ಯೆಶಾಯ 17:7 - ಪರಿಶುದ್ದ ಬೈಬಲ್7 ಮಯಗಳಲ್ಲಿ ಜನರು ತಮ್ಮ ನಿರ್ಮಾಣಿಕನಾದ ದೇವರ ಕಡೆಗೆ ದೃಷ್ಟಿಸಿ ನೋಡುವರು. ಅವರ ಕಣ್ಣುಗಳು ಇಸ್ರೇಲಿನ ಪರಿಶುದ್ಧನನ್ನು ನೋಡುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7-8 ಆ ದಿನದಂದು ಜನರು ತಮ್ಮ ಕೈಯಿಂದ ಕಟ್ಟಿದ ಬಲಿಪೀಠಗಳನ್ನಾಗಲೀ, ಬೆರಳುಗಳಿಂದ ನಿರ್ಮಿಸಿದ ಆಶೇರಾ ದೇವತೆಯ ಸ್ತಂಭಗಳನ್ನಾಗಲೀ, ಧೂಪವೇದಿಕೆಗಳನ್ನಾಗಲೀ ಪೂಜಿಸದೆ ತಮ್ಮ ಸೃಷ್ಟಿಕರ್ತನನ್ನೇ ಲಕ್ಷಿಸಿ, ಇಸ್ರಯೇಲಿನ ಪರಮಪಾವನ ಸ್ವಾಮಿಯ ಕಡೆ ತಿರುಗಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ದಿನದಲ್ಲಿ ಜನರು ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆಯೂ ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸದೆಯೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ದಿನದಲ್ಲಿ ಜನರು ತಮ್ಮನ್ನು ಉಂಟುಮಾಡಿದವರ ಮೇಲೆ ದೃಷ್ಟಿಯಿಡುವರು ಮತ್ತು ಇಸ್ರಾಯೇಲಿನ ಪರಿಶುದ್ಧರ ಕಡೆಗೆ ತಿರುಗಿಕೊಳ್ಳುವರು. ಅಧ್ಯಾಯವನ್ನು ನೋಡಿ |
ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.
ಯೆಹೋವನು ಹೇಳುವುದೇನೆಂದರೆ, “ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಆ ಕುರಿಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೋ ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.”