Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:17 - ಪರಿಶುದ್ದ ಬೈಬಲ್‌

17 ಯೆಹೂದ ಪ್ರಾಂತ್ಯದವರೂ ಈಜಿಪ್ಟಿನಲ್ಲಿರುವವರೂ ಭಯಪಡಬೇಕಾಗಿದೆ. ಈಜಿಪ್ಟಿನಲ್ಲಿ ಯಾರೇ ಆಗಲಿ ಯೆಹೂದದ ಹೆಸರು ಕೇಳಿದಾಗ ಭಯಪಡುವರು. ಯಾಕೆಂದರೆ ಭಯಂಕರ ಘಟನೆಗಳು ಈಜಿಪ್ಟಿನಲ್ಲಿ ಸಂಭವಿಸುವಂತೆ ಸರ್ವಶಕ್ತನಾದ ಯೆಹೋವನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಐಗುಪ್ತವು ಬೆಚ್ಚಿಬೀಳುವುದಕ್ಕೆ ಯೆಹೂದ ದೇಶವೇ ಕಾರಣವಾಗುವುದು. ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜುದೇಯ ನಾಡು ಈಜಿಪ್ಟಿನವರಿಗೆ ಭಯಂಕರವಾಗಿರುವುದು. ಆ ನಾಡಿನ ಹೆಸರನ್ನು ಕೇಳಿದ್ದೇ ತಡ, ಪ್ರತಿಯೊಬ್ಬನೂ ಬೆಚ್ಚಿಬೀಳುವನು. ಪ್ರತಿಯೊಬ್ಬನೂ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಈಜಿಪ್ಟಿನ ವಿರುದ್ಧ ಮಾಡಿರುವ ಸಂಕಲ್ಪವನ್ನು ತಿಳಿದು ನಿಬ್ಬೆರಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತು ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈಜಿಪ್ಟ್ ಬೆಚ್ಚಿ ಬೀಳುವುದಕ್ಕೆ ಯೆಹೂದ ದೇಶವು ಕಾರಣವಾಗುವುದು, ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನು ಸೇನಾಧೀಶ್ವರ ಯೆಹೋವ ದೇವರು ಈಜಿಪ್ಟಿಗೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆಯನ್ನು ತಿಳಿದು ಬೆರಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:17
12 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಒಂದು ವಾಗ್ದಾನವನ್ನು ಮಾಡಿದ್ದಾನೆ. ಆತನು ಹೇಳುವುದೇನೆಂದರೆ: “ನಾನು ಯೋಚಿಸಿದಂತೆಯೇ ಇವೆಲ್ಲವೂ ನೆರವೇರುವುದು ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ಈಜಿಪ್ಟಿನ ರಾಜನಾದ ಫರೋಹನು ಸಹ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆ. ಅವನ ಅಧಿಕಾರಿಗಳೂ ಪ್ರಮುಖ ನಾಯಕರೂ ಅವನ ಎಲ್ಲಾ ಜನರೂ ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ಎಲ್ಲಾ ಪಟ್ಟಣಗಳ ವಿರುದ್ಧ ದಂಡೆತ್ತಿ ಬಂದು ಅವುಗಳನ್ನೆಲ್ಲ ಸೋಲಿಸಿದನು.


“‘ಆ ಸಮಯದಲ್ಲಿ, ನಾನು ಸಂದೇಶವಾಹಕರನ್ನು ಕಳುಹಿಸುವೆನು. ಅವರು ಇಥಿಯೋಪ್ಯಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿ ಕೆಟ್ಟ ಸುದ್ದಿಯನ್ನು ಒಯ್ಯುವರು. ಇಥಿಯೋಪ್ಯ ಈಗ ಸುರಕ್ಷಿತವಾಗಿರುವುದು. ಆದರೆ ಈಜಿಪ್ಟ್ ಶಿಕ್ಷಿಸಲ್ಪಟ್ಟಾಗ ಇಥಿಯೋಪ್ಯದ ಜನರು ಭಯದಿಂದ ನಡುಗುವರು. ಆ ಸಮಯವು ಬರುವದು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು