Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:4 - ಪರಿಶುದ್ದ ಬೈಬಲ್‌

4 “ಆ ಸಮಯದಲ್ಲಿ ಯಾಕೋಬಿನ ಸಂಪತ್ತೆಲ್ಲಾ ಕೊಳ್ಳೆಹೊಡೆಯಲ್ಪಡುವದು. ಯಾಕೋಬನು ರೋಗಗ್ರಸ್ಥನಾದವನಂತೆ ಬಲಹೀನನಾಗಿಯೂ ತೆಳುವಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಆ ದಿನದಲ್ಲಿ, ಯಾಕೋಬಿನ ಮಾಂಸದ ಕೊಬ್ಬು ಕರಗಿ, ಅದರ ಮಹಿಮೆಯೂ ಕ್ಷೀಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಆ ದಿನದಂದು ಇಸ್ರಯೇಲಿನ ಕೊಬ್ಬು ಕರಗುವುದು. ಅದರ ಮಹಿಮೆ ಕ್ಷಯಿಸಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ದಿನದಲ್ಲಿ ಯಾಕೋಬಿನ ಮಾಂಸದ ಕೊಬ್ಬು ಕರಗಿ ಅದರ ಮಹಿಮೆಯು ಕ್ಷೀಣವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ದಿವಸದಲ್ಲಿ ಯಾಕೋಬ್ಯರ ವೈಭವ ತಗ್ಗುವುದು. ಅವರ ಕೊಬ್ಬು ಕರಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:4
15 ತಿಳಿವುಗಳ ಹೋಲಿಕೆ  

ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು.


ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಕೊಬ್ಬಿದ ಕುರಿಗಳಿಗೂ ಬಲಹೀನ ಕುರಿಗಳಿಗೂ ನ್ಯಾಯತೀರಿಸುವೆನು.


ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ. ಈ ಸ್ತುತಿಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು. ಆದರೆ ನಾನು, “ಸಾಕು, ನನಗೆ ಸಾಕು. ನಾನು ನೋಡುವ ವಿಷಯಗಳು ಭಯಂಕರವಾಗಿವೆ. ದ್ರೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿಮಾಡುವರು.”


ಕೊಯ್ಯುವ ಕಾಲದಲ್ಲಿ ಜನರು ಆಲೀವ್ ಮರಗಳನ್ನು ಹೊಡೆದು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರದಲ್ಲಿ ಉಳಿಯುವವು. ಜನಾಂಗಗಳ ಮಧ್ಯದಲ್ಲಿ ದೇಶವೂ ಹೀಗೆಯೇ ಇರುವದು.


ನೀವು ಕೈದಿಗಳಂತೆ ತಲೆತಗ್ಗಿಸುವಿರಿ, ಸತ್ತಹೆಣಗಳಂತೆ ನೆಲದ ಮೇಲೆ ಬೀಳುವಿರಿ. ಆದರೆ ಅದರಿಂದ ನಿಮಗೆ ಪ್ರಯೋಜನವಾಗದು. ದೇವರು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ನಿಮ್ಮನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ಇದರರ್ಥವೇನೆಂದರೆ ಮನಸ್ಸೆಯು ಎಫ್ರಾಯೀಮನೊಡನೆ ಯುದ್ಧ ಮಾಡುವನು ಮತ್ತು ಎಫ್ರಾಯೀಮನು ಮನಸ್ಸೆಯೊಂದಿಗೆ ಯುದ್ಧಮಾಡುವನು. ಆಮೇಲೆ ಅವರಿಬ್ಬರೂ ಸೇರಿ ಯೆಹೂದದೊಂದಿಗೆ ಯುದ್ಧ ಮಾಡುವರು. ಯೆಹೋವನು ಇಸ್ರೇಲರ ಮೇಲೆ ಇನ್ನೂ ಕೋಪದಿಂದಿದ್ದಾನೆ; ತನ್ನ ಜನರನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ಯಾಕೋಬನ ಜನರಿಗೆ, ನನ್ನ ದೇವರಾದ ಯೆಹೋವನು ಆಜ್ಞೆಯನ್ನು ಕೊಟ್ಟಿದ್ದಾನೆ. ಇಸ್ರೇಲರಿಗೆ ವಿರುದ್ಧವಾಗಿರುವ ಈ ಆಜ್ಞೆಯು ನೆರವೇರಲ್ಪಡುವುದು.


ಬಳಿಕ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಲಕ್ಷಣವಾಗಿದ್ದ ಏಳು ಹಸುಗಳ ಪಕ್ಕದಲ್ಲಿ ನಿಂತುಕೊಂಡವು.


ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.


ಕೋಟೆಗೋಡೆಯುಳ್ಳ ಎಫ್ರಾಯೀಮನ ಪಟ್ಟಣಗಳು ನಾಶವಾಗುವವು. ದಮಸ್ಕದಲ್ಲಿರುವ ಸರ್ಕಾರವು ಕೊನೆಗೊಳ್ಳುವದು. ಇಸ್ರೇಲರಿಗೆ ಆದಂತೆಯೇ ಅರಾಮ್ಯರಿಗೂ ಆಗುವದು. ಪ್ರಮುಖ ನಗರವಾಸಿಗಳು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು” ಇದು ಸರ್ವಶಕ್ತನಾದ ಯೆಹೋವನ ನುಡಿ.


ಅಶ್ಶೂರದ ರಾಜನಾದ ಶಲ್ಮನೆಸರನು ಹೋಶೇಯನ ವಿರುದ್ಧ ಯುದ್ಧಕ್ಕೆ ಬಂದನು. ಶಲ್ಮನೆಸರನು ಹೋಶೇಯನನ್ನು ಸೋಲಿಸಿದನು. ಆದ್ದರಿಂದ ಹೋಶೇಯನು ಶಲ್ಮನೆಸರನಿಗೆ ಸೇವಕನಾಗಿ ಕಪ್ಪಕಾಣಿಕೆಯನ್ನು ಕೊಟ್ಟನು.


ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.


ಯೆಹೋವನು ಹೇಳುವುದೇನೆಂದರೆ, “ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಆ ಕುರಿಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೋ ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು