ಯೆಶಾಯ 19:21 - ಪರಿಶುದ್ದ ಬೈಬಲ್21 ಆ ಸಮಯದಲ್ಲಿ ಈಜಿಪ್ಟಿನ ಜನರು ಯೆಹೋವನನ್ನು ನಿಜವಾಗಿಯೂ ಅರಿತುಕೊಳ್ಳುವರು. ಅವರು ದೇವರನ್ನು ಪ್ರೀತಿಸುವರು. ಅವರು ಯೆಹೋವನನ್ನು ಸೇವಿಸಿ ಅನೇಕ ಯಜ್ಞಗಳನ್ನು ಸಮರ್ಪಿಸುವರು. ಯೆಹೋವನಿಗೆ ಹರಕೆ ಹೊತ್ತು ಸಲ್ಲಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸರ್ವೇಶ್ವರ ಸ್ವಾಮಿಯೇ ಈಜಿಪ್ಟಿನವರಿಗೆ ತಿಳಿಯಪಡಿಸುವರು. ಜನರು ಸ್ವಾಮಿಯನ್ನು ಅರಿತುಕೊಂಡು, ಯಜ್ಞನೈವೇದ್ಯಗಳನ್ನು ಕಾಣಿಕೆಯಾಗಿ ಸಮರ್ಪಿಸುವರು, ಹೊತ್ತ ಹರಕೆಗಳನ್ನು ನೆರವೇರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮತ್ತು ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು; ಹೌದು, ಯಜ್ಞನೈವೇದ್ಯಗಳ ಸೇವೆಯನ್ನಾಚರಿಸಿ ಯೆಹೋವನಿಗೆ ಹರಕೆಮಾಡಿಕೊಂಡು ಅದನ್ನು ನೆರವೇರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೆಹೋವ ದೇವರು ತಮ್ಮನ್ನು ಈಜಿಪ್ಟಿನವರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವ ದೇವರನ್ನು ತಿಳಿದುಕೊಳ್ಳುವರು ಮತ್ತು ಬಲಿಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಯೆಹೋವ ದೇವರಿಗೆ ಪ್ರಮಾಣ ಮಾಡಿಕೊಂಡು ನೆರವೇರಿಸುವರು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.