Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:9 - ಪರಿಶುದ್ದ ಬೈಬಲ್‌

9 ಜನರು ಕೆಟ್ಟದಾರಿಯಲ್ಲಿ ಹೋಗುತ್ತಿದ್ದಾರೆ; ಹೀನಸ್ಥಿತಿಯಲ್ಲಿ ಮುಂದುವರಿಯುತ್ತಿದ್ದಾರೆ. ದೇವರೇ, ನೀನು ಅವರನ್ನು ಖಂಡಿತವಾಗಿಯೂ ಕ್ಷಮಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಾನವನು ತಗ್ಗಿಹೋಗಿದ್ದಾನೆ, ಅಧೋಗತಿಗೆ ಇಳಿದಿದ್ದಾನೆ. ಸ್ವಾಮೀ, ಅವನಿಗೆ ಕ್ಷಮೆ ನೀಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರಲು ಅಧಮರಾಗಲಿ ಉತ್ತಮರಾಗಲಿ ತಗ್ಗಿಸಲ್ಪಡುವರು; (ಅವರನ್ನು ಕ್ಷವಿುಸಬೇಡ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ಮನುಷ್ಯರು ನಮ್ರರಾಗುತ್ತಾರೆ; ಎಲ್ಲರೂ ತಲೆಬಾಗುತ್ತಾರೆ; ಅವರನ್ನು ಕ್ಷಮಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:9
16 ತಿಳಿವುಗಳ ಹೋಲಿಕೆ  

ಆ ಜನರು ತಗ್ಗಿಸಲ್ಪಡುವರು. ಆ ಗಣ್ಯವ್ಯಕ್ತಿಗಳು ತಮ್ಮ ತಲೆಗಳನ್ನು ಕೆಳಗೆ ಮಾಡಿ ನೆಲದ ಕಡೆಗೆ ನೋಡುವರು.


ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದವರಾಗಿದ್ದಾರೆ.


ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆ ಇಲ್ಲವೇ ಇಲ್ಲ. ಅವರ ಪಾಪ ಶಾಶ್ವತವಾದದ್ದು” ಎಂದು ಹೇಳಿದನು.


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ಅವರು ನಿನ್ನ ದೃಷ್ಟಿಯಲ್ಲಿ ಮಾಡಿದ ಪಾಪಗಳನ್ನು ಮನ್ನಿಸಬೇಡ. ಅವರು ಗೋಡೆಯನ್ನು ಕಟ್ಟುವ ನಿನ್ನ ದಾಸರನ್ನು ನಿಂದಿಸಿ ಅವರನ್ನು ನಿರುತ್ಸಾಹಗೊಳಿಸಿದ್ದಾರೆ.”


ಆಗ ಯೆಹೋಶುವನು ಅವರಿಗೆ, “ಅದು ನಿಜವಲ್ಲ, ನೀವು ಯೆಹೋವನ ಸೇವೆಯನ್ನು ಮುಂದುವರೆಸಿಕೊಂಡು ಹೋಗಲಾರಿರಿ. ನಮ್ಮ ದೇವರಾದ ಯೆಹೋವನು ಪವಿತ್ರನಾಗಿದ್ದಾನೆ; ತನ್ನ ಜನರು ಅನ್ಯದೇವರುಗಳನ್ನು ಪೂಜಿಸುವುದನ್ನು ಆತನು ದ್ವೇಷಿಸುತ್ತಾನೆ. ಒಂದುವೇಳೆ ನೀವೇನಾದರೂ ಆತನ ವಿರುದ್ಧವಾಗಿ ತಿರುಗಿಕೊಂಡರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ.


ಈ ನಿಯಮಗಳು ನೋಡುವುದಕ್ಕೆ ಬದ್ಧಿಯುಳ್ಳವಾಗಿವೆ. ಆದರೆ ಅತಿವಿನಯವಂತರಂತೆ ನಟಿಸಲು ಮತ್ತು ತಮ್ಮ ದೇಹಗಳನ್ನು ದಂಡಿಸಲು ಜನರನ್ನು ಪ್ರೆರೇಪಿಸುವ ಅವುಗಳು ಕೇವಲ ಮಾನವ ನಿರ್ಮಿತವಾದ ಧರ್ಮದ ಒಂದು ಭಾಗವಾಗಿವೆ. ಆದರೆ ಪಾಪಸ್ವಭಾವವು ಇಚ್ಛಿಸುವ ದುಷ್ಕೃತ್ಯಗಳನ್ನು ಮಾಡದಂತೆ ಅವು ಜನರಿಗೆ ಯಾವ ಸಹಾಯವನ್ನೂ ಮಾಡುವುದಿಲ್ಲ.


ಯೆಹೋವನೇ, ನನ್ನನ್ನು ಕೊಲ್ಲಲು ಅವರು ಹಾಕಿದ ಯೋಜನೆಗಳನ್ನೆಲ್ಲ ನೀನು ಬಲ್ಲೆ. ಅವರ ಅಪರಾಧಗಳನ್ನು ಮನ್ನಿಸಬೇಡ. ಅವರ ಪಾಪಗಳನ್ನು ಅಳಿಸಬೇಡ. ನನ್ನ ವೈರಿಗಳನ್ನು ನಾಶಪಡಿಸು, ನೀನು ಕೋಪದಲ್ಲಿದ್ದಾಗ ಆ ಜನರನ್ನು ಶಿಕ್ಷಿಸು.


ಮೋಲೆಕನಿಗೆ ಅಂದವಾಗಿ ತೋರುವಂತೆ ನೀವು ನಿಮಗೆ ಎಣ್ಣೆ, ಸುಗಂಧದ್ರವ್ಯಗಳನ್ನು ಹಚ್ಚಿಕೊಂಡು ಹೋಗುವಿರಿ. ನಿಮ್ಮ ದೂತರನ್ನು ದೂರದೇಶಕ್ಕೆ ಕಳುಹಿಸುತ್ತೀರಿ. ಇವೇ ನಿಮ್ಮನ್ನು ನರಕಕ್ಕೆ ನಡಿಸುತ್ತವೆ. ಅಲ್ಲಿ ಮರಣವಿರುವದು.


ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.


ಸಾಮಾನ್ಯ ಜನರೇ, ಅಧಿಪತಿಗಳೇ, ಬಡವರೇ, ಶ್ರೀಮಂತರೇ, ನೀವೆಲ್ಲರೂ ಒಂದಾಗಿ ಬಂದು ಕೇಳಿರಿ.


ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.


ಸೇನಾಧೀಶ್ವರನಾದ ಯೆಹೋವನೇ, ಇಸ್ರೇಲರ ದೇವರೇ, ಎದ್ದೇಳು! ಅವರನ್ನು ದಂಡಿಸು! ಆ ದುಷ್ಟ ದ್ರೋಹಿಗಳಿಗೆ ಕರುಣೆಯನ್ನೇ ತೋರಬೇಡ.


ಸರ್ವಶಕ್ತನಾದ ಯೆಹೋವನು ನೀತಿಯಿಂದ ನ್ಯಾಯತೀರಿಸುವನು. ಯೆಹೋವನು ಉನ್ನತೋನ್ನತನೆಂದು ಜನರೆಲ್ಲರೂ ಅರಿತುಕೊಳ್ಳುವರು. ಪರಿಶುದ್ಧನಾದ ದೇವರು ನ್ಯಾಯವಾದದ್ದನ್ನೇ ಮಾಡುವನು. ಜನರು ಆತನನ್ನು ಗೌರವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು