Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:8 - ಪರಿಶುದ್ದ ಬೈಬಲ್‌

8 ಹೆಷ್ಬೋನಿನ ತೋಟಗಳು ಮತ್ತು ಸಿಬ್ಮದ ದ್ರಾಕ್ಷಾಲತೆಗಳು ದ್ರಾಕ್ಷಿಯನ್ನು ಫಲಿಸಲಾರದ ಕಾರಣ ಜನರು ವ್ಯಸನದಿಂದಿರುವರು. ಶತ್ರುಸೈನ್ಯವು ಯೆಜ್ಜೇರಿನಿಂದ ಮರುಭೂಮಿಯವರೆಗೂ ಮತ್ತು ಸಮುದ್ರದವರೆಗೂ ಆವರಿಸಿಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೆಷ್ಬೋನಿನ ಭೂಮಿಯು, ಸಿಬ್ಮದ ದ್ರಾಕ್ಷಾಲತೆಯು ಒಣಗಿ ಹೋಗಿದೆ. ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ, ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷಿಗಳನ್ನು, ಜನಾಂಗಗಳ ಒಡೆಯರನ್ನು ತುಳಿದುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿಸ್ಸಾರವಾಗಿದೆ ಹೆಷ್ಬೋನಿನ ಹೊಲ, ಸಿಬ್ಮದ ದ್ರಾಕ್ಷಾಲತೆ, ಒಮ್ಮೆ ವ್ಯಾಪಿಸಿತ್ತು ಆ ರಾಜ್ಯದ್ರಾಕ್ಷಿ ಯಜ್ಜೇರಿನವರೆಗೆ, ಹಬ್ಬಿತ್ತದರ ಶಾಖೆ ಮರುಭೂಮಿಗೆ, ಸಮುದ್ರದಾಚೆ, ಮಾಡಿತು ನಾಡಿನೊಡೆಯರನು ಕುಡಿದು ಮತ್ತರಾಗುವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೆಷ್ಬೋನಿನ ಭೂವಿುಯೂ ಸಿಬ್ಮದ ದ್ರಾಕ್ಷಾಲತೆಯೂ ನಿಸ್ಸಾರವಾಗಿವೆ; ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷೆಗಳನ್ನು ಜನಾಂಗಗಳ ಒಡೆಯರು ಮುರಿದು ಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೆಷ್ಬೋನ್ ಊರಿನ ಹೊಲ ಮತ್ತು ಸಿಬ್ಮ ಊರಿನ ದ್ರಾಕ್ಷಿ ಸಹ ನಿಸ್ಸಾರವಾಗಿವೆ. ಇತರ ಜನರ ಪ್ರಭುಗಳು ವಿಶಾಲವಾದ ದ್ರಾಕ್ಷಿಗಿಡಗಳನ್ನು ತುಳಿದು ಹಾಕಿದ್ದಾರೆ, ಆ ದ್ರಾಕ್ಷಿಗಿಡಗಳು ಯಜ್ಜೇರ್ ಊರಿನವರೆಗೂ ವ್ಯಾಪಿಸಿ, ಮರುಭೂಮಿಯಲ್ಲಿ ಹರಡಿತ್ತು. ಅದರ ಕೊಂಬೆಗಳು ಹಬ್ಬಿ, ಸಮುದ್ರದವರೆಗೆ ವಿಶಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:8
13 ತಿಳಿವುಗಳ ಹೋಲಿಕೆ  

ಹೆಷ್ಬೋನ್ ಮತ್ತು ಎಲೆಯಾಲೆಯಲ್ಲಿರುವ ಜನರು ಗಟ್ಟಿಯಾಗಿ ಅಳುತ್ತಿದ್ದಾರೆ. ದೂರದಲ್ಲಿರುವ ಯಹಜ್ ಪಟ್ಟಣದವರಿಗೆ ಅವರ ರೋಧನವು ಕೇಳಿಸುತ್ತದೆ. ಸೈನಿಕರೂ ಭಯಗೊಂಡಿದ್ದಾರೆ. ಹೆದರಿಕೆಯಿಂದ ನಡುಗುತ್ತಿದ್ದಾರೆ.


ನಾನು ಯೆಜ್ಜೇರಿನ ಜನರೊಂದಿಗೆ ಯೆಜ್ಜೇರಿಗಾಗಿ ಪ್ರಲಾಪಿಸುವೆನು. ಸಿಬ್ಮವೇ, ನಿನ್ನ ದ್ರಾಕ್ಷಿಬಳ್ಳಿಗಳು ಸಮುದ್ರದವರೆಗೂ ಹಬ್ಬಿದ್ದವು; ಅವು ಯೆಜ್ಜೇರ್ ಪಟ್ಟಣದವರೆಗೂ ಚಾಚಿದ್ದವು. ಆದರೆ ವಿನಾಶಕನು ನಿನ್ನ ಹಣ್ಣುಗಳನ್ನು ಮತ್ತು ದ್ರಾಕ್ಷಿಗಳನ್ನು ಕಿತ್ತುಕೊಂಡಿದ್ದಾನೆ.


