Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 15:5 - ಪರಿಶುದ್ದ ಬೈಬಲ್‌

5 ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ. ಪರ್ವತಮಾರ್ಗವಾಗಿ ಲೂಹೀಥ್ ಗೆ ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೊರೆಯಿಡುತ್ತಿದೆ ಎನ್ನ ಮನ ಮೋವಾಬಿನ ನಿಮಿತ್ತ, ಪಲಾಯನ ಗೈದವರು ಓಡುತಿಹರು ಚೋಯರತ್ತ, ಎಗ್ಲತ್ ಶೆಲಿಶೀಯ ದತ್ತ, ಹತ್ತಿಹರು ಲೂಹೀತ್ ದಿಣ್ಣೆಯನ್ನು ಅಳುತ್ತ, ಪಿಡಿದಿಹರು ಹೊರೋನಯಿಮಿನ ದಾರಿಯನು ಹಾಳಾದೆವೆಂದು ಧ್ವನಿಗೈಯುತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಹೃದಯವು ಮೋವಾಬಿನ ನಿವಿುತ್ತವಾಗಿ ಮೊರೆಯಿಡುತ್ತದೆ; ಅಲ್ಲಿಂದ ಪಲಾಯನವಾದವರು ಚೋಯರಿಗೂ ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀಥ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿವಿುನ ದಾರಿಯಲ್ಲಿ ನಡೆಯುತ್ತಾ ನಾಶನವಾದೆವಲ್ಲಾ ಎಂದು ದನಿಗೈಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗುತ್ತದೆ. ಅಲ್ಲಿಂದ ಪಲಾಯನವಾದವರು ಚೋಗರ್ ಕಡೆಗೂ ಎಗ್ಲತ್ ಶೆಲಿಶೀಯ ಕಡೆಗೂ ಓಡಿಹೋಗುವರು. ಲೂಹೀತ್ ದಿಣ್ಣೆಯನ್ನು ಅಳುತ್ತಾ ಹತ್ತುವರು. ಏಕೆಂದರೆ ಹೊರೊನಯಿಮ್ ಊರಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ದನಿಗೈಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 15:5
23 ತಿಳಿವುಗಳ ಹೋಲಿಕೆ  

ಮೋವಾಬಿನ ಜನರು ಲೂಹೀತಿನ ದಾರಿಹಿಡಿದು ಹೋಗುತ್ತಾರೆ. ಹೋಗುವಾಗ ಅವರು ಬಹಳವಾಗಿ ಗೋಳಾಡುತ್ತಾರೆ. ಅವರ ಕಷ್ಟ ಮತ್ತು ನೋವಿನ ಗೋಳಾಟವು ಆ ದಾರಿಯಿಂದ ಹೊರೊನಯಿಮ್ ಪಟ್ಟಣದವರೆಗೂ ಕೇಳಿಬರುತ್ತದೆ.


ವಿನಾಶನದ ಮೇಲೆ ವಿನಾಶವು ಬಂದು ಇಡೀ ದೇಶವೇ ಹಾಳಾಗಿದೆ. ಫಕ್ಕನೆ ನನ್ನ ಗುಡಾರಗಳು ಹಾಳಾದವು. ನನ್ನ ಪರದೆಗಳು ಹರಿದುಹೋದವು.


ಯೆಹೋವನೇ, ನಾನು ನಿನ್ನನ್ನು ಬಿಟ್ಟು ಓಡಿಹೋಗಲಿಲ್ಲ, ನಾನು ನಿನ್ನನ್ನು ಅನುಸರಿಸಿದೆನು. ನೀನು ಹೇಳಿದಂತೆ ನಾನು ಕುರುಬನಾದೆ. ಆ ಭಯಂಕರ ದಿನವು ಬರಲೆಂದು ನಾನು ಬಯಸಲಿಲ್ಲ. ಯೆಹೋವನೇ, ನಾನು ಹೇಳಿದ್ದೆಲ್ಲ ನಿನಗೆ ಗೊತ್ತಿದೆ. ಈಗ ನಡೆಯುತ್ತಿರುವುದನ್ನೆಲ್ಲಾ ನೀನು ನೋಡುತ್ತಿರುವೆ.


ಯೆಹೂದದ ಜನರಾದ ನೀವು ಯೆಹೋವನ ಮಾತನ್ನು ಕೇಳದಿದ್ದರೆ, ನಾನು ಗುಟ್ಟಾದ ಸ್ಥಳದಲ್ಲಿ ಅಳುವೆನು. ನಿಮ್ಮ ಅಹಂಕಾರವು ನನ್ನನ್ನು ಅಳುವ ಹಾಗೆ ಮಾಡುವುದು. ನಾನು ಬಹಳ ಗಟ್ಟಿಯಾಗಿ ಅಳುವೆನು, ನನ್ನ ಕಣ್ಣುಗಳಿಂದ ಕಣ್ಣೀರು ಹೊರಸೂಸುವುದು. ಏಕೆಂದರೆ ಯೆಹೋವನ ಮಂದೆಯು ಸೆರೆಹಿಡಿಯಲ್ಪಡುವುದು.


ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.


ಯೆಹೋವನು ಒಂದು ವಿಶೇಷ ದಿನವನ್ನು ಆರಿಸಿರುತ್ತಾನೆ. ಆ ದಿನದಲ್ಲಿ ಗಲಭೆ ಮತ್ತು ಗಲಿಬಿಲಿಯು ಇರುವದು. ದಿವ್ಯದರ್ಶನದ ಕಣಿವೆಯಲ್ಲಿ ಜನರು ಒಬ್ಬರನ್ನೊಬ್ಬರು ತುಳಿದುಕೊಂಡು ಅವರ ಮೇಲೆಯೇ ನಡೆದುಕೊಂಡು ಹೋಗುವರು. ನಗರದ ಕೋಟೆಗೋಡೆಗಳು ಕೆಡವಲ್ಪಡುವವು. ಕಣಿವೆಯಲ್ಲಿ ವಾಸಿಸುವ ಜನರು ಬೆಟ್ಟದ ಮೇಲಿನ ನಗರದ ಜನರಿಗೆ ಚೀರಾಡುವರು.


ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.”


ದಾವೀದನು ಆಲೀವ್ ಮರಗಳ ದಿಣ್ಣೆಯನ್ನೇರಿದನು. ಅವನು ಗೋಳಾಡುತ್ತಿದ್ದನು. ಅವನು ತಲೆಯ ಮೇಲೆ ಮುಸುಕೆಳೆದುಕೊಂಡು ಬರಿಗಾಲಿನಲ್ಲಿ ನಡೆದುಕೊಂಡು ಹೋದನು. ದಾವೀದನ ಜೊತೆಯಲ್ಲಿದ್ದ ಅವನ ಜನರೆಲ್ಲರೂ ತಲೆಯ ಮೇಲೆ ಮುಸುಕು ಹಾಕಿಕೊಂಡು ಗೋಳಾಡುತ್ತಾ ದಾವೀದನೊಂದಿಗೆ ಹೋದರು.


ಜನರೆಲ್ಲರೂ ಜೋರಾಗಿ ಅಳುತ್ತಿದ್ದರು. ರಾಜನಾದ ದಾವೀದನು ಕಿದ್ರೋನ್ ಹಳ್ಳವನ್ನು ದಾಟಿಹೋದನು. ನಂತರ ಜನರೆಲ್ಲರೂ ಅರಣ್ಯಕ್ಕೆ ಹೋದರು.


ಆದರೆ ಅಲ್ಲಿಗೆ ಬೇಗನೆ ಓಡಿಹೋಗು, ನೀನು ಆ ಊರಿಗೆ ಸುರಕ್ಷಿತವಾಗಿ ಸೇರುವತನಕ ನಾನು ಸೊದೋಮನ್ನು ನಾಶಗೊಳಿಸಲಾಗುವುದಿಲ್ಲ” ಎಂದು ಹೇಳಿದನು. (ಆ ಊರಿಗೆ ಚೋಗರ್ ಎಂದು ಕರೆಯಲಾಯಿತು; ಯಾಕೆಂದರೆ ಅದು ಚಿಕ್ಕ ಊರು.)


ಈ ರಾಜರುಗಳೆಲ್ಲ ಸೊದೋಮಿನ ರಾಜನಾದ ಬೆರಗನಿಗೂ ಗೊಮೋರದ ರಾಜನಾದ ಬಿರ್ಶಗನಿಗೂ ಅದ್ಮಾಹದ ರಾಜನಾದ ಶಿನಾಬನಿಗೂ ಚೆಬೋಯೀಮಿನ ರಾಜನಾದ ಶೆಮೇಬರನಿಗೂ ಚೋಗರ್ ಎಂಬ ಬೇಲಗಿನ ರಾಜನಿಗೂ ವಿರುದ್ಧವಾಗಿ ಯುದ್ಧಮಾಡಿದರು.


ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)


ಮೋವಾಬೇ, ಇದು ನಿನಗೆ ಕೆಟ್ಟದ್ದಾಗಿದೆ. ಕೆಮೋಷಿನ ಜನರೇ, ನೀವು ನಾಶವಾದಿರಿ. ಅವನ ಪುತ್ರರು ಓಡಿಹೋದರು. ಅಮೋರಿಯ ರಾಜನಾದ ಸೀಹೋನನು ಅವನ ಪುತ್ರಿಯರನ್ನು ಸೆರೆ ಒಯ್ದನು.


ಅವರು ತಮ್ಮ ಕಾಲುಗಳಿಂದ ಓಡುತ್ತಾ ದುಷ್ಕೃತ್ಯಗಳನ್ನು ಮಾಡುವರು; ನಿರಪರಾಧಿಗಳನ್ನು ಕೊಲ್ಲಲು ಆತುರಪಡುವರು. ಅವರ ಆಲೋಚನೆಯು ಕೆಟ್ಟದ್ದೇ. ದೊಂಬಿ, ಲೂಟಿಗಳೇ ಅವರ ಜೀವನಶೈಲಿಯಾಗಿವೆ.


ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. ನೋವಿನಿಂದ ನಾನು ಬಾಗಿಹೋಗಿದ್ದೇನೆ. ನಾನು ತುಂಬ ಹೆದರಿಕೊಂಡಿದ್ದೇನೆ. ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ. ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ.


ಹೊರೊನಯಿಮಿನಿಂದ ಬರುವ ಗೋಳಾಟದ ಧ್ವನಿಯನ್ನು ಕೇಳಿರಿ. ಅದು ವಿನಾಶದ ಮತ್ತು ಗೊಂದಲದ ಧ್ವನಿ.


ಬಾಬಿಲೋನ್ ಪತನವಾಗುವುದು. ಆ ಪತನವು ಭೂಮಂಡಲವನ್ನು ಅಲುಗಾಡಿಸುವುದು. ಎಲ್ಲಾ ಜನಾಂಗಗಳ ಜನರು ಬಾಬಿಲೋನಿನ ವಿನಾಶದ ವಿಷಯವನ್ನು ಕೇಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು