Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 15:1 - ಪರಿಶುದ್ದ ಬೈಬಲ್‌

1 ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋವಾಬಿನ ಬಗ್ಗೆ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತು; ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೋವಾಬನ್ನು ಕುರಿತ ದೈವೋಕ್ತಿ ಇದು : “ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಆರ್ ಪಟ್ಟಣವು. ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಕೀರ್ ಪಟ್ಟಣವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೋವಾಬಿನ ವಿಷಯವಾದ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತಲ್ಲಾ! ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋವಾಬಿನ ವಿಷಯವಾದ ಪ್ರವಾದನೆ: ಆ ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು. ಹೌದು, ಆ ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 15:1
20 ತಿಳಿವುಗಳ ಹೋಲಿಕೆ  

ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.


ಹೆಷ್ಬೋನಿನಲ್ಲಿ ಬೆಂಕಿಯುಂಟಾಯಿತು. ಆ ಬೆಂಕಿ ಸೀಹೋನನ ಪಟ್ಟಣದಲ್ಲಿ ಉಂಟಾಯಿತು. ಆ ಬೆಂಕಿಯು ಮೋವಾಬಿನಲ್ಲಿರುವ ‘ಆರ್’ ಪಟ್ಟಣವನ್ನು ನಾಶಮಾಡಿತು. ಅದು ಅರ್ನೋನ್ ನದಿಯ ಬಳಿಯಲ್ಲಿರುವ ಬೆಟ್ಟಗಳನ್ನು ಸುಟ್ಟುಹಾಕಿತು.


ಏಕೆಂದರೆ ಯೆಹೋವನ ಬಲವು ಈ ಪರ್ವತದಲ್ಲಿದೆ. ಮೋವಾಬ್ ಸೋಲಿಸಲ್ಪಡುವದು. ಯೆಹೋವನು ವೈರಿಯನ್ನು ಹುಲ್ಲಿನಂತೆ ತುಳಿದುಬಿಡುವನು.


ನಾನು ಮೋವಾಬಿಗಾಗಿ ತುಂಬಾ ದುಃಖದಲ್ಲಿದ್ದೇನೆ. ನಾನು ಕೀರ್‌ಹೆರೆಸಿಗಾಗಿಯೂ ತುಂಬಾ ದುಃಖದಲ್ಲಿದ್ದೇನೆ. ಈ ನಗರಗಳಿಗಾಗಿ ನಾನು ಬಹಳವಾಗಿ ದುಃಖದಲ್ಲಿದ್ದೇನೆ.


ಆ ಜಂಬದ ಪರಿಣಾಮವಾಗಿ ಇಡೀ ಮೋವಾಬ್ ಪ್ರದೇಶ ಸಂಕಟಕ್ಕೊಳಗಾಗುವದು. ಮೋವಾಬಿನ ಜನರೆಲ್ಲಾ ಅಳುವರು. ಜನರು ತಮಗೆ ಹಿಂದೆ ಇದ್ದದ್ದೆಲ್ಲಾ ಬೇಕು ಎನ್ನುತ್ತಾ ದುಃಖಿಸುವರು. ಕೀರ್ ಹರೆಷೆಥಿನಲ್ಲಿ ತಯಾರಿಸಿದ ಅಂಜೂರದ ತಿಂಡಿ ಪದಾರ್ಥಗಳು ತಮಗೆ ಬೇಕು ಅನ್ನುವರು.


ಅರಸನಾದ ಆಹಾಜನು ಸತ್ತ ವರ್ಷದಲ್ಲಿ ಈ ದುಃಖದ ಸಂದೇಶವು ಕೊಡಲ್ಪಟ್ಟಿತು:


ನಾನು ಈಜಿಪ್ಟ್, ಯೆಹೂದ, ಎದೋಮ್, ಅಮ್ಮೋನ್, ಮೋವಾಬ್ ಜನಾಂಗಗಳ ಜನರ ಬಗ್ಗೆ ಮತ್ತು ಮರಳು ಪ್ರದೇಶದಲ್ಲಿ ವಾಸಮಾಡುತ್ತಿರುವ ಎಲ್ಲಾ ಜನಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎಲ್ಲಾ ದೇಶಗಳ ಜನರಿಗೆ ದೈಹಿಕವಾಗಿ ಸುನ್ನತಿ ಆಗಿದ್ದಿಲ್ಲ. ಆದರೆ ಇಸ್ರೇಲ್ ವಂಶದವರು ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ಅನ್ನುತ್ತಾನೆ.


ಆಮೋಚನ ಮಗನಾದ ಯೆಶಾಯನಿಗೆ ಬಾಬಿಲೋನಿನ ಬಗ್ಗೆ ದೊರೆತ ದೈವಸಂದೇಶ:


ಇಸ್ರೇಲರು ನಗರಗಳನ್ನು ಕೆಡವಿಹಾಕಿದರು. ಅವರು ಮೋವಾಬಿನ ಪ್ರತಿಯೊಂದು ಉತ್ತಮ ತೋಟದ ಕಡೆಗೆ ಕಲ್ಲುಗಳನ್ನೆಸೆದರು. ಅವರು ನೀರಿನ ಬುಗ್ಗೆಗಳನ್ನೆಲ್ಲ ನಿಲ್ಲಿಸಿದರು. ಅವರು ಉತ್ತಮವಾದ ಮರಗಳನ್ನು ಕಡಿದು ಉರುಳಿಸಿದರು. ಇಸ್ರೇಲರು ಕೀರ್ಹರೆಷೆತ್‌ನ ಮಾರ್ಗದುದ್ದಕ್ಕೂ ಹೋರಾಟ ಮಾಡಿದರು. ಸೈನಿಕರು ಕೀರ್ಹರೆಷೆತನ್ನು ಸುತ್ತುವರಿದು ಅದಕ್ಕೂ ಮುತ್ತಿಗೆ ಹಾಕಿದರು.


‘ಈ ಹೊತ್ತು ಆರ್ ಎಂಬ ಪಟ್ಟಣದ ಗಡಿಯನ್ನು ದಾಟಿ ಮೋವಾಬ್ ದೇಶವನ್ನು ಪ್ರವೇಶಿಸಬೇಕು.


“ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’”


ಯೆಹೋವನು ಜನರ ಉನ್ನತವಾದ ಗೋಡೆಗಳನ್ನೂ ಸುರಕ್ಷಿತ ಸ್ಥಳಗಳನ್ನೂ ನಾಶಮಾಡುವನು. ಯೆಹೋವನು ಅವುಗಳನ್ನೆಲ್ಲಾ ನೆಲಸಮಮಾಡಿ ಧೂಳಿಗೇ ತರುವನು.


ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.’”


ಮೋವಾಬಿನ ಜನರು ತುಂಬ ಹೆಚ್ಚಳಪಡುವವರೂ ಜಂಬದವರೂ ಎಂದು ನಾವು ಕೇಳಿದ್ದೇವೆ. ಇವರು ಹಿಂಸಕರಾಗಿದ್ದಾರೆ; ಬಡಾಯಿ ಕೊಚ್ಚುವವರಾಗಿದ್ದಾರೆ, ಅವರ ಬಡಾಯಿ ಕೇವಲ ಮಾತುಗಳಷ್ಟೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು