3 ಯೆಹೋವನು ನಿಮ್ಮ ಪ್ರಯಾಸವನ್ನು ನಿವಾರಿಸಿ ನಿಮ್ಮನ್ನು ಆದರಿಸುವನು. ಹಿಂದಿನ ದಿವಸಗಳಲ್ಲಿ ನೀವು ಗುಲಾಮರಾಗಿರುವಾಗ ಜನರು ನಿಮ್ಮನ್ನು ಬಹಳವಾಗಿ ಹಿಂಸಿಸಿದರು; ಬಲವಂತದಿಂದ ಕಷ್ಟಕರವಾದ ಕೆಲಸವನ್ನು ನಿಮ್ಮಿಂದ ಮಾಡಿಸಿದರು. ಆದರೆ ಯೆಹೋವನು ಆ ಸಂಕಟಗಳಿಂದ ನಿಮ್ಮನ್ನು ಪಾರುಮಾಡುವನು.
3 ಸಂಕಟದಿಂದಲೂ ನೋವುನಷ್ಟದಿಂದಲೂ ಕ್ರೂರವಾದ ಬಿಟ್ಟಿಜೀತದಿಂದಲೂ ಸರ್ವೇಶ್ವರ ನಿಮ್ಮನ್ನು ಬಿಡುಗಡೆಮಾಡುವರು. ಆ ದಿನದಂದು ಬಾಬಿಲೋನಿನ ಅರಸನನ್ನು ಮೂದಲಿಸಿ ಈ ಪದ್ಯವನ್ನು ನೀವು ಹಾಡಬೇಕು :
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.
“‘ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಅದನ್ನು ಹಗೆ ಮಾಡಿದರು. ಆ ರಾಜ್ಯಗಳಿಗೆ ಬಹು ದೊಡ್ಡ ಕಂಟಕವು ಬಂದೊದಗುವದು. ಆಗ ಹರಿತವಾದ ಮುಳ್ಳಾಗಲಿ ಮುಳ್ಳಿನ ಪೊದೆಗಳಾಗಲಿ ಇಸ್ರೇಲಿನ ಜನರನ್ನು ಬಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.’”
ಆದರೆ ದೇವರು ಅವರನ್ನು ಹಿಂದಕ್ಕೆ ಕರೆತರುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಆ ಜನರನ್ನು ನಿಶ್ಚಯವಾಗಿ ಕಾಪಾಡುವನು. ಭೂಮಿಗೆ ವಿಶ್ರಾಂತಿಯನ್ನು ಕೊಡುವ ಉದ್ದೇಶದಿಂದ ಆತನು ಅವರನ್ನು ಕಾಪಾಡುವನು. ಆದರೆ ಬಾಬಿಲೋನಿನಲ್ಲಿ ವಾಸಿಸುವ ಜನರಿಗೆ ಆತನು ವಿಶ್ರಾಂತಿಯನ್ನು ಕೊಡುವದಿಲ್ಲ.”
ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.
ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.
ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಚೀಯೋನ್ ಪರ್ವತವನ್ನು ನಾನು ಸತ್ಯವಾಗಿಯೂ ಪ್ರೀತಿಸುತ್ತೇನೆ. ನನಗೆ ನಂಬಿಗಸ್ತಳಾಗದಿದ್ದಾಗ ನಾನು ಆಕೆಯ ಮೇಲೆ ಕೋಪಗೊಳ್ಳುವಷ್ಟರವರೆಗೆ ಪ್ರೀತಿಸುತ್ತೇನೆ.”
ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”
ನಾನು ನಿಮಗೆ ಕೊಟ್ಟ ಭೂಮಿಯನ್ನು ನೀವು ಕಳೆದುಕೊಳ್ಳುವಿರಿ. ನಿಮ್ಮನ್ನು ನಿಮಗೆ ತಿಳಿಯದ ನಾಡಿನಲ್ಲಿ ನಿಮ್ಮ ಶತ್ರುಗಳ ದಾಸರನ್ನಾಗಿ ಮಾಡುವೆನು. ಏಕೆಂದರೆ ನನಗೆ ತುಂಬಾ ಕೋಪ ಬಂದಿದೆ. ನನ್ನ ಕೋಪವು ಉರಿಯುವ ಜ್ವಾಲೆಯಂತಿದೆ; ನೀವು ಅದರಲ್ಲಿ ಭಸ್ಮವಾಗಿ ಹೋಗುವಿರಿ.”
ಇದು ಸರ್ವಶಕ್ತನಾದ ಯೆಹೋವನ ನುಡಿ. “ಆ ಸಮಯದಲ್ಲಿ ನಾನು ಇಸ್ರೇಲರ ಮತ್ತು ಯೆಹೂದ್ಯರ ಹೆಗಲ ಮೇಲಿನ ನೊಗವನ್ನು ಮುರಿದುಬಿಡುವೆನು. ನಿಮಗೆ ಕಟ್ಟಿರುವ ಹಗ್ಗಗಳನ್ನು ಕಿತ್ತುಹಾಕುವೆನು. ಪರದೇಶದವರು ಮತ್ತೆಂದಿಗೂ ನನ್ನ ಜನರನ್ನು ದಾಸರನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.