ದ್ರಾಕ್ಷಿಬಳ್ಳಿಗಳು ಸಾಯುತ್ತಲಿವೆ. ಹೊಸ ದ್ರಾಕ್ಷಾರಸವು ಹುಳಿಯಾಗಿದೆ. ಹಿಂದಿನ ಕಾಲದಲ್ಲಿ ಜನರು ಹರ್ಷಭರಿತರಾಗಿದ್ದರು. ಆದರೆ ಈಗ ಆ ಜನರು ದುಃಖದಲ್ಲಿರುತ್ತಾರೆ.


ದ್ರಾಕ್ಷಾಫಲವು ನಾಶವಾಗಿರುವದಕ್ಕಾಗಿ ನಾನು ಯೆಜ್ಜೇರ್ ಮತ್ತು ಸಿಬ್ಮದವರೊಂದಿಗೆ ಅಳುವೆನು. ಸುಗ್ಗಿ ಇಲ್ಲದಿರುವದಕ್ಕಾಗಿ ನಾನು ಹೆಷ್ಬೋನ್ ಮತ್ತು ಎಲೆಯಾಲೆಯ ಜನರೊಂದಿಗೆ ಅಳುವೆನು. ಬೇಸಿಗೆ ಕಾಲದ ಹಣ್ಣುಗಳಿರದು; ಹರ್ಷಧ್ವನಿಯೂ ಇರದು.


“ಆದರೆ ನಾನು ಅಶ್ಶೂರವನ್ನು ಉಪಯೋಗಿಸುತ್ತೇನೆಂದು ಅದಕ್ಕೆ ತಿಳಿಯದು. ಅಶ್ಶೂರಕ್ಕೆ ತಾನು ನನ್ನ ಕೈಯಲ್ಲಿರುವ ಒಂದು ಸಾಧನವೆಂದು ಗೊತ್ತಿರದು. ಅನೇಕಾನೇಕ ಜನಾಂಗಗಳನ್ನು ನಾಶಮಾಡಲು ಅಶ್ಶೂರವು ಬಯಸುತ್ತದೆ ಮತ್ತು ಅದಕ್ಕಾಗಿ ಯೋಜನೆಗಳನ್ನು ಮಾಡುತ್ತದೆ.


“ಗಿಲ್ಬೋವದ ಪರ್ವತಗಳಲ್ಲಿ ಮಂಜೂ ಮಳೆಯೂ ಸುರಿಯದಿರಲಿ. ಆ ಹೊಲಗಳಿಂದ ಕಾಣಿಕೆಯ ವಸ್ತುಗಳೂ ಬಾರದಿರಲಿ. ಅಲ್ಲಿನ ಶಕ್ತಿಸಂಪನ್ನರ ಗುರಾಣಿಗಳೆಲ್ಲ ತುಕ್ಕುಹಿಡಿದಿವೆ. ಸೌಲನ ಗುರಾಣಿಯು ಎಣ್ಣೆಯಿಲ್ಲದೆ ಬಿದ್ದಿದೆ.


ಮೋಶೆ ಅವರಿಗೆ ಯಗ್ಜೇರಿನ ಪ್ರದೇಶ ಮತ್ತು ಗಿಲ್ಯಾದಿನ ಎಲ್ಲ ಪಟ್ಟಣಗಳನ್ನೂ ರಬ್ಬಾದ ಹತ್ತಿರವಿದ್ದ ಅರೋಯೇರ್‌ವರೆಗಿನ ಅಮ್ಮೋನಿಯರ ಅರ್ಧಪ್ರದೇಶವನ್ನು ಕೊಟ್ಟನು.


ಕಣಿವೆಯಲ್ಲಿರುವ ಪ್ರದೇಶ, ಬೆಟ್ಟದ ಮೇಲಿನ ಕಿರ್ಯಾತಯಿಮ್, ಸಿಬ್ಮಾ, ಚೆರೆತ್‌ಶಹರ್,


“ಯೆಹೋವನು ಇಸ್ರೇಲರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ, ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬ ಪಟ್ಟಣಗಳ ಪ್ರದೇಶವು ಪಶುಗಳ ಮೇವಿಗೆ ಒಳ್ಳೆಯ ಸ್ಥಳವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ಪಶುಗಳು ಇವೆ.


ಮೋಶೆಯು ಯಗ್ಜೇರ್ ಪಟ್ಟಣದ ಗುಟ್ಟನ್ನು ತಿಳಿದುಕೊಂಡು ಬರುವುದಕ್ಕೆ ಕೆಲವು ಜನರನ್ನು ಕಳುಹಿಸಿದ ನಂತರ, ಇಸ್ರೇಲರು ಆ ಪಟ್ಟಣವನ್ನು ವಶಪಡಿಸಿಕೊಂಡರು. ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಇಸ್ರೇಲರು ಅಲ್ಲಿದ್ದ ಅಮೋರಿಯರನ್ನು ಓಡಿಸಿದರು.


ಅಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು