Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:11 - ಪರಿಶುದ್ದ ಬೈಬಲ್‌

11 ಒಂದು ದಿವಸ ಆ ಕೊಂಬೆಗಳನ್ನು ನೆಟ್ಟು ಅದು ಚಿಗುರುವಂತೆ ಮಾಡುವಿರಿ. ಮರುದಿವಸ ಅದು ಚಿಗುರುವದು. ಸುಗ್ಗಿಯ ಕಾಲದಲ್ಲಿ ನೀವು ದ್ರಾಕ್ಷಿತೋಟಕ್ಕೆ ಹೋದಾಗ ದ್ರಾಕ್ಷಿಬಳ್ಳಿಗಳೆಲ್ಲಾ ರೋಗದಿಂದ ಸತ್ತುಹೋಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬೀಜವನ್ನು ನೆಟ್ಟ ದಿನದಲ್ಲಿಯೇ ಬೇಲಿಕಟ್ಟಿ, ಮರುದಿನ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬೀಜವನ್ನು ನೆಟ್ಟ ದಿನವೇ ಬೇಲಿಕಟ್ಟಿದೆ. ಮಾರನೆಯ ದಿನವೇ ಅದು ಮೊಳೆಯುವಂತೆ ಮಾಡಿದೆ. ಆದರೂ ನಿನಗೆ ಸಿಗುವ ಸುಗ್ಗಿ, ವ್ಯಾಧಿ ಮತ್ತು ಅತೀವ ವ್ಯಥೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬೀಜವನ್ನು ನೆಟ್ಟ ದಿವಸದಲ್ಲಿಯೇ ಬೇಲಿಕಟ್ಟಿ, ಮಾರಣೆಯ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ; ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತವ್ಯಥೆಯ ದಿವಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಬೆಳೆಸಲು ಸಸಿಯನ್ನು ಹಾಕಿದ ದಿನದಲ್ಲಿ ಬೇಲಿಹಾಕಿ ಮತ್ತು ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆಯುವಂತೆ ಮಾಡಿದರೂ, ರೋಗದ ಹಾಗೂ ಗುಣಪಡಿಸಲಾರದ ಬೇನೆಯ ದಿನದಲ್ಲಿ ನಿನ್ನ ಸುಗ್ಗಿ ಏನೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:11
18 ತಿಳಿವುಗಳ ಹೋಲಿಕೆ  

ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.


ನಾನು ನೋಡಿರುವಂತೆ, ಅಧರ್ಮವನ್ನು ಮತ್ತು ಕೇಡನ್ನು ಬಿತ್ತುವವರು ಅದನ್ನೇ ಕೊಯ್ಯುವರು.


ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.


ಎಫ್ರಾಯೀಮ್ ಶಿಕ್ಷಿಸಲ್ಪಡುವುದು. ಅದರ ಬೇರು ಒಣಗುತ್ತಲಿದೆ. ಇನ್ನು ಅವರಿಗೆ ಮಕ್ಕಳಾಗದು. ಒಂದುವೇಳೆ ಮಕ್ಕಳಾದಲ್ಲಿ ಅವರ ದೇಹದಿಂದ ಬರುವ ಆ ಅಮೂಲ್ಯ ಶಿಶುವನ್ನು ನಾನು ಸಾಯಿಸುವೆನು.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ಹೊತ್ತಾರೆಯಲ್ಲಿ ಹುಲ್ಲು ಚಿಗುರತೊಡಗಿದರೂ ಸಾಯಂಕಾಲದೊಳಗೆ ಒಣಗಿಹೋಗುತ್ತದೆ.


ನೀವು ಕಷ್ಟಪಟ್ಟು ದುಡಿದರೂ ನಿಮಗೆ ಪ್ರಯೋಜನವಿರುವುದಿಲ್ಲ. ನಿಮ್ಮ ಭೂಮಿ ಯಾವ ಬೆಳೆಗಳನ್ನೂ ಫಲಿಸುವುದಿಲ್ಲ; ನಿಮ್ಮ ಮರಗಳೂ ಫಲಗಳನ್ನು ಬಿಡುವುದಿಲ್ಲ.


ನೀವು ದ್ರಾಕ್ಷಾತೋಟ ಮಾಡಿ ಪ್ರಯಾಸಪಟ್ಟು ಅದರಲ್ಲಿ ಕೆಲಸ ಮಾಡುವಿರಿ. ಆದರೆ ಅದರ ಫಲವನ್ನು ಹುಳಗಳು ತಿಂದುಬಿಡುವುದರಿಂದ ನೀವು ದ್ರಾಕ್ಷಿಯನ್ನು ಸಂಗ್ರಹಿಸುವುದಿಲ್ಲ; ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.


“ಆ ಸಮಯದಲ್ಲಿ ರೆಫಾಯೀಮ್ ಕಣಿವೆಯಲ್ಲಿ ಧಾನ್ಯದ ಸುಗ್ಗಿಯಂತಿರುವದು. ಕೆಲಸಗಾರರು ಹೊಲಗಳಲ್ಲಿ ಬೆಳೆಯನ್ನು ಕೊಯ್ದು ಧಾನ್ಯವನ್ನು ಶೇಖರಿಸುವರು.


ನಾವು ಬೀಜ ಬಿತ್ತಿದೆವು. ಆದರೆ ಅವು ಒಣಗಿ, ಸತ್ತು ಈಗ ನೆಲದ ಮೇಲೆ ಬಿದ್ದಿವೆ. ನಮ್ಮ ಗಿಡಗಳೆಲ್ಲಾ ಒಣಗಿ ಸತ್ತಿವೆ. ನಮ್ಮ ಉಗ್ರಾಣವು ಬರಿದಾಗಿದ್ದು ಬೀಳುತ್ತಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು