಇಸ್ರೇಲಿನ ದೇವರಿಗೂ ಆತನ ಆಲಯಕ್ಕೂ ಒಳ್ಳೆಯದನ್ನೇ ಮಾಡಿದ್ದನು.


ನೀನು ಎತ್ತರವಾದ ಸ್ಥಳಗಳ ಬಗ್ಗೆ ಭಯದಿಂದಿರುವೆ; ನಿನ್ನ ಹಾದಿಯಲ್ಲಿರುವ ಪ್ರತಿಯೊಂದು ಚಿಕ್ಕ ವಸ್ತುವಿಗೂ ಹೆದರಿಕೊಂಡು ನಡೆದಾಡುವೆ. ನಿನ್ನ ಕೂದಲು ಬಾದಾಮಿ ಮರದ ಹೂವುಗಳಂತೆ ಬಿಳುಪಾಗುವುದು. ನೀನು ನಡೆಯುವಾಗ ಮಿಡತೆಯಂತೆ ನಿನ್ನನ್ನು ಎಳೆದಾಡಿಕೊಂಡು ನಡೆಯುವೆ; ಮಗುವನ್ನು ಪಡೆಯಲಾರದಷ್ಟು ವಯಸ್ಸಾಗುವುದು. ಆಮೇಲೆ ನೀನು ನಿನ್ನ ಹೊಸ ಮನೆಗೆ (ಸಮಾಧಿಗೆ) ಹೋಗುವೆ. ನಿನ್ನ ಶವಸಂಸ್ಕಾರಕ್ಕೆ ಹೋಗಲು ಜನರು ಬೀದಿಗಳಲ್ಲಿ ತುಂಬಿರುವರು.


ಒಬ್ಬನು ಬಹುಕಾಲ ಬದುಕಬಹುದು. ಅವನಿಗೆ ನೂರು ಮಂದಿ ಮಕ್ಕಳಿರಬಹುದು. ಆದರೆ ಅವನಿಗೆ ಸುಖತೃಪ್ತಿಯೂ ಸತ್ತ ಮೇಲೆ ಉತ್ತರಕ್ರಿಯೆಯೂ ಇಲ್ಲದಿದ್ದರೆ ಹುಟ್ಟುವಾಗಲೇ ಸಾಯುವ ಮಗು ಅವನಿಗಿಂತಲೂ ಉತ್ತಮ.


ನಗರಗಳನ್ನು ನಾಶಮಾಡಿ ಭೂಮಿಯನ್ನು ಬೆಂಗಾಡನ್ನಾಗಿ ಮಾಡಿದವನು ಇವನೋ? ಯುದ್ಧದಲ್ಲಿ ಜನರನ್ನು ಸೆರೆಹಿಡಿದು ಅವರನ್ನು ಮನೆಗಳಿಗೆ ಬಿಡದೆ ಇದ್ದವನು ಇವನೋ?” ಎಂದು ಕೇಳುವರು.


ಆದರೆ ದುಷ್ಟ ಅರಸನಾದ ನೀನು ನಿನ್ನ ಸಮಾಧಿಯಿಂದ ತೆಗೆದುಹಾಕಲ್ಪಟ್ಟಿರುವೆ. ಮರದಿಂದ ಬೇರ್ಪಡಿಸಿದ ಕೊಂಬೆಯಂತೆ ನೀನಿರುವೆ. ಯುದ್ಧದಲ್ಲಿ ಸತ್ತ ಸೈನಿಕನಂತೆ ನೀನಿರುವೆ. ಬೇರೆ ಸೈನಿಕರು ಅವನ ಮೇಲೆ ನಡೆದಾಡುವರು. ಈಗ ನೀನು ಸಾಧಾರಣ ಹೆಣದಂತೆ ಇರುವೆ. ಸಮಾಧಿಯ ಬಟ್ಟೆಗಳಿಂದ ನೀನು ಸುತ್ತಲ್ಪಟ್ಟಿರುವೆ.


ಈಜೆಬೆಲಳನ್ನು ಸಮಾಧಿಮಾಡಲು ಜನರು ಹೋದರು. ಆದರೆ ಅವರಿಗೆ ಅವಳ ದೇಹವು ಸಿಗಲಿಲ್ಲ. ಅವರಿಗೆ ಅವಳ ತಲೆಬುರುಡೆ, ಕೈಕಾಲುಗಳು ಮಾತ್ರ ಸಿಕ್ಕಿದವು.


ಭೂರಾಜರೊಂದಿಗೂ ಮಂತ್ರಿಗಳೊಂದಿಗೂ ವಿಶ್ರಮಿಸಿಕೊಳ್ಳುತ್ತಿದ್ದೆನು. ಅವರು ತಮಗಾಗಿ ಕಟ್ಟಿಸಿಕೊಂಡ ಪಟ್ಟಣಗಳು ಈಗ ಹಾಳುಬಿದ್ದಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು