Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:10 - ಪರಿಶುದ್ದ ಬೈಬಲ್‌

10 ಬಂಡೆಗಳ ಹಿಂಬದಿಯಲ್ಲಿಯೂ ಹೊಲಸಿನಲ್ಲಿಯೂ ಅವಿತುಕೊಳ್ಳಿರಿ. ನೀವು ಯೆಹೋವನಿಗೆ ಭಯಪಟ್ಟು ಆತನ ಮಹಾಶಕ್ತಿಗೆ ಮರೆಯಾಗಿ ಅವಿತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸ್ವಾಮಿಯ ಭಯಂಕರ ಕೋಪಕ್ಕೆ ಅಂಜಿ, ಆ ಮಹೋನ್ನತನ ವೈಭವಕ್ಕೆ ಹೆದರಿ ಬಂಡೆಯ ಗುಹೆಗಳೊಳಗೆ ನುಗ್ಗಿರಿ, ನೆಲದ ಬಿಲಗಳಲ್ಲಿ ಅವಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ ಅತ್ಯುನ್ನತ ಮಹಿಮೆಗೂ ಹೆದರಿ ದೂಳಿನಲ್ಲಿ ಅವುತುಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ. ಧೂಳಿನಲ್ಲಿ ನೀನು ಅಡಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:10
22 ತಿಳಿವುಗಳ ಹೋಲಿಕೆ  

ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಬೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. ಅವರೆಲ್ಲರೂ ನಿನಗೆ ಗೌರವ ತೋರಿಸಬೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ.


ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.


ಆಗ ಜನರು ಬೆಟ್ಟಕ್ಕೆ, ‘ನಮ್ಮ ಮೇಲೆ ಬೀಳು!’ ಎಂತಲೂ ಗುಡ್ಡಗಳಿಗೆ, ‘ನಮ್ಮನ್ನು ಮುಚ್ಚಿಕೊಳ್ಳಿರಿ!’ ಎಂತಲೂ ಕೂಗಿಕೊಳ್ಳುವರು.


ನೀವು ಯಾರಿಗೆ ಭಯಪಡಬೇಕೆಂದರೆ, ನಿಮ್ಮನ್ನು ಕೊಂದು ನರಕಕ್ಕೆ ಹಾಕಲು ಅಧಿಕಾರವುಳ್ಳಾತನಿಗಷ್ಟೇ (ದೇವರಿಗೆ). ಹೌದು, ಆತನೊಬ್ಬನಿಗೇ ನೀವು ಭಯಪಡಬೇಕು.


ಇಸ್ರೇಲ್ ಪಾಪ ಮಾಡುತ್ತಾ ಇನ್ನೂ ಹೆಚ್ಚಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿತು. ಆವೆನ್‌ನಲ್ಲಿರುವ ಎತ್ತರವಾದ ಸ್ಥಳ ನಾಶಮಾಡಲ್ಪಡುವದು. ಅದರ ಮೇಲೆ ಮುಳ್ಳುಗಿಡಗಳೂ ಹಣಜಿಗಳೂ ಬೆಳೆಯುವವು. ಆಗ ಅವರು ಪರ್ವತಗಳಿಗೆ, “ನಮ್ಮನ್ನು ಮುಚ್ಚಿರಿ” ಎಂದೂ ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ” ಎಂದೂ ಹೇಳುವರು.


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ಆದರೆ, ಜನರನ್ನು ನೋಡಿರಿ. ಅವರನ್ನು ಬೇರೆಯವರು ಸೋಲಿಸಿದ್ದಾರೆ. ಅವರಿಂದ ವಸ್ತುಗಳನ್ನು ದೋಚಿದ್ದಾರೆ. ತರುಣರೆಲ್ಲರೂ ಭಯಪಟ್ಟಿದ್ದಾರೆ; ಅವರನ್ನು ಸೆರೆಮನೆಯಲ್ಲಿ ಬಂಧಿಸಿದ್ದಾರೆ. ಅವರಿಂದ ಹಣವನ್ನು ಜನರು ಕಿತ್ತುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಯಾರೂ ಇಲ್ಲ. ಅವರಲ್ಲಿ ಹಣವನ್ನು “ಹಿಂದಕ್ಕೆ ಕೊಡು” ಎಂದು ಹೇಳುವವರೇ ಇಲ್ಲ.


ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.


ದೇವರೇ, ನಿನ್ನ ಕೋಪದ ಪೂರ್ಣ ಬಲವನ್ನು ಯಾರೂ ತಿಳಿಯರು. ನಿನ್ನಲ್ಲಿ ನಮಗಿರುವ ಭಯಭಕ್ತಿಯು ನಿನ್ನ ಕೋಪದಷ್ಟೇ ದೊಡ್ಡದಾಗಿವೆ.


ನಾನು ಆ ಕೆಟ್ಟಕಾರ್ಯಗಳಲ್ಲಿ ಯಾವುದನ್ನೂ ಮಾಡಲಿಲ್ಲ. ಯಾಕೆಂದರೆ ನಾನು ದೇವರ ಶಿಕ್ಷೆಗೆ ಹೆದರಿಕೊಂಡಿದ್ದೆ. ಆತನ ವೈಭವದ ಎದುರಿನಲ್ಲಿ ನಿಂತುಕೊಳ್ಳಲು ನನಗಾಗಲಿಲ್ಲ.


ಗರ್ವಿಷ್ಠರನ್ನೆಲ್ಲಾ ಧೂಳಿನಲ್ಲಿ ಸಮಾಧಿಮಾಡು; ಅವರ ದೇಹಗಳನ್ನು ಸುತ್ತಿ ಅವರ ಸಮಾಧಿಗಳೊಳಗೆ ಹಾಕು.


ಹೀಗೆ ನಿನ್ನ ಮಹತ್ಕಾರ್ಯಗಳನ್ನು ಇತರ ಜನರು ತಿಳಿದುಕೊಳ್ಳುವರು. ನಿನ್ನ ರಾಜ್ಯದ ಮಹತ್ವವನ್ನೂ ವೈಭವವನ್ನೂ ಅವರು ತಿಳಿದುಕೊಳ್ಳುವರು.


ಯೆಹೋವನು ತನ್ನ ಕೈಗಳನ್ನು ಈಜುವವನಂತೆ ಅಗಲವಾಗಿ ತೆರೆದು ಮನುಷ್ಯರು ಹೆಚ್ಚಳಪಡುವ ವಸ್ತುಗಳನ್ನೆಲ್ಲಾ ಬಾಚಿಕೊಳ್ಳುವನು. ಜನರು ತಯಾರಿಸಿದ ಅಂದವಾದ ವಸ್ತುಗಳನ್ನು ಒಟ್ಟುಗೂಡಿಸಿ ಬಿಸಾಡುವನು.


ಯೆಹೋವನು ಹೀಗೆ ಹೇಳಿದನು, “ನಡುಪಟ್ಟಿಯು ಹಾಳಾಗಿ ನಿಷ್ಪ್ರಯೋಜಕವಾಗಿದೆ. ಅಂತೆಯೇ ನಾನು ಯೆಹೂದದ ಮತ್ತು ಜೆರುಸಲೇಮಿನ ಜಂಬದ ಜನರನ್ನು ಹಾಳುಮಾಡುತ್ತೇನೆ.


ಆದ್ದರಿಂದ ನಿನೆವೆಯೇ, ನೀನು ಸಹ ಕುಡಿದು ಅಮಲೇರಿದವನಂತೆ ಕೆಳಗೆ ಬಿದ್ದುಬಿಡುವೆ. ನೀನು ಅಡಗಿಕೊಳ್ಳಲು ಪ್ರಯತ್ನಿಸುವೆ. ವೈರಿಯಿಂದ ತಪ್ಪಿಸಿಕೊಳ್ಳಲು ಸುರಕ್ಷಿತವಾದ ಸ್ಥಳವನ್ನು ಹುಡುಕುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು