Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:8 - ಪರಿಶುದ್ದ ಬೈಬಲ್‌

8 ಜನರು ತಮ್ಮ ಮಹಾಕಾರ್ಯಗಳ ಮೇಲೆ ನಂಬಿಕೆ ಇಡುವದಿಲ್ಲ. ಸುಳ್ಳುದೇವರುಗಳಿಗೆ, ತಾವು ಮಾಡಿದ ಬಲಿಪೀಠಗಳಿಗೆ, ಪೂಜಾಸ್ಥಳಗಳಿಗೆ ಅವರು ಹೋಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆ, ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ, ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತಮ್ಮ ಸೃಷ್ಟಿಕರ್ತನನ್ನೇ ಲಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೇ ಕಣ್ಣಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ತಮ್ಮ ಕೈಕೆಲಸವಾದ ಬಲಿಪೀಠಗಳನ್ನು ದೃಷ್ಟಿಸುವರು. ಬೆರಳುಗಳು ಮಾಡಿದ ಧೂಪಪೀಠಗಳನ್ನು, ಅಶೇರ ಸ್ತಂಭಗಳನ್ನು ಗೌರವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:8
29 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿಬಿಡುವಿರಿ.


ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡುವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು ಮಾಡಬೇಕಾಗುವದು? ಇತರ ದೇವತೆಗಳ ಪೂಜಾಸ್ಥಳಗಳೂ ವೇದಿಕೆಯ ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು.


ನಿಮ್ಮ ದೇಶವು ಕೈಯಿಂದ ಮಾಡಿದ ವಿಗ್ರಹಗಳಿಂದ ತುಂಬಿದ್ದು ಜನರು ಅವುಗಳನ್ನು ಆರಾಧಿಸುತ್ತಾರೆ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು.


ಲೋಕದೊಳಗಿರುವ ಎಲ್ಲಾ ಮನುಷ್ಯರನ್ನೂ ಪ್ರಾಣಿಗಳನ್ನೂ ಆಕಾಶದಲ್ಲಿರುವ ಎಲ್ಲಾ ಪಕ್ಷಿಗಳನ್ನೂ ನೀರಿನಲ್ಲಿರುವ ಎಲ್ಲಾ ಮೀನುಗಳನ್ನೂ ನಾನು ನಾಶಮಾಡುವೆನು. ಎಲ್ಲಾ ದುಷ್ಟ ಜನರನ್ನೂ ಮತ್ತು ಅವರನ್ನು ಪಾಪಕ್ಕೆ ನಡಿಸುವ ಎಲ್ಲಾ ವಸ್ತುಗಳನ್ನೂ ನಾನು ನಾಶಮಾಡುವೆನು. ಭೂಮಿಯ ಮೇಲಿರುವ ಎಲ್ಲಾ ಜನರನ್ನು ನಿರ್ಮೂಲ ಮಾಡುವೆನು.” ಈ ವಿಷಯಗಳನ್ನು ಯೆಹೋವನು ತಿಳಿಸಿದನು.


“ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.”


ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


ಅವನು ಮರವನ್ನು ಕಡಿದು, ತನ್ನನ್ನು ಬೆಚ್ಚಗೆ ಮಾಡಲು ಅಗ್ಗಿಷ್ಟಿಕೆಗಾಗಿ ಉಪಯೋಗಿಸುತ್ತಾನೆ; ಸಣ್ಣಸಣ್ಣ ತುಂಡುಗಳನ್ನಾಗಿ ಮಾಡಿ ಆಹಾರವನ್ನು ಬೇಯಿಸುತ್ತಾನೆ; ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾನೆ. ರೊಟ್ಟಿಯನ್ನು ಸುಡುತ್ತಾನೆ; ಉಳಿದ ಮರದ ತುಂಡಿನಿಂದ ಒಂದು ವಿಗ್ರಹವನ್ನು ಕೆತ್ತುತ್ತಾನೆ. ಆ ವಿಗ್ರಹಕ್ಕೆ ದೇವರೆಂದು ಹೇಳುತ್ತಾನೆ; ಆ ದೇವರು ಮನುಷ್ಯನು ತಯಾರಿಸಿದ ವಿಗ್ರಹ. ಆದರೆ ಅವನು ಆ ವಿಗ್ರಹದ ಮುಂದೆ ಅಡ್ಡಬೀಳುವನು.


ಮುಂದಿನ ದಿವಸಗಳಲ್ಲಿ ಜನರು ತಾವು ಆರಾಧಿಸಲು ಆರಿಸಿಕೊಳ್ಳುವ ಓಕ್ ಮರಗಳಲ್ಲಿಯೂ ವಿಶೇಷವಾದ ಉದ್ಯಾನವನಗಳಲ್ಲಿಯೂ ನಾಚಿಕೆಪಡುವರು.


ಜನರು ಬಾಳ್ ದೇವರ ವಿಗ್ರಹಗಳನ್ನೂ ಯಜ್ಞವೇದಿಕೆಗಳನ್ನೂ ಯೋಷೀಯನ ಮುಂದೆಯೇ ಕೆಡವಿಹಾಕಿದರು. ಆಮೇಲೆ ಯೋಷೀಯನು ಉನ್ನತಸ್ಥಳದಲ್ಲಿದ್ದ ಧೂಪವೇದಿಕೆಯನ್ನು ಕೆಡವಿ ಹಾಕಿ, ವಿಗ್ರಹಗಳನ್ನೆಲ್ಲಾ ಒಡೆದು ಪುಡಿಮಾಡಿ ಬಾಳ್ ದೇವರ ಪೂಜಾರಿಗಳ ಸಮಾಧಿಯ ಮೇಲೆ ಚೆಲ್ಲಿದನು.


ಯೆಹೂದ ದೇಶದ ಪಟ್ಟಣಗಳಲ್ಲಿದ್ದ ಎಲ್ಲಾ ವಿಗ್ರಹಗಳನ್ನೂ ಪೂಜಾಸ್ಥಳಗಳನ್ನೂ ಕಿತ್ತುಹಾಕಿಸಿದನು. ಆತನ ಆಳ್ವಿಕೆಯಲ್ಲಿ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.


ಅವರ ವೇದಿಕೆಗಳನ್ನು ನಾಶಮಾಡಿರಿ. ಅವರು ಪೂಜಿಸುವ ಕಲ್ಲುಗಳನ್ನು ಒಡೆದು ಹಾಕಿರಿ. ಅವರ ವಿಗ್ರಹಗಳನ್ನು ಕಡಿದು ಹಾಕಿರಿ.


“ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು.


ನನ್ನ ಶತ್ರುಗಳು ಸಹಾಯಕ್ಕಾಗಿ ನೋಡಿದರು. ಆದರೆ ಅವರನ್ನು ರಕ್ಷಿಸಲು ಅಲ್ಲಿ ಯಾರೂ ಇರಲಿಲ್ಲ. ಅವರು ಯೆಹೋವನ ಕಡೆಗೂ ನೋಡಿದರು; ಆದರೆ ಆತನು ಅವರಿಗೆ ಉತ್ತರ ಕೊಡಲಿಲ್ಲ.


ಆಗ ಯಾಕೋಬನ ಮನೆತನದವರು, ಇಸ್ರೇಲರಲ್ಲಿ ಅಳಿದುಳಿದವರು, ತಮ್ಮನ್ನು ಹೊಡೆಯುವವರನ್ನು ಆಧಾರಮಾಡಿಕೊಳ್ಳದೆ ಇಸ್ರೇಲಿನ ಅತೀ ಪರಿಶುದ್ಧನಾದ ಯೆಹೋವನನ್ನೇ ಆಧಾರಮಾಡಿಕೊಳ್ಳುವರು.


ಆ ಸಮಯದಲ್ಲಿ ಕೋಟೆಗೋಡೆಗಳಿರುವ ಎಲ್ಲಾ ಪಟ್ಟಣಗಳು ನಿರ್ಜನವಾಗುವದು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳುವ ಕಾಲದಲ್ಲಿ ಹೇಗೆ ಅಡವಿಗಳಂತೆಯೂ ಬೆಟ್ಟಗಳಂತೆಯೂ ಇದ್ದವೋ ಅದೇ ರೀತಿಯಲ್ಲಿ ಇರುವವು. ಆ ಸಮಯದಲ್ಲಿ ಇಸ್ರೇಲರು ದೇಶದೊಳಗೆ ಪ್ರವೇಶಿಸುವಾಗ ಅಲ್ಲಿಯ ನಿವಾಸಿಗಳೆಲ್ಲರೂ ಓಡಿಹೋದರು. ಮುಂಬರುವ ದಿವಸಗಳಲ್ಲಿ ದೇಶವು ಮತ್ತೆ ನಿರ್ಜನವಾಗುವದು.


ಅಶ್ಶೂರದ ಅರಸರು ಆ ಜನಾಂಗಗಳ ದೇವರುಗಳನ್ನು ಸುಟ್ಟುಹಾಕಿದರು. ಆದರೆ ಆ ದೇವರುಗಳು ಸತ್ಯವಾದುವುಗಳಲ್ಲ. ಅವುಗಳು ಮನುಷ್ಯರು ಕಲ್ಲಿನಿಂದ ಮತ್ತು ಮರದಿಂದ ಕೆತ್ತಿದ ವಿಗ್ರಹಗಳಾಗಿದ್ದವು. ಆದ್ದರಿಂದ ಅಶ್ಶೂರದ ಅರಸರು ಅವುಗಳನ್ನು ನಾಶಮಾಡಲು ಸಾಧ್ಯವಾಯಿತು.


ಆ ದೇವರುಗಳೆಲ್ಲಾ ಶೂನ್ಯಕ್ಕಿಂತಲೂ ಕಡಿಮೆಯೇ. ಅವುಗಳು ಏನೂ ಮಾಡಲಾರವು. ಆ ಪ್ರತಿಮೆಗಳು ಸಂಪೂರ್ಣವಾಗಿ ಬೆಲೆಯಿಲ್ಲದವುಗಳಾಗಿವೆ. ಅವುಗಳು ಖಂಡಿತವಾಗಿಯೂ ನಿಷ್ಪ್ರಯೋಜಕವಾದವುಗಳಾಗಿವೆ.


ಅವರ ಮಕ್ಕಳು ಸುಳ್ಳುದೇವರುಗಳಿಗೆ ಅರ್ಪಿಸಿದ ಯಜ್ಞವೇದಿಕೆಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಅಶೇರಳಿಗೆ ಅರ್ಪಿಸಿದ ಮರದ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಸೊಂಪಾಗಿ ಬೆಳೆದ ಮರದ ಕೆಳಗೆ ಮತ್ತು ಬೆಟ್ಟಗಳ ಮೇಲೆ ಆ ವಸ್ತುಗಳನ್ನು ಜ್ಞಾಪಿಸಿಕೊಳ್ಳುವರು.


ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.


ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು