Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:22 - ಪರಿಶುದ್ದ ಬೈಬಲ್‌

22 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದ್ದುನಿಂತು ಅವರಿಗೆ ವಿರುದ್ಧವಾಗಿ ಹೋರಾಡುವೆನು. ನಾನು ಹೆಸರುವಾಸಿಯಾದ ಬಾಬಿಲೋನ್ ನಗರವನ್ನು ನಾಶಮಾಡುವೆನು. ಬಾಬಿಲೋನಿನ ಎಲ್ಲಾ ಜನರನ್ನು ನಾಶಮಾಡುವೆನು. ಅವರ ಮಕ್ಕಳನ್ನು ಮತ್ತು ಮರಿಮಕ್ಕಳನ್ನು ನಾಶಮಾಡುವೆನು” ಯೆಹೋವನೇ ಈ ಮಾತುಗಳನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ನಾನು ಅವರ ವಿರುದ್ಧವಾಗಿ ಏಳುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ನಾನು ಬಾಬೆಲಿನಿಂದ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಸಂತತಿಯನ್ನೂ ನಿರ್ಮೂಲ ಮಾಡುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯ ನುಡಿಗಳು : “ನಾನವರಿಗೆ ವಿರುದ್ಧವಾಗಿ ಎದ್ದು ನಿರ್ನಾಮಮಾಡುವೆನು, ಬಾಬಿಲೋನಿನ ಹೆಸರನು, ಜನಶೇಷವನು, ಪುತ್ರಪೌತ್ರರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸೇನಾಧೀಶ್ವರನಾದ ಯೆಹೋವನಿಂದ ಒಂದು ಮಾತು ಹೊರಟಿತು - ನಾನು ಅವರಿಗೆ ವಿರುದ್ಧವಾಗಿ ಎದ್ದು ಬಾಬೆಲಿನಿಂದ ಹೆಸರನ್ನೂ ಜನಶೇಷವನ್ನೂ ಪುತ್ರ ಪೌತ್ರರನ್ನೂ ಕತ್ತರಿಸಿಬಿಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಅವರಿಗೆ ವಿರುದ್ಧವಾಗಿ ಏಳುತ್ತೇನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಬಾಬಿಲೋನಿನಿಂದ ಆಕೆಯ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಮಕ್ಕಳನ್ನೂ ಅದರ ಸಂತತಿಯವರನ್ನೂ ನಿರ್ಮೂಲ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:22
15 ತಿಳಿವುಗಳ ಹೋಲಿಕೆ  

ನೀತಿವಂತರ ನೆನಪು ಆಶೀರ್ವಾದದಾಯಕ. ಕೆಡುಕರಾದರೋ ಬಹುಬೇಗನೆ ಮರೆಯಲ್ಪಡುವರು.


ಆದ್ದರಿಂದ ಯಾರೊಬ್ಬಾಮನೇ, ನಾನು ನಿನ್ನ ಕುಟುಂಬಕ್ಕೆ ಕೇಡುಗಳನ್ನು ಬರಮಾಡುತ್ತೇನೆ. ನಿನ್ನ ಕುಟುಂಬದ ಗಂಡಸರೆಲ್ಲರನ್ನು ನಾನು ಕೊಲ್ಲುತ್ತೇನೆ. ಬೆಂಕಿಯು ಕಸವನ್ನು ಸುಟ್ಟುಹಾಕುವಂತೆ ನಾನು ನಿನ್ನ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿಸುತ್ತೇನೆ.


ಇಸ್ರೇಲರ ಪರಿಶುದ್ಧನೇ, ನಿಮ್ಮನ್ನು ರಕ್ಷಿಸುವಾತನು. ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೋಸ್ಕರ ಬಾಬಿಲೋನಿಗೆ ಸೈನ್ಯವನ್ನು ಕಳುಹಿಸುವೆನು. ಎಷ್ಟೋ ಮಂದಿ ಸೆರೆಹಿಡಿಯಲ್ಪಡುವರು. ಕಲ್ದೀಯ ಜನರು ಅವರ ಹಡಗುಗಳಿಂದಲೇ ಒಯ್ಯಲ್ಪಡುವರು. (ಅವರು ಆ ಹಡಗುಗಳ ಬಗ್ಗೆ ಬಹು ಹೆಮ್ಮೆಯಿಂದಿದ್ದಾರೆ.)


ನೋಡು, ಅವರು ಬರುತ್ತಿದ್ದಾರೆ. ಅಶ್ವದಳಗಳು ಸಾಲುಸಾಲಾಗಿಯೂ ಬರುತ್ತಿವೆ” ಎಂದು ಕೂಗಿಕೊಂಡನು. ಆಗ ಒಬ್ಬ ದೂತನು, “ಬಾಬಿಲೋನಿಗೆ ಸೋಲಾಯಿತು. ಬಾಬಿಲೋನು ನೆಲಕ್ಕೆ ಅಪ್ಪಳಿಸಲ್ಪಟ್ಟಿತು. ಅದರ ದೇವ ದೇವತೆಯರ ವಿಗ್ರಹಗಳೆಲ್ಲಾ ನೆಲದ ಮೇಲೆ ಚೂರುಚೂರಾಗಿ ಬಿದ್ದಿವೆ” ಎಂದು ಹೇಳಿದನು.


ಯೆಹೋವನೂ ಆ ಸೈನ್ಯವೂ ದೂರದಿಂದ ಬರುತ್ತಿದ್ದಾರೆ. ದಿಗಂತದ ಆಚೆಯಿಂದ ಅವರು ಬರುತ್ತಿದ್ದಾರೆ. ತನ್ನ ಸಿಟ್ಟನ್ನು ಪ್ರದರ್ಶಿಸುವದಕೋಸ್ಕರ ಯೆಹೋವನು ಈ ಸೈನ್ಯವನ್ನು ಉಪಯೋಗಿಸುವನು. ಈ ಸೈನ್ಯವು ಇಡೀ ಭೂಮಿಯನ್ನು ಹಾಳು ಮಾಡುವುದು.”


ಉತ್ತರದ ಒಂದು ಜನಾಂಗವು ಬಾಬಿಲೋನಿನ ಮೇಲೆ ಧಾಳಿ ಮಾಡುವುದು. ಆ ಜನಾಂಗವು ಬಾಬಿಲೋನನ್ನು ಒಂದು ಬರಿದಾದ ಮರುಭೂಮಿಯನ್ನಾಗಿ ಮಾಡುವದು. ಅಲ್ಲಿ ಯಾರೂ ವಾಸಮಾಡಲಾರರು. ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.”


ಅಶ್ಶೂರದ ಅರಸನೇ, ನಿನ್ನ ವಿಷಯವಾಗಿ ಯೆಹೋವನು ಕೊಟ್ಟ ಆಜ್ಞೆ ಏನೆಂದರೆ, “ನಿನ್ನ ಹೆಸರನ್ನು ಧರಿಸುವ ಸಂತತಿಯವರು ಯಾರೂ ಇರುವುದಿಲ್ಲ. ನಿನ್ನ ಕೆತ್ತನೆಯ ವಿಗ್ರಹಗಳನ್ನು ನಾನು ನಾಶಮಾಡುವೆನು. ನಿನ್ನ ದೇವರುಗಳ ಆಲಯದಲ್ಲಿರುವ ಲೋಹದ ಬೊಂಬೆಗಳನ್ನು ಕೆಡವಿಬಿಡುವೆನು. ನಿನ್ನ ಅಂತ್ಯವು ಬೇಗನೆ ಬರಲಿರುವುದರಿಂದ ನಿನಗೆ ಸಮಾಧಿಯನ್ನು ತಯಾರುಮಾಡುತ್ತಿದ್ದೇನೆ.”


ಯೆಹೋವನ ಮಾತುಗಳು ಬೆಂಕಿಯಲ್ಲಿ ಏಳು ಸಲ ಶುದ್ಧೀಕರಿಸಿದ ಬೆಳ್ಳಿಯಂತೆ ಸತ್ಯವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು