Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:23 - ಪರಿಶುದ್ದ ಬೈಬಲ್‌

23 ಆ ಸಮಯದಲ್ಲಿ ಈಜಿಪ್ಟಿನಿಂದ ಅಶ್ಶೂರದವರೆಗೆ ಹೆದ್ದಾರಿ ಇರುವುದು. ಆಗ ಅಶ್ಶೂರದವರು ಈಜಿಪ್ಟಿಗೂ, ಈಜಿಪ್ಟಿನವರು ಅಶ್ಶೂರಕ್ಕೂ ಪ್ರಯಾಣ ಮಾಡುವರು. ಈಜಿಪ್ಟಿನವರು ಅಶ್ಶೂರದವರೊಟ್ಟಿಗೆ ಕೆಲಸ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆ ದಿನದಂದು ಈಜಿಪ್ಟ್ ಮತ್ತು ಅಸ್ಸೀರಿಯರ ನಡುವೆ ಹೆದ್ದಾರಿ ಇರುವುದು. ಅಸ್ಸೀರಿಯದವರು ಈಜಿಪ್ಟಿಗೂ ಈಜಿಪ್ಟಿನವರು ಅಸ್ಸೀರಿಯಕ್ಕೂ ಸಂಚಾರಮಾಡುವರು. ಈಜಿಪ್ಟಿನವರು ಅಸ್ಸೀರಿಯದವರೊಡನೆ ಸೇರಿ ಸರ್ವೇಶ್ವರ ಸ್ವಾಮಿಯನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ದಿನದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ರಾಜಮಾರ್ಗವಿರುವದು; ಅಶ್ಶೂರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರಕ್ಕೂ ಹೋಗಿಬರುತ್ತಿರುವರು; ಐಗುಪ್ತ್ಯರು ಅಶ್ಶೂರ್ಯರೊಂದಿಗೆ [ಯೆಹೋವನನ್ನು] ಸೇವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆ ದಿವಸದಲ್ಲಿ ಈಜಿಪ್ಟಿನಿಂದ ಅಸ್ಸೀರಿಯಕ್ಕೆ ಹೋಗುವ ಒಂದು ರಾಜ ಮಾರ್ಗವಿರುವುದು. ಅಸ್ಸೀರಿಯದವರು ಈಜಿಪ್ಟಿಗೂ, ಈಜಿಪ್ಟಿನವರು ಅಸ್ಸೀರಿಯಕ್ಕೂ ಹೋಗಿ ಬರುವರು. ಈಜಿಪ್ಟಿನವರು, ಅಸ್ಸೀರಿಯರೊಂದಿಗೆ ಯೆಹೋವ ದೇವರನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:23
15 ತಿಳಿವುಗಳ ಹೋಲಿಕೆ  

ಅಳಿದುಳಿದ ದೇವಜನರು ಅಶ್ಶೂರ ದೇಶವನ್ನು ಬಿಡಲು ಒಂದು ಮಾರ್ಗವಿರುವದು. ಅದು ದೇವರು ತನ್ನ ಜನರನ್ನು ಈಜಿಪ್ಟಿನಿಂದ ಬಿಡಿಸಿದ ಕಾಲದಂತಿರುವುದು.


ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಆ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು.


ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. ಇನ್ನು ಕೆಲವರು ಫಿಲಿಷ್ಟಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ.


ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ಆ ಸಮಯದಲ್ಲಿ ಇಸ್ರೇಲ್, ಅಶ್ಶೂರ ಮತ್ತು ಈಜಿಪ್ಟು ಒಟ್ಟಾಗಿ ಸೇರಿ ದೇಶವನ್ನು ನಿಯಂತ್ರಿಸುವರು. ಇದು ದೇಶಕ್ಕೆ ಆಶೀರ್ವಾದದಾಯಕವಾಗಿರುವದು.


ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.


ನಾನು ನನ್ನ ಜನರಿಗೊಂದು ಮಾರ್ಗ ಸಿದ್ಧಮಾಡುವೆನು. ಬೆಟ್ಟವು ನೆಲದ ಮಟ್ಟಕ್ಕೆ ಇಳಿಯುವುದು; ತಗ್ಗು ಏರಿಸಲ್ಪಡುವದು.


ದ್ವಾರಗಳೊಳಗಿಂದ ಬನ್ನಿರಿ. ಜನರು ಬರುವದಕ್ಕೆ ದಾರಿಯನ್ನು ಸರಿಮಾಡಿರಿ. ರಸ್ತೆಯನ್ನು ಸಿದ್ಧಪಡಿಸಿರಿ. ಅದರ ಮೇಲಿರುವ ಕಲ್ಲುಗಳನ್ನು ತೆಗೆದುಬಿಡಿರಿ. ಜನಾಂಗಗಳು ಕಾಣುವಂತೆ ಧ್ವಜವನ್ನು ಏರಿಸಿರಿ.


ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.”


ನಿನ್ನ ಜನರು ದೇಶಕ್ಕೆ ಹಿಂತಿರುಗುವರು. ಅವರು ಅಶ್ಶೂರದಿಂದಲೂ ಈಜಿಪ್ಟ್ ನಗರಗಳಿಂದಲೂ ಹಿಂದೆ ಬರುವರು. ನಿನ್ನ ಜನರು ಈಜಿಪ್ಟಿನಿಂದಲೂ ಯೂಫ್ರೇಟೀಸ್ ನದಿಯ ಆಚೆಕಡೆಯಿಂದಲೂ ಬರುವರು. ಪಶ್ಟಿಮದ ಸಮುದ್ರದ ಕಡೆಯಿಂದ ಬರುವರು. ಪೂರ್ವದ ಪರ್ವತಗಳ ಕಡೆಯಿಂದ ಬರುವರು.


ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು