Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 15:4 - ಪರಿಶುದ್ದ ಬೈಬಲ್‌

4 ಹೆಷ್ಬೋನ್ ಮತ್ತು ಎಲೆಯಾಲೆಯಲ್ಲಿರುವ ಜನರು ಗಟ್ಟಿಯಾಗಿ ಅಳುತ್ತಿದ್ದಾರೆ. ದೂರದಲ್ಲಿರುವ ಯಹಜ್ ಪಟ್ಟಣದವರಿಗೆ ಅವರ ರೋಧನವು ಕೇಳಿಸುತ್ತದೆ. ಸೈನಿಕರೂ ಭಯಗೊಂಡಿದ್ದಾರೆ. ಹೆದರಿಕೆಯಿಂದ ನಡುಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಇವುಗಳ ರೋದನವು ಯಹಜಿನ ಪಟ್ಟಣದವರೆಗೂ ಕೇಳಿಸುತ್ತದೆ. ಇದರಿಂದ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುತ್ತಾರೆ; ಅವರ ಹೃದಯಗಳು ಭಯದಿಂದ ತತ್ತರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೂಗಿಕೊಳ್ಳುತಿಹವು ಹೆಷ್ಬೋನ್ ಎಲೆಯಾಲೆಗಳು, ಕೇಳಿಬರುತಿಹುದು ಯಹಚಿನವರೆಗೂ ಅವುಗಳ ರೋದನವು, ಕಿರಿಚಿಕೊಳ್ಳುತಿಹರು ಮೋವಾಬಿನ ಸೇನೆಯಾಳುಗಳು, ತತ್ತರಿಸಿ ಹೋಗಿಹವು ಅವರ ಗುಂಡಿಗೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ; ಇವುಗಳ ರೋದನವು ಯಹಜಿನವರೆಗೂ ಕೇಳಬರುತ್ತದೆ; ಇದರಿಂದ ಮೋವಾಬಿನ ಭಟರು ಕಿರಚಿಕೊಳ್ಳುತ್ತಾರೆ; ಅದರ ಆತ್ಮವು ತನ್ನೊಳಗೆ ತತ್ತರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಅವರ ಸ್ವರವು ಯಹಚ ಊರಿನವರೆಗೂ ಕೇಳಿಸುತ್ತದೆ. ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು. ಅವರ ಹೃದಯಗಳು ತತ್ತರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 15:4
19 ತಿಳಿವುಗಳ ಹೋಲಿಕೆ  

“ಹೆಷ್ಬೋನ್ ಮತ್ತು ಎಲೆಯಾಲೆ ಎಂಬ ಪಟ್ಟಣಗಳ ಜನರು ಅರಚಿಕೊಳ್ಳುತ್ತಿದ್ದಾರೆ. ಅವರ ಕಿರುಚಾಟವು ದೂರದ ಯಹಚಿನವರೆಗೂ ಕೇಳಿಬರುತ್ತಿದೆ. ಅವರ ಕಿರುಚಾಟವು ಚೋಯರಿನಿಂದ ದೂರದ ಹೊರೊನಯಿಮ್ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕೇಳಿಬರುತ್ತದೆ. ನಿಮ್ರೀಮ್ ಹಳ್ಳದ ನೀರು ಸಹ ಬತ್ತಿಹೋಗಿದೆ.


ಆ ದಿನಗಳಲ್ಲಿ ಜನರು ಸಾಯುವುದಕ್ಕೆ ಮಾರ್ಗವನ್ನು ಹುಡುಕಿದರೂ ಅವರಿಗೆ ಸಿಕ್ಕುವುದಿಲ್ಲ. ಅವರು ಮರಣವನ್ನು ಬಯಸಿದರೂ ಮರಣವು ಅವರಿಗೆ ಮರೆಯಾಗುತ್ತದೆ.


ಸೂರ್ಯನು ಆಕಾಶದಲ್ಲಿ ಏರಿ ಬಂದಾಗ ದೇವರು ಪೂರ್ವದ ಬಿಸಿಗಾಳಿ ಬೀಸುವಂತೆ ಮಾಡಿದನು. ಬಿಸಿಲಿನ ತಾಪವು ಯೋನನ ತಲೆಯ ಮೇಲೆ ಹೆಚ್ಚಾಯಿತು. ಯೋನನಿಗೆ ಶಾಖ ತಡೆಯಲಾಗಲಿಲ್ಲ. ಬಹಳ ಬಲಹೀನನಾದನು. ನನ್ನನ್ನು ಸಾಯಿಸು ಎಂದು ಯೋನನು ದೇವರನ್ನು ಬೇಡುತ್ತಾ, “ದೇವರೇ, ನಾನು ಬದುಕುವದಕ್ಕಿಂತ ಸಾಯುವುದೇ ಲೇಸು” ಅಂದನು.


ಆದ್ದರಿಂದ ನಾನು ಹೇಳುವುದೇನೆಂದರೆ ನನ್ನ ದೇವರೇ ನೀನು ನನ್ನನ್ನು ಕೊಂದುಬಿಡು. ನಾನು ಬದುಕುವದಕ್ಕಿಂತ ಸಾಯುವುದೇ ಮೇಲು.”


ನಾನು ತಾಯಿಯ ಗರ್ಭದಿಂದ ಏಕೆ ಹೊರಬರಬೇಕಿತ್ತು? ನಾನು ಕಷ್ಟವನ್ನು ಮತ್ತು ದುಃಖವನ್ನು ಕಂಡಿರುವೆನಷ್ಟೇ. ನನ್ನ ಜೀವನವು ನಾಚಿಕೆಯಲ್ಲಿಯೇ ಕೊನೆಗೊಳ್ಳುವುದು.


“ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.


ನಂತರ ಎಲೀಯನು ಮರಳುಗಾಡಿನಲ್ಲಿ ದಿನವೆಲ್ಲ ನಡೆದನು. ಎಲೀಯನು ಒಂದು ಪೊದೆಯ ಕೆಳಗೆ ಕುಳಿತುಕೊಂಡನು. ಅವನು ಸಾಯಲು ಇಚ್ಛಿಸಿ, “ಯೆಹೋವನೇ, ನನಗೆ ಜೀವನ ಸಾಕಾಗಿದೆ! ಸಾಯಲು ನನಗೆ ಅವಕಾಶ ಮಾಡು. ನಾನು ನನ್ನ ಪೂರ್ವಿಕರಿಗಿಂತಲೂ ಉತ್ತಮನೇನಲ್ಲ” ಎಂದು ಹೇಳಿದನು.


ಆದರೆ ಅಮೋರಿಯರ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ಪ್ರದೇಶದ ಸೀಮೆಯನ್ನು ದಾಟಲು ಬಿಡಲಿಲ್ಲ. ಸೀಹೋನನು ತನ್ನ ಜನರನ್ನೆಲ್ಲಾ ಸೇರಿಸಿ ಯಹಚದಲ್ಲಿ ಪಾಳೆಯಮಾಡಿಕೊಂಡನು. ಅಮೋರಿಯರು ಇಸ್ರೇಲರೊಂದಿಗೆ ಯುದ್ಧಮಾಡಿದರು.


ಯಹಚಾ, ಕೆದೇಮೋತ್, ಮೇಫಾಯತ್,


“ಅನಂತರ ಸೀಹೋನ್ ಅರಸನೂ ಅವನ ಜನರೂ ನಮ್ಮೊಂದಿಗೆ ಕಾದಾಡಲು ಯಹಜಿ ಎಂಬ ಸ್ಥಳಕ್ಕೆ ಬಂದರು.


ಆದರೆ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ದೇಶದ ಮೂಲಕ ಹಾದುಹೋಗಲು ಬಿಡಲಿಲ್ಲ. ಅರಸನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಮರುಭೂಮಿಯ ಕಡೆಗೆ ಹೊರಟನು. ಅವನು ಯಹಜ್ ಎಂಬಲ್ಲಿಗೆ ಬಂದನು; ಅಲ್ಲಿ ರಾಜನ ಸೈನ್ಯವು ಇಸ್ರೇಲರಿಗೆ ವಿರೋಧವಾಗಿ ಯುದ್ಧಮಾಡಿತು.


ನೀನು ಹೀಗೆಯೇ ನನಗೆ ಮಾಡುವುದಾಗಿದ್ದರೆ ಅದಕ್ಕೆ ಬದಲಾಗಿ ನನ್ನನ್ನು ಕೊಂದುಬಿಡು ಎಂದು ಬೇಡಿಕೊಳ್ಳುತ್ತೇನೆ. ಆಗ ನಾನು ಈ ದುರವಸ್ಥೆಗಳಿಂದ ವಿಮುಕ್ತನಾಗುವೆನು” ಎಂದು ಹೇಳಿದನು.


ನಂತರ ರೆಬೆಕ್ಕಳು ಇಸಾಕನಿಗೆ, “ನಿನ್ನ ಮಗನಾದ ಏಸಾವನು ಹಿತ್ತಿಯರ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದಾನೆ. ಆ ಸ್ತ್ರೀಯರಿಂದ ನನಗೆ ಸಾಕಾಗಿ ಹೋಗಿದೆ; ಯಾಕೆಂದರೆ ಅವರು ನಮ್ಮ ಜನರಲ್ಲ. ಯಾಕೋಬನು ಸಹ ಇಂಥ ಸ್ತ್ರೀಯರಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡರೆ ನಾನು ಸಾಯುವುದೇ ಮೇಲು” ಎಂದು ಹೇಳಿದಳು.


ಹೆಷ್ಬೋನಿನಲ್ಲಿ ಬೆಂಕಿಯುಂಟಾಯಿತು. ಆ ಬೆಂಕಿ ಸೀಹೋನನ ಪಟ್ಟಣದಲ್ಲಿ ಉಂಟಾಯಿತು. ಆ ಬೆಂಕಿಯು ಮೋವಾಬಿನಲ್ಲಿರುವ ‘ಆರ್’ ಪಟ್ಟಣವನ್ನು ನಾಶಮಾಡಿತು. ಅದು ಅರ್ನೋನ್ ನದಿಯ ಬಳಿಯಲ್ಲಿರುವ ಬೆಟ್ಟಗಳನ್ನು ಸುಟ್ಟುಹಾಕಿತು.


ಎತ್ತರದ ಪ್ರದೇಶದಲ್ಲಿರುವ ಜನರನ್ನು ಶಿಕ್ಷಿಸಲಾಗಿದೆ. ಹೋಲೋನ್, ಯಾಚಾ ಮತ್ತು ಮೆಫಾತ್ ಪಟ್ಟಣಗಳಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು