ಯೆಶಾಯ 18:7 - ಪರಿಶುದ್ದ ಬೈಬಲ್7 ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನಿಗೆ ವಿಶೇಷವಾದ ಕಾಣಿಕೆಯು ಸಮರ್ಪಿಸಲ್ಪಡುವದು. ಆ ಕಾಣಿಕೆಯು ಉನ್ನತವಾಗಿರುವ ಬಲಶಾಲಿಗಳಾದ ಜನರಿಂದ ಬರುವದು. ಎಲ್ಲಾ ದೇಶಗಳ ಜನರು ಈ ಉನ್ನತವಾದ ಈ ಬಲಿಷ್ಠರಿಗೆ ಹೆದರುವರು. ಅವರು ಬಲಾಢ್ಯ ಜನಾಂಗವಾಗಿದ್ದಾರೆ. ಅವರ ಜನಾಂಗವು ಇತರ ಜನಾಂಗಗಳನ್ನು ಸೋಲಿಸುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿದೆ. ಈ ಕಾಣಿಕೆಯನ್ನು ಚೀಯೋನ್ ಪರ್ವತದಲ್ಲಿರುವ ಯೆಹೋವನ ಸ್ಥಳಕ್ಕೆ ತರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಎತ್ತರವಾದ, ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾದ, ಪ್ರಬಲ ಆಕ್ರಮಣಕಾರಿಗಳಾದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರು ಸರ್ವೇಶ್ವರ ಸ್ವಾಮಿಯ ಹೆಸರಾಂತ ಸಿಯೋನ್ ಪರ್ವತಕ್ಕೆ ಬರುವರು. ಸೇನಾಧೀಶ್ವರ ಸರ್ವೇಶ್ವರ ಅವರಿಂದ ಕಾಣಿಕೆಗಳನ್ನು ಸ್ವೀಕರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಕಾಲದಲ್ಲಿ ಉನ್ನತರಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮಮಹತ್ತಿರುವ ಚೀಯೋನ್ ಪರ್ವತಕ್ಕೆ ಆತನಿಗೋಸ್ಕರ ಕಾಣಿಕೆಯನ್ನು ತರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಎತ್ತರವಾದ ಹಾಗೂ ನುಣುಪು ಚರ್ಮವುಳ್ಳ ಜನರಿಂದಲೂ, ಸರ್ವರಿಗೂ ಭಯಪ್ರಧರಾದ ಜನರಿಂದಲೂ, ವಿಚಿತ್ರ ಭಾಷೆಯಿಂದ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ಜನರಿಂದಲೂ ಸರ್ವಶಕ್ತರಾದ ಯೆಹೋವ ದೇವರಿಗೆ ಕಾಣಿಕೆಗಳು ತರಲಾಗುವುದು. ಹೌದು, ಸೇನಾಧೀಶ್ವರ ಯೆಹೋವ ದೇವರ ಹೆಸರುಳ್ಳ ಚೀಯೋನ್ ಪರ್ವತಕ್ಕೆ ಕಾಣಿಕೆಗಳು ತರಲಾಗುವುದು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.
ಆ ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ. ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು.