Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 20:2 - ಪರಿಶುದ್ದ ಬೈಬಲ್‌

2 ಆ ಸಮಯದಲ್ಲಿ ಆಮೋಚನ ಮಗನಾದ ಯೆಶಾಯನೊಂದಿಗೆ ಯೆಹೋವನು ಮಾತನಾಡಿದನು. “ನಿನ್ನ ಶೋಕವಸ್ತ್ರಗಳನ್ನು ತೆಗೆದುಹಾಕು. ನಿನ್ನ ಕಾಲುಗಳಿಂದ ಪಾದರಕ್ಷೆಗಳನ್ನು ತೆಗೆದುಬಿಡು” ಎಂದು ಯೆಹೋವನು ಹೇಳಿದಾಗ ಯೆಶಾಯನು ಆತನಿಗೆ ವಿಧೇಯನಾದನು. ಯೆಶಾಯನು ಪಾದರಕ್ಷೆಗಳಿಲ್ಲದೆ, ಬಟ್ಟೆಗಳಿಲ್ಲದೆ ಅಡ್ಡಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, “ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು” ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಮೂರು ವರ್ಷಗಳಿಗೆ ಮುಂಚೆಯೆ ಆಮೋಚನ ಮಗ ಯೆಶಾಯನಿಗೆ ಸರ್ವೇಶ್ವರ ಮುನ್ಸೂಚನೆಯಾಗಿ ಹೀಗೆಂದು ಹೇಳಿದ್ದರು : “ಎದ್ದೇಳು, ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು, ಕಾಲಿಗೆ ಹಾಕಿರುವ ಕೆರವನ್ನು ಕಳಚು.” ಅಂತೆಯೇ ಯೆಶಾಯನು ದಿಗಂಬರನಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ - ಏಳು, ಸೊಂಟದಿಂದ ಗೋಣಿತಟ್ಟನ್ನು ಬಿಚ್ಚು, ಕಾಲಿನಿಂದ ಕೆರವನ್ನು ಕಳಚು ಎಂದು ಇತರರಿಗೆ ಸೂಚನೆಯಾಗಿ ಅಪ್ಪಣೆಕೊಟ್ಟನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರುಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದೇ ಸಮಯದಲ್ಲಿ ಯೆಹೋವ ದೇವರು ಆಮೋಚನ ಮಗ ಯೆಶಾಯನಿಗೆ, “ನಿನ್ನ ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಕೆರಗಳನ್ನು ತೆಗೆದಿಡು,” ಎಂದು ಹೇಳಿದರು. ಅವನು ಹಾಗೆ ಮಾಡಿ, ಬೆತ್ತಲೆಯಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 20:2
27 ತಿಳಿವುಗಳ ಹೋಲಿಕೆ  

ಯೋಹಾನನ ಉಡುಪುಗಳು ಒಂಟೆಯ ಕೂದಲಿನಿಂದ ಮಾಡಲ್ಪಟ್ಟಿದ್ದವು. ಅವನಿಗೆ ಸೊಂಟದಲ್ಲಿ ತೊಗಲಿನ ನಡುಪಟ್ಟಿ ಇತ್ತು. ಅವನು ಮಿಡತೆ ಮತ್ತು ಕಾಡುಜೇನನ್ನು ಆಹಾರವಾಗಿ ತಿನ್ನುತ್ತಿದ್ದನು.


ಮುಂದೆ ಸಂಭವಿಸುವ ಘಟನೆಗಳ ಬಗ್ಗೆ ನಾನು ಬಹಳ ದುಃಖಿತನಾಗಿದ್ದೇನೆ. ನಾನು ಬಟ್ಟೆಯನ್ನಾಗಲಿ ಚಪ್ಪಲಿಯನ್ನಾಗಲಿ ಹಾಕಿಕೊಳ್ಳದೇ ಹೋಗುವೆನು. ನಾಯಿಯಂತೆ ಅಳುವೆನು, ಪಕ್ಷಿಯಂತೆ ಗೋಳಾಡುವೆನು.


ನಂತರ ಸೌಲನು ತಾನು ಧರಿಸಿದ್ದ ಬಟ್ಟೆಗಳನ್ನು ತೆಗೆದುಹಾಕಿದನು. ಸಮುವೇಲನ ಎದುರಿನಲ್ಲಿ ಸೌಲನೂ ಸಹ ಪ್ರವಾದಿಸುತ್ತಿದ್ದನು. ಅಂದು ಹಗಲು ರಾತ್ರಿಯೆಲ್ಲ ಸೌಲನು ಬೆತ್ತಲೆಯಾಗಿ ಅಲ್ಲಿಯೇ ಮಲಗಿದ್ದನು. ಆದ್ದರಿಂದಲೇ ಜನರು, “ಸೌಲನೂ ಪ್ರವಾದಿಗಳಲ್ಲಿ ಒಬ್ಬನೇ?” ಎಂದು ಹೇಳುತ್ತಾರೆ.


ಆ ಸಮಯದಲ್ಲಿ ಪ್ರವಾದಿಗಳು ತಮ್ಮ ದರ್ಶನ, ಪ್ರವಾದನೆಗಳಿಗಾಗಿ ನಾಚಿಕೊಳ್ಳುವರು. ತಾವು ಪ್ರವಾದಿಗಳೆಂದು ತೋರಿಸಿಕೊಳ್ಳಲು ಧರಿಸುವ ಗಡುಸಾದ ಬಟ್ಟೆಗಳನ್ನು ಧರಿಸಿಕೊಳ್ಳುವದಿಲ್ಲ. ಅವರು ಪ್ರವಾದನೆಗಳೆಂದು ಹೇಳುವ ತಮ್ಮ ಸುಳ್ಳುಗಳಿಂದ ಜನರನ್ನು ಮೋಸಪಡಿಸುವದಿಲ್ಲ.


ನೀವು ನಿಮ್ಮ ಮುಂಡಾಸವನ್ನು ಧರಿಸಿಕೊಂಡು ಕಾಲಿಗೆ ಕೆರವನ್ನು ಹಾಕಿಕೊಳ್ಳುವಿರಿ. ನೀವು ನಿಮ್ಮ ದುಃಖವನ್ನು ತೋರಿಸಿಕೊಳ್ಳುವುದಿಲ್ಲ. ನೀವು ಅಳುವದೂ ಇಲ್ಲ. ಆದರೆ ನೀವು ನಿಮ್ಮ ಪಾಪಗಳ ದೆಸೆಯಿಂದ ಕೃಶರಾಗುವಿರಿ. ನೀವು ಒಬ್ಬರಿಗೊಬ್ಬರು ದುಃಖದ ಶಬ್ದಗಳನ್ನು ಮಾಡುವಿರಿ.


ಮೌನವಾಗಿ ನರಳಾಡು. ನಿನ್ನ ಸತ್ತ ಹೆಂಡತಿಗಾಗಿ ಗಟ್ಟಿಯಾಗಿ ರೋಧಿಸಬೇಡ. ನೀನು ಯಾವಾಗಲೂ ತೊಡುವ ಬಟ್ಟೆಯನ್ನು ತೊಟ್ಟುಕೋ. ಮುಂಡಾಸವನ್ನು ಕಟ್ಟಿಕೋ. ಕಾಲಿಗೆ ಕೆರವನ್ನು ಮೆಟ್ಟಿಕೋ, ನಿನ್ನ ದುಃಖವನ್ನು ತೋರಿಸಲು ಮೀಸೆಯನ್ನು ಮುಚ್ಚಿಕೊಳ್ಳಬೇಡ. ಮರಣದ ಊಟವನ್ನು ಮಾಡದಿರು.”


ಶಾಫೀರ್‌ನಲ್ಲಿ ವಾಸಿಸುವವರೇ, ಬೆತ್ತಲೆಯಾಗಿ ನಾಚಿಕೆಯಿಂದ ನಡೆಯಿರಿ. ಚಾನಾನ್‌ನಲ್ಲಿ ವಾಸಿಸುವವರು ಹೊರಗೆ ಬರುವದಿಲ್ಲ. ಬೇತೇಚೆಲಿನ ಜನರು ಅಳುವರು, ನಿಮಗೆ ಅವರು ನೀಡುತ್ತಿದ್ದ ಬೆಂಬಲವನ್ನು ಹಿಂತೆಗೆದುಕೊಳ್ಳುವರು.


ಆಮೋಚನ ಮಗನಾದ ಯೆಶಾಯನಿಗೆ ಬಾಬಿಲೋನಿನ ಬಗ್ಗೆ ದೊರೆತ ದೈವಸಂದೇಶ:


ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”


ಬಳಿಕ ದೆವ್ವಪೀಡಿತನಾಗಿದ್ದ ಆ ಮನುಷ್ಯನು ಈ ಯೆಹೂದ್ಯರ ಮೇಲೆ ಹಾರಿಬಿದ್ದನು. ಅವನು ಅವರಿಗಿಂತ ಹೆಚ್ಚು ಬಲವುಳ್ಳವನಾಗಿದ್ದನು. ಅವನು ಅವರಿಗೆ ಹೊಡೆದು ಅವರ ಬಟ್ಟೆಗಳನ್ನು ಹರಿದು ಹಾಕಿದನು. ಅವರು ಆ ಮನೆಯಿಂದ ಓಡಿಹೋದರು.


ಯೇಸುವಿನ ಪ್ರೀತಿಯ ಶಿಷ್ಯನು ಪೇತ್ರನಿಗೆ, “ಆ ಮನುಷ್ಯನು ಪ್ರಭುವೇ!” ಎಂದು ಹೇಳಿದನು. ಕೂಡಲೇ ಪೇತ್ರನು ತನ್ನ ಅಂಗಿಯನ್ನು ಹಾಕಿಕೊಂಡು, ನೀರಿಗೆ ಧುಮುಕಿದನು. (ಪೇತ್ರನು ಮೀನು ಹಿಡಿಯುವುದಕ್ಕಾಗಿ ತನ್ನ ಅಂಗಿಯನ್ನು ಬಿಚ್ಚಿಟ್ಟಿದ್ದನು.)


ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.


ನೀನು ಮುನ್ನೂರತೊಂಭತ್ತು ದಿವಸಗಳ ತನಕ ಇಸ್ರೇಲರ ದೋಷಗಳನ್ನು ಹೊತ್ತುಕೊಳ್ಳಬೇಕು. ಈ ರೀತಿಯಾಗಿ ಇಸ್ರೇಲರು ಎಷ್ಟು ಕಾಲ ಶಿಕ್ಷೆ ಅನುಭವಿಸುವರೆಂದು ತೋರಿಸುತ್ತೇನೆ. ಆ ಒಂದು ದಿವಸವು ಒಂದು ವರ್ಷದಂತಿರುವುದು.


ಸಂದೇಶಕರು ಅಹಜ್ಯನಿಗೆ, “ಅವನು ಉಣ್ಣೆಯ ಮೇಲಂಗಿಯನ್ನು ಧರಿಸಿದ್ದನು ಮತ್ತು ಸೊಂಟಕ್ಕೆ ಚರ್ಮದ ಪಟ್ಟಿಯನ್ನು ಕಟ್ಟಿಕೊಂಡಿದ್ದನು” ಎಂದರು. ಆಗ ಅಹಜ್ಯನು, “ಅವನು ತಿಷ್ಬೀಯನಾದ ಎಲೀಯನು” ಎಂದು ಹೇಳಿದನು.


ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸಲು ಹೋದನು. ಆದರೆ ಸೌಲನ ಮಗಳಾದ ಮೀಕಲಳು ಅವನನ್ನು ಭೇಟಿಮಾಡಲು ಹೊರಗೆ ಬಂದು, “ಇಸ್ರೇಲರ ರಾಜನು ಈ ದಿನ ತನ್ನ ಗೌರವವನ್ನು ಕಾಪಾಡಿಕೊಳ್ಳಲಿಲ್ಲ! ನಾಚಿಕೆಯಿಲ್ಲದೆ ತನ್ನೆಲ್ಲ ಬಟ್ಟೆಗಳನ್ನೂ ತೆಗೆದುಹಾಕುವ ಮೂರ್ಖನಂತೆ, ನೀನು ನಿನ್ನ ಸೇವಕರ ಮತ್ತು ದಾಸಿಯರ ಮುಂದೆ ನಿನ್ನ ಬಟ್ಟೆಗಳನ್ನೆಲ್ಲ ತೆಗೆದು ಹಾಕಿದೆಯಲ್ಲ” ಎಂದಳು.


ಯೆಹೋವನ ಸೇನಾಧಿಪತಿಯು, “ನಿನ್ನ ಪಾದರಕ್ಷೆಗಳನ್ನು ಬಿಚ್ಚಿಬಿಡು. ಈಗ ನೀನು ನಿಂತುಕೊಂಡಿರುವ ಸ್ಥಳವು ಪವಿತ್ರವಾದದ್ದು” ಎಂದು ಹೇಳಿದನು. ಯೆಹೋಶುವನು ಅವನು ಹೇಳಿದಂತೆಯೇ ಮಾಡಿದನು.


ಆಗ ಯೆಹೋವನು, “ಇನ್ನೂ ಹತ್ತಿರ ಬರಬೇಡ. ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ.


ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ಅದರಿಂದ ತನ್ನ ಕೈಕಾಲುಗಳನ್ನು ಕಟ್ಟಿಕೊಂಡು, “ಪವಿತ್ರಾತ್ಮನು ನನಗೆ ಹೇಳುವುದೇನೆಂದರೆ, ‘ಈ ನಡುಪಟ್ಟಿಯನ್ನು ಕಟ್ಟಿಕೊಳ್ಳುವ ವ್ಯಕ್ತಿಯನ್ನು ಜೆರುಸಲೇಮಿನ ಯೆಹೂದ್ಯರು ಇದೇ ರೀತಿ ಕಟ್ಟಿಹಾಕುವರು. ಬಳಿಕ ಅವರು ಅವನನ್ನು ಯೆಹೂದ್ಯರಲ್ಲದ ಜನರಿಗೆ ಒಪ್ಪಿಸಿಕೊಡುವರು’” ಎಂದು ಹೇಳಿದನು.


ದಾವೀದನು ಆಲೀವ್ ಮರಗಳ ದಿಣ್ಣೆಯನ್ನೇರಿದನು. ಅವನು ಗೋಳಾಡುತ್ತಿದ್ದನು. ಅವನು ತಲೆಯ ಮೇಲೆ ಮುಸುಕೆಳೆದುಕೊಂಡು ಬರಿಗಾಲಿನಲ್ಲಿ ನಡೆದುಕೊಂಡು ಹೋದನು. ದಾವೀದನ ಜೊತೆಯಲ್ಲಿದ್ದ ಅವನ ಜನರೆಲ್ಲರೂ ತಲೆಯ ಮೇಲೆ ಮುಸುಕು ಹಾಕಿಕೊಂಡು ಗೋಳಾಡುತ್ತಾ ದಾವೀದನೊಂದಿಗೆ ಹೋದರು.


ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ. ನನ್ನ ಶೋಕವಸ್ತ್ರಗಳನ್ನು ತೆಗೆದುಹಾಕಿ ಹರ್ಷವಸ್ತ್ರಗಳನ್ನು ಹೊದಿಸಿದೆ.


ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ. ಯೆಹೂದ ಮತ್ತು ಜೆರುಸಲೇಮಿನಲ್ಲಿ ನಡೆಯಲಿದ್ದ ಘಟನೆಗಳ ಬಗ್ಗೆ ದೇವರು ಯೆಶಾಯನಿಗೆ ಈ ದರ್ಶನ ನೀಡಿದನು; ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ ಮತ್ತು ಹಿಜ್ಕೀಯರ ಕಾಲದಲ್ಲಿ ಯೆಶಾಯನಿಗೆ ಈ ದರ್ಶನವಾಯಿತು.


ಹಿಜ್ಕೀಯನು ಅರಮನೆಯ ಅಡಳಿತಗಾರನಾದ ಎಲ್ಯಾಕೀಮನನ್ನು, ಕಾರ್ಯದರ್ಶಿಯಾದ ಶೆಬ್ನನನ್ನು ಯಾಜಕರ ಹಿರಿಯರೊಂದಿಗೆ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಕಳುಹಿಸಿದನು. ಇವರು ತಮ್ಮ ಮನಸ್ಸಿನ ದುಗುಡವನ್ನು ಪ್ರದರ್ಶಿಸುವಂತೆ ಶೋಕವಸ್ತ್ರಗಳನ್ನು ಧರಿಸಿದ್ದರು.


ಪ್ರತಿಯೊಬ್ಬರ ತಲೆಯನ್ನು ಬೋಳಿಸಲಾಗಿದೆ. ಪ್ರತಿಯೊಬ್ಬರ ಗಡ್ಡವನ್ನು ಕತ್ತರಿಸಲಾಗಿದೆ. ಪ್ರತಿಯೊಬ್ಬರ ಕೈಗಳು ಕತ್ತರಿಸಲ್ಪಟ್ಟು ಅವುಗಳಿಂದ ರಕ್ತ ಸುರಿಯುತ್ತಿದೆ. ಪ್ರತಿಯೊಬ್ಬರು ತಮ್ಮ ಸೊಂಟಕ್ಕೆ ದುಃಖಸೂಚಕ ವಸ್ತ್ರಗಳನ್ನು ಸುತ್ತಿಕೊಂಡಿದ್ದಾರೆ.


“ನರಪುತ್ರನೇ, ಒಂದು ಇಟ್ಟಿಗೆಯನ್ನು ತೆಗೆದುಕೊ, ಅದನ್ನು ನಿನ್ನ ಮುಂದೆ ಇಟ್ಟು ಅದರ ಮೇಲೆ ಒಂದು ಚಿತ್ರವನ್ನು ಅಂದರೆ ಜೆರುಸಲೇಮ್ ನಗರದ ಚಿತ್ರವನ್ನು ಕೊರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು