Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:5 - ಪರಿಶುದ್ದ ಬೈಬಲ್‌

5 “ಆ ಸಮಯದಲ್ಲಿ ರೆಫಾಯೀಮ್ ಕಣಿವೆಯಲ್ಲಿ ಧಾನ್ಯದ ಸುಗ್ಗಿಯಂತಿರುವದು. ಕೆಲಸಗಾರರು ಹೊಲಗಳಲ್ಲಿ ಬೆಳೆಯನ್ನು ಕೊಯ್ದು ಧಾನ್ಯವನ್ನು ಶೇಖರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೊಲದಲ್ಲಿ ಬೆಳೆ ಕೊಯ್ಯುವವನು ಪೈರುಗಳನ್ನು ಒಟ್ಟುಗೂಡಿಸಿ ಕೈಯಿಂದ ತೆನೆಗಳನ್ನು ಕತ್ತರಿಸುವ ಹಾಗಿರುವುದು. ಹೌದು, ರೆಫಾಯೀಮ್ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದು ಕೊಯ್ದ ಹೊಲದಂತಿರುವುದು, ತೆನೆಕತ್ತರಿಸಿದ ಹುಲ್ಲಿನಂತಿರುವುದು. ಕೂಳೆಯನ್ನೂ ಬಿಡದೆ ಆಯ್ದುಕೊಂಡ ರೆಫಾಯಿಮ್ ಕಣಿವೆಯಂತೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೊಲಕೊಯ್ಯುವವನು ದಂಟುಗಳನ್ನು ಒಟ್ಟುಗೂಡಿಸಿ ಕೈಯಿಂದ ತೆನೆಗಳನ್ನು ಕತ್ತರಿಸುವ ಹಾಗಿರುವದು; ಹೌದು, ರೆಫಾಯೀಮ್ ತಗ್ಗಿನಲ್ಲಿ ಹಕ್ಕಲನ್ನು ಆರಿಸುವಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ, ರೆಫಾಯಿಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:5
13 ತಿಳಿವುಗಳ ಹೋಲಿಕೆ  

ಸುಗ್ಗಿಕಾಲದವರೆಗೆ ಹಣಜಿಯೂ ಗೋಧಿಯೂ ಒಟ್ಟಿಗೆ ಬೆಳೆಯಲಿ. ಸುಗ್ಗಿಕಾಲದ ಸಮಯದಲ್ಲಿ ನಾನು ಕೆಲಸದವರಿಗೆ, ಮೊದಲು ಹಣಜಿಗಳನ್ನು ಕೂಡಿಸಿ ಅದನ್ನು ಸುಡುವುದಕ್ಕಾಗಿ ಹೊರೆ ಕಟ್ಟಿ, ನಂತರ ಗೋಧಿಯನ್ನು ಕೂಡಿಸಿ ಅದನ್ನು ನನ್ನ ಕಣಜಕ್ಕೆ ತನ್ನಿರಿ ಎಂದು ಹೇಳುವೆನು’ ಎಂದು ಉತ್ತರಕೊಟ್ಟನು.”


ಬೆಳೆಯು ಪಕ್ವವಾಗಿದೆ; ಕುಡುಗೋಲನ್ನು ತನ್ನಿರಿ. ಬನ್ನಿ, ದ್ರಾಕ್ಷಿಯನ್ನು ಆಲೆಯಲ್ಲಿ ತುಳಿಯಿರಿ, ಯಾಕೆಂದರೆ ಆಲೆಯು ತುಂಬಿಹೋಗಿದೆ. ಪಿಪಾಯಿಗಳು ತುಂಬಿತುಳುಕುತ್ತಿವೆ, ಯಾಕೆಂದರೆ ಅವರ ದುಷ್ಟತ್ವವು ವಿಪರೀತವಾಗಿದೆ!


ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ನಗರವು ಒಂದು ಕಣದಂತೆ ಇದೆ. ಸುಗ್ಗಿಕಾಲದಲ್ಲಿ ಜನರು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸುವದಕ್ಕಾಗಿ ಅದನ್ನು ಬಡಿಯುತ್ತಾರೆ. ಬಾಬಿಲೋನಿನ ಸುಗ್ಗಿಕಾಲ (ವಿನಾಶ ಕಾಲ) ಹತ್ತಿರವಾಗುತ್ತಲಿದೆ.


ಫಿಲಿಷ್ಟಿಯರು ಬಂದು ರೆಫಾಯೀಮ್ ಕಣಿವೆಯಲ್ಲಿ ಪಾಳೆಯವನ್ನು ಮಾಡಿದರು.


ಫಿಲಿಷ್ಟಿಯರು ಮತ್ತೆ ರೆಫಾಯೀಮ್ ಕಣಿವೆಗೆ ಬಂದು ಪಾಳೆಯವನ್ನು ಮಾಡಿದರು.


ಯೆಹೂದವೇ, ನಿನಗೆ ಸುಗ್ಗೀಕಾಲವು ನೇಮಕವಾಗಿದೆ, ಸೆರೆವಾಸದಿಂದ ನನ್ನ ಜನರನ್ನು ನಾನು ಹಿಂತಿರುಗಿ ಕರೆತಂದಾಗ ಅದು ಸಂಭವಿಸುವದು.


ಯೆರೆಮೀಯನೇ, ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: “‘ಹೊಲಗಳಲ್ಲಿ ಗೊಬ್ಬರ ಬಿದ್ದಂತೆ ಹೆಣಗಳು ಬೀಳುವವು. ಆ ಶವಗಳು ಹೊಲ ಕೊಯ್ಯುವವನ ಹಿಂದೆ ಯಾರೂ ಎತ್ತದೆ ಬಿದ್ದಿರುವ ಮೆದೆಗಳಂತೆ ಬಿದ್ದಿರುವವು.’”


ಒಂದು ದಿವಸ ಆ ಕೊಂಬೆಗಳನ್ನು ನೆಟ್ಟು ಅದು ಚಿಗುರುವಂತೆ ಮಾಡುವಿರಿ. ಮರುದಿವಸ ಅದು ಚಿಗುರುವದು. ಸುಗ್ಗಿಯ ಕಾಲದಲ್ಲಿ ನೀವು ದ್ರಾಕ್ಷಿತೋಟಕ್ಕೆ ಹೋದಾಗ ದ್ರಾಕ್ಷಿಬಳ್ಳಿಗಳೆಲ್ಲಾ ರೋಗದಿಂದ ಸತ್ತುಹೋಗಿರುವವು.


ಆ ಸೀಮೆಯು ಜೆರುಸಲೇಮ್ ಎಂದು ಕರೆಯಲ್ಪಟುವ ಯೆಬೂಸಿಯ ನಗರದ ದಕ್ಷಿಣ ಮಾರ್ಗವಾಗಿ ಬೆನ್‌ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಆ ಸ್ಧಳದಲ್ಲಿ ಸೀಮೆಯು ಹಿನ್ನೋಮ್ ಕಣಿವೆಯ ಪಶ್ಚಿಮದಿಕ್ಕಿನ ಬೆಟ್ಟದ ತುದಿಗೆ ಹೋಗುತ್ತದೆ. ಇದು ರೆಫಾಯೀಮ್ ಕಣಿವೆಯ ಉತ್ತರದ ಕೊನೆ.


ಅಲ್ಲಿಂದ ಆ ಮೇರೆಯು ರೆಫಾಯಿಮ್ ತಗ್ಗಿನ ಉತ್ತರದಲ್ಲಿರುವ ಬೆನ್‌ಹಿನ್ನೋಮ್ ತಗ್ಗಿನ ಹತ್ತಿರ ಆ ಬೆಟ್ಟದ ಬುಡಕ್ಕೆ ಇಳಿಯುತ್ತದೆ. ಆ ಮೇರೆಯು ಹಿನ್ನೋಮ್ ತಗ್ಗಿನಿಂದ ಯೆಬೂಸಿಯ ಪಟ್ಟಣದ ದಕ್ಷಿಣದವರೆಗೆ ಮುಂದುವರೆಯುತ್ತದೆ. ಅಲ್ಲಿಂದ ಅದು ಏನ್‌ರೋಗೆಲಿಗೆ ಬರುತ್ತದೆ.


ಹುಲ್ಲನ್ನು ಕತ್ತರಿಸಿದ ಮೇಲೆ ಹೊಸಹುಲ್ಲು ಬೆಳೆಯಲಾರಂಭಿಸುವುದು; ಒಣಹುಲ್ಲನ್ನು ಬೆಟ್ಟಗಳ ಮೇಲೆ ಸಂಗ್ರಹಿಸಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು