Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:16 - ಪರಿಶುದ್ದ ಬೈಬಲ್‌

16 ಆ ಸಮಯದಲ್ಲಿ ಈಜಿಪ್ಟಿನವರು ಭಯದಿಂದ ಕಂಗೆಟ್ಟ ಹೆಂಗಸರಂತಿರುವರು. ಅವರು ಸರ್ವಶಕ್ತನಾದವನಿಗೆ ಭಯಪಡುವರು. ಯೆಹೋವನು ಜನರನ್ನು ಶಿಕ್ಷಿಸಲು ತನ್ನ ಕೈಯನ್ನೆತ್ತುವನು. ಆಗ ಅವರೆಲ್ಲರೂ ಹೆದರಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ದಿನದಂದು ಈಜಿಪ್ಟಿನವರು ಹೆಂಗಸರಂತೆ ಅಂಜುಬುರುಕರಾಗುವರು; ಸೇನಾಧೀಶ್ವರ ಸರ್ವೇಶ್ವರ ತಮ್ಮನ್ನು ದಂಡಿಸಲು ಕೈಯೆತ್ತುವಾಗ ಅವರು ಭಯಪಟ್ಟು ನಡುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ದಿನದಲ್ಲಿ ಐಗುಪ್ತವು ಹೆಣ್ಣಾಗಿ ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಕೈಬೀಸುವದರಿಂದ ಭಯಪಟ್ಟು ನಡುಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ದಿನದಲ್ಲಿ ಈಜಿಪ್ಟಿನವರು ಹೆಂಗಸರ ಹಾಗೆ ಇರುವರು. ಸೇನಾಧೀಶ್ವರ ಯೆಹೋವ ದೇವರು ಅದರ ಮೇಲೆ ಎತ್ತಿದ ಕೈಯನ್ನು ಬೀಸುತ್ತಿರುವುದರಿಂದ ಅವರು ಹೆದರಿ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:16
18 ತಿಳಿವುಗಳ ಹೋಲಿಕೆ  

ನಿನೆವೆಯೇ, ನಿನ್ನ ಜನರೆಲ್ಲಾ ಹೆಂಗಸರಂತೆ, ವೈರಿ ಸೈನಿಕರು ಅವರನ್ನು ಹಿಡಿದುಕೊಳ್ಳಲು ತಯಾರಾಗಿದ್ದಾರೆ. ನಿನ್ನ ದೇಶದ ದ್ವಾರಗಳು, ವೈರಿಗಳು ಪ್ರವೇಶಿಸುವಂತೆ ಅಗಲವಾಗಿ ತೆರೆಯಲ್ಪಟ್ಟಿವೆ. ದ್ವಾರದ ಬಾಗಿಲಿನ ಅಡ್ಡಪಟ್ಟಿಯು ಬೆಂಕಿಯಿಂದ ಸುಟ್ಟಿರುತ್ತದೆ.


ಬಾಬಿಲೋನಿನ ಸೈನಿಕರು ಕಾದಾಡುವದನ್ನು ನಿಲ್ಲಿಸಿದ್ದಾರೆ. ಅವರು ತಮ್ಮ ಕೋಟೆಗಳಲ್ಲಿದ್ದಾರೆ. ಅವರ ಬಲ ನಷ್ಟವಾಗಿದೆ. ಅವರು ಭಯಪಟ್ಟ ಹೆಂಗಸಿನಂತಾಗಿದ್ದಾರೆ. ಬಾಬಿಲೋನಿನ ಮನೆಗಳು ಉರಿಯುತ್ತಿವೆ. ಅದರ ಬಾಗಿಲಿನ ಅಗುಳಿಗಳು ಮುರಿದುಹೋಗಿವೆ.


ಖಡ್ಗವೇ, ಬಾಬಿಲೋನಿನ ಕುದುರೆಗಳನ್ನು ಮತ್ತು ರಥಗಳನ್ನು ಧ್ವಂಸಮಾಡು! ಖಡ್ಗವೇ, ಪರದೇಶಗಳಿಂದ ಕರೆಸಿದ ಸೈನಿಕರನ್ನು ಕೊಂದುಹಾಕು! ಆ ಸೈನಿಕರು ಹೆದರಿದ ಹೆಂಗಸರಂತಾಗಿರುವರು. ಖಡ್ಗವೇ, ಬಾಬಿಲೋನಿನ ಭಂಡಾರಗಳನ್ನು ನಾಶಮಾಡು! ಆ ಐಶ್ವರ್ಯವು ಸೂರೆಗೊಳ್ಳುವುದು.


ಯೆಹೋವನು ಸಿಟ್ಟುಗೊಂಡು ಈಜಿಪ್ಟಿನ ಸಮುದ್ರವನ್ನು ವಿಂಗಡಿಸಿದನು. ಅದೇ ರೀತಿಯಲ್ಲಿ ಯೂಫ್ರೇಟೀಸ್ ನದಿಯ ಮೇಲೆ ತನ್ನ ಕೈಯನ್ನು ಚಾಚುವನು. ಆತನು ನದಿಯ ನೀರಿಗೆ ಹೊಡೆಯುವನು. ಆಗ ಅದು ಏಳು ಚಿಕ್ಕ ನದಿಗಳಾಗಿ ಹರಿಯುವುದು. ಆ ನದಿಗಳು ಆಳವಾಗಿರುವದಿಲ್ಲ. ಜನರು ತಮ್ಮ ಕೆರಗಳೊಂದಿಗೆ ದಾಟಬಹುದು.


ಬಾಬಿಲೋನಿನ ಜನರು ನನ್ನ ಜನರನ್ನು ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ನಾನು ಅವರನ್ನು ಹೊಡೆಯುವೆನು. ಅವರನ್ನು ನನ್ನ ಜನರ ಗುಲಾಮರನ್ನಾಗಿ ಮಾಡುವೆನು.” ಆಗ ಯೆಹೋವ ದೇವರು ನನ್ನನ್ನು ಕಳುಹಿಸಿದನೆಂಬುದು ನಿಮಗೆ ಗೊತ್ತಾಗುವದು.


ಈ ದಿವಸ ನೋಬಿನಲ್ಲಿ ಸೈನ್ಯವು ತಂಗುವದು. ಜೆರುಸಲೇಮಿನ ಪರ್ವತವಾಗಿರುವ ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಯುದ್ಧಮಾಡಲು ಸೈನ್ಯವು ಸಿದ್ಧವಾಗುವುದು.


“ಪ್ರಭುವು ತನ್ನ ಜನರಿಗೆ ನ್ಯಾಯತೀರ್ಪು ನೀಡುತ್ತಾನೆ” ಎಂದು ಸಹ ದೇವರು ಹೇಳಿದ್ದಾನೆ. ಜೀವಸ್ವರೂಪನಾದ ದೇವರ ಹಿಡಿತಕ್ಕೆ ಸಿಕ್ಕಿ ಬೀಳುವುದು ಪಾಪಿಗೆ ಭಯಂಕರವಾಗಿದೆ.


ಶತ್ರುವಿನಲ್ಲಿ ಒಬ್ಬನು ಬೆದರಿಸಿದರೆ ನಿಮ್ಮಲ್ಲಿರುವ ಸಾವಿರ ಮಂದಿ ಓಡುವರು. ಐದು ಮಂದಿ ವೈರಿಗಳು ಬೆದರಿಕೆ ಹಾಕಿದರೆ ನೀವೆಲ್ಲರೂ ಅವರ ಮುಂದಿನಿಂದ ಓಡಿಹೋಗುವಿರಿ. ಕೊನೆಗೆ ನಿಮ್ಮ ಸೈನ್ಯದಲ್ಲಿ ಉಳಿಯುವ ವಸ್ತು ಯಾವದೆಂದರೆ ಬೆಟ್ಟದ ಮೇಲೆ ನೆಟ್ಟಿರುವ ನಿಮ್ಮ ಧ್ವಜಸ್ತಂಭವೊಂದೇ.


ಭಯವು ಅವರನ್ನು ಪ್ರಸವವೇದನೆಯಂತೆ ಆವರಿಸಿಕೊಂಡಿತು.


ನಾನು ನಿಮ್ಮ ಬಳಿಗೆ ಬಂದಿದ್ದಾಗ ಬಲಹೀನನಾಗಿದ್ದೆನು; ಭಯದಿಂದ ನಡುಗುತ್ತಿದ್ದೆನು.


ಪ್ರಭುವಿನ ಭಯ ಎಂದರೇನೆಂಬುದು ನಮಗೆ ತಿಳಿದಿದೆ. ಆದ್ದರಿಂದ ಸತ್ಯವನ್ನು ಸ್ವೀಕರಿಸಿಕೊಳ್ಳುವಂತೆ ಜನರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲನು. ನೀವು ಸಹ ನಿಮ್ಮ ಹೃದಯಗಳಲ್ಲಿ ನಮ್ಮನ್ನು ತಿಳಿದುಕೊಂಡಿದ್ದೀರೆಂದು ನಂಬುತ್ತೇವೆ.


“ಬೋಳುಗುಡ್ಡದ ಮೇಲೆ ಧ್ವಜವನ್ನೆತ್ತಿರಿ. ಜನರನ್ನು ಕರೆಯಿರಿ; ಕೈಸನ್ನೆ ಮಾಡಿರಿ; ದ್ವಾರಗಳ ಮೂಲಕ ಪ್ರವೇಶಿಸಲು ಪ್ರಮುಖರಿಗೆ ಹೇಳಿರಿ.


ಈಜಿಪ್ಟಿನಲ್ಲೆಲ್ಲಾ ದೊಡ್ಡ ಗೋಳಾಟ ಉಂಟಾಗುವುದು, ಅಂಥ ಗೋಳಾಟ ಈವರೆಗೂ ಆಗಿಲ್ಲ; ಮುಂದೆಯೂ ಆಗುವುದಿಲ್ಲ.


ತೇಮಾನನೇ, ನಿನ್ನ ಯುದ್ಧವೀರರು ಭಯಪಡುವರು. ಏಸಾವಿನ ಪರ್ವತದಲ್ಲಿರುವ ಪ್ರತಿಯೊಬ್ಬನು ನಾಶವಾಗುವನು. ಎಷ್ಟೋ ಮಂದಿ ಹತರಾಗುವರು.


ಎಲ್ಲರೂ ಮೌನವಾಗಿರಿ. ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರಬರುತ್ತಿದ್ದಾನೆ.


ಇದು ಹಿಂದಿನ ಕಾಲದಲ್ಲಿ ದೇವರು ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದಂತೆ ಇರುವದು. ಆತನು ಸಮುದ್ರದ ತೆರೆಗಳನ್ನು ಬಡಿದು ಅದು ಇಬ್ಭಾಗವಾಗುವಂತೆ ಮಾಡಿದನು. ಜನರು ಸಂಕಟದ ಸಮುದ್ರದ ಮಧ್ಯದಲ್ಲಿ ದಾಟಿಹೋದರು. ಯೆಹೋವನು ಹೊಳೆಗಳನ್ನು ಬತ್ತಿಸಿಬಿಡುವನು. ಆತನು ಅಶ್ಯೂರ್ಯದ ಜಂಬವನ್ನೂ ಈಜಿಪ್ಟಿನ ಬಲವನ್ನೂ ಮುರಿಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು