Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 20:1 - ಪರಿಶುದ್ದ ಬೈಬಲ್‌

1 ಸರ್ಗೋನ್ ಅಶ್ಶೂರದ ರಾಜನಾಗಿದ್ದನು. ಇವನು ತರ್ತಾನನ್ನು ಅಷ್ಡೋದಿಗೆ ವಿರುದ್ಧವಾಗಿ ಯುದ್ಧಮಾಡಲು ಕಳುಹಿಸಿದನು. ತರ್ತಾನ್ ಎಂಬವನು ಅಷ್ಡೋದ್ ನಗರಕ್ಕೆ ಹೋಗಿ ಅದನ್ನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು ಅಷ್ದೋದಿಗೆ ಬಂದು ಅದರ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಸ್ಸೀರಿಯಾದ ಅರಸನಾದ ಸರ್ಗೋನನು ಕಳುಹಿಸಿದ ದಳಪತಿ, ಫಿಲಿಷ್ಟಿಯರ ಪಟ್ಟಣವಾದ ಅಷ್ಡೋದಿಗೆ ಬಂದು ಅದನ್ನು ಮುತ್ತಿ ಆಕ್ರಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು ಅಷ್ಡೋದಿಗೆ ಬಂದು ಅದನ್ನು ಮುತ್ತಿಹಿಡಿದ ವರುಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಸ್ಸೀರಿಯದ ಅರಸನಾದ ಸರ್ಗೋನನು ಕಳುಹಿಸಿದ ವರ್ಷದಲ್ಲಿ ಪ್ರಮುಖ ಸೇನಾಪತಿ, ಅಷ್ಡೋದಿಗೆ ಬಂದು ಅದನ್ನು ಮುತ್ತಿಗೆ ಹಾಕಿ ಆಕ್ರಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 20:1
9 ತಿಳಿವುಗಳ ಹೋಲಿಕೆ  

ಅಶ್ಶೂರದ ರಾಜ ಜೆರುಸಲೇಮಿನಲ್ಲಿದ್ದ ರಾಜನಾದ ಹಿಜ್ಕೀಯನ ಬಳಿಗೆ ತನ್ನ ಮೂವರು ಮಹಾಸೇನಾಧಿಪತಿಗಳಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಮಹಾಸೈನ್ಯದೊಂದಿಗೆ ಕಳುಹಿಸಿದನು. ಅವರು ಲಾಕೀಷಿನಿಂದ ಜೆರುಸಲೇಮಿಗೆ ಹೋದರು. ಅವರು ಮೇಲಿನ ಕೆರೆಯ ನೀರಿನ ಕೊಳವೆಯ ಬಳಿ ನಿಂತರು. (ಮೇಲಿನ ಕೆರೆಯು ರಸ್ತೆಯ ಮೇಲೆ ದೋಭಿಘಾಟ್ ಬಳಿಯಿತ್ತು.)


ಇದಲ್ಲದೆ, ನಾನು ಅಷ್ಡೋದಿನಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ನಾಶಮಾಡುವೆನು; ಅಷ್ಕೆಲೋನಿನಲ್ಲಿ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು; ಎಕ್ರೋನಿನ ಜನರನ್ನು ಶಿಕ್ಷಿಸುವೆನು. ಆಮೇಲೆ ಅಳಿದುಳಿದ ಫಿಲಿಷ್ಟಿಯರು ಸಾಯುವರು.” ಇದು ಯೆಹೋವನ ನುಡಿ.


ಎಲ್ಲಾ ಅರಬೀಯರು ಮತ್ತು ಧಿಚ್ ದೇಶದ ಎಲ್ಲಾ ರಾಜರು ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಫಿಲಿಷ್ಟಿಯ ದೇಶದ ಎಲ್ಲಾ ರಾಜರು ಅಂದರೆ ಅಷ್ಕೆಲೋನ್, ಗಾಜಾ, ಎಕ್ರೋನ್ ಮತ್ತು ಅಷ್ಡೋದಿನ ಶೇಷಭಾಗದ ರಾಜರು ಈ ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆನು.


ಈ ರೀತಿ ಫಿಲಿಷ್ಟಿಯರು ತಾವು ಯೆಹೋವನಿಗೆ ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಚಿನ್ನದ ಗಡ್ಡೆಗಳನ್ನು ಕಾಣಿಕೆಗಳನ್ನಾಗಿ ಕಳುಹಿಸಿದರು. ಅವರು ಪ್ರತಿಯೊಂದು ಫಿಲಿಷ್ಟಿಯ ನಗರಕ್ಕೆ ಒಂದರಂತೆ ಚಿನ್ನದ ಗಡ್ಡೆಗಳನ್ನು ಕಳುಹಿಸಿದ್ದರು. ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಮತ್ತು ಎಕ್ರೋನ್‌ಗಳೇ ಆ ನಗರಗಳು.


ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಬೆನೆಜೆರಿನಿಂದ ಅಷ್ಡೋದಿಗೆ ತೆಗೆದುಕೊಂಡು ಹೋದರು.


ಇಸ್ರೇಲಿನ ಪ್ರದೇಶದಲ್ಲಿ ಅನಾಕ ವಂಶಸ್ಥರಲ್ಲಿ ಯಾರೂ ಉಳಿಯಲಿಲ್ಲ. ಜೀವಸಹಿತ ಉಳಿದ ಅನಾಕ ವಂಶಸ್ಥರು ಕೇವಲ ಗಾಜಾ, ಗತೂರು, ಅಷ್ಡೋದ್ ಎಂಬಲ್ಲಿ ಮಾತ್ರ ಇದ್ದರು.


ಉಜ್ಜೀಯನು ಫಿಲಿಷ್ಟಿಯರೊಂದಿಗೆ ಯುದ್ಧಮಾಡಿ ಅವರ ಪಟ್ಟಣಗಳಾದ ಗತ್, ಯೆಬ್ನೆ ಮತ್ತು ಅಷ್ಡೋದ್‌ಗಳ ಪೌಳಿಗೋಡೆಗಳನ್ನು ಕೆಡವಿಹಾಕಿದನು. ಅವನು ಅಷ್ಡೋದಿನ ಮತ್ತು ಇತರ ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಮಹಾದ್ವಾರಗಳ ಬಳಿಯಲ್ಲಿರುವ ಜನರೇ, ಗೋಳಾಡಿರಿ! ಪಟ್ಟಣದೊಳಗಿರುವ ಜನರೇ, ಕೂಗಾಡಿರಿ! ಫಿಲಿಷ್ಟಿಯದಲ್ಲಿರುವವರೆಲ್ಲರೂ ಭಯಪಡುವರು. ನಿಮ್ಮ ಧೈರ್ಯವು ಮೇಣದಂತೆ ಕರಗಿಹೋಗುವದು. ಇಗೋ, ಉತ್ತರದಿಕ್ಕಿನಲ್ಲಿ ಧೂಳು ಏಳುತ್ತಿದೆ. ಅಶ್ಶೂರದ ಸೈನ್ಯವು ಬರುತ್ತಿದೆ. ಅವರೆಲ್ಲರೂ ಬಲಶಾಲಿಗಳಾದ ವೀರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು