Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:23 - ಪರಿಶುದ್ದ ಬೈಬಲ್‌

23 ಯೆಹೋವನು ಹೇಳುವುದೇನೆಂದರೆ: “ನಾನು ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾಯಿಸುವೆನು. ಆ ಸ್ಥಳವು ಜವುಗು ನೆಲವಾಗಿರುವುದು. ‘ನಾಶನವೆಂಬ ಪೊರಕೆಯಿಂದ’ ಅದನ್ನು ಗುಡಿಸುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಪರಿವರ್ತಿಸುವೆನಾ ನಾಡನು ಜವುಗು ನೆಲವನ್ನಾಗಿ, ಅಹುದು, ಮುಳ್ಳುಹಂದಿಗಳ ರೊಪ್ಪವನ್ನಾಗಿ, ಗುಡಿಸಿಬಿಡುವೆನು ನಾಶವೆಂಬ ಪೊರಕೆಯಿಂದ ಪೂರ್ತಿಯಾಗಿ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮತ್ತು ಆ ಪ್ರದೇಶವನ್ನು ಜವುಗುನೆಲವನ್ನಾಗಿಯೂ ಮುಳ್ಳುಹಂದಿಗೆ ಸೊತ್ತನ್ನಾಗಿಯೂ ಮಾಡಿ ನಾಶನವೆಂಬ ಬರಲಿನಿಂದ ಗುಡಿಸಿಬಿಡುವೆನು ಎಂದು ಸೇನಾಧೀಶ್ವರನಾದ ಯೆಹೋವನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಅದನ್ನು ಮುಳ್ಳುಹಂದಿಗಳ ನಿವಾಸವಾಗಿಯೂ, ಕೊಳಚೆ ಪ್ರದೇಶವನ್ನಾಗಿಯೂ ಪರಿವರ್ತಿಸುವೆನು. ನಾಶನದ ಕಸಬರಿಗೆಯಿಂದ ಅದನ್ನು ಗುಡಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:23
17 ತಿಳಿವುಗಳ ಹೋಲಿಕೆ  

ಆಮೇಲೆ ಆ ಹಾಳುಬಿದ್ದ ನಗರದಲ್ಲಿ ಕಾಡುಪ್ರಾಣಿಗಳೂ ಕುರಿಗಳೂ ವಾಸಮಾಡುವವು. ಕಾಗೆಗಳೂ ಗೂಬೆಗಳೂ ಪಟ್ಟಣದ ಸ್ತಂಭಗಳ ಮೇಲೆ ಕುಳಿತುಕೊಂಡು ಒಂದನ್ನೊಂದು ಕರೆಯುವವು. ಬಾಗಿಲ ಹೊಸ್ತಿಲಲ್ಲಿ ಕಾಗೆಗಳು ಕುಳಿತುಕೊಳ್ಳುವವು. ಕಪ್ಪುಪಕ್ಷಿಗಳು ನಿರ್ಜನವಾದ ಮನೆಗಳ ಮೇಲೆ ಕುಳಿತುಕೊಳ್ಳುವವು.


ನಂತರ ಎರಡನೆಯ ದೇವದೂತನು ಮೊದಲನೆಯ ದೇವದೂತನನ್ನು ಹಿಂಬಾಲಿಸುತ್ತಾ, “ಅವಳು ನಾಶವಾದಳು! ಬಾಬಿಲೋನ್ ಎಂಬ ನಗರಿಯು ನಾಶವಾದಳು! ಆಕೆಯು ಸಕಲ ಜನಾಂಗಗಳಿಗೆ ತನ್ನ ಜಾರತ್ವವೆಂಬ ಮತ್ತು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.


ಆದ್ದರಿಂದ ಯಾರೊಬ್ಬಾಮನೇ, ನಾನು ನಿನ್ನ ಕುಟುಂಬಕ್ಕೆ ಕೇಡುಗಳನ್ನು ಬರಮಾಡುತ್ತೇನೆ. ನಿನ್ನ ಕುಟುಂಬದ ಗಂಡಸರೆಲ್ಲರನ್ನು ನಾನು ಕೊಲ್ಲುತ್ತೇನೆ. ಬೆಂಕಿಯು ಕಸವನ್ನು ಸುಟ್ಟುಹಾಕುವಂತೆ ನಾನು ನಿನ್ನ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿಸುತ್ತೇನೆ.


ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು: “ಅವಳು ನಾಶವಾದಳು! ಬಾಬಿಲೋನೆಂಬ ಮಹಾನಗರಿಯು ನಾಶವಾದಳು! ಅವಳು (ಬಾಬಿಲೋನ್) ದೆವ್ವಗಳಿಗೆ ವಾಸಸ್ಥಾನವಾದಳು, ಸಕಲ ಅಶುದ್ಧಾತ್ಮಗಳಿಗೆ ನೆಲೆಯಾದಳು, ಅಶುದ್ಧವಾದ ಮತ್ತು ಅಸಹ್ಯವಾದ ಸಕಲ ಹಕ್ಕಿಗಳಿಗೆ ಆಶ್ರಯವಾದಳು.”


ನಾನು ಸಮಾರ್ಯದ ಮೇಲೆ ಚಾಚಿದ ಮಟ್ಟಗೋಲನ್ನೂ ಅಹಾಬನ ಕುಟುಂಬದ ಮೇಲಿಟ್ಟ ತೂಕದ ಗುಂಡನ್ನೂ ಜೆರುಸಲೇಮಿನ ಮೇಲೆ ಚಾಚುತ್ತೇನೆ. ಒಬ್ಬನು ಒಂದು ಪಾತ್ರೆಯನ್ನು ಒರೆಸಿ, ಅದನ್ನು ಕೆಳಮುಖವಾಗಿ ತಿರುಗಿಸುವಂತೆ ನಾನು ಜೆರುಸಲೇಮಿಗೆ ಮಾಡುತ್ತೇನೆ.


ಯೆಹೋವನ ದಿನವು ಹತ್ತಿರವಾಗಿದೆ. ಆದ್ದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು.


ಆದರೆ ಬಾಬಿಲೋನ್ ಇನ್ನು ಮುಂದೆ ಸುಂದರವಾಗಿರದು. ಮುಂದಿನ ದಿವಸಗಳಲ್ಲಿ, ಜನರು ಅಲ್ಲಿ ವಾಸಿಸರು. ಅರಬ್ಬಿಯರು ತಮ್ಮ ಗುಡಾರಗಳನ್ನು ಅಲ್ಲಿ ಹಾಕುವದಿಲ್ಲ. ಕುರುಬರು ತಮ್ಮ ಮಂದೆಯನ್ನು ಮೇಯಿಸಲು ಅಲ್ಲಿಗೆ ಬರುವದಿಲ್ಲ.


ಸಮುದ್ರದ ಮರುಭೂಮಿಗೆ ದುಃಖದ ಸಂದೇಶ: ನೆಗೆವ್ ಮೂಲಕ ಬೀಸುವ ಬಿರುಗಾಳಿಯಂತೆ ಮರುಭೂಮಿಯಿಂದಲೂ ಭಯಂಕರ ದೇಶದಿಂದಲೂ ಒಬ್ಬನು ದಂಡೆತ್ತಿ ಬರುವನು.


ಉತ್ತರದ ಒಂದು ಜನಾಂಗವು ಬಾಬಿಲೋನಿನ ಮೇಲೆ ಧಾಳಿ ಮಾಡುವುದು. ಆ ಜನಾಂಗವು ಬಾಬಿಲೋನನ್ನು ಒಂದು ಬರಿದಾದ ಮರುಭೂಮಿಯನ್ನಾಗಿ ಮಾಡುವದು. ಅಲ್ಲಿ ಯಾರೂ ವಾಸಮಾಡಲಾರರು. ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.”


“ಅತಿ ದೂರದಿಂದ ಬಾಬಿಲೋನಿನ ಮೇಲೆ ಬೀಳಲು ಬನ್ನಿ. ಅದರ ಧಾನ್ಯದ ಕಣಜಗಳನ್ನು ತೆರೆಯಿರಿ. ಬಾಬಿಲೋನನ್ನು ಸಂಪೂರ್ಣವಾಗಿ ನಾಶಮಾಡಿರಿ; ಯಾರನ್ನೂ ಜೀವಂತ ಉಳಿಸಬೇಡಿ. ಧಾನ್ಯಗಳ ಗುಡ್ಡೆಗಳ ಹಾಗೆ ಶವಗಳ ದೊಡ್ಡದೊಡ್ಡ ಗುಡ್ಡೆಗಳನ್ನು ಹಾಕಿರಿ.


ಆಮೇಲೆ ಹೀಗೆ ಹೇಳು: ‘ಯೆಹೋವನೇ, ಬಾಬಿಲೋನ್ ನಗರವನ್ನು ನಾಶಮಾಡುವೆನೆಂದು ನೀನು ಹೇಳಿರುವೆ. ಪ್ರಾಣಿಗಳು ಅಥವಾ ಮನುಷ್ಯರು ಯಾರೂ ಇಲ್ಲಿ ವಾಸಮಾಡದಂತೆ, ಇದು ಎಂದೆಂದಿಗೂ ಹಾಳುಬಿದ್ದ ಸ್ಥಳವಾಗಿರುವಂತೆ ಇದನ್ನು ನಾಶಮಾಡುವದಾಗಿ ಹೇಳಿರುವೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು