Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:4 - ಪರಿಶುದ್ದ ಬೈಬಲ್‌

4 ಆ ಸಮಯದಲ್ಲಿ ಬಾಬಿಲೋನಿನ ಅರಸನ ಬಗ್ಗೆ ನೀವು ಹೀಗೆ ಹಾಡುವಿರಿ: ಅರಸನು ನಮ್ಮನ್ನಾಳುವಾಗ ಬಹಳ ಕ್ರೂರವಾಗಿದ್ದನು. ಆದರೆ ಈಗ ಅವನ ಆಳ್ವಿಕೆಯು ಅಂತ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: “ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಿದ್ದುಹೋದನಿದೊ ವಿಧ್ವಂಸಕ ಸದ್ದಿಲ್ಲದಾಗಿದೆ ಅವನ ಅಟ್ಟಹಾಸದ ಬಿಂಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಎತ್ತಿ ಹೇಳಬೇಕು - ಆಹಾ, ಹಿಂಸಕನು ಕೊನೆಗೊಂಡನು, ರೇಗಾಟವು ನಿಂತಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬಿಲೋನಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: ಹೀಗೆ ದಬ್ಬಾಳಿಕೆಗಾರನು ಕೊನೆಗೊಂಡನು. ಅವನ ಕೋಪ ಹೀಗೆ ಮುಗಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:4
35 ತಿಳಿವುಗಳ ಹೋಲಿಕೆ  

ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


ಅವರು ದುಃಖದಿಂದ ಗೋಳಾಡುತ್ತಾ ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ! ಅವಳು ನಯವಾದ ನಾರುಮಡಿಯನ್ನು, ಧೂಮ್ರವರ್ಣದ ಉಡುಪನ್ನು ಮತ್ತು ರಕ್ತಾಂಬರಗಳನ್ನು ಧರಿಸಿದ್ದಳು. ಅವಳು ಚಿನ್ನ, ರತ್ನ, ಮುತ್ತುಗಳಿಂದ ಶೋಭಿಸುತ್ತಿದ್ದಳು!


ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.


ಲೆಬನೋನಿನಲ್ಲಿ ಅನೇಕರನ್ನು ಗಾಯಗೊಳಿಸಿರುವೆ. ಅಲ್ಲಿ ಎಷ್ಟೋ ಪಶುಗಳನ್ನು ಅಪಹರಿಸಿರುವೆ. ಆ ದೇಶದಲ್ಲಿ ನೀನು ಮಾಡಿದ ದುಷ್ಕೃತ್ಯಗಳ ನಿಮಿತ್ತ, ಅದರಿಂದಾಗಿ ಅಲ್ಲಿ ಸತ್ತುಹೋದವರ ನಿಮಿತ್ತ ನೀನು ಭಯಗ್ರಸ್ತನಾಗಿರುವೆ. ಅಲ್ಲಿಯ ಪಟ್ಟಣಗಳಿಗೆ ನೀನು ಮಾಡಿದ ಹಾನಿ, ಜನರಿಗೆ ನೀನು ಕೊಟ್ಟ ಸಂಕಟದ ನಿಮಿತ್ತ ನಿನಗೆ ಹೆದರಿಕೆಯುಂಟಾಗಿದೆ.”


ದೇವರು ನಿನಗೆ ಅಧಿಕಾರವನ್ನು ಕೊಟ್ಟಿದ್ದಾನೆ. ಆ ದೇವರು ನಿನ್ನನ್ನು ಎಲ್ಲೆಡೆಯಲ್ಲಿರುವ ಜನರ ಮೇಲೆ, ಕಾಡುಪ್ರಾಣಿಗಳ ಮೇಲೆ, ಪಕ್ಷಿಗಳ ಮೇಲೆ ಆಳುವಂತೆ ಮಾಡಿದ್ದಾನೆ. ಅರಸನಾದ ನೆಬೂಕದ್ನೆಚ್ಚರನೇ, ನೀನೇ ಆ ಪ್ರತಿಮೆಯ ಬಂಗಾರದ ತಲೆ.


ನಿನ್ನ ಸುತ್ತಲೂ ಇರುವ ಜನಾಂಗಗಳು ನಿನಗೆ ಅವಮಾನ ಮಾಡಿ ಗೇಲಿ ಮಾಡುತ್ತವೆ. ನೀನು ಅವರಿಗೆ ಎಚ್ಚರಿಕೆಯಾಗಿಯೂ ಭಯೋತ್ಪಾದಕಕಾರಿಯಾಗಿಯೂ ಇರುವಿ. ನಾನು ನನ್ನ ಮಹಾಕೋಪದಿಂದ ನಿನ್ನನ್ನು ದಂಡಿಸಿದಾಗ ಇದು ಸಂಭವಿಸುವುದು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ.


ನೋಡು, ಬಂಗಾರವು ಹೇಗೆ ಕಪ್ಪಾಗಿದೆ. ನೋಡು, ಶುದ್ಧಬಂಗಾರವು ಹೇಗೆ ಬದಲಾಗಿದೆ. ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.


ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.


ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದರು. ‘ನಮ್ಮ ಮುಂದೆ ಸಾಷ್ಟಾಂಗಬೀಳು. ಆಗ ನಿನ್ನ ಮೇಲೆ ನಾವು ನಡೆಯುವೆವು’ ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿನ್ನನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀನು ಮಣ್ಣಿನ ಧೂಳೋ ಎಂಬಂತೆ ನಿನ್ನ ಬೆನ್ನಿನ ಮೇಲೆ ನಡೆದಾಡಿದರು. ನೀನು ಅವರಿಗೆ ನಡೆಯಲು ಬೀದಿಯಾದಿ.”


“ಆದ್ದರಿಂದ ಬಾಬಿಲೋನೇ, ಅಲ್ಲಿ ಸುಮ್ಮನೆ ಕುಳಿತಿರು. ಕಸ್ದೀಯರ ಕುಮಾರಿಯೇ ಕತ್ತಲೆಯೊಳಗೆ ಹೋಗಿ ಇರು, ಯಾಕೆಂದರೆ ನೀನು ‘ಜನಾಂಗಗಳ ರಾಣಿ’ ಎಂದು ಇನ್ನು ಮುಂದೆ ಕರೆಯಲ್ಪಡುವದಿಲ್ಲ.


ನಗರಗಳನ್ನು ನಾಶಮಾಡಿ ಭೂಮಿಯನ್ನು ಬೆಂಗಾಡನ್ನಾಗಿ ಮಾಡಿದವನು ಇವನೋ? ಯುದ್ಧದಲ್ಲಿ ಜನರನ್ನು ಸೆರೆಹಿಡಿದು ಅವರನ್ನು ಮನೆಗಳಿಗೆ ಬಿಡದೆ ಇದ್ದವನು ಇವನೋ?” ಎಂದು ಕೇಳುವರು.


ಬಾಬಿಲೋನಿನ ಅರಸನು ತನ್ನ ದುಷ್ಟತನದಲ್ಲಿ ಜನರನ್ನು ಹೊಡೆಯಿಸಿದನು. ಹೊಡೆಯುವದನ್ನು ಅವನು ನಿಲ್ಲಿಸಲೇ ಇಲ್ಲ. ಆ ದುಷ್ಟ ಅರಸನು ಜನರನ್ನು ಸಿಟ್ಟಿನಿಂದಲೇ ಆಳಿದನು. ಜನರನ್ನು ಹಿಂಸೆಪಡಿಸುವದನ್ನು ಅವನು ನಿಲ್ಲಿಸಲಿಲ್ಲ.


ಬಾಬಿಲೋನು ಸೊದೋಮ್ ಗೊಮೋರಗಳಂತೆ ನಾಶವಾಗುವದು. ದೇವರೇ ಇದನ್ನು ಮಾಡುವನು. ಆಗ ಅಲ್ಲಿ ಏನೂ ಉಳಿಯದು. “ಎಲ್ಲಾ ರಾಜ್ಯಗಳಿಗಿಂತ ಬಾಬಿಲೋನ್ ಬಹಳ ಸುಂದರವಾಗಿದೆ. ಬಾಬಿಲೋನಿಯರು ತಮ್ಮ ನಗರದ ಬಗ್ಗೆ ತುಂಬಾ ಹೆಚ್ಚಳಪಡುತ್ತಾರೆ.


ದೇವಾಲಯದೊಳಗಿದ್ದ ಎಲ್ಲಾ ವಸ್ತುಗಳನ್ನು ನೆಬೂಕದ್ನೆಚ್ಚರನು ಬಾಬಿಲೋನಿಗೆ ಸಾಗಿಸಿದನು. ದೇವಾಲಯದೊಳಗೂ ಅರಸನ ಬಳಿಯಲ್ಲಿಯೂ ಅಧಿಕಾರಿಗಳ ಬಳಿಯಲ್ಲಿಯೂ ಇದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ಬಾಬಿಲೋನಿಗೆ ಸಾಗಿಸಿದನು.


ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದುಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು.


ಆಮೋಚನ ಮಗನಾದ ಯೆಶಾಯನಿಗೆ ಬಾಬಿಲೋನಿನ ಬಗ್ಗೆ ದೊರೆತ ದೈವಸಂದೇಶ:


ಯೆಹೋವನು ದುಷ್ಟರ ಕೋಲನ್ನೂ ಅರಸನ ರಾಜದಂಡವನ್ನೂ ಮುರಿದುಹಾಕಿದನು. ಅವನ ಅಧಿಕಾರವನ್ನು ತೆಗೆದುಹಾಕಿದನು.


ತಮ್ಮ ಮನೆಯನ್ನು ಬಿಟ್ಟುಹೋಗುವಂತೆ ಮೋವಾಬಿನ ಆ ಜನರನ್ನು ಬಲವಂತ ಮಾಡಲಾಯಿತು. ಆದ್ದರಿಂದ ಅವರು ನಿಮ್ಮ ದೇಶದಲ್ಲಿ ವಾಸಿಸಲಿ. ಶತ್ರುಗಳ ಕೈಗೆ ಸಿಗದಂತೆ ಅವರನ್ನು ಅಡಗಿಸಿಡಿರಿ” ಎಂದು ಹೇಳುವರು. ದರೋಡೆಯು ನಿಂತುಹೋಗುವದು. ಶತ್ರುಗಳು ಸೋಲಿಸಲ್ಪಡುವರು. ಇತರರಿಗೆ ಕೇಡುಮಾಡುವವರು ದೇಶವನ್ನು ಬಿಟ್ಟುಹೋಗುವರು.


ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.


ನೀನು ಒಳ್ಳೆಯತನದಿಂದ ಕಟ್ಟಲ್ಪಡುವೆ. ಆದ್ದರಿಂದ ಎಲ್ಲಾ ದುಷ್ಟತ್ವಗಳಿಂದ ನೀನು ಸುರಕ್ಷಿತಳಾಗಿರುವೆ. ನೀನು ಯಾವುದಕ್ಕೂ ಹೆದರುವ ಅವಶ್ಯವಿಲ್ಲ. ಯಾವುದೂ ನಿನಗೆ ಹಾನಿಮಾಡದು.


ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.


ಮೋವಾಬಿನ ಸುತ್ತಮುತ್ತಲೂ ವಾಸಿಸುವ ನೀವೆಲ್ಲರು ಆ ದೇಶಕ್ಕಾಗಿ ಗೋಳಾಡಬೇಕು. ಮೋವಾಬ್ ಎಷ್ಟು ಸುಪ್ರಸಿದ್ಧವಾಗಿದೆ ಎಂಬುದು ನಿಮಗೆಲ್ಲ ಗೊತ್ತು. ಆದ್ದರಿಂದ ಅದಕ್ಕಾಗಿ ಗೋಳಾಡಿರಿ. ‘ರಾಜನ ಶಕ್ತಿಯು ಇಲ್ಲವಾಯಿತು. ಮೋವಾಬಿನ ಸಾಮರ್ಥ್ಯ ಮತ್ತು ಘನತೆ ಕಣ್ಮರೆಯಾದವು’ ಎಂದು ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